Connect with us

Chamarajanagar

ಸ್ಕೂಲ್ ಬೆಲ್ ಯುವಕರ ತಂಡದಿಂದ ಕಾಡಾಂಚಿನ ಶಾಲೆಗೆ ಬಣ್ಣ ತುಂಬುವ ಕಾರ್ಯ ಶ್ಲಾಘನೀಯ…

Published

on

ಹನೂರು: ಕಾಡಂಚಿನಲ್ಲಿರುವ ಶಾಲೆಗಳನ್ನು ಗುರುತಿಸಿ ಸ್ಕೂಲ್ ಬೆಲ್ ಯುವಕರ ತಂಡ ಅಭಿವೃದ್ಧಿ ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ಶ್ರೀ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು.


ತಾಲೂಕಿನ ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಬು ಡಿಕ್ಕಿ ಗ್ರಾಮದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಅವರು ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಮಲೆ ಮಾದೇಶ್ವರ ಬೆಟ್ಟ ಕಾಡಂಚಿನ ಗ್ರಾಮಗಳ ಶಾಲೆಗಳಿಗೆ ಹಲವಾರು ದಾನಿಗಳು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ಬೆಂಗಳೂರಿನ ಸ್ಕೂಲ್ ಬೆಲ್ ಯುವಕರ ತಂಡ ಕೊಂಬುಡಿಕ್ಕಿ ಗ್ರಾಮದ ಸರ್ಕಾರಿ ಶಾಲೆಗೆ ಬಣ್ಣ ಬಳಿದು ಕಲಾತ್ಮಕ ಚಿತ್ರ ಸಹಿತ ಬರವಣಿಗೆ ಹಚ್ಚುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿದ್ದಾರೆ. ಇದಲ್ಲದೆ ತುಳಸಿಕೆರೆ ಗ್ರಾಮದ ಶಾಲೆಯ ಅಭಿವೃದ್ಧಿಗೂ ಶ್ರಮಿಸುವುದಾಗಿ ತಿಳಿಸಿದ್ದಾರೆ. ಈ ಸಂಘದಲ್ಲಿ ವಕೀಲರು, ಶಿಕ್ಷಕರು, ವಿವಿಧ ಸರ್ಕಾರಿ ಕರ್ತವ್ಯದಲ್ಲಿರುವ ಹಳೆಯ ಸ್ನೇಹಿತರುಗಳೆಲ್ಲರೂ ಸೇರಿ ಸಂಘ ರಚನೆ ಮಾಡಿಕೊಂಡು ರಾಜ್ಯಾದ್ಯಂತ ಕಾಡಂಚಿನ ಶಾಲೆಗಳ ಸಮಸ್ಯೆ ಗುರುತಿಸಿ ಸಮಸ್ಯೆ ಬಗೆಹರಿಸುತ್ತಿದ್ದಾರೆ. ಇವರ ಸೇವಾ ಕಾರ್ಯ ಹೀಗೆ ಮುಂದುವರೆದು, ಸ್ಕೂಲ್ ಬೆಲ್ ಯುವಕರ ಸಂಘ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಬೇಡಗಂಪಣ ಸಮುದಾಯದ ಹಿರಿಯ ಮುಖಂಡರಾದ ಕೆ ವಿ ಮಾದೇಶ್ ಪುರಾಣಿ ಮಾದೇಶ್, ಮುರುಗೇಶ್, ನಾಗೇಂದ್ರ, ಮುಖ್ಯ ಶಿಕ್ಷಕಿ ಮಹದೇವಮ್ಮ ಹಾಗೂ ಎಸ್ ಡಿ ಎಂ ಸಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ

Published

on

ಚಾಮರಾಜನಗರ: ತಲೆಯಲ್ಲಿ ಕೂದಲು ಇಲ್ಲದ ಕಾರಣಕ್ಕೆ ಪತ್ನಿ ಕಿರುಕುಳ ನೀಡಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಉಡಿಗಾಲ ಗ್ರಾಮದ ನಿವಾಸಿ ಪರಶಿವಮೂರ್ತಿ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಪರಶಿವಮೂರ್ತಿಗೆ ತಲೆಯಲ್ಲಿ ಕೂದಲು ಕಡಿಮೆ ಇದ್ದು, ಕೂದಲು ನಾಟಿ ಮಾಡಿಸಿಕೊಳ್ಳುವಂತೆ ಪತ್ನಿ ಒತ್ತಾಯಿಸುತ್ತಿದ್ದಳು ಬೋಳು ತಲೆ ಎಂದು ಪದೇಪದೇ ನಿಂದಿಸುತ್ತಿದ್ದಳು. ಇದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chamarajanagar

ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

Published

on

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು

Continue Reading

Chamarajanagar

ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

Published

on

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು

Continue Reading

Trending

error: Content is protected !!