Connect with us

Hassan

೩ನೇ ದಿನಕ್ಕೆ ಕಾಲಿಟ್ಟ ಗ್ರಾಮಿಣ ಅಂಚೆ ನೌಕರರ ಪ್ರತಿಭಟನೆ

Published

on

ಹಾಸನ: ಗ್ರಾಮೀಣ ಅಂಚೆ ನೌಕರರನ್ನು ಖಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಪಾರಸ್ಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಮುಖ್ಯ ಅಂಚೆ ಕಛೇರಿ ಮುಂದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ಅನಿರ್ಧಿಷ್ಟವಧಿ ಧರಣಿ ೩ನೇ ದಿವಸಕ್ಕೆ ಕಾಲಿಟ್ಟಿದೆ.

ಇದೆ ಸಂದರ್ಭದಲ್ಲಿ ಎ.ಐ.ಜಿ.ಡಿ.ಎಸ್.ಯು. ಸಂಘಟನೆಯ ಜಗದೀಶ್ ಮಾತನಾಡಿ, ಗ್ರಾಮೀಣ ಅಂಚೆ ನೌಕರರನ್ನು ಖಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಪಾರಸ್ಸು ಮಾಡಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಹಾಸನದ ಪ್ರಧಾನ ಅಂಚೆ ಕಛೇರಿಯ ಮುಂದೆ ವಿಭಾಗದ ನೂರಾರು. ಗ್ರಾಮೀಣ ಅಂಚೆ ನೌಕರರು ಎ.ಐ.ಜಿ.ಡಿ.ಎಸ್.ಯು.ಹಾಗೂ ಎನ್.ಯು.ಜಿ.ಡಿ.ಎಸ್.ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು. ಪ್ರಮುಖ ಬೇಡಿಕೆಗಳೆಂದರೇ ೮ ಗಂಟೆಗಳ ಕೆಲಸ ನೀಡುವುದು ಮತ್ತು ಪಿಂಚಣಿ ಸೇರಿದಂತೆ ಎಲ್ಲ ಸವಲತ್ತಗಳನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ ೧೨-೨೪-೩೬ ಸೇವೆ ಸಲ್ಲಿಸಿದ ಜಿಡಿಎಸ್ ನೌಕರರಿಗೆ ವಿಶೇಷ ಇಂಕ್ರೀಮೆಂಟ್ ನೀಡಲು ಗಮನವಹಿಸಬೇಕು ಎಂದರು. ಅವೈಜ್ಞಾನಿಕ ಗುರಿ ನೀಡಿ ಮೇಳಗಳನ್ನು ನಡೆಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಗುಂಪು ಇನ್ಸೂರೆನ್ಸ್ ಕವರೇಜಿ ರೂ ೫ ಲಕ್ಷದವರೆಗೆ ಹೆಚ್ಚಿಸಬೇಕು ಮತ್ತು ಅವೈಜ್ಞಾನಿಕ ಗುರಿ ಸಾಧಿಸದಿರುವ ಜಿಡಿಎಸ್ ನೌಕರರಿಗೆ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಜಿಡಿಎಸ್ ಗ್ರಾಚ್ಯುಟಿ ಹಣವನ್ನು ರೂ ೫ ಲಕ್ಷಗಳವರೆಗೆ ಹೆಚ್ಚಿಸಿ ೧೮೦ ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಜಿಡಿಎಸ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕೆಂಬುದು ನಮ್ಮ ಬೇಡಿಕೆ ಆಗಿದೆ ಎಂದು ತಮ್ಮ ಆಗ್ರಹವಾಗಿದೆ ಎಂದು ಹೇಳಿದರು.

ಇದೆ ವೇಳೆ ಎ.ಐ.ಜಿ.ಡಿ.ಎಸ್.ಯು.ಸಂಘಟನೆಯ ಅಧ್ಯಕ್ಷರು. ಜಿ.ಬಿ. ಕಾಳಿಗೇಗೌಡ, ಕಾರ್ಯದರ್ಶಿ ಕೆ.ಜೆ. ಶಿವಾಜಿ, ಕಾರ್ಯಾಧ್ಯಕ್ಷರು ಹೆಚ್.ಇ. ಜಯಣ್ಣ, ಸಂಘಟನಾ ಕಾರ್ಯದರ್ಶಿ ದಿನೇಶ್, ಮಲ್ಲೇಶ್, ಸತೀಶ್, ವಾಸು, ವಿನೋದ್ ಕುಮಾರ್, ಮಧು, ಎನ್.ಯು.ಜಿ.ಡಿ.ಎಸ್.ಯು.ನ. ವಲಯ ಕಾರ್ಯದರ್ಶಿ ಇತರರು ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಎಸ್‌ಡಿಎಂ ಜನಮಂಗಳ ಯೋಜನೆಯಡಿ ಉಚಿತ ಕಮೋಡಾ ವೀಲ್ ಚೇರ್ ವಿತರಣೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ಕಮೋಡಾ ವೀಲ್ ಚೇರ್ ವಿತರಣೆ ಮಾಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕಿನ ಯೋಜನಾಧಿಕಾರಿ ರತ್ನಾಕರ್ ಕೊಠಾರಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಅಂಗವಿಕಲರಿಗೆ ಅವಶ್ಯಕತೆ ಸಲಕರಣೆಗಳಾದ ವೀಲ್ ಚೇರ್, ಸೇಫ್ ವಾಕ‌ರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು ಉಪಕರಣಗಳನ್ನು ನೀಡಲಾಗಿದೆ. ಅಲ್ಲದೆ 105 ಮಂದಿ ಸದಸ್ಯರಿಗೆ ಪ್ರತಿ ತಿಂಗಳು ತಲಾ ಒಂದೊಂದು ಸಾವಿರ ಮಾಸಾಸನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪಾಳ್ಯ ಹೋಬಳಿಯ ಮೇಲ್ವಿಚಾರಕಿ ಯಶೋಧ ಮಾತನಾಡಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಗ್ರಾಮದ ನಿವಾಸಿಯಾದ ಬೈರಯ್ಯರ ಎಂಬುವವರು ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಯಿತು‌ ಎಂದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಸದಸ್ಯ ಮಲ್ಲಿಕಾರ್ಜುನ್, ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಫಲಾನುಭವಿಯ ಮನೆಯ ಸದಸ್ಯರು ಉಪಸ್ಥಿತರಿದ್ದರು.

Continue Reading

Hassan

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು

Published

on

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾವು

ಶಿವಪ್ರಸಾದ್ (32) ಸಾವನ್ನಪ್ಪಿದ ವ್ಯಕ್ತಿ

ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ರಾಮೇಶ್ವರ ಬಡಾವಣೆ‌ ಬಳಿ ಘಟನೆ

ದಿಡಗ ಗ್ರಾಮ ಪಂಚಾಯ್ತಿಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್

ಅತಿಯಾಗಿ ಮದ್ಯ ಸೇವಿಸುತ್ತಿದ್ದ ಶಿವಪ್ರಸಾದ್

ನಿನ್ನೆ ತಡರಾತ್ರಿ ಮದ್ಯಸೇವಿಸಿ ತಮ್ಮ KA-13-M-7321 ರೆನಾಲ್ಟೊ ಕಾರಿನೊಳಗೆ ಮಲಗಿದ್ದ ಶಿವಪ್ರಸಾದ್

ಕಾರಿನಲ್ಲೇ ಸಾವನ್ನಪ್ಪಿರುವ ಶಿವಪ್ರಸಾದ್

ಕಾರಿನೊಳಗೆ ಇದ್ದ ಕಾರಿನ ಕೀ

ಕಾರು ನಿಂತಿರುವುದನ್ನು ನಿಂತಲ್ಲೆ ನಿಂತಿರುವುದನ್ನು ನೋಡಿದ ಸ್ಥಳೀಯರು

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು

ಮ್ಯಾಕಾನಿಕ್ ಕರೆಸಿ ಕಾರಿನ ಡೋರ್‌ಲಾಕ್ ತೆಗೆದು ಪರಿಶೀಲಿಸಿದ ಪೊಲೀಸರು

 

ಕಾರಿನೊಳಗೆ ಸಾವನ್ನಪ್ಪಿದ್ದ ಶಿವಪ್ರಸಾದ್

ಶಿವಪ್ರಸಾದ್ ಆಲೂರು ತಾಲ್ಲೂಕಿನ, ಸಿದ್ದಾಪುರ ಗ್ರಾಮದವನು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Hassan

ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್‌ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾ‌ರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ತಹಶೀಲ್ದಾ‌ರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.

ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.

Continue Reading

Trending

error: Content is protected !!