Connect with us

Cinema

ಚಿತ್ರೋತ್ಸವದ ಕೊನೆಯ ದಿನ ನೋಡಬಹುದಾದ ಅತ್ಯುತ್ತಮ 10 ಸಿನಿಮಾಗಳು

Published

on

ಬೆಂಗಳೂರು: ನಾಳೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕೊನೆಯ ದಿನ ಲುಲು ಮಾಲ್ ನಲ್ಲಿ ನೋಡಬಹುದಾದ ಅತ್ಯುತ್ತಮ 10 ಚಲನಚಿತ್ರಗಳ ಪಟ್ಟಿ ಇಲ್ಲಿದೆ:

1. ನೌವೆಲ್ ವಾಗ್
ಸಮಯ ಮತ್ತು ಸ್ಕ್ರೀನ್: ರಾತ್ರಿ 8:20 (ಸ್ಕ್ರೀನ್ 3), ರಾತ್ರಿ 7:30 (ಸ್ಕ್ರೀನ್ 6), ಅಥವಾ ಸಂಜೆ 7:20 (ಸ್ಕ್ರೀನ್ 8)
ವಿವರಣೆ: ಪ್ರಖ್ಯಾತ ನಿರ್ದೇಶಕ ರಿಚರ್ಡ್ ಲಿಂಕ್ಲೇಟರ್ ನಿರ್ದೇಶನದ ಈ 2025ರ ಚಿತ್ರವು ಫ್ರೆಂಚ್ ಸಿನಿಮಾ ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತದೆ.

2. ಶಂಕರ್ ಗುರು
ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 2:00 (ಸ್ಕ್ರೀನ್ 6)
ವಿವರಣೆ: ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್ ಅವರ ಅಭಿನಯದ ಈ 1978ರ ಮೈಲಿಗಲ್ಲು ಚಿತ್ರವನ್ನು ‘ಜನಪ್ರಿಯ ಮನರಂಜನಾ ಚಿತ್ರಗಳ’ ವಿಭಾಗದಲ್ಲಿ ಪ್ರದರ್ಶಿಸಲಾಗುತ್ತಿದೆ.

3. ಅಂಕಲ್ ಬೂನ್ಮಿ ಹೂ ಕ್ಯಾನ್ ರಿಕಾಲ್ ಹಿಸ್ ಪಾಸ್ಟ್ ಲೈವ್ಸ್
ಸಮಯ ಮತ್ತು ಸ್ಕ್ರೀನ್: ಸಂಜೆ 4:10 (ವಿಐಪಿ ಸ್ಕ್ರೀನ್ 1)
ವಿವರಣೆ: ಅಪಿಚತ್‌ಪಾಂಗ್ ವೀರಸೇತಕುಲ್ ನಿರ್ದೇಶನದ ಈ ಥಾಯ್ ಚಿತ್ರವು ಆಧ್ಯಾತ್ಮಿಕ ಮತ್ತು ಪುನರ್ಜನ್ಮದ ಕುರಿತಾದ ಜಾಗತಿಕ ಮಟ್ಟದ ಶ್ರೇಷ್ಠ ಕಲಾಕೃತಿಯಾಗಿದೆ.

4. ದಿ ಪ್ರೆಸಿಡೆಂಟ್ಸ್ ಕೇಕ್
ಸಮಯ ಮತ್ತು ಸ್ಕ್ರೀನ್: ಸಂಜೆ 5:40 (ಸ್ಕ್ರೀನ್ 4)
ವಿವರಣೆ: ಹಸನ್ ಹಾದಿ ನಿರ್ದೇಶನದ ಈ 2025ರ ಅರೇಬಿಕ್ ಚಿತ್ರವು ಇರಾಕ್‌ನ ಸಮಕಾಲೀನ ಸಾಮಾಜಿಕ ಚಿತ್ರಣವನ್ನು ಕಟ್ಟಿಕೊಡುತ್ತದೆ.

5. ಮ್ಯಾನ್ ಆಫ್ ಮಾರ್ಬಲ್
ಸಮಯ ಮತ್ತು ಸ್ಕ್ರೀನ್: ಸಂಜೆ 6:50 (ವಿಐಪಿ ಸ್ಕ್ರೀನ್ 1)
ವಿವರಣೆ: ಪೋಲಿಷ್ ನಿರ್ದೇಶಕ ಅಂದ್ರೆಜ್ ವಾಜ್ದಾ ಅವರ ಈ 1977ರ ಚಿತ್ರವು ವಿಶ್ವ ಸಿನಿಮಾದ ಐತಿಹಾಸಿಕ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.

6. ಡಿವೈನ್ ಕಾಮಿಡಿ
ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 12:30 (ಸ್ಕ್ರೀನ್ 5)
ವಿವರಣೆ: ಅಲಿ ಅಸ್ಗರಿ ನಿರ್ದೇಶನದ ಈ 2025ರ ಪರ್ಷಿಯನ್ ಚಿತ್ರವು ಏಷ್ಯನ್ ಸಿನಿಮಾ ಸ್ಪರ್ಧಾ ವಿಭಾಗದ ಅಡಿಯಲ್ಲಿ ಪ್ರದರ್ಶನಗೊಳ್ಳುತ್ತಿದೆ.

7. ದಿ ಮಾಸ್ಟರ್ ಮೈಂಡ್
ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 2:30 (ಸ್ಕ್ರೀನ್ 5)
ವಿವರಣೆ: ಕೆಲ್ಲಿ ರೀಚಾರ್ಡ್ ನಿರ್ದೇಶನದ ಈ ಇಂಗ್ಲಿಷ್ ಚಿತ್ರವು ತನ್ನ ವಿಶಿಷ್ಟ ಕಥಾಹಂದರದಿಂದಾಗಿ ‘ಸಮಕಾಲೀನ ವಿಶ್ವ ಸಿನಿಮಾ’ ವಿಭಾಗದಲ್ಲಿ ಗಮನಸೆಳೆಯುತ್ತಿದೆ.

8. ಡ್ರಾಗನ್‌ಫ್ಲೈ
ಸಮಯ ಮತ್ತು ಸ್ಕ್ರೀನ್: ಬೆಳಗ್ಗೆ 11:30 (ಸ್ಕ್ರೀನ್ 3)
ವಿವರಣೆ: ಪಾಲ್ ಆಂಡ್ರ್ಯೂ ವಿಲಿಯಮ್ಸ್ ನಿರ್ದೇಶನದ ಈ 2025ರ ಇಂಗ್ಲಿಷ್ ಚಿತ್ರವು ಗಂಭೀರ ಕಥಾಹಂದರ ಹೊಂದಿರುವ ಪ್ರಮುಖ ಚಿತ್ರವಾಗಿದೆ.

9. ಗಣರಾಜ್
ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 3:00 (ವಿಐಪಿ ಸ್ಕ್ರೀನ್ 2)
ವಿವರಣೆ: ಭಾರತದ ಈಶಾನ್ಯ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವ ಈ 2025ರ ಅಸ್ಸಾಮಿ ಚಿತ್ರವನ್ನು ದಿಪ್ ಭುಯಾನ್ ನಿರ್ದೇಶಿಸಿದ್ದಾರೆ.

10. ಕ್ಯಾಟನೇ
ಸಮಯ ಮತ್ತು ಸ್ಕ್ರೀನ್: ಸಂಜೆ 4:50 (ಸ್ಕ್ರೀನ್ 1)
ವಿವರಣೆ: ಅಯೋನಾ ಮಿಸ್ಚೀ ನಿರ್ದೇಶನದ ಈ 2025ರ ರೋಮೇನಿಯನ್ ಚಿತ್ರವು ಯುರೋಪಿಯನ್ ಸಿನಿಮಾದ ಆಧುನಿಕ ಶೈಲಿಯನ್ನು ಪ್ರತಿನಿಧಿಸುತ್ತದೆ.

Continue Reading

Cinema

ಫೆ. 7ರ ಸಂಜೆ ಕುವೆಂಪು ಸಿಗ್ತಾರೆ…

Published

on

ಕುವೆಂಪು ನಮ್ಮ ನಾಡಿನ “ಕಾಡಿನ ಕೊಳಲು”… ಅವರ ವೈಚಾರಿಕತೆ, ಕಾದಂಬರಿ, ನಾಟಕಗಳದ್ದೇ ಒಂದು ಲೋಕವಾದರೆ ಅವರ ಕಾವ್ಯದ್ದು ಬೇರೆಯದೇ ಆದ ಒಂದು ಅನನ್ಯ ಲೋಕ. ಅಂತಹ ರಸಋಷಿ, ಭಾವನೆಗಳ ಮಹಾಪೂರ ಕುವೆಂಪುರವರ ಕಾವ್ಯವನ್ನೇ ಕೇಂದ್ರವಾಗಿಟ್ಟುಕೊಂಡ ನೃತ್ಯರೂಪಕ ಹಾಸನದಲ್ಲಿ ಪ್ರದರ್ಶನವಾಗುತ್ತಿದೆ.

ವಿದುಷಿ ಡಾ. ಪಿ. ಮಾನಸ ಅವರ ಮನೋಜ್ಙ ನೃತ್ಯಕಲಾ ಅಕಾಡೆಮಿ ವತಿಯಿಂದ ಈ ಅದ್ಭುತ ನೃತ್ಯ ರೂಪಕ ರೂಪುಗೊಂಡಿದೆ.

ಫೆ. 7 ನೇ ತಾರೀಖಿನಂದು ಎಂ. ಜಿ. ರಸ್ತೆಯಲ್ಲಿರುವ ಬಿಜಿಎಸ್‌ ಆಂಗ್ಲ‌ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಲಿದೆ. ಕುವೆಂಪು ಅವರನ್ನು ಹೀಗೂ ಮುಖಾಮುಖಿಯಾಗಬಹುದಾ ಅಂತ ಅಚ್ಚರಿ ಪಡುತ್ತೀರಿ… ಬನ್ನಿ ಸಂಭ್ರಮಿಸೋಣ.

Continue Reading

Cinema

ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ

Published

on

ಬೆಂಗಳೂರು ಚಿತ್ರೋತ್ಸವ ವೇದಿಕೆ: ʼಗೀತರಚನೆ ಎನ್ನುವುದು ಕಲಿಯೋದು, ಕಲಿಸೋದಲ್ಲ. ಕನ್ನಡ ಕಾವ್ಯ, ಸಾಹಿತ್ಯ ಓದಬೇಕು. ಜನಜೀವನ ನೋಡಬೇಕು. ಬರವಣಿಗೆ ಎನ್ನುವುದು ನಮ್ಮ ಸುಪ್ತಮನಸ್ಸಿನಿಂದ ಬರುವಂತದ್ದು. ಅದಕ್ಕೆ ಯಾವುದೇ ತರಬೇತಿ, ಕಾರ್ಯಾಗಾರ ಇರುವುದಿಲ್ಲʼ ಎಂದು ಖ್ಯಾತ ಸಾಹಿತಿ ಮತ್ತು ಚಿತ್ರಸಾಹಿತಿ ಜಯಂತ್‌ ಕಾಯ್ಕಿಣಿ ಅಭಿಪ್ರಾಯಪಟ್ಟಿದ್ದಾರೆ.

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಡೆದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ʼಗೀತರಚನೆಯನ್ನು ಕಲಿಸುವುದಕ್ಕಾಗುವುದಿಲ್ಲ. ಕನಸ್ಸಿನಲ್ಲಿ ಒಮ್ಮೊಮ್ಮೆ ಅಮೂರ್ತವಾಗಿ ಏನೇನೋ ಕಾಣುತ್ತದಲ್ಲ, ಗೀತರಚನೆಯೂ ಹಾಗೆಯೇ. ನಿರ್ದೇಶನ, ನಟನೆಯ ತರಹ ಗೀತರಚನೆಗೆ ತರಬೇತಿ ತೆಗೆದುಕೊಳ್ಳುವುದಕ್ಕೆ ಆಗುವುದಿಲ್ಲ. ತರಬೇತಿ ಪಡೆದರೆ, ಜಿಮಿನಂದ ಬಂದ ಒಂದೇ ತರಹ ದೇಹಗಳ ಹಾಗೆ ಕಾಣುತ್ತದೆ. ಬ್ಯೂಟಿ ಪಾರ್ಲರ್‌ನಿಂದ ಬಂದ ವಧುವಿನ ಹಾಗೆ ಎಲ್ಲವೂ ಒಂದೇ ರೀತಿ ಕಾಣುತ್ತದೆ. ನಿಮ್ಮ ಛಾಪು ಮೂಡಿಸಬೇಕೆಂದರೆ ಸ್ವತಂತ್ರವಾಗಿ ಬರೆಯುವುದಕ್ಕೆ ಕಲಿಯಬೇಕುʼ ಎಂದು ಹೇಳಿದರು.

 

ಕಾಲಕ್ಕೆ ತಕ್ಕ ಹಾಗೆ ಬದಲಾಗುತ್ತಿರಬೇಕು ಎಂದ ಅವರು, ʼಹಳೆಯದೆಲ್ಲಾ ಚೆನ್ನಾಗಿತ್ತು, ಈಗ ಚೆನ್ನಾಗಿಲ್ಲ ಎನ್ನುವುದು ತಪ್ಪು. ಅಂದರೆ ನಾವು ಸಹ ಮೊದಲ ಹಾಗಿಲ್ಲ ಎಂದರ್ಥ. ಎಲ್ಲಾ ಕಡೆ ಸಾಕಷ್ಟು ಬದಲಾವಣೆಗಳಾಗಿವೆ. ಮೊದಲು ನಮ್ಮೂರಿನಲ್ಲಿ ಸಾಕಷ್ಟು ಹಿರಿಯರಿದ್ದರು. ಈಗ ನಾನೇ ಹಿರಿಯ ಎನ್ನುವಂತಾಗಿದೆ. ಸಮಯ ಬದಲಾಗುತ್ತಿರುತ್ತದೆ. ತಂತ್ರಜ್ಞಾನ ಬೆಳೆಯುತ್ತಿದೆ. ನಾವು ಸಹ ಬದಲಾಗಬೇಕಾಗುತ್ತದೆ. ಹಳೆಯದೇ ಚೆನ್ನಾಗಿತ್ತು, ಈಗ ಚೆನ್ನಾಗಿಲ್ಲ ಎನ್ನುವುದು ತಪ್ಪುʼ ಎಂದು ಅವರು ಹೇಳಿದರು.

ತಾವು ಮೊದಲಿಂದಲೂ ಸಿನಿಮಾ ಹಾಡುಗಳ ಪ್ರೇಮಿ ಎಂದ ಜಯಂತ್‌ ಕಾಯ್ಕಿಣಿ, ʼನಾವೆಲ್ಲಾ ಹಾಡುಗಳನ್ನು ಗುನುಗಿ ಬೆಳೆದವರು. ಗೊಣಗುವುದಕ್ಕಿಂತ ಗುನುಗುವುದು ಮೇಲು ಎಂದು ನಮ್ಮ ತಂದೆ ಹೇಳುತ್ತಿದ್ದರು. ನಾನು ೫೨ನೇ ವಯಸ್ಸಿಗೆ ಸಿನಿಮಾದಲ್ಲಿ ಗೀತರಚನೆಕಾರನಾದೆ. ಯೌವ್ವನದಲ್ಲಿದ್ದಾಗ ಗಂಭಿರವಾಗಿ ʼಕೋಟಿತೀರ್ಥʼ ಅಂತ ಬರೆದೆ. ವಯಸ್ಸಾದ ಮೇಲೆ ಸಿನಿಮಾ ಹಾಡುಗಳನ್ನು ಬರೆಯುವಂತಾಯಿತುʼ ಎಂದರು.

ಆರಂಭದಲ್ಲಿ ಸಿನಿಮಾ ಹಾಡುಗಳನ್ನು ಬರೆಯುವಾಗ ಒಂದು ಉಡಾಫೆ ಇತ್ತು ಎಂದ ಅವರು, ʼಸಿನಿಮಾ ಹಾಡುಗಳನ್ನು ಬರೆಯುವುದು ಬಹಳ ಸುಲಭ ಎಂದು ಭಾವಿಸಿದ್ದೆ. ಹಾಡುಗಳನ್ನು ಬರೆಯುವುದಕ್ಕೆ ಶುರು ಮಾಡಿದ ಮೇಲೆ ಅದರ ಕಷ್ಟ ಗೊತ್ತಾಯ್ತು. ಸಿನಿಮಾದಲ್ಲಿ ಟ್ಯೂನ್‌ ಹಾಕಿದ ಮೇಲೆ, ಮೀಟರ್‌ಗೆ ತಕ್ಕ ಹಾಗೆ ಸಾಹಿತ್ಯವನ್ನು ರಚಿಸಲಾಗುತ್ತದೆ. ಅದು ದೊಡ್ಡ ಸವಾಲಾಗಿತ್ತು. ನಮ್ಮಲ್ಲಿ ಕೋಟ್ಯಂತರ ಹಾಡುಗಳಿವೆ. ಅದರಲ್ಲಿ ವಿಭಿನ್ನವಾದುದನ್ನೇನೋ ಬರೆಯಬೇಕು. ಅದರಲ್ಲಿ ಶೇ. 97ರಷ್ಟು ಪ್ರೇಮಗೀತೆಗಳು. ಅದರಲ್ಲಿ ವಿಭಿನ್ನವಾಗಿ ಅದೆಷ್ಟು ಬರೆಯೋಕೆ ಸಾಧ್ಯ? ಒಲವು, ನಲಿವು, ಚೆಲುವು, ಹಸಿರು, ಉಸಿರು … ಈ ಪದಗಳನ್ನೇ ಪುನಃ ಬಳಸಬೇಕು. ಅದನ್ನು ಹೊರತುಪಡಿಸಿ, ಹೊಸ ಎಕ್ಸ್‌ಪ್ರೆಶನ್‌ ಸೃಷ್ಟಿಸುವುದು ನಿಜಕ್ಕೂ ಸವಾಲಿನ ಕೆಲಸʼ ಎಂದು ಹೇಳಿದರು.

ಸಿನಿಮಾಗಳಿಗೆ ಹಾಡುಗಳನ್ನು ಬರೆಯುವುದಕ್ಕೆ ಪ್ರಾರಂಭಿಸಿದ ಮೇಲೆ ಅನುಕೂಲವೇ ಆಯಿತು ಎನ್ನುವ ಅವರು, ʼಚಿತ್ರಗೀತೆಗಳನ್ನು ಬರೆಯುವುದಕ್ಕೆ ಪ್ರಾರಂಭಿಸಿದ ಮೇಲೆ, ನಾನು ಸಿನಿಮಾಗೆ ಹೆಚ್ಚು ಬರೆಯುತ್ತಿರುವುದರ ಬಗ್ಗೆ ಹಿತೈಷಿಗಳು ಬೇಸರ ವ್ಯಕ್ತಪಡಿಸಿದರು. ಸಿನಿಮಾ ಹಾಡುಗಳನ್ನು ಬರೆಯುತ್ತಿದ್ದೇನೆ ಎಂದು ನಾನು ಬೇರೆ ಸಾಹಿತ್ಯವನ್ನು ಕಡೆಗಣಿಸಿಲ್ಲ. ನನ್ನ ಬೇರೆ ಮರವಣಿಗೆಯನ್ನು ಮುಂದುವರೆಸಿದ್ದೇನೆ. ಇದರಿಂದ ಅನಾಮಿಕ ಶೋತೃಗಳು ಹೆಚ್ಚಾಗುವುದರ ಜೊತೆಗೆ ಒಂಥರಾ Reverse Osmosis ಪ್ರಕ್ರಿಯೆ ಶುರುವಾಯ್ತು. ನನ್ನ ಕಥೆ, ಕವನ ಸಂಕಲನಗಳನ್ನು ಓದದ ಬಹಳಷ್ಟು ಹೊಸ ತಲೆಮಾರಿನವರು, ಹಾಡುಗಳನ್ನು ಕೇಳಿ ಇಷ್ಟಪಟ್ಟು, ನನ್ನ ಪುಸ್ತಕಗಳನ್ನು ಕೊಂಡು ಓದಿದರು. ಇದರಿಂದ ನನ್ನ ಪುಸ್ತಕಗಳ ಮರುಮುದ್ರಣವಾದಂತಾಯಿತುʼ ಎಂದರು.

ವ್ಯಕ್ತ, ಶ್ರಾವ್ಯ ಮತ್ತು ದೃಶ್ಯ ಹೀಗೆ ಮೂರೂ ಗುಣಗಳಿರುವ ಒಂದು ಅಪರೂಪದ ಮಾಧ್ಯಮ ಸಿನಿಮಾ ಎಂದ ಅವರು, ʼಸಿನಿಮಾದಲ್ಲಿ ವ್ಯಕ್ತ, ಶ್ರಾವ್ಯ ಮತ್ತು ದೃಶ್ಯ ಎಂಬ ಮೂರೂ ಗುಣಗಳೂ ಇವೆ. ಒಬ್ಬ ನಿರ್ದೇಶಕನಿಗೆ ಇದರ ಅರಿವು ಮತ್ತು ಹಿಡಿತವಿದ್ದರೆ, ತೆರೆಯ ಮೇಲೆ ಅದ್ಭುತವಾದುದನ್ನು ಸೃಷ್ಟಿಸಬಹುದುʼ ಎಂದರು.

ತಮಗೆ ಸಿನಿಮಾ ಆಸಕ್ತಿ ಬಾಲ್ಯದಲ್ಲೇ ಹುಟ್ಟಿತ್ತು ಮತ್ತು ಅದಕ್ಕೆ ಮೂಲ ಕಾರಣ ತಮ್ಮೂರಿನ ಟೂರಿಂಗ್‌ ಟಾಕೀಸ್‌ ಕಾರಣ ಎಂದ ಅವರು, ʼಬಾಲ್ಯದಲ್ಲಿ ʼಕಠಾರಿ ವೀರʼ, ʼಬೀದಿ ಬಸವಣ್ಣʼ, ʼಚೂರಿ ಚಿಕ್ಕಣ್ಣʼ, ʼಚಂದವಳ್ಳಿಯ ತೋಟʼ ಮುಂತಾದ ಚಿತ್ರಗಳನ್ನು ನೋಡಿ ಬೆಳೆದಂತೆ. ಜಾವೇದ್‌ ಅಖ್ತರ್‌ ಅವರು ಹೇಳಿದಂತೆ ಸಿನಿಮಾನೇ ನಮ್ಮ ಧರ್ಮ. ಹಲವು ಆದರ್ಶ ಗುಣಗಳನ್ನು ಸಿನಿಮಾದಿಂದ ನೋಡಿ ಕಲಿತವರು ನಾವು. ʼದೀವಾರ್‌ʼ ಚಿತ್ರದಲ್ಲಿ ಬರುವ ʼಮೇರೇ ಪಾಸ್‌ ಮಾʼ ಎನ್ನುವಂತೆ, ನನ್ನ ಹತ್ತಿರ ಏನಿದೆ ಎಂದು ಕೇಳಿದರೆ, ʼಮೇರೆ ಪಾಸ್‌ ಸಿನಿಮಾ ಹೇ …ʼ ಎನ್ನುತ್ತೇನೆ. ಭಾರತದಲ್ಲಿ ನಾವು ಸಿನಿಮಾದ ಜೊತೆಗೆ ಬೆರೆತು ಹೋಗಿದ್ದೇವೆʼ ಎಂದರು.

ಇತ್ತೀಚಿನ ವರ್ಷಗಳಲ್ಲಿ ʼಪೊನ್ನಿಯನ್‌ ಸೆಲ್ವನ್‌ʼ ಚಿತ್ರದ ಕನ್ನಡ ಡಬ್ಬಿಂಗ್‌ ಅವತರಣಿಕೆಗೆ ಸಾಹಿತ್ಯ ರಚಿಸಿದ್ದು ಸವಾಲಿನ ಕೆಲಸವಾಗಿತ್ತು ಎಂದ ಅವರು, ʼಎ.ಆರ್‌.ರೆಹಮಾನ್‌ ಸಂಗೀತ ನಿರ್ದೇಶನದ ‘ಪೊನ್ನಿಯನ್‌ ಸೆಲ್ವನ್‌ʼ ಸಿನಿಮಾದ ಎರಡೂ ಭಾಗಗಳು ಸೇರಿ 14 ಹಾಡುಗಳಿವೆ. ನಾನು ಭಾಷಾಂತರ ಮಾಡುವುದಿಲ್ಲ, ಸ್ವಂತವಾಗಿ ಬರೆಯುವುದಕ್ಕೆ ಅವಕಾಶ ಕೊಟ್ಟರೆ ಬರೆಯುವುದಾಗಿ ನಿರ್ದೇಶಕ ಮಣಿರತ್ನಂ ಅವರಿಗೆ ಹೇಳಿದ್ದೆ. ಅವರು ಸಹ ಸನ್ನಿವೇಶ ಹೇಳಿ, ಅದಕ್ಕೆ ಪೂರಕವಾಗಿ ಬರೆಯುವುದಕ್ಕೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟರು. ಕನ್ನಡದಲ್ಲಿ ಪ್ರೀತಿ, ಪ್ರೇಮ ಎನ್ನಲು ತುಟಿಗಳನ್ನು ತಾಗಿಸಬೇಕು. ತಮಿಳಿನಲ್ಲಿ ‘ಕಾದಲ್‌ʼ ಎನ್ನುವಾಗ ತುಟಿಗಳೇ ತಾಗುವುದಿಲ್ಲ. ತುಟಿಗಳು ಸೇರಿಸದೆ ಪ್ರೀತಿ ಹೇಗೆ ಮಾಡುತ್ತೀರಿ ಎಂದು ಮಣಿರತ್ನಂ ಅವರನ್ನು ತಮಾಷೆ ಮಾಡಿದ್ದಾಗಿʼ ನೆನಪಿಸಿಕೊಂಡರು.

ಈ ಕಾರ್ಯಕ್ರಮವನ್ನು ಪ್ರಶಾಂತ್‌ ಪಂಡಿತ್‌ ನಡೆಸಿಕೊಟ್ಟರು.

Continue Reading

Cinema

ಬೆಂಗಳೂರು ಚಿತ್ರೋತ್ಸವದಲ್ಲಿ ನಾಳೆ ನೋಡಬಹುದಾದ ಅತ್ಯುತ್ತಮ 10 ಸಿನಿಮಾಗಳು

Published

on

ಬೆಂಗಳೂರು ಚಿತ್ರೋತ್ಸವ ಇನ್ನೇನು ಅಂತಿಮ ಕ್ಷಣ ತಲುಪುತ್ತಿದ್ದು, ಫೆ.5ರಂದು ನೋಡಬಹುದಾದ 10 ಸಿನಿಮಾಗಳ ಪಟ್ಟಿ ಇಲ್ಲಿದೆ:

1. ಜೀವನ ಚೈತ್ರ (ಕನ್ನಡ)
ಸಮಯ: ಸಂಜೆ 7:50 | ಸ್ಕ್ರೀನ್: 7
ವಿಶೇಷತೆ: ಡಾ. ರಾಜ್ಕುಮಾರ್ ಅಭಿನಯದ 1992 ರ ಈ ಅದ್ಭುತ ಕಾವ್ಯ ಈಗ ಡಿಜಿಟಲ್ 4ಕೆ ರೂಪದಲ್ಲಿ ಸಿದ್ಧಗೊಂಡಿದೆ. ಕನ್ನಡ ಚಿತ್ರರಂಗದ ಈ ಸ್ತಂಭವನ್ನು ಅತ್ಯಾಧುನಿಕ ಸ್ಪಷ್ಟತೆಯಲ್ಲಿ ನೋಡುವ ಅಪರೂಪದ ಅವಕಾಶ ಇದಾಗಿದೆ.

2. ಭೂಮಿಕಾ (ಹಿಂದಿ)
ಸಮಯ: ಮಧ್ಯಾಹ್ನ 1:00 | ಸ್ಕ್ರೀನ್: ವಿಐಪಿ 2
ವಿಶೇಷತೆ: ಶ್ಯಾಮ್ ಬೆನಗಲ್ ನಿರ್ದೇಶನದ ಮತ್ತು ಸ್ಮಿತಾ ಪಾಟೀಲ್ ಅಭಿನಯದ ಈ ಚಿತ್ರವು ಉತ್ಸವದ ‘ಪಾಟೀಲ್ ರೆಟ್ರೋಸ್ಪೆಕ್ಟಿವ್’ ವಿಭಾಗದ ಪ್ರಮುಖ ಆಕರ್ಷಣೆಯಾಗಿದೆ. ಒಬ್ಬ ನಟಿಯ ಅಸ್ಮಿತೆಯ ಕುರಿತಾದ ಅತ್ಯುತ್ತಮ ಚಿತ್ರವಿದು.

3. ಪ್ಯಾಲೆಸ್ಟೈನ್ 36 (ಅರೇಬಿಕ್)
ಸಮಯ: ಸಂಜೆ 5:10 | ಸ್ಕ್ರೀನ್: 8
ವಿಶೇಷತೆ: ನಿರ್ದೇಶಕಿ ಆನ್ನೆಮರಿ ಜಾಸಿರ್ ಅವರ ಐತಿಹಾಸಿಕ ಮಹಾಕಾವ್ಯವಿದು. 98ನೇ ಅಕಾಡೆಮಿ ಪ್ರಶಸ್ತಿಗಳಿಗೆ ಪ್ಯಾಲೆಸ್ಟೈನ್ನ ಅಧಿಕೃತ ಪ್ರವೇಶವಾಗಿದ್ದ ಈ ಚಿತ್ರವು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಗಮನ ಸೆಳೆದಿದೆ.

4. ಕೇಸ್ 137 (ಫ್ರೆಂಚ್)
ಸಮಯ: ಸಂಜೆ 5:20 | ಸ್ಕ್ರೀನ್: 7
ವಿಶೇಷತೆ: ಸಸ್ಪೆನ್ಸ್ ಇಷ್ಟಪಡುವವರಿಗಾಗಿ ಡೊಮಿನಿಕ್ ಮೋಲ್ ನಿರ್ದೇಶನದ ಈ 2025ರ ಥ್ರಿಲ್ಲರ್ ಸಿನಿಮಾ, ಯುರೋಪಿಯನ್ ಶೈಲಿಯ ಚಿತ್ರವಿದು.

5. ದಿ ಪ್ರಾಮಿಸ್ಡ್ ಲ್ಯಾಂಡ್ (ಪೋಲಿಷ್)
ಸಮಯ: ಬೆಳಗ್ಗೆ 9:30 | ಸ್ಕ್ರೀನ್: ವಿಐಪಿ 2
ವಿಶೇಷತೆ: ಆಂಡ್ರೆಜ್ ವಾಜ್ದಾ ಅವರ ಸ್ಮರಣಾರ್ಥ ಪ್ರದರ್ಶಿಸಲಾಗುತ್ತಿರುವ ಈ 1975 ರ ಕ್ಲಾಸಿಕ್ ಚಿತ್ರವು ಪೋಲಿಷ್ ಚಿತ್ರರಂಗದ ಶ್ರೇಷ್ಠ ಚಿತ್ರಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಇದು ಕೈಗಾರಿಕಾ ಯುಗದ ಕ್ರೂರ ಆರಂಭವನ್ನು ಚಿತ್ರಿಸುತ್ತದೆ.

6. ಅಮ್ರಮ್ (ಜರ್ಮನ್)
ಸಮಯ: ಮಧ್ಯಾಹ್ನ 3:20 | ಸ್ಕ್ರೀನ್: 7
ವಿಶೇಷತೆ: ಖ್ಯಾತ ನಿರ್ದೇಶಕ ಫಾತಿಹ್ ಅಕಿನ್ ಅವರ ಇತ್ತೀಚಿನ ಕೃತಿಯಿದು. ಪ್ರಬಲವಾದ ಸಾಮಾಜಿಕ ಪ್ರಜ್ಞೆ ಮತ್ತು ದೃಷ್ಟಿಕೋನಗಳನ್ನು ಪ್ರಶ್ನಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ.

7. ಉಯ್ಯಾಲೆ (ಕನ್ನಡ)
ಸಮಯ: ಸಂಜೆ 7:50 | ಸ್ಕ್ರೀನ್: ವಿಐಪಿ 2
ವಿಶೇಷತೆ: ಪರಂಪರೆಯನ್ನು ಪ್ರೀತಿಸುವವರಿಗೆ ಇದೊಂದು ಹಬ್ಬ. 1969 ರ ಈ ಮಾಸ್ಟರ್ಪೀಸ್ ಚಿತ್ರದಲ್ಲಿ ಡಾ. ರಾಜ್ಕುಮಾರ್ ಮತ್ತು ಕಲ್ಪನಾ ನಟಿಸಿದ್ದು, ತೀವ್ರ ಭಾವನೆಗಳ ಚಿತ್ರಣವನ್ನು ಹೊಂದಿದೆ.

8. ದಿ ಪೋರ್ಚುಗೀಸ್ ಹೌಸ್ (ಸ್ಪ್ಯಾನಿಷ್)
ಸಮಯ: ಸಂಜೆ 7:00 | ಸ್ಕ್ರೀನ್: 1
ವಿಶೇಷತೆ: ಅವೆಲಿನಾ ಪ್ರಾಟ್ ನಿರ್ದೇಶನದ ಸಮಕಾಲೀನ ಸ್ಪ್ಯಾನಿಷ್ ಡ್ರಾಮಾ ಇದಾಗಿದ್ದು, ಯುರೋಪಿಯನ್ ಜೀವನ ಮತ್ತು ಸಂಬಂಧಗಳ ಆಧುನಿಕ ನೋಟವನ್ನು ಕಾವ್ಯಾತ್ಮಕವಾಗಿ ದಾಖಲಿಸಿದೆ.

9. ಸರ್ಕ್ರೀಟ್ (ಮಲಯಾಳಂ)
ಸಮಯ: ಸಂಜೆ 5:30 | ಸ್ಕ್ರೀನ್: 2
ವಿಶೇಷತೆ: ಇತ್ತೀಚಿನ ಭಾರತೀಯ ಪ್ರಾದೇಶಿಕ ಸಿನಿಮಾಗಳ ಅತ್ಯುತ್ತಮ ಪ್ರಾತಿನಿಧ್ಯವಾಗಿರುವ ಮಲಯಾಳಂ ಸಿನಿಮಾ ಇದು.

10. ಫುಲ್ ಪ್ಲೇಟ್ (ಹಿಂದಿ)
ಸಮಯ: ಸಂಜೆ 4:30 | ಸ್ಕ್ರೀನ್: 6
ವಿಶೇಷತೆ: ತನ್ನಿಷ್ಠಾ ಚಟರ್ಜಿ ನಿರ್ದೇಶನದ ಈ ಚಿತ್ರವು ಸಮಕಾಲೀನ ಭಾರತೀಯ ಸಮಾಜದ ಕಥೆಯನ್ನು ಪ್ರಸ್ತುತಪಡಿಸುತ್ತದೆ.

Continue Reading

Trending

error: Content is protected !!