Connect with us

State

110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಬೆಂಗಳೂರು, ಫೆ.20: “ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು.

“ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು ಇದ್ದಂತಹ ತೊಡಕುಗಳನ್ನು ನಿವಾರಿಸಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಜೊತೆಗೆ ಚರ್ಚೆ ನಡೆಸಲಾಗಿದೆ.

ಯಶವಂತಪುರ ಕ್ಷೇತ್ರ ದೊಡ್ಡದಾಗಿದ್ದು, ನಗರ ಭಾಗದಷ್ಟೇ ವಿಸ್ತೀರ್ಣವನ್ನು ಗ್ರಾಮೀಣ ಭಾಗ ಹೊಂದಿದೆ. ಎಲ್ಲಾ ಸಮಸ್ಯೆಗಳನ್ನು ನಾನೇ ಖುದ್ದಾಗಿ ಬಗೆಹರಿಸುತ್ತೇನೆ” ಎಂದರು.

ಬೆಂಗಳೂರು ವ್ಯಾಪ್ತಿಯ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ: 11 ಸಾವಿರ ಕೊಳವೆ ಬಾವಿ ಕೊರೆಯಲು ಆದೇಶ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿಗಳನ್ನು ಕೊರೆಸುವ ಸಂಬಂಧ ಬಿಜೆಪಿ ಶಾಸಕರಾದ ಮುನಿರಾಜು ಮತ್ತು ಬೈರತಿ ಬಸವರಾಜು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್ ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ ಬಾವಿಗಳನ್ನು ಮತ್ತೆ ಕೊರೆಯಲು ಆದೇಶ ನೀಡಲಾಗಿದೆ” ಎಂದು ಹೇಳಿದರು.

“ಕೋವಿಡ್ ಕಾರಣದಿಂದ ಕಾವೇರಿ ನೀರು ಸರಬರಾಜು ಕಾಮಗಾರಿ ತಡವಾಗಿತ್ತು. ಅಲ್ಲಿಯವರೆಗೆ ರೀ- ಬೋರ್ವೆಲ್, ಪಂಪ್ ದುರಸ್ತಿ ಸೇರಿದಂತೆ ಇತರೇ ಕೆಲಸಗಳಿಗೆ ಟೆಂಡರ್ ಕರೆಯಲಾಗಿದೆ. ಕೂಡಲೇ ಮುಂದಿನ ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆ ವ್ಯಾಪ್ತಿಯಲ್ಲಿ 68 ಟ್ಯಾಂಕರ್ ಗಳು ಕಾರ್ಯನಿರ್ವಹಿಸುತ್ತಿವೆ” ಎಂದು ತಿಳಿಸಿದರು.

“ದಾಸರಹಳ್ಳಿಗೆ ಈಗಾಗಲೇ 5.24 ಲಕ್ಷ ಅನುದಾನವನ್ನು ನೀಡಲಾಗಿದೆ. ಲಕ್ಷ್ಮೀಪುರ ಸೇರಿದಂತೆ ದಾಸರಹಳ್ಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕಾವೇರಿ ನೀರು ಪೂರೈಕೆ ಕಾಮಗಾರಿಯನ್ನು ನಡೆಸಲಾಗುವುದು. ದಾಸರಹಳ್ಳಿ ಕ್ಷೇತ್ರದಲ್ಲಿ ಕಾರ್ಖಾನೆಗಳು ಹೆಚ್ಚು ಇರುವ ಕಾರಣ ನೀರು ಹೆಚ್ಚು ಬಳಕೆಯಾಗುತ್ತಿದೆ. ಆದ ಕಾರಣ ವಸತಿ ಪ್ರದೇಶಗಳಿಗೆ ತೊಂದರೆಯಾಗುತ್ತಿದೆ. ಬೋರ್ವೆಲ್ ನೀರು ಬಳಕೆಯ ಬಗ್ಗೆ ಈಗಾಗಲೇ ಕಾನೂನು ಇದ್ದು. ಈ ಬಗ್ಗೆಯೂ ಸದನದಲ್ಲಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

ಕೆ.ಆರ್ ಪುರಂ ಕ್ಷೇತ್ರದಲ್ಲಿ ನಾರಾಯಣಪುರ ಸೇರಿದಂತೆ ಕೆಲವೆಡೆ ನೀರನ್ನು ತುಂಬುವ ಕೆಲಸ ಮಾಡಬೇಕಿದೆ ಟ್ಯಾಂಕರ್ ಗಳು ರೂ.1,500 ವಸೂಲಿ ಮಾಡುತ್ತಿದ್ದು ಇದನ್ನು ರೂ. 500ಕ್ಕೆ ಇಳಿಸಬೇಕು ಎಂದು ಬೈರತಿ ಬಸವರಾಜು ಅವರು ಮನವಿ ಮಾಡಿದ್ದು. ಖಾಸಗಿ ನೀರು ಟ್ಯಾಂಕರ್ ದರ ಇಳಿಸಲು ಕಾನೂನು ತರಬಹುದು. ಇಲ್ಲಿ ಎಲ್ಲರೂ ಒಮ್ಮತಕ್ಕೆ ಬಂದರೆ ಇದನ್ನು ಜಾರಿಗೆ ತರಲು ಸಿದ್ಧ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರಿಂದ ಒಂದು ಪತ್ರ ಬರೆಸಿ ಕೊಟ್ಟರೆ ಸಲಹೆಯನ್ನು ಪರಿಗಣಿಸುತ್ತೇವೆ” ಎಂದು ಹೇಳಿದರು.

“ಇದರ ಜೊತೆಗೆ ಅಂತರ್ಜಲ ನೀರಿನ ಅತಿ ಹೆಚ್ಚಿನ ಬಳಕೆ, ಶೋಷಣೆ ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ವಿಚಾರವಾಗಿ ಕಂದಾಯ ಇಲಾಖೆಯ ಬಳಿಯೂ ಚರ್ಚೆ ನಡೆಸಲಾಗುವುದು. ಬೆಂಗಳೂರಿಗೆ ಈಗ 1,450 ಎಂಎಲ್ಡಿ ನೀರು ಸರಬರಾಜಾಗುತ್ತಿದೆ. ಈ ವರ್ಷ ಬರಗಾಲ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು. ಈ ವಿಚಾರವಾಗಿ ಮೊನ್ನೆ ಬಿಜೆಪಿ ಶಾಸಕರಾದ ಸೋಮಶೇಖರ್ ಹಾಗೂ ಮುನಿರತ್ನ ಅವರು ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ಇನ್ನೂ 500 ಅಡಿ ಹೆಚ್ಚು ಕೊರೆಯಲು ಅವಕಾಶ ನೀಡಬೇಕು ಎಂಬ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

Continue Reading
Click to comment

Leave a Reply

Your email address will not be published. Required fields are marked *

Special

ಗೃಹಲಕ್ಷ್ಮಿ ಸಹಾಯವಾಣಿ – ಹಣ ಬರದಿದ್ದರೆ ಏನು ಮಾಡಬೇಕು?

Published

on

ಕರ್ನಾಟಕದಲ್ಲಿ ಮಹಿಳೆಯರಿಗೆ ಆರ್ಥಿಕ ನೆರವು ನೀಡಲು ಆರಂಭಿಸಲಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಮಹತ್ವದ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಲಕ್ಷಾಂತರ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಕೆಲ ಫಲಾನುಭವಿಗಳಿಗೆ ಹಣ ನಿಯಮಿತವಾಗಿ ಜಮೆಯಾಗದಿರುವ ಬಗ್ಗೆ ದೂರುಗಳು ಕೇಳಿಬಂದಿವೆ.

ಹಣ ಬರದಿರುವುದಕ್ಕೆ ಪ್ರಮುಖ ಕಾರಣಗಳು:
•ಬ್ಯಾಂಕ್ ಖಾತೆ ಮತ್ತು ಆಧಾರ್ ಲಿಂಕ್ ಆಗಿರದಿರುವುದು
•e-KYC ಪೂರ್ಣಗೊಳ್ಳದಿರುವುದು
•ರೇಷನ್ ಕಾರ್ಡ್ ವಿವರಗಳಲ್ಲಿ ವ್ಯತ್ಯಾಸ
•ತಾಂತ್ರಿಕ ದೋಷಗಳು ಅಥವಾ ಡೇಟಾ ತಪ್ಪುಗಳು
•ಬ್ಯಾಂಕ್ ಖಾತೆ ನಿಷ್ಕ್ರಿಯವಾಗಿರುವುದು

181 ಸಹಾಯವಾಣಿ – ಫೋನ್‌ನಲ್ಲೇ ಪರಿಹಾರ:
ಫಲಾನುಭವಿಗಳು ಕಚೇರಿಗಳಿಗೆ ಹೋಗಿ ಅಲೆದಾಡುವ ಅಗತ್ಯವಿಲ್ಲ. ಸರ್ಕಾರವು 181 ಟೋಲ್-ಫ್ರೀ ಸಹಾಯವಾಣಿ ಸಂಖ್ಯೆಯನ್ನು ಒದಗಿಸಿದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕ
ನಿಮ್ಮ ಹಣದ ಸ್ಥಿತಿ ಪರಿಶೀಲಿಸಬಹುದು
ಬಾಕಿ ಇರುವ ಮೊತ್ತದ ಮಾಹಿತಿ ಪಡೆಯಬಹುದು
ತಡವಾದ ಕಾರಣ ತಿಳಿದುಕೊಳ್ಳಬಹುದು ಮತ್ತು
ಅಗತ್ಯ ದಾಖಲೆಗಳ ಕುರಿತು ಮಾರ್ಗದರ್ಶನ ಪಡೆಯಬಹುದು.

ಕರೆ ಮಾಡುವಾಗ ನಿಮ್ಮ ರೇಷನ್ ಕಾರ್ಡ್ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ವಿವರಗಳನ್ನು ಹತ್ತಿರದಲ್ಲೇ ಇಟ್ಟುಕೊಳ್ಳುವುದು ಉತ್ತಮ.

ಸಮಸ್ಯೆ ಪರಿಹಾರಕ್ಕೆ ಸರಿಯಾದ ಕ್ರಮ:
ಸಹಾಯವಾಣಿಗೆ ಕರೆ ಮಾಡಿದ ನಂತರ ಅಧಿಕಾರಿಗಳು ನಿಮ್ಮ ವಿವರಗಳನ್ನು ಪರಿಶೀಲಿಸಿ ಸ್ಪಷ್ಟ ಮಾಹಿತಿ ನೀಡುತ್ತಾರೆ. ಅಗತ್ಯವಿದ್ದರೆ ಸಮೀಪದ ತಾಲೂಕು ಕಚೇರಿಯನ್ನು ಸಂಪರ್ಕಿಸಲು ಸೂಚಿಸಬಹುದು. ಸೂಚನೆಗಳನ್ನು ಅನುಸರಿಸಿದರೆ ಬಾಕಿ ಹಣ ಶೀಘ್ರದಲ್ಲೇ ಜಮೆಯಾಗುವ ಸಾಧ್ಯತೆ ಇದೆ.

ಇನ್ನೂ ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಬರದಿದ್ದರೂ ಚಿಂತಿಸಬೇಕಾಗಿಲ್ಲ. 181 ಸಹಾಯವಾಣಿ ಮೂಲಕ ಸುಲಭವಾಗಿ ಮಾಹಿತಿ ಪಡೆದು ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು. ಮಹಿಳೆಯರು ಆತ್ಮಸ್ಥೈರ್ಯದಿಂದ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು.

Continue Reading

State

ಪಿಯು-ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಸಂಪೂರ್ಣ ಮಾಹಿತಿ ವಿವರಿಸಿದ ಶಿಕ್ಷಣ ಸಚಿವ

Published

on

ಬೆಂಗಳೂರು: ಇದೇ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ.18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಮಾಹಿತಿ ನೀಡಿದರು.


ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ಗಂಟೆ ವರೆಗೆ ನಡೆಯಲಿವೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳು: ಮಾರ್ಚ್ 18 ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ.

ಹತ್ತನೇ ತರಗತಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 9,02,889 ಮಂದಿ. ಇವರಲ್ಲಿ ಹೊಸಬರು 8,12,855 ಮಕ್ಕಳಿದ್ದರೆ, ಪುನರಾವರ್ತಿತ 62,845 ವಿದ್ಯಾರ್ಥಿಗಳಿದ್ದಾರೆ. 27,189 ಜನ ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅಂಕಿ ಅಂಶ ನೀಡಿದರು. ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಒಟ್ಟು ೨೮೭೧ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.


ಪಿಯುಸಿ ಪರೀಕ್ಷಾರ್ಥಿಗಳು: ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಈ ಪೈಕಿ 6,46,801 ಮಂದಿ ಹೊಸಬರು, 50,540 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಮಂದಿ ಖಾಸಗಿ ಅಭ್ಯರ್ಥಿಗಳು ಈ ಬಾರಿಯ ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7 ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಸಚಿವರು ಮಾಹಿತಿ ನೀಡಿದರು.


ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ: ಫೆಬ್ರವರಿ- 28: ಕನ್ನಡ, ಅರೇಬಿಕ್, ಮಾರ್ಚ್- 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾರ್ಚ್ -3: ಇಂಗ್ಲಿಷ್, ಮಾರ್ಚ್- 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಫ್ರೆಂಚ್, ಮಾರ್ಚ್- 5: ಇತಿಹಾಸ, ಮಾರ್ಚ್-6 : ಭೌತಶಾಸ್ತ್ರ, ಮಾರ್ಚ್ -7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ, ಮಾರ್ಚ್ -9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ, ಮಾರ್ಚ್ -10: ಅರ್ಥಶಾಸ್ತ್ರ, ಮಾರ್ಚ್ -11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ, ಮಾರ್ಚ್ -12: ಹಿಂದಿ, ಮಾರ್ಚ್ -13: ರಾಜ್ಯಶಾಸ್ತ್ರ, ಮಾರ್ಚ್ -14: ಲೆಕ್ಕಶಾಸ್ತ್ರ, ಗಣಿತ, ಮಾರ್ಚ್ -16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ, ಮಾರ್ಚ್-17: ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ ವಿಷಯಗಳ ಪರೀಕ್ಷೆ ನಡೆಯಲಿವೆ ಎಂದು ವಿವರಣೆ ನೀಡಿದರು.

ಮೇ.18 ರಿಂದ ಎಸ್‌ಎಲ್‌ಎಲ್‌ಸಿ ಪರೀಕ್ಷೆ-2 ಆರಂಭವಾಗಲಿದ್ದು, ಮೊದಲ ದಿನ ಪ್ರಥಮ ಭಾಷೆ, ಮೇ 19 ರಂದು ವಿಜ್ಞಾನ, ಮೇ 20 ರಂದು ದ್ವೀತಿಯ ಭಾಷೆ, ಮೇ 21 ರಂದು ಗಣಿತ, ಮೇ 22 ರಂದು ತೃತೀಯ ಭಾಷೆ, ಮೇ 23 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಸಚಿವರು ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳು
ಒಟ್ಟು-9,02,889
ಹೊಸಬರು-8,12,855
ಪುನರಾವರ್ತಿತ-62,845
ಖಾಸಗಿ ಅಭ್ಯರ್ಥಿಗಳು-27,189
ಪರೀಕ್ಷಾ ಕೇಂದ್ರ-2871

ಪಿಯುಸಿ ಪರೀಕ್ಷಾರ್ಥಿಗಳು:
ಒಟ್ಟು-7,10,363
ಹೊಸಬರು-6,46,801
ಪುನರಾವರ್ತಿತ-50,540
ಖಾಸಗಿ ಅಭ್ಯರ್ಥಿಗಳು-13,022
ಪರೀಕ್ಷಾ ಕೇಂದ್ರ-1217
ಫಲಿತಾಂಶ ಏ.7 ಸಾಧ್ಯತೆ

Continue Reading

Politics

ಪ್ರಿಯಾಂಕ್‌ ಖರ್ಗೆ RSS ವಿರೋಧಿ ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ: ಡಾ.ಸಿ.ಟಿ.ರವಿ

Published

on

ಬೆಂಗಳೂರು: ಆರ್‌ಎಸ್‌ಎಸ್‌ ಕುರಿತು ಮಾತನಾಡುವ ಸಚಿವ ಪ್ರಿಯಾಂಕ್ ಖರ್ಗೆಗೆ ಆರ್‌ಎಸ್‌ಎಸ್‌ ವಿರೋಧಿ ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಡಾ.ಸಿ.ಟಿ.ರವಿ   ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಇಂದು ಆರ್‌ಎಸ್‌ಎಸ್‌ ದೆವ್ವ, ಬಿಜೆಪಿ ದೆವ್ವದ ನೆರಳು ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರದ ಬಗ್ಗೆ ಇಂದು ಮಾಧ್ಯಮಗಳೊಂದಿಗೆ  ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಆರ್‌ಎಸ್‌ಎಸ್‌ ವಿರೋಧಿ ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ. ಸಾಂಸ್ಕೃತಿಕ ಮಾರ್ಕ್ಸ್‌ವಾದದ ಟೀಚರ್‌ಗಳು ಇವರಿಗೆ ಪಾಠ ಮಾಡುತ್ತಾ ಇದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಗಾಂಧೀಜಿ ಏನ್ ಹೇಳಿದರೂ. ಆರ್‌ಎಸ್‌ಎಸ್‌ ಶಿಬಿರಕ್ಕೆ ಗಾಂಧಿ ಭೇಟಿ ನೀಡಿದ್ದರೂ. ಆಗ ಆರ್‌ಎಸ್‌ಎಸ್‌ ಕೆಲಸದ ಬಗ್ಗೆ ಹೊಗಳಿದ್ದರೂ. ಅಂಬೇಡ್ಕರ್ ಆರ್‌ಎಸ್‌ಎಸ್‌ ಶಿಬಿರಕ್ಕೆ ಹೋಗಿದ್ದರು. ಅವರು ಕೂಡಾ ಆರ್‌ಎಸ್‌ಎಸ್ ಕೆಲಸ ಹೊಗಳಿದ್ದರು. ಪ್ರಣಬ್ ಮುಖರ್ಜಿ ಸಂಘದ ಕಾರ್ಯಕ್ರಮಕ್ಕೆ ಹೋಗಿದ್ದರು. ಹೆಗಡೆ ವಾರ್ ಅವರನ್ನು ಹೊಗಳಿದ್ದರು. ರತನ್ ಟಾಟಾ ಆರ್‌ಎಸ್‌ಎಸ್‌ ಬಗ್ಗೆ ಹೊಗಳಿದ್ದಾರೆ ಅಂತ ಸಂಘಟನೆ ಬಗ್ಗೆ ಮಾತಾಡೋದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ 100 ವರ್ಷಗಳಲ್ಲಿ ವ್ಯಕ್ತಿಗೆ ಸಂಸ್ಕಾರ ಕೊಡುವ ಮೂಲಕ ಹಿಂದೂಗಳನ್ನ ಸಂಘಟನೆ ಕೆಲಸ ಮಾಡ್ತಿದೆ. ಸಂಘದ ಪ್ರೇರಣೆಯಿಂದ ನೂರಾರು ಸಂಘಟನೆಗಳು ಅನೇಕ ಸಮಾಜಮುಖಿ ಕೆಲಸ ಮಾಡುತ್ತಿವೆ. ಒಳ್ಳೆ ಕೆಲಸ ಮಾಡೋ ಸಂಘಟನೆಗೆ ದೆವ್ವದ ರೀತಿ ಕಾಣುತ್ತೆ ಎಂದರೆ ಪ್ರಿಯಾಂಕ್ ಖರ್ಗೆಗೆ ಮಾರ್ಕ್ಸ್‌ವಾದದ ದೆವ್ವ ಇವರಿಗೆ ಬಡಿದಿದೆ. ದೆವ್ವ ಬಡಿದಿರೋರು ಎಲ್ಲರನ್ನು ಅವರಂತೆ ನೋಡ್ತಾರೆ. ಪ್ರಿಯಾಂಕ್ ಖರ್ಗೆಗೆ ದೆವ್ವ ಬಡಿದಂತೆ ಕಾಣುತ್ತಿದೆ. ರಾಜ್ಯದ, ದೇಶದ ಜನ ದೇಶಕ್ಕೆ ಹಿಡಿದಿದ್ದ ಕಾಂಗ್ರೆಸ್ ದೆವ್ವ ಓಡಿಸೋ ಕೆಲಸ ಮಾಡಿದರು. ಅದರ ಹತಾಶೆಯಿಂದ ಇಂತಹ ಆರೋಪ ಪ್ರಿಯಾಂಕ್ ಖರ್ಗೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ..

ಡೊನೇಷನ್, ಡಿವೋಷನ್‌ಗೆ ಬಹಳ ವ್ಯತ್ಯಾಸ ಇದೆ. RSS ಡೊನೇಷನ್ ಸಂಗ್ರಹ ಮಾಡೊಲ್ಲ. RSS ಸಂಘದ ಅಂಗ ಸಂಸ್ಥೆಗಳು ರಿಜಿಸ್ಟರ್ ಆಗಿವೆ. ಅವು ಡೊನೇಷನ್ ಕಲೆಕ್ಟ್ ಮಾಡ್ತವೆ. ಅದಕ್ಕೆ ಎಲ್ಲಾ ಲೆಕ್ಕಾಚಾರ ಇದೆ. RSSಗೆ ಸ್ವಯಂ ಸೇವಕರು ಗುರುಪೂರ್ಣಿಮೆ ಸಮಯದಲ್ಲಿ ಗುರು ಕಾಣಿಕೆ ಕೊಡ್ತಾರೆ. ಸಂಘಕ್ಕೆ 100 ರೂ. ಗಿಂತ ಜಾಸ್ತಿ ಹಣ ಮಾಡಬೇಕಾದರೆ ಚೆಕ್ ಮೂಲಕ ಕೊಡಬೇಕು. ಅದಕ್ಕೂ ವ್ಯವಸ್ಥೆ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.

RSS ಸರ್ಕಾರದ ಅನುದಾನಕ್ಕೆ ಕೈ ಚಾಚಿಲ್ಲ. RSS ರಿಜಿಸ್ಟರ್ ಆಗಿಲ್ಲ. ಅದರ ಅಂಗ ಸಂಘಟನೆಗಳು ರಿಜಿಸ್ಟರ್ ಆಗಿವೆ. ಇದರ ಅರಿವಿಲ್ಲದೆ ವಿರೋಧ ಮಾಡ್ತಾರೆ. ಪ್ರಿಯಾಂಕ್ ಖರ್ಗೆಗೆ ಆಂಟಿ RSS ಸಿಂಡ್ರೋಮ್ ಅಟ್ಯಾಕ್ ಆಗಿದೆ. ಪ್ರಿಯಾಂಕ್ ಖರ್ಗೆ ಅವರೇ ದೇಶ ಸೇವೆ ಕೆಲಸವನ್ನು ವಿರೋಧ ಮಾಡ್ತೀರಾ ನೀವು? ಸಂಘಕ್ಕೆ 100 ವರ್ಷಗಳ ಹಿನ್ನೆಲೆಯಲ್ಲಿ 5 ವಿಚಾರ ಇಟ್ಟುಕೊಂಡು ಪಂಚ ಪರಿವರ್ತನೆ ಅಂತ ಸಂಘ ಪ್ರಚಾರ ಮಾಡ್ತಿದೆ. ಇದಕ್ಕೆ ನಿಮ್ಮ ವಿರೋಧನಾ? ಹಿಂದೂಗಳು ಒಟ್ಟಾದ್ರೆ ಜಾತಿ ರಾಜಕೀಯ ಮಾಡೋಕೆ ಆಗೊಲ್ಲ ಅಂತ ಪ್ರಿಯಾಂಕ್ ಖರ್ಗೆ RSS ವಿರೋಧ ಮಾಡ್ತಾ ಇದ್ದಾರೆ. RSS ದೆವ್ವ ಅಲ್ಲ. ನಿಮಗೆ ದೆವ್ವ ಮೆಟ್ಟಿದೆ. ನಿಮಗೆ ಮಾರ್ಕ್ಸ್‌ವಾದದ ದೆವ್ವ ಅಥವಾ ನಿಮ್ಮ ಹತಾಶೆಯ ದೆವ್ವ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮಗೆ ಹಿಡಿದಿರೋ ದೆವ್ವನ ಓಡಿಸೋ ಅವಶ್ಯಕತೆ ಇದೆ. ದೇಶಭಕ್ತಿಯ ಪ್ರೇರಣೆ ಕೊಡುವ ದೇವರನ್ನ ದೂರ ಮಾಡೋ ಅವಶ್ಯಕತೆ ಇಲ್ಲ. RSS ದೇವತಾ ಕಾರ್ಯ ಮಾಡ್ತಿದೆ. ದೇವರ ಕಾರ್ಯ ಮಾಡ್ತಿದೆ. ರಾಷ್ಟ್ರ ಮೊದಲು ಅಂತ ಕೆಲಸ ಮಾಡ್ತಿದೆ. ಅದು ದೇವರು ನಿಮಗೆ ಮೆಟ್ಟಿರೋದು ದೆವ್ವ. ನಿಮ್ಮ ರಾಜಕೀಯ ಆರೋಗ್ಯ, ವ್ಯಕ್ತಿಗತ ಆರೋಗ್ಯದ ದೃಷ್ಟಿಯಿಂದ ನಿಮಗೆ ಹಿಡಿದಿರೋ ದೆವ್ವ ಬಿಡಿಸೋ ಅವಶ್ಯಕತೆ ಇದೆ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಸಮುದಾಯದಿಂದ ಕಲ್ಲು ತೂರಾಟ ಮಾಡಿರೋ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು. ಸುಧಾ ಎಂಬ SC ಸಮುದಾಯದ ಸರ್ಕಾರಿ ನೌಕರರು. ಅವರ ಮುನ್ನಡೆಗೆ 3-4 ದಿನಗಳಿಂದ ಕಲ್ಲು ತೂರಾಟ ಮಾಡಿದ್ದಾರೆ. ಅವರು ದೂರು ಕೊಟ್ಟಿದ್ದಾರೆ. ನಿನ್ನೆ ರೆಡ್‌ಹ್ಯಾಂಡ್ ಅವರನ್ನು ಬಂಧಿಸಿದ್ದಾರೆ. ಅರೆಸ್ಟ್ ಆದವರು 16-17 ವರ್ಷದವರು.ಅವರ ಪರ ಕೆಲವರು ಬಂದಿದ್ದಾರೆ. ಇಂತಹ ಘಟನೆ ಪದೇ‌ಪದೇ ಚಿಕ್ಕಮಗಳೂರುನಲ್ಲಿ ನಡೆಯುತ್ತಿದೆ‌ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಬಗ್ಗೆ ದೂರು ದಾಖಲಾಗಿದೆ. ಯಾಕೆ ಇದನ್ನ ಮಾಡಿದ್ದಾರೆ. ಯಾಕೆ ಕಲ್ಲು ಹೊಡೆದರು ಸಮಗ್ರ ತನಿಖೆ ಆಗಬೇಕು. ತಪ್ಪು ಮಾಡಿದವರನ್ನ ಸಮರ್ಥನೆ ಮಾಡೋಕೆ ಬರೋದು ಸೂಕ್ತ ಅಲ್ಲ. ಆದ್ದರಿಂದ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತೆ. ತಪ್ಪು ‌ಮಾಡಿರೋರಿಗೆ ಶಿಕ್ಷೆ ಆಗುತ್ತದೆ. ಕಾನೂನಿನ ಮಧ್ಯೆ ಯಾರೂ ಪ್ರವೇಶ ಮಾಡಬಾರದು ಎಂದು ತಿರುಗೇಟು ನೀಡಿದ್ದಾರೆ.

Continue Reading

Trending

error: Content is protected !!