Connect with us

Chikmagalur

ಹೂವಾಡಿಗ ಮಾದಣ್ಣರ ಜಯಂತಿಯನ್ನು ಸರ್ಕಾರಿ ಜಯಂತಿಯಾಗಿಸಲು ಸರ್ಕಾರಕ್ಕೆ ಮನವಿ : ಹೆಚ್.ಡಿ ತಮ್ಮಯ್ಯ

Published

on

ಚಿಕ್ಕಮಗಳೂರು: ಶರಣ ಹೂವಾಡಿಗ ಮಾದಣ್ಣನವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಭರವಸೆ ನೀಡಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ರಾಜ್ಯ ಮತ್ತು ಜಿಲ್ಲಾ ಹೂವಾಡಿಗರ ಸಂಘದಿಂದ ಹಮ್ಮಿಕೊಂಡಿದ್ದ ೬ನೇ ವರ್ಷದ ರಾಜ್ಯಮಟ್ಟದ ಗುರುಶರಣ ಹೂವಾಡಿಗ ಮಾದಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೆ.೨೯ ಮಾದಯ್ಯನವರ ಜಯಂತಿ ಇದ್ದು ಆ ದಿನವನ್ನು ಸರ್ಕಾರಿ ಜಯಂತಿಯಾಗಿ ಆಚರಿಸಲು ಕೋರಲಾಗುವುದು ಎಂದರು.
ಹೂವಾಡಿಗ ಅಭಿವೃದ್ಧಿ ಮಂಡಳಿಯನ್ನು ಕಳೆದ ವರ್ಷ ಘೋಷಣೆಮಾಡಿದ್ದು, ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವು ಎಂದು ತಿಳಿಸಿ, ಸಂಘವು ಸಲ್ಲಿಸಿರುವ ಮನವಿಯಲ್ಲಿ ರತ್ನಗಿರಿ ರಸ್ತೆಯಲ್ಲಿ ನಿವೇಶನ ನೀಡುವಂತೆ ತಿಳಿಸಿದ್ದು, ದಾಖಲೆಗಳನ್ನು ಪರಿಶೀಲಿಸಿ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಅನುಭವ ಮಂಟಪದ ಸದಸ್ಯರಾಗಿದ್ದ ಮಾದಣ್ಣ ಬಸವಣ್ಣನವರ ಪೂಜೆಗೆ ಗರಿಕೆ ಮತ್ತು ಹೂವನ್ನು ನೀಡುತ್ತಿದ್ದರು. ೧೨ನೇ ಶತಮಾನದಲ್ಲಿ ಸಮಾನತೆಗೆ ಹೋರಾಟ ನಡೆಸಿದವರು. ಮಹಾಪುರುಷರುಗಳು ಯಾವುದೇ ಸಮಾಜಕ್ಕೆ ಸೀಮಿತರಾದವರಲ್ಲ, ಶೋಷಿತ ವರ್ಗದ ಧ್ವನಿಯಾಗಿ ಕೆಲಸಮಾಡಿದವರು ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Chikmagalur

ಸಾವಿನಲ್ಲೂ ಸಾರ್ಥಕತೆ ಮೆರೆದ ನೊಂದ ಕುಟುಂಬ

Published

on

ಚಿಕ್ಕಮಗಳೂರು : ಸಾವಿನಲ್ಲೂ ಸಾರ್ಥಕತೆ ಮೆರೆದ ನೊಂದ ಕುಟುಂಬ ಗಂಡನ ಸಾವಿನ ಆಘಾತದ ನಡುವೆಯೂ ನಾಲ್ಕು ಜನರ ಜೀವ ಉಳಿಸಲು ಅಂಗಾಂಗ ದಾನಕ್ಕೆ ಮುಂದಾದ ಪತ್ನಿ ಅಪೂರ್ವ ಶೆಟ್ಟಿ ಅವರ ಮಾನವೀಯ ನಿರ್ಧಾರ ಇಂದು ಸಮಾಜಕ್ಕೆ ಮಾದರಿಯಾಗಿದೆ.

ಕೊಪ್ಪ ತಾಲೂಕಿನ ನಿವಾಸಿ ಮಂಜುನಾಥ್ (35) ಅವರು ಇತ್ತೀಚೆಗೆ ಆಟೋ ಅಪಘಾತಕ್ಕೆ ಒಳಗಾಗಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದರು. ಅಪಘಾತದ ವೇಳೆ ಆಟೋ ತಲೆಗೆ ಬಡಿದು ಗಂಭೀರ ಗಾಯವಾಗಿತ್ತು. ಕೊಪ್ಪ ಹಾಗೂ ಮಣಿಪಾಲ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ, ವೈದ್ಯಕೀಯವಾಗಿ ಮೆದುಳು ಸಂಪೂರ್ಣವಾಗಿ ಕಾರ್ಯನಿರತವಾಗದ ಸ್ಥಿತಿಗೆ ತಲುಪಿದ್ದರು.


ಈ ದುಃಖದ ಸಂದರ್ಭದಲ್ಲೂ, ಪತಿ ಮತ್ತೊಬ್ಬರಲ್ಲಿ ಜೀವಂತವಾಗಿರಲಿ ಎಂಬ ಮಹಾನ್ ಸಂಕಲ್ಪದೊಂದಿಗೆ ಪತ್ನಿ ಅಪೂರ್ವ ಶೆಟ್ಟಿ ಅವರು ಸರ್ಕಾರದ ಮೂಲಕ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದಾರೆ. ಕೊಪ್ಪ ತಾಲೂಕಿನ ಪ್ರಶುಮನಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಇಂದು ಮಧ್ಯಾಹ್ನ ಮಂಜುನಾಥ್ ಅವರ ಹೃದಯ, ಕಿಡ್ನಿ, ಲಿವರ್ ಸೇರಿದಂತೆ ಹಲವು ಅಂಗಾಂಗಗಳನ್ನು ದಾನ ಮಾಡಲಾಗಿದ್ದು, ಅವುಗಳನ್ನು ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮಣಿಪಾಲ್ ಆಸ್ಪತ್ರೆಯವರು ಅಂಗಾಂಗ ದಾನ ಮಾಡಿದರೆ ಚಿಕಿತ್ಸಾ ವೆಚ್ಚವನ್ನು ಮನ್ನಾ ಮಾಡುವುದಾಗಿ ತಿಳಿಸಿದರೂ, ಪತ್ನಿ ಅಪೂರ್ವ ಶೆಟ್ಟಿ ಅವರು ಹಣವನ್ನು ಪಾವತಿಸಿ ಪತಿಯ ಮೃತದೇಹವನ್ನು ತಮ್ಮ ಊರಿಗೆ ಕರೆತಂದಿದ್ದಾರೆ.


“ಪತಿ ಸತ್ತರೂ, ಅವರ ಮೂಲಕ ಇನ್ನೂ ನಾಲ್ಕು ಜನರು ಬದುಕಲಿ” ಎಂಬ ಮಾನವೀಯ ಭಾವನೆಯೇ ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ.

ಮಂಜುನಾಥ್–ಅಪೂರ್ವ ಶೆಟ್ಟಿ ದಂಪತಿಗೆ 4 ವರ್ಷ ಹಾಗೂ 1 ವರ್ಷದ ಇಬ್ಬರು ಗಂಡು ಮಕ್ಕಳು ಇದ್ದಾರೆ. ಬಡ ಕುಟುಂಬವಾಗಿರುವುದರಿಂದ ಮಕ್ಕಳ ಶಿಕ್ಷಣ ಹಾಗೂ ಭವಿಷ್ಯದ ಬಗ್ಗೆ ಸಂಘ–ಸಂಸ್ಥೆಗಳು ಹಾಗೂ ದಾನಿಗಳ ಸಹಾಯವನ್ನು ಕುಟುಂಬವು ನಿರೀಕ್ಷಿಸಿದೆ.


ತನ್ನ ಪ್ರೀತಿಯ ಗಂಡನ ಸಾವಿನ ನೋವಿನ ನಡುವೆಯೂ ಸಮಾಜ ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ಈ ಮಹಾನ್ ನಿರ್ಧಾರ ತೆಗೆದುಕೊಂಡ ಅಪೂರ್ವ ಶೆಟ್ಟಿ ಹಾಗೂ ಅಮ್ಮ ಫೌಂಡೇಶನ್ ಸಂಸ್ಥಾಪಕರಾದ ಸುಧಾಕರ್ ಎಸ್ ಶೆಟ್ಟಿ ಅವರಿಗೆ ಗೌರವ ವ್ಯಕ್ತವಾಗುತ್ತಿದೆ.

Continue Reading

Chikmagalur

ವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್‌ ಮುಖಂಡ

Published

on

ಚಿಕ್ಕಮಗಳೂರು : ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್‌ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ.

ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್‌ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು. ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ. ಅಂತ ಆರೋಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್‌ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Chikmagalur

ಯುವತಿ ಮೇಲೆ ದೇವಸ್ಥಾನದ ಅರ್ಚಕರಿಂದಲೇ ಅತ್ಯಾಚಾ*ರ

Published

on

ಚಿಕ್ಕಮಗಳೂರು: ಮದುವೆಗಾಗಿ ಯುವತಿಯೊಬ್ಬಳು ಜಾತಕ ತೋರಿಸಲು ಹೋಗಿದ್ದ ವೇಳೆ ದೇವಸ್ಥಾನದ ಅರ್ಚಕರೇ ಯುವತಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೊರಟ್ಟಿ ಗ್ರಾಮದ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಕೇಳಿಬಂದಿದೆ.

ಸಂತ್ರಸ್ತ ಯುವತಿ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ಕೃಷ್ಣರಾವ್ ನನ್ನು ಪೊಲೀಸರು ಬಂಧಿಸಿದ್ದಾರೆ.

 

ಜಾತಕ ತೋರಿಸಲೆಂದು ಯುವತಿ ಅರ್ಚಕನನ್ನು ಭೇಟಿಯಾಗಿದ್ದರು. ಈ ವೇಳೆ ಅರ್ಚಕ ಕೃಷ್ಣರಾವ್‌ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಹಲವು ಬಾರಿ ಯುವತಿ ಮೇಲೆ ಆತ ದೌರ್ಜನ್ಯವೆಸಗಿದ್ದಾಗಿ ಯುವತ್ ಆರೋಪಿಸಿದ್ದಾರೆ.

ನಿನ್ನ ಜಾತಕದಲ್ಲಿ ದೋಷವಿದೆ. ಅದಕ್ಕೆ ತಡೆಯೊಡ್ಡಬೇಕು ಎಂದು ಯುವತಿಯನ್ನು ಅರ್ಚಕ ಹೆದರಿಸಿದ್ದನಂತೆ. ದೋಷ ಪರಿಹಾರ ಹೇಳುತ್ತೇನೆ ಎಂದು ಕರೆದು ಯುವತಿಯನ್ನು ಪದೇ ಪದೇ ಅತ್ಯಚಹಾರವೆಸಗಿದ್ದಾಗಿ ಆರೋಪಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬಣಕಲ್ ಪೊಲೀಸರು, ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

Continue Reading

Trending

error: Content is protected !!