Connect with us

Uncategorized

ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Published

on

ಹಾಸನ- ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಅರ್ಜುನ ಹುತಾತ್ಮ ಪ್ರಕರಣ

ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ದಂಪತಿ ಸಮೇತರಾಗಿ ಅರ್ಜನನ ಸಮಾದಿ ದರ್ಶನ ಪಡೆದು ಪೂಜೆ ಸಲ್ಲಿಕೆ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರೋ ಸಮಾದಿ ಬಳಿ‌ ತೆರಳಿ ಪೂಜೆ

ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗದ ಜೊತೆ ಕಾದಾಟದಲ್ಲಿ ವೀರಮರಣ ಹೊಂದಿದ್ದ ಅರ್ಜುನ

ಡಿಸೆಂಬರ್ 5 ರಂದು ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿ ಅಂತ್ಯಕ್ರಿಯೆ ನೆರವೇರಿತ್ತು

ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ನೆರವೇರಿದ್ದ ಅಂತ್ಯಕ್ರಿಯೆ

ಅಂತ್ಯಕ್ರಿಯೆ ವೇಳೆಯೇ ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದ ಯಧುವೀರ್

ಅಂದು ಅಂತ್ಯಕ್ರಿಯೆ ಯಲ್ಲಿ ಭಾಗಿಯಾಗದ ಹಿನ್ನೆಲೆಯಲ್ಲಿ ಇಂದು ಪತ್ನಿ ತ್ರಿಷಿಕಾ ಕುಮಾರಿ ಜೊತೆ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ ಯದುವೀರ್

ಅರಣ್ಯ ಇಲಾಖೆ ಅದಿಕಾರಿಗಳ ಜೊತೆ ತೆರಳಿ ತಮ್ಮ ನೆಚ್ಚಿನ ಅರ್ಜುನನಿಗೆ ಅಂತಿಮ ನಮನ ಸಲ್ಲಿಸಿದ ಯದುವೀರ್

Continue Reading
Click to comment

Leave a Reply

Your email address will not be published. Required fields are marked *

Hassan

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಮೌನ ಮುರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Published

on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ೯೧ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದರು.

ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್?ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲು ಹೋಗಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ ಎಂದು ದೇವೇಗೌಡ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ೧೦೦ ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದೂ ಅವರು ಹೇಳಿದರು.

Continue Reading

Uncategorized

ಅಂಜಲಿ ಕೊಲೆ ಆರೋಪಿಯಿಂದ ಮತ್ತೊಬ್ಬ ಮಹಿಳೆ ಮೇಲೆ ಹಲ್ಲೆ

Published

on

ದಾವಣಗೆರೆಯಲ್ಲಿ ಸೆರೆ ಹಿಡಿದ ರೈಲ್ವೆ ಪೋಲೀಸರು
ದಾವಣಗೆರೆ.ಮೇ.೧೭; ಹುಬ್ಬಳ್ಳಿಯ ಯುವತಿ
ಅಂಜಲಿ ಕೊಲೆ ಆರೋಪಿಯಿಂದ ಮತ್ತೊಂದು ಮಹಿಳೆಯ ಮೇಲೆ ಕೊಲೆಯತ್ನದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಬಳಿ ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದೆ.ಕೊಲೆ ಆರೋಪಿ ವಿಶ್ವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದ ಹಲ್ಲೆಗೊಳಗಾದ ಮಹಿಳೆ ಲಕ್ಷ್ಮೀ ತುಮಕೂರಿನಿಂದ ಪ್ರಯಾಣ ಬೆಳೆಸಿದ್ದರು ಎಂದು ತಿಳಿದು ಬಂದಿದೆ.\


ರೈಲಿನಲ್ಲಿ ಆತ ನೋಡುವ ದೃಷ್ಟಿ ಸರಿ ಇಲ್ಲ ಎಂದು ವಿಶ್ವನೊಂದಿಗೆ ಮಹಿಳೆ ಜಗಳ ಮಾಡಿಕೊಂಡಿದ್ದಾಳೆ.ಇದರಿಂದ ಸಿಟ್ಟಾಗಿದ್ದ ವಿಶ್ವ ಮಹಿಳೆ ಶೌಚಾಲಯಕ್ಕೆ ಹೋಗಿ ಬಾಗಿಲು ಒಪನ್ ಮಾಡುತ್ತಿದ್ದಂತೆ ಆಕೆಗೆ ವಿಶ್ವ ಚಾಕು ಹಾಕಿದ್ದಾನೆ.ಅದೃಷ್ಟವಶಾತ್ ಎಡಗೈಗೆ ಚಾಕು ತಗುಲಿದೆ, ಸ್ಥಳದಲ್ಲಿದ್ದ ಜನರು ಕೂಡಲೇ ಆತನನ್ನು ಹಿಡಿದು ಹೊಡೆದಿದ್ದಾರೆ.ಜನರಿಂದ ತಪ್ಪಿಸಿಕೊಳ್ಳಲು ಕೊಲೆ ಆರೋಪಿ‌ ವಿಶ್ವ ರೈಲಿನಿಂದ ಧುಮುಕಿದ್ದಾನೆ.ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಬಳಿ ಆರೋಪಿ ವಿಶ್ವ ರೈಲಿನಿಂದ ಕೆಳಗೆ ದುಮುಕಿದ್ದಾನೆ.


ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ರೈಲ್ವೆ ಪೋಲೀಸರು ಅರೋಪಿಯನ್ನು ಹಾಗೂ ಹಲ್ಲೆಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆಗ ಮಾಧ್ಯಮಗಳಲ್ಲಿ ವಿಶ್ವನ ಪೋಟೋ ನೋಡಿ ಕೊಲೆ ಅರೋಪಿ ಎಂದು  ರೈಲ್ವೆ ಪೊಲೀಸರು ಗುರುತಿಸಿದ್ದಾರೆ.
ಕೂಡಲೇ ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಲ್ಲೆಗೊಳಗಾದ ಮಹಿಳೆ ಲಕ್ಷ್ಮೀ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು‌ ತೆರಳಿದ್ದಾರೆ ಎನ್ನಲಾಗಿದೆ.

Continue Reading

Chikmagalur

ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು

Published

on

ಚಿಕ್ಕಮಗಳೂರು: ತಾಲ್ಲೂಕಿನ ಉಲುವಾಗಿಲು ಬಳಿ ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾನೆ.

ಕೆರೆಮಕ್ಕಿ ಗ್ರಾಮದ ಸಂಜು(33) ಮೃತ ಯುವಕ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನಲ್ಲಿ ಒಬ್ಬರು ಹಾರಿಸಿದ ಗುಂಡು ಯುವಕನಿಗೆ ಬಿದ್ದಿದೆ.

ಎದೆಯ ಭಾಗಕ್ಕೆ ಗುಂಡು ತಗುಲಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!