Connect with us

Mysore

200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Published

on

ಮೈಸೂರು: ರಾಷ್ಟ್ರ ಸಂಸ್ಕೃತಿ ಪೋಷಿಣಿ ಪುರಸ್ಕೃತ ಸಂಘಟನೆ ಆದರ್ಶ ಸೇವಾ ಸಂಘ ಮತ್ತು ವಿಶ್ವ ವಿಪ್ರತ್ರಯೀ ಪರಿಷತ್‌ ಸಹಯೋಗದಲ್ಲಿ ೨೦೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನಾದ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಪುರಸ್ಕಾರಿಸಿ ವಿವಿಧ ಕ್ಷೇತ್ರದ ಸಾಧಕರಿಗೆ ಆದರ್ಶ ರತ್ನ, ಆದರ್ಶ ಸೇವಾ ರತ್ನ, ಆದರ್ಶ ಪ್ರತಿಭಾ ರತ್ನ, ಆದರ್ಶ ಬಾಲ ಪ್ರತಿಭಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅವಧೂತ ದತ್ತಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮಾತನಾಡಿ, ಭಗವದ್ಗೀತೆ ಕೇವಲ ಒಂದು ಧರ್ಮಕ್ಕೆ ಸೀಮಿತವಲ್ಲ. ಇಡೀ ಮನುಕುಲಕ್ಕೆ ಸೇರಿದಾಗಿದೆ. ಹೀಗಾಗಿ ಪ್ರಸ್ತುತ ಭಗವದ್ಗೀತೆಯ ಮೌಲ್ಯಗಳು ವಿಶ್ವದಾದ್ಯಂತ ಹೆಚ್ಚು ಮನ್ನಣೆ ಗಳಿಸುತ್ತಿದೆ ಎಂದು ಹೇಳಿದರು.
ಮನುಷ್ಯನ ಜೀವನ ಶೈಲಿಯ ಬದಲಾವಣೆಯಿಂದ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿದೆ. ಯುವ ಸಮೂಹದಲ್ಲಿ ಸ್ವಾರ್ಥತ್ವ ಹೆಚ್ಚುತ್ತಿದೆ. ಪರರ ದುಖಃಕ್ಕೆ ಸಂತ್ವಾನ ಹೇಳುವ ಮತ್ತು ಸುಖಃವನ್ನು ಹಂಚಿಕೊಳ್ಳುವ ಪ್ರಕ್ರಿಯೆಗಳು ಕಡಿಮೆಯಾಗಿದೆ. ಈ ಮೌಲ್ಯಗಳನ್ನು ಹೆಚ್ಚಾಬೇಕಾದರೆ ಭಗವದ್ಗೀತೆ, ವೇದ, ಉಪನಿಷತ್ತುಗಳನ್ನು ಅಭ್ಯಾಸ ಮಾಡಬೇಕು. ವಿದೇಶಗಳಲ್ಲಿ ನೆಲೆಸಿರುವ ಹಿಂದುಗಳು ಮಕ್ಕಳಿಗೆ ಭಗವದ್ಗೀತೆ ಪಠಣ ಮಾಡಿಸುತ್ತಿದ್ದಾರೆ. ಅದರಲ್ಲಿಯೂ ಆಮೇರಿಕಾರದಲ್ಲಿ ಭಗವದ್ಗೀತೆ ಅಭ್ಯಾಸ ಹೆಚ್ಚಾಗುತ್ತಿದೆ. ದೊಡ್ಡ ಕ್ರಾಂತಿಯಾಗುತ್ತಿದೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳ ಹಿಂದೆ ಸುಮಾರು ೧೦ ಸಾವಿರಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಭಗವದ್ಗೀತೆ ಕಂಠ ಪಾಠ ಮಾಡಿಸಿದ್ದೇನೆ. ಈ ಬಾರಿ ಇನ್ನೂ ಹೆಚ್ಚಿನ ಜನರು ಒಟ್ಟಿಗೆ ಭಗವದ್ಗೀತೆ ಪಾರಾಯಾಣ ನಡೆಯಲಿದೆ ಎಂದು ತಮ್ಮ ಆಮೆರಿಕಾ ಪ್ರವಾಸದ ಅನುಭವನ್ನು ಹಂಚಿಕೊಂಡರು.
ಕಾಮ, ಕ್ರೌರ್ಧ ಬಿಟ್ಟು ಸತ್ಯ ಶೋಧನೆಯಿಂದ ಬದುಕು ಕೂಡಿರಬೇಕು. ಮನಸ್ಸನ್ನು ಹಗುರವಾಗಿ ಇಟ್ಟುಕೊಳ್ಳಬೇಕು. ಈಗೀನ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಕಡಿಮೆಯಾಗಿದೆ. ಬಾಲ್ಯದಿಂದಲೇ ಮಕ್ಕಳನ್ನು ಒತ್ತಡದಲ್ಲಿ ಬೆಳೆಸಲಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಗೊಂದಲ ನಿವಾರಣೆಗೆ ಎಲ್ಲರೂ ವೇದ ಉಪನಿಷತ್ತುಗಳನ್ನು ಅಧ್ಯಯಾನ ಮಾಡಬೇಕು ಎಂದ ಅವರು ಆದರ್ಶ ಸೇವಾ ಸಂಘದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕ ಟಿ.ಎಸ್‌.ಶ್ರೀವತ್ಸ ಮಾತನಾಡಿ, ನಾನು ಶಾಸಕನಾಗಲು ಆದರ್ಶ ಸೇವಾ ಸಂಘದ ಅಧ್ಯಕ್ಷ ಜಿ.ಆರ್‌.ನಾಗರಾಜ ಪಾತ್ರ ದೊಡ್ಡದಿದೆ ಎಂದು ಕೃತಜ್ಙತೆ ತಿಳಿಸಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ತಿಳಿಸಿದರು.
ಆದರ್ಶ ಬಾಲಪ್ರತಿಭಾ ರತ್ನ ಪ್ರಶಸ್ತಿ ಪುರಸ್ಕೃತರು: ವೇದಾಧ್ಯಯನ ನಿರತ ಬಾಲ ಸಾಧಕ ಪೃಥು ಪಿ.ಅದ್ವೈತ್‌, ಭರತನಾಟ್ಯ ಬಾಲ ಕಲಾವಿದ ಭಗತ್‌ ಶರ್ಮ, ಕಿರುತರೆ ನಟ ವಿ.ಅಮೋಘಕೃಷ್ಣ, ವಯೋಲಿನ್‌ ಸಾಧಕ ಪ್ರಣವ್‌ ಚಂದ್ರಶೇಖರ್‌.
ಆದರ್ಶ ಪ್ರತಿಭಾ ರತ್ನ ಪ್ರಶಸ್ತಿ: ಯುವ ವಿಜ್ಞಾನಿ ಆಕಾಶ್‌, ಅಂತಾರಾಷ್ಟ್ರೀಯ ಬ್ಯಾಡ್‌ಮಿಂಟನ್‌ ಆಟಗಾರ ವಿದ್ಯಾನಂದ ಕಶ್ಯಪ್‌, ಮಾರ್ಗದರ್ಶಕ ಬಿ,ನಾಗರಾಜ್‌ ಕುಮಾರ್‌, ಯುವ ಚಿಂತಕ ಪ್ರಜ್ಞಾ ಕಶ್ಯಪ್‌, ಗಾಯಕ ಕೆ.ರಮೇಶ್‌, ಕೋಟಿ ವೃಕ್ಷ ಪ್ರತಿಷ್ಠಾನದ ಶ್ರೀಕಾಂತ್‌ ಭಟ್‌, ಮಾಧ್ಯಮ ಪ್ರವರ್ತಕ ಅಮಿತ್‌, ಗಾಯಕಿ ಹಂಸಿನಿ ಎಸ್.ಕುಮಾರ್‌, ಯುವ ಉದ್ಯಮಿ ಶೌಮಿಕಾ ಎಸ್‌.ರಾವ್‌, ವಯೋಲಿನ್‌ ವಾದಕ ಸಿರಿ ಪರಮಾತ್ಮ, ಚಿತ್ರಕಲಾವಿದೆ ಶಿವಾನಿ ಪ್ರಸಾದ್‌, ಇಂಜಿನಿಯರ್‌ ಪಿ.ಎನ್.ಪ್ರಶಾಂತ್‌ ಭಾಜನರಾದರು.
ಆದರ್ಶ ರತ್ನ ಪ್ರಶಸ್ತಿ: ಅಂಚೆ ಇಲಾಖೆ ನಿವೃತ್ತ ಅಧಿಕಾರಿ ಬಿ.ಎನ್.ನಾಗರಾಜು, ನಿವೃತ್ತ ಪ್ರಾಧ್ಯಾಪಕ ಕೆ.ಎನ್.ನಾಗೇಶ್‌, ಎಂ.ಶ್ರೀಕಂಠಮೂರ್ತಿ, ವಿನೋದಮ್ಮ ಪುರಸ್ಕೃತರಾದರು.
ಆದರ್ಶ ಸೇವಾ ರತ್ನ ಪ್ರಶಸ್ತಿ: ವನಜಾ ಪಂಡಿತ್‌, ಪ್ರೊ.ಎಚ್‌.ಎಸ್.ನಾಗರಾಜು, ಎ.ರಾಮಸ್ವಾಮಿ, ಭಾನುಪ್ರಕಾಶ್‌ ಶರ್ಮ, ಭೀಮೇಶ್ವರ ಜೋಷಿ, ಡಾ.ಅಯ್ಯಪ್ಪನ್‌, ಪ್ರಕಾಶ್‌ ಅಯ್ಯಂಗಾರ್‌, ಕಾನಾಡಿ ಗೋವಿಂದ ಭಟ್ಟ, ಕೆ.ಸುಂದರಾಜು, ಡಾ.ಮಹೇಶ್ ಶೆಣೈ, ದಿಲೀಪ್‌ ಸತ್ಯ, ಡಾ.ಸುಧಾ ರಮೇಶ್‌, ಡಾ.ಜಿ.ಅಚ್ಯುತ ರಾವ್‌, ಅಶೋಕ ಎಂ.ರಾವ್‌, ಸುರೇಶ್‌ ವೃಕ್ಷಂ, ಡಾ.ಮಹಾಲಕ್ಷ್ಮೀ ಬೇಗೂರು ಪೂರ್ಣಯ್ಯ ಅವರಿಗೆ ನೀಡಲಾಯಿತು.
ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ, ಉಚ್ಚ ನ್ಯಾಯಾಲಯ ನಿವೃತ್ತ ನ್ಯಾಯಾಧೀಶ ಎನ್.ಕುಮಾರ್‌, ವಿಶ್ವ ವಿಪ್ರತ್ರಯೀ ಪರಿಷತ್‌ನ ಅಧ್ಯಕ್ಷ ಎನ್.ರಘುನಾಥ್‌, ಆದರ್ಶ ಸೇವಾ ಸಂಘದ ಅಧ್ಯಕ್ಷ ಜಿ.ಆರ್.ನಾಗರಾಜು ವೇದಿಕೆಯಲ್ಲಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜಿಯೋ ಪ್ಯಾಕ್ ಕಾಖಾ೯ನೆಯಲ್ಲಿ ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸಾವು

Published

on

ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ.
24 ವರ್ಷದ ಆಶೀಸ್ ಸುಖದಾಸ್ ಪಾಟ್ಲೆ ಮೃತ ಯುವ ಕಾರ್ಮಿಕನಾಗಿದ್ದಾನೆ.
ಮಹಾರಾಷ್ಟ್ರ ಮೂಲದ ಯುವಕನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.


ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ತಲೆಗೆ ಮೆಷಿನ್ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ನಂಜನಗೂಡು ಹೆದ್ದಾರಿ ರಸ್ತೆ ಮಲ್ಲನ ಮೂಲೆ ಮಠ ಬಳಿ ಬೈಕ್ ಗೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

Published

on

ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು-ಮೈಸೂರು ರಸ್ತೆಯ ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ 61 ವರ್ಷದ ಶಂಕರ್ ಮೃತ ದುರ್ಧೈವಿಯಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ವ್ಯಕ್ತಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

Published

on

ಸಾಲಿಗ್ರಾಮ  ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ  ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ  ಧರಣಪ್ಪಗೌಡ, ಕರ್ಪೂರವಳ್ಳಿ  ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ   

Continue Reading

Trending