Hassan
2 ಸಲ ಟಿಕೆಟ್ ಕ್ಯಾನ್ಸಲ್ ಮಾಡಿದ್ದ ಪ್ರಜ್ವಲ್ ಕೊನೆಗೂ ಮೇ 31ರಂದೇ ಭಾರತದತ್ತ ಹೊರಟಿದ್ದೇಕೆ?
Prajwal Revanna: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಯಾರ ಕೈಗೂ ಸಿಗದೆ ವಿದೇಶಕ್ಕೆ ಹಾರಿ, ತಿಂಗಳಿಂದ SIT ಯನ್ನು ಸತಾಯಿಸುತ್ತಿದ್ದು ಇದೀಗ ದಿಢೀರ್ ಎಂದು ಪ್ರತ್ಯಕ್ಷವಾಗಿದ್ದಾರೆ. ಅಷ್ಟೇ ಅಲ್ಲ ಮೇ 31ರಂದು ಭಾರತಕ್ಕೆ ಬಂದು ಸೆರೆಂಡರ್ ಕೂಡ ಆಗುವುದಾಗಿ ತಿಳಿಸಿದ್ದಾರೆ. ಆದರೆ ಪ್ರಜ್ವಲ್ ಮೇ 31ರಂದೇ ಭಾರತಕ್ಕೆ ಬರುತ್ತಿರುವುದೇಕೆ? ಇದರ ಹಿಂದಿನ ಕಾರಣ ಏನು? ಪ್ರಜ್ವಲ್ ಗೆ ಭಯ ಹುಟ್ಟಿಸಿದ್ದಾರೂ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
ಹೌದು, ಅಶ್ಲೀಲ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೇಸಿನಲ್ಲಿ ಸಿಲುಕಿ, ದೇಶಾದ್ಯಂತ ಸಂಚಲನ ಸೃಷ್ಟಿಸಿ, ಯಾರ ಕೈಗೂ ಸಿಗದೆ ವಿದೇಶಕ್ಕೆ ಹಾರಿ, ಸುಮಾರು ಒಂದು ತಿಂಗಳಿಂದ ಸತಾಯಿಸುತ್ತಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಕೊನೆಗೂ ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದಾರೆ. ಅಷ್ಟೇ ಅಲ್ಲ ಕುಟುಂಬ, ನಾಡಿನ ಜನ, ಕುಮಾರಣ್ಣ, ದೊಡ್ಡಣ್ಣ, ರೇವಣ್ಣ ಎಲ್ಲರ ಬಳಿಯೂ ಕ್ಷಮೆ ಕೇಳಿ ನಾನು ಮೇ 31 ರಂದು ಭಾರತಕ್ಕೆ ಬಂದು SITಗೆ ಸೆರೆಂಡರ್ ಆಗುವೆ, ಅವರ ಎಲ್ಲಾ ತನಿಖೆಗೆ ಸಹಕರಿಸುವೆ ಎಂದಿದ್ದಾರೆ. ಇದು ಒಳ್ಳೆಯ ಕೆಲಸ ಬಿಡಿ. ಆದರೆ ಇಲ್ಲಿ ಆಶ್ಚರ್ಯ ಏನಂದ್ರೆ ಒಂದು ತಿಂಗಳಿಂದಲೂ ಯಾರಿಗೂ ಕಾಣಿಸದ ಪ್ರಜ್ವಲ್ ಈಗ ಪ್ರತ್ಯಕ್ಷ ಆಗಿ ಭಾರತಕ್ಕೆ ಬರುತ್ತೇನೆ ಎಂದು ಹೇಳೀದ್ದು. ಅದೂ ಕೂಡ ನಡುವೆ ಎರಡು ಬಾರಿ ಭಾರತಕ್ಕೆ ಬರಲು ಫ್ಲೈಟ್ ಟಿಕೆಟ್ ಬುಕ್ ಮಾಡಿ, ಕ್ಯಾನ್ಸಲ್ ಕೂಡ ಮಾಡಿದ್ದ ಆಸಾಮಿ ಇದೀಗ ಮೇ 31 ರಂದೇ ನಿಖರವಾಗಿ ತಾನು ಭಾರತಕ್ಕೆ ಬಂದು SIT ಗೆ ಸೆರೆಂಡರ್ ಆಗುತ್ತೇನೆ ಎಂದು ಹೇಳಿದ್ದು !! ಯಾಕೆ ಹೀಗೆ? ಮೇ 31ರ ವಿಶೇಷತೆ ಏನು? ಆ ದಿನವನ್ನೇ ಪ್ರಜ್ವಲ್ ಆರಿಸಿದ್ದು ಯಾಕೆ? ಇಲ್ಲಾ ಪ್ರಜ್ವಲ್ ಗೆ ಕೊನೆಗೂ ಭಯ ಕಾಡಿತೇ…? ಇದೆಲ್ಲದಕ್ಕೂ ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಉತ್ತರ.
ಹೌದು, ಪ್ರಜ್ವಲ್ ನನ್ನು ನಿಜಕ್ಕೂ ಕಾಡಿದ್ದು ಭಯವೆ !! ಅದು ಸಾಮಾನ್ಯ ಭಯವಲ್ಲ. ಪಾಸ್ಪೋರ್ಟ್ ರದ್ದಾಗುವ ಭಯ. ಯಸ್, ಬಂಧನ ಆದರೆ ಪ್ರಜ್ವಲ್ ಹೇಗೋ ಜಾಮೀನಿನ ಮೇಲೆ ಹೊರ ಬರುತ್ತಾರೆ. ಇದರಲ್ಲಿ ಅನುಮಾನವಿಲ್ಲ. ಸಂಸದ ಸ್ಥಾನ ಅಮಾನತ್ತಾದರೆ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದು. ಮರ್ಯಾದೆ ಹೋದರೆ ಮತ್ತೆ ಹೇಗಾದರೂ ಗಿಟ್ಚಿಸಿಕೊಳ್ಳಬಹುದು. ಆದರೆ ಪಾಸ್ಪೋರ್ಟ್ ರದ್ಧಾದರೆ ವಿದೇಶದಿಂದ ಬರುವುದು ಹೇಗೆ? ಯಾಕೆಂದರೆ ಪ್ರಜ್ವಲ್ ದಿಢೀರ್ ಎಂದು ವಿದೇಶಕ್ಕೆ ಹಾರಿದ್ದು ಸಾಮಾನ್ಯ ಪಾಸ್ಪೋರ್ಟ್ ನಿಂದ ಅಲ್ಲ. ರಾಜತಾಂತ್ರಿಕ ಪಾಸ್ಪೋರ್ಟ್ ನಿಂದ !!
ರಾಜ ತಾಂತ್ರಿಕ ಪಾಸ್ಪೋರ್ಟ್ ಎಂದರೇನು?
ರಾಜತಾಂತ್ರಿಕ ಅಧಿಕಾರಿಗಳು ಮತ್ತು ದೇಶವನ್ನು ಪ್ರತಿನಿಧಿಸುವ ವ್ಯಕ್ತಿಗಳಿಗೆ ಈ ಪಾಸ್ಪೋರ್ಟ್ ಕೊಡಲಾಗುತ್ತದೆ. 28 ಪುಟಗಳಿರುವ ಈ ಪಾಸ್ಪೋರ್ಟ್ ಅನ್ನು ಗರಿಷ್ಠ 5 ವರ್ಷಗಳ ಅವಧಿಗೆ ಸೀಮಿತವಾಗಿ ವಿತರಿಸಲಾಗುತ್ತದೆ. ಇದಕ್ಕೆ ಟೈಪ್ ಡಿ ಪಾಸ್ಪೋರ್ಟ್ ಎಂಬ ಹೆಸರೂ ಇದೆ. ಭಾರತೀಯ ವಿದೇಶಾಂಗ ಸೇವೆಗಳ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಅವರ ಕುಟುಂಬಸ್ಥರು ಮತ್ತು ಅಧಿಕೃತ ಉದ್ದೇಶಗಳಿಗಾಗಿ ವಿದೇಶಕ್ಕೆ ಭೇಟಿ ನೀಡುವ ಸಾಂವಿಧಾನಿಕ ಹುದ್ದೆಯ ವ್ಯಕ್ತಿಗಳು, ರಾಜತಾಂತ್ರಿಕ ಸ್ಥಾನಮಾನ ಹೊಂದಿರುವ ವ್ಯಕ್ತಿಗಳು, ವಿದೇಶಿ ಪ್ರವಾಸಗಳಿಗಾಗಿ ಭಾರತ ಸರ್ಕಾರದಿಂದ ನೇಮಕಗೊಂಡ ಅಧಿಕಾರಿಗಳಿಗೆ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ನೀಡಲಾಗುತ್ತದೆ.
ಐದು ವರ್ಷದ ಸಂಸತ್ ಸದಸ್ಯ ಸ್ಥಾನದ ಅವಧಿ ಮುಗಿಯುವ ಸಮಯಕ್ಕೆ ಇವರ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ಅವಧಿಯೂ ಮುಕ್ತಾಯವಾಗುತ್ತದೆ. ನಂತರ ಸಂಸದರಾಗಿ ಮರು ಆಯ್ಕೆಯಾದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ನವೀಕರಿಸಿಕೊಳ್ಳಬಹುದು. ಇಲ್ಲದೇ ಇದ್ದಲ್ಲಿ ಆ ಪಾಸ್ಪೋರ್ಟ್ ಅವಧಿ ಕೊನೆಗೊಳ್ಳುತ್ತದೆ. 2019ರ ಮೇ 30ರಂದು ಪ್ರಧಾನಿ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಆ ಮೂಲಕ 17ನೇ ಸಂಸತ್ ರಚನೆಯಾಯಿತು. ಈ ಸಂಸತ್ನ ಅವಧಿಯವರೆಗೂ ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ಹೊಂದಬಹುದಾಗಿದೆ. ಸೋ ಇಲ್ಲೇ ಪ್ರಜ್ವಲ್ ಫ್ಲಾನ್ ಮಾಡಿದ್ದು, ವಿಡಿಯೋ ಮಾಡಿ ಕೆಲವರ ಬಳಿ ಆದರೂ ಸಿಂಪತಿ ಗಿಟ್ಟಿಸಿದ್ದು. ಈಗಲಾದರೂ ನಿಮಗೆ ಮೇ 31ರ ಮಹತ್ವ ತಿಳಿದಿರಬಹುದಲ್ಲವೇ?
ಯಸ್, ಯು ಆರ್ ರೈಟ್.. ಮೇ 31 ಕ್ಕೆ ಪ್ರಜ್ವಲ್ ರೇವಣ್ಣನವರ ಸಂಸತ್ ಸದಸ್ಯತ್ವ ಮುಕ್ತಾಯವಾಗುತ್ತದೆ. ಈ ಮೂಲಕ ಆಟೋಮ್ಯಾಟಿಕ್ ಆಗಿ ರಾಜತಾಂತ್ರಿಕ ಪಾಸ್ಪೋರ್ಟ್ ರದ್ಧಾಗುತ್ತದೆ. ಹೀಗಾಗಿ ನಿಯಮದಂತೆ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ಅವಧಿ ಮುಕ್ತಾಯಗೊಂಡು ದೇಶಕ್ಕೆ ವಾಪಸಾಗಲೇಬೇಕು. ಎಸ್ಐಟಿ ನೋಟಿಸ್ನಂತೆ ಖುದ್ದು ಹಾಜರಾಗದೆ ತುಂಬಾ ಸಮಯ ವಿದೇಶದಲ್ಲಿ ಇರಲು ಸಾಧ್ಯವಿಲ್ಲ. ಇಲ್ಲದೇ ಇದ್ದಲ್ಲಿ ಕಾನೂನು ರೀತಿ ಅವರನ್ನು ಈಗಿರುವ ಆ ದೇಶವೇ ವಾಪಸ್ ಕಳುಹಿಸಲಿದೆ. ಇದರಿಂದ ಈಗ ಹೋಗಿರುವ ಮಾನ-ಮರ್ಯಾದೆ ಜೊತೆ ಅಳಿದುಳಿದದ್ದೆಲ್ಲಾ ಹೋಗಿಬಿಡುತ್ತದೆ. ಹೀಗಾಗಿ ಎಲ್ಲಾ ರೀತಿಯಿಂದಲೂ ಭಯಗೊಂಡು ಯೋಚಿಸಿದ ಪ್ರಜ್ವಲ್ ಬೇರೆ ದಾರಿ ಇಲ್ಲದೆ ಶರಣಾಗುತ್ತಿದ್ದಾರೆ. ಮೇ 31ಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಂಡಿದ್ದಾರೆ.
ವಿಡಿಯೋದಲ್ಲಿ ಪ್ರಜ್ವಲ್ ಹೇಳಿದ್ದೇನು?!
ಎಲ್ಲರಿಗೂ ನಮಸ್ಕಾರ ಎಂದು ವಿಡಿಯೋ ಶುರುಮಾಡುವ ಪ್ರಜ್ವಲ್, ಮೊದಲನೆಯದಾಗಿ ನನ್ನ ತಂದೆ ತಾಯಿಗೆ, ನನ್ನ ನನ್ನ ತಾತ, ತನ್ನ ಕುಮಾರಣ್ಣ, ನನ್ನ ಕಾರ್ಯಕರ್ತರು, ನನ್ನ ನಾಡಿನ ಜನರಲ್ಲಿ ನಾನು ಕ್ಷಮೆ ಕೇಳುತ್ತೇನೆ. ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ಚುನಾವಣೆ ಮುಗಿದ ಬಳಿಕ ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗಲೂ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ಅಲ್ಲಿಗೆ ಹೋಗಿ ಒಂದೆರಡು ದಿನ ಆದ ಬಳಿಕ ಯೂಟ್ಯೂಬ್ ಹಾಗೂ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಕೊಂಡೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಬಳಿಕ ಎಸ್ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೆ ನಾನು ಫಾರಿನ್ನಲ್ಲಿ ಎಲ್ಲಿದ್ದೇನೆ ಎಂದು ಮಾಹಿತಿ ಕೊಡದಿರುವುದಕ್ಕೆ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ಎಸ್ಯಟಿ ನೋಟಿಸ್ಗೆ ಎಕ್ಸ್ ಖಾತೆ ಮತ್ತು ನಮ್ಮ ಲಾಯರ್ ಮೂಲಕ ವಿಚಾರಣೆಗೆ ಹಾಜರಾಜಲು 7 ದಿನಗಳ ಕಾಲಾವಕಾಶ ಕೇಳಿದ್ದೆನು. ಈ ಏಳು ದಿನ ಸಮಯಾವಕಾಶ ಕೇಳಿದ ನಂತರ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಅನೇಕರು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾತನಾಡುವುದನ್ನು ನಾನು ನೋಡಿದೆ. ಇದೆಲ್ಲವನ್ನು ನೋಡಿ ನಾನು ಡಿಪ್ರೆಶನ್ಗೆ ಒಳಗಾಗಿ, ಒಂದೆಡೆ ಐಸೋಲೇಷನ್ಗೆ ಒಳಗಾಗಿದ್ದೆನು. ಇದರಿಂದಾಗಿ ನಿಮ್ಮೆಲ್ಲರ ಮುಂದೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
ಅಲ್ಲದೆ ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಈ ಸುಳ್ಳು ಪ್ರಕರಣದಿಂದ ನಾನು ಹೊರ ಬರುತ್ತೇನೆ. ಬಂದ ಮೇಲೆ ಎಲ್ಲರಿಗೂ ಉತ್ತರ ನೀಡುತ್ತೇನೆ. ಈ ಘಟನೆಯಿಂದ ಯಾರೂ ಕೂಡ ಅನ್ಯಥಾ ಭಾವಿಸುವುದು ಬೇಡ. ನಾನೇ ಸ್ವತಃ ಶುಕ್ರವಾರ ಮೇ 31ರಂದು ಎಸ್ಯಟಿ ಮುಂದೆ ಬಂದು ಸಂಪೂರ್ಣವಾಗಿ ಪ್ರಕರಣದ ತನಿಖೆಯಲ್ಲಿ ಭಾಗಿಯಾಗುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ನನ್ನ ಮೇಲೆ ದಾಖಲಾಗಿರುವಂತಹ ಸುಳ್ಳು ಪ್ರಕರಣಗಳಿಂದ ಮುಕ್ತವಾಗಿ ಹೊರಗೆ ಬರುವ ವಿಶ್ವಾಸವಿದೆ. ನನ್ನ ಮೇಲೆ ದೇವರು, ಜನರು ಹಾಗೂ ಕುಟುಂಬದ ಆಶೀರ್ವಾದ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.
Hassan
ಸಮಾಜ ಸೇವಕ ಪುನೀತ್ ಬನ್ನಹಳ್ಳಿಗೆ ಧರ್ಮ ಸಂವರ್ಧಕ ಪ್ರಶಸ್ತಿ
ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಭಕ್ತರಿಗೆ ಸೇವಾ ಸಮರ್ಪಣಾ ಮನೋಭಾವ ಇದ್ದಾಗ ಮಾತ್ರ ಮಠಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ತಾಲೂಕಿನ ಪಾಳ್ಯ ಹೋಬಳಿಯ ಕಾರ್ಜುವಳ್ಳಿ ಗ್ರಾಮದ ಶ್ರೀಮದ್ ರಂಭಾಪುರಿ ವೀರಸಿಂಹಾಸನ ಶಾಖಾ ಶ್ರೀ ಸಂಸ್ಥಾನ ಹಿರೇಮಠದಲ್ಲಿ ಸಕಲೇಶಪುರದ ಸಮಾಜ ಸೇವಕ ಪುನೀತ್ ಬನ್ನಹಳ್ಳಿ ಅವರಿಗೆ ಧರ್ಮ ಸಂವರ್ಧಕ ಎಂಬ ಪ್ರಶಸ್ತಿಯನ್ನು ನೀಡಿ ಆರ್ಶೀವದಿಸಿ ನಂತರ ಮಾತನಾಡಿದರು.
ಭಕ್ತರು ಮಠದ ಆಧಾರ ಸ್ತಂಭವಾದಾಗ ಮಠಗಳು ಕಲ್ಯಾಣ ಕಾರ್ಯ ನಡೆಸಲು ಸಾಧ್ಯವಾಗುತ್ತದೆ. ಸಂಸ್ಥಾನ ಶ್ರೀಮಠಕ್ಕೆ ತನ್ನದೇ ಇತಿಹಾಸವಿದೆ, ಪ್ರತಿಯೊಬ್ಬರೂ ಜೀವನದಲ್ಲಿ ದಾನ, ಧರ್ಮ, ಸನ್ಮಾರ್ಗ, ಸದ್ವಿಚಾರ ಆಳವಡಿಸಿಕೊಳ್ಳಬೇಕು ಎಂದರು.
ಕಾರ್ಜುವಳ್ಳಿ ಹಿರೇಮಠದಲ್ಲಿ ಪ್ರತಿ ವರ್ಷ ಲಿಂ.ರುದ್ರಮುನಿ ಶಿವಾಚಾರ್ಯ ಸ್ವಾಮೀಜಿಗಳ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಪಟ್ಟಾಧಿಕಾರದ ವಾರ್ಷಿಕೋತ್ಸವ-ವರ್ಧಂತಿ ಮಹೋತ್ಸವದ ಅಂಗವಾಗಿ ಶ್ರೀ ಮಠದಲ್ಲಿ ಐದನೇ ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡುವ ಮೂಲಕ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವ ಗಣ್ಯರನ್ನು ಗುರುತಿಸಿ ವಿಶೇಷ ಪ್ರಶಸ್ತಿಗಳನ್ನು ನೀಡುವ ಮೂಲಕ ಅವರನ್ನು ಗೌರವಿಸಿ ಸನ್ಮಾನಿಸಲಾತಿದೆ ಆ ನಿಟ್ಟಿನಲ್ಲಿ ಸಕಲೇಶಪುರದ ಸಮಾಜ ಸೇವಕ ಪುನೀತ್ ಬನ್ನಹಳ್ಳಿ ಅವರಿಗೆ ಧರ್ಮ ಸಂವರ್ಧಕ ಎಂಬ ಪ್ರಶಸ್ತಿಯನ್ನು ನೀಡಲಾಗಿತ್ತು ಆ ದಿನ ಅವರು ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದ ಕಾರಣ ಇಂದು ಅವರನ್ನು ಶ್ರೀಮಠಕ್ಕೆ ಕರೆಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನಿರಂಜನ, ಕುಮಾರ್, ಪುರೋಹಿತ ಶಶಿ ವಿರುಪಾಪುರ ಸೇರಿದಂತೆ ಮುಂತಾದವರು ಹಾಜರಿದ್ದರು.
Hassan
ಕಾಫಿ ಕಳ್ಳತನ ಮಾಡಿದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಹಲ್ಲೆ ಕೇಸು ಹಾಕುವ ಬೆದರಿಕೆ : ನ್ಯಾಯ ಕೊಡಿಸುವಂತೆ ಅಕ್ಷಿತಾ ಮನವಿ
ಹಾಸನ: ಜಮೀನಿನಲ್ಲಿ ಕಾಫಿ ಕದ್ದು ಕೂಯ್ದ ಬಗ್ಗೆ ಪ್ರಶ್ನೆ ಮಾಡಿದಾಗ ನಮ್ಮ ಮೇಲೆ ಹಲ್ಲೆ ಮತ್ತು ಅಟ್ರಾಸಿಟಿ ಹಾಕುವುದಾಗಿ ಬೆದರಿಕೆ ಹಾಕಲಾಗುತ್ತಿದ್ದು, ನಮಗೆ ನ್ಯಾಯಕೊಡಿಸಬೇಕೆಂದು ಕೊಡಗಲವಾಡಿ ಗ್ರಾಮದ ಅಕ್ಷತಾ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಅಕ್ಷತಾ ಕೊಡಗಲವಾಡಿ ಯಾದ ನಾನು ಸುಮಾರು ೭-೮ ವರ್ಷಗಳಿಂದ ಆಲೂರು ತಾಲೂಕಿನ ಕೊಡಗಲವಾಡಿ ಗ್ರಾಮದ ಸರ್ವೆ ನಂ ೧೭/೨ ರಲ್ಲಿ ನಮ್ಮ ಮನೆಯಲ್ಲಿ ವಾಸವಾಗಿರುತ್ತೇನೆ. ಮನೆಯ ಪಕ್ಕದಲ್ಲೇ ಕಾಫಿ ಗಿಡಗಳಿದ್ದು, ಅದರ ಕಾಫಿ ಹಣ್ಣನ್ನು ನನ್ನ ಚಿಕ್ಕಮ್ಮ ಕುಯ್ಯುತಿದ್ದಾಗ ಪಕ್ಕದ ತೋಟದ ಮಂಜುನಾಥ್ ಎಂಬುವವರ ಅಣ್ಣ ಕಾಂತಾ ಮತ್ತು ಅವರ ಮಗ ಬಾಲರಾಜ್ ಎಂಬುವವರು ಅಲ್ಲಿಗೆ ಬಂದು ನನ್ನ ಚಿಕ್ಕಮ್ಮನಿಗೆ ಅವ್ಯಾಚ ಶಬ್ದಗಳಿಂದ ಬೈದು ಅವರು ಅದಕ್ಕೆ ಯಾಕೆ ಎಂದು ಕೇಳುವಾಗ ಅವರ ತಲೆ ಕೂದಲಿಗೆ ಕೈ ಹಾಕಿ ಮುಡಿ ಎಳೆದಾಡುತ್ತಿದ್ದಾಗ ಅವರು ಕಿರುಚಡುತಿದ್ದನ್ನು ಕಂಡು ನಾನು ಮನೆಯಿಂದ ಹೋಗಿ ಬಿಡಿಸಲು ಯತ್ನಿಸಿದಾಗ ನನ್ನ ಮೇಲೂ ಹಲ್ಲೆ ಮಾಡಿ ನನ್ನನ್ನು ಕೆಳಗೆ ತಳ್ಳಿ ಬೀಳಿಸಿರುತ್ತಾರೆ ಎಂದು ದೂರಿದರು. ಅಲ್ಲೇ ಬಿದ್ದಾಗ ರಕ್ತಸ್ರಾವ ಉಂಟಾಗಿದ್ದು, ಅಲ್ಲಿಂದ ತಪ್ಪಿಸಿಕೊಂಡು ಹೊರಬರುವಾಗ ನನ್ನನ್ನು ಅವ್ಯಚ್ಯಾ ಶಬ್ದಗಳಿಂದ ನಿಂದಿಸಿ ನಿನ್ನ ಮನೆಯನ್ನು ಪುಡಿ ಮಾಡುವುದಾಗಿ ಮತ್ತು ಮುಂದೆ ನಾವು ಅವರು ಹೇಳಿದಂತೆ ಕೆಳದಿದ್ದರೆ ಅಟ್ರಾಸುಟಿ ಕೇಸ್ ಮಾಡಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ ಮತ್ತು ಅಲ್ಲೇ ಇದ್ದ ೬-೭ ಕಾಫಿ ಮೂಟೆಯ ಚೀಲಾಗಳನ್ನು ತೆಗೆದುಕೊಂಡು ಮುಂದೆ ನಾವು ಹೇಳಿದಂತೆ ಕೆಳದಿದ್ದರೆ ಇಲ್ಲಿರುವ ಗಿಡಗಳನ್ನು ಕಡಿದು ಬೆಂಕಿಗೆ ಹಾಕುತ್ತೆನೆಂದು ಮತ್ತು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗಿ ಹೋಗಿದ್ದು, ಆಲೂರು ಪೊಲೀಸ್ ಸ್ಟೇಷನ್ ಅಲ್ಲಿ ಸುಮಾರು ೨ ಗಂಟೆಗೆ ದೂರು ದಾಖಲಾಯಿಸಲು ಹೋದಾಗ ನಮ್ಮ ದೂರನ್ನು ತೆಗೆದುಕೊಳ್ಳದೆ ೨ ಗಂಟೆಯವರೆಗೂ ಕಾಯಿಸಿರುತಾರೆ. ನನಗೆ ಹಲ್ಲೆ ಮಾಡಿದ ವ್ಯಕ್ತಿ ಬರುತ್ತಿದ್ದಾರೆ ಇರಿ ಎಂದು ಹೇಳಿದ್ದಾರೆ. ನಂತರ ನನಗೆ ಹೊಟ್ಟೆ ನೋವಾಗಿದೆ ಮತ್ತು ಸುಸ್ತು ಅಗುತಿದೆ ಹಾಗಾಗಿ ದೂರು ದಾಖಲಾಯಿಸಲು ತಡವಾದರೆ ಹಿಂಬಾರ ಕೊಡಿ ಎಂದು ಹೇಳಿದಾಗ ನನ್ನ ಚಿಕ್ಕಮ್ಮನಾ ದೂರನ್ನು ತೆಗೆದುಕೊಂಡು ಎಫ್.ಐ.ಆರ್. ಮಾಡುತ್ತಾರೆ. ನಂತರ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ವೈದ್ಯರು ನಿಮಗೆ ಪೆಟ್ಟು ಬಿದ್ದಿದ್ದರಿಂದ ಮತ್ತು ಮಾನಸಿಕ ಒತ್ತಡದಿಂದ ಹೀಗಾಗಿದೆ ಎಂದು ಎಂ.ಎಲ್.ಸಿ. ಮಾಡಿರುತಾರೆ. ನನ್ನ ೧೭/೨ ರಲ್ಲಿ ನ್ಯಾ ಲೋನ್ ಗಳಿದ್ದು ಪ್ರತಿ ವರ್ಷ ನನ್ನ ಜಾಗದ ಕಾಫಿ ಹಣ್ಣು ಕುಯುತಿದ್ದಾರೆ ಮುಂದೆ ನನ್ನ ತರ ರೈತರು ಹೇಗೆ ಜೀವನ ಮಾಡುವುದೆಂದು ಪ್ರಶ್ನೆ ಮಾಡಿದರು. ನಾನು ಒಬ್ಬ ಜನಪ್ರತಿನಿಧಿಯಾಗಿ ಒಬ್ಬ ೨೦ ರಿಂದ ೨೫ ವರ್ಷದ ಹುಡುಗ ಹೀಗೆ ಮಾಡಿದ್ದಾರೆ ಮುಂದಿನ ಆಗುಹೋಗುಗಳನ್ನು ಗಮನಿಸಿ ದೂರು ಕೊಟ್ಟಿರುತೇವೆ. ನಾನು ಅಟ್ರಾಸಿಟಿ ವಿರೋಧಿ ಅಲ್ಲ. ಇದರ ದುರುಪಯೋಗದ ವಿರೋಧಿ ಎಂದು ಹೇಳಿದರು. ಇವುಗಳನೆಲ್ಲ ಜಿಲ್ಲಾಡಳಿತ ಹಾಗು ಪೊಲೀಸ್ ಇಲಾಖೆ ಗಮನಿಸಿ ನ್ಯಾಯ ಕೊಡಿಸಬೇಕಾಗಿ ಮನವಿ ಮಾಡಿದರು.
Hassan
ಸುತ್ತೂರು ಮಠದಿಂದ 2 ಲಕ್ಷಕ್ಕೂ ಅಧಿಕ ಉಪಕರಣ ಸರಕಾರಿ ವಾಣಿವಿಲಾಸ ಶಾಲೆಗೆ ಕೊಡುಗೆ
ಹಾಸನ: ಶ್ರೀಕ್ಷೇತ್ರ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಕೃಪಾ ಆಶೀರ್ವಾದದಿಂದ ಸುಮಾರು ೨ ಲಕ್ಷಕ್ಕೂ ಅಧಿಕ ಮೊತ್ತದ ದೂರದರ್ಶಕ ಯಂತ್ರ, ಸೂಕ್ಷ್ಮ ದರ್ಶಕ ಯಂತ್ರ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉಪಕರಣಗಳನ್ನು ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿ ವಿಲಾಸ ಶಾಲೆಗೆ ನೀಡಿದ್ದಾರೆ ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ತಿಳಿಸಿದರು.
ನಗರದ ಮಹಾವೀರ ವೃತ್ತದ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿವಿಲಾಸ ಶಾಲೆಯ ಮುಖ್ಯ ಶಿಕ್ಷಕರಾದ ಮೀನಾಕ್ಷಿ ಅವರಿಗೆ ಉಪಕರಣಗಳನ್ನು ಹಸ್ತಂತರಿಸಿದ ನಂತರ ಮಾತನಾಡಿದ ಅವರು, ಸುತ್ತೂರು ಮಠದಿಂದ ಸುಮಾರು ೮೦ ಸಾವಿರ ಮೌಲ್ಯದ ದೂರದರ್ಶಕ ಯಂತ್ರ, ಸುಮಾರು ೮ ಸಾವಿರ ಮೌಲ್ಯದ ಸೂಕ್ಷ್ಮದರ್ಶಕ ಯಂತ್ರಗಳು ಮತ್ತು ಸುಮಾರು ೧ ಲಕ್ಷಕ್ಕೂ ಮೀರಿದ ಮೌಲ್ಯದ ಸಾವಿರಕ್ಕೂ ಅಧಿಕ ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕವಾದ ಅಕ್ವಾಗಾರ್ಡ್ಗಳು ಸುತ್ತೂರು ಮಠದಿಂದ ಮಹಾಪ್ರಸಾದವಾಗಿ ಶಾಲೆಗೆ ದೊರೆತ ಸುದಿನವಾಗಿದೆ ಎಂದರು.
ಸಹಕಾರವನ್ನು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿಯವರೊಂದಿಗೆ ಇತ್ತೀಚಗೆ ಸುತ್ತೂರು ಜಗದ್ಗುರುಗಳು ಹಾಸನದ ಧಾರ್ಮಿಕ ಕಾರ್ಯಕ್ರಮಕ್ಕೆ ಅಗಮಿಸಿದ ಸಂದರ್ಭದಲ್ಲಿ ನಮ್ಮ ಸರ್ಕಾರಿ ಪ್ರಾಥಮಿಕ ವಾಣಿವಿಲಾಸ ಶಾಲೆಯಲ್ಲಿ ವಚನ ಕಂಠಪಾಠ ಕಾರ್ಯಕ್ರಮಕ್ಕೆ ಕರೆಸಿ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಮಾಡಿದ ಅವರು ಹೆಚ್ಚಿನ ಸಹಕಾರ ನೀಡಿ ಸುತ್ತೂರು ಮಠದಿಂದ ಉಪಕರಣಗಳನ್ನು ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಜೆಎಸ್ಎಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ. ಮಧು ಕುಮಾರ್ ಹಾಗೂ ಬಾಲು ಸ್ವತಃ ಶಾಲೆಗೆ ಭೇಟಿ ನೀಡಿ ದೂರದರ್ಶಕ ಯಂತ್ರ ಸೂಕ್ಷ್ಮದರ್ಶಕ ಯಂತ್ರ ಹಾಗೂ ಅಕ್ವಾಗಾರ್ಡನ್ನು ನಮ್ಮ ಶಾಲೆಗೆ ನೀಡಿದ್ದಾರೆ.
ಈ ಒಂದು ಶುಭ ಕಾರ್ಯಕ್ರಮದಲ್ಲಿ ಚಾಪು ಮೂಡಿಸಿ ಸಹಕಾರ ನೀಡಿದ ನಮ್ಮ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಎನ್. ಮಂಜುಳಾ ಇವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲ ವಿದ್ಯಾರ್ಥಿಗಳಿಗೂ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಶಿಕ್ಷಕರೆಲ್ಲರನ್ನು ಕುರಿತು ಪ್ರಯೋಗಗಳನ್ನು ಚಾಲನೆ ಮಾಡುವಂತೆ ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಪ್ರಶಂಸೆ ವ್ಯಕ್ತಪಡಿಸಿದರು. ವಸ್ತುಗಳನ್ನು ನೀಡುವಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಪರಮಪೂಜ್ಯ ಸ್ವಾಮೀಜಿ ಅವರಿಗೆ ಶಾಲೆಯ ಪರವಾಗಿ ವೈಯಕ್ತಿಕವಾಗಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆಯನ್ನು ಸಲ್ಲಿಸುತ್ತಾ ಕೋಟಿ ನಮನಗಳನ್ನು ಪಾದಕಮಲಗಳಿಗೆ ಅರ್ಪಿಸುತ್ತೇನೆ.
ಈ ಸಂದರ್ಭದಲ್ಲಿ ಜೆಎಸ್ಎಸ್ ಕಾಲೇಜು ಪ್ರಾಂಶುಪಾರು ಮಧುಕುಮಾರ್, ಬಾಲು, ಶಿಕ್ಷಣಾಧಿಕಾರಿಗಳು ಜಿ.ಎನ್. ಮಂಜುಳಾ ಇವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿವಿಲಾಸ ಶಾಲೆಯ ಮುಖ್ಯ ಶಿಕ್ಷಕರು ಮಾತನಾಡಿ ಈ ಶಾಲೆಯ
ವಿದ್ಯಾರ್ಥಿಗಳಿಗೂ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಶಿಕ್ಷಕರೆಲ್ಲರನ್ನು ಕುರಿತು ಪ್ರಯೋಗಗಳನ್ನು ಚಾಲನೆ ಮಾಡುವಂತೆ ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಪ್ರಶಂಸೆ ವ್ಯಕ್ತಪಡಿಸಿದರು. ವಸ್ತುಗಳನ್ನು ನೀಡುವಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಪರಮಪೂಜ್ಯ ಸ್ವಾಮೀಜಿ ಅವರಿಗೆ ಶಾಲೆಯ ಪರವಾಗಿ ವೈಯಕ್ತಿಕವಾಗಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆ ಸಲ್ಲಿಸಿ ಕೋಟಿ ನಮನಗಳನ್ನು ಪಾದಕಮಲಗಳಿಗೆ ಅರ್ಪಿಸುತ್ತೇನೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಎಂ.ಎಚ್. ಮೀನಾಕ್ಷಿ ಕೃತಜ್ಞತೆ ಸಲ್ಲಿಸಿದರು.
-
Mysore23 hours ago
ಮೈಸೂರು ಮಹಾರಾಜರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ
-
Sports22 hours ago
ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಸುರೇಶ್ ರೈನಾ
-
Sports21 hours ago
Kho Kho world cup 2025: ಭಾರತ ಮಹಿಳಾ ಹಾಗೂ ಪುರುಷ ತಂಡಗಳೇ ಚಾಂಪಿಯನ್
-
National - International21 hours ago
ಮಹಾ ಕುಂಭಮೇಳ ದರ್ಶನಕ್ಕಾಗಿ ಹುಬ್ಬಳ್ಳಿಯಿಂದ ವಿಶೇಷ ರೈಲು ವ್ಯವಸ್ಥೆ : ಈ ದಿನ ಮಾತ್ರ!
-
Hassan8 hours ago
ಅನುಮತಿ ಪಡೆಯೇ ಚಿತ್ರೀಕರಣ ಉಪಕರಣ ತಂದಿಟ್ಟಿದ್ದಕ್ಕೆ ದಂಡ ವಿಧಿಸಿಧ್ದ ಅರಣ್ಯ ಇಲಾಖೆ
-
Hassan8 hours ago
ಹಾಸನ : ಆನ್ಲೈನ್ ಗೇಮ್ಗೆ ಯುವಕ ಬಲಿ
-
Hassan2 hours ago
ಸುತ್ತೂರು ಮಠದಿಂದ 2 ಲಕ್ಷಕ್ಕೂ ಅಧಿಕ ಉಪಕರಣ ಸರಕಾರಿ ವಾಣಿವಿಲಾಸ ಶಾಲೆಗೆ ಕೊಡುಗೆ
-
Mysore23 hours ago
ಪ್ಲಾಸ್ಟಿಕ್ ತ್ಯಾಜ್ಯ ಕಾನನ ಪ್ರವೇಶಿಸದಂತೆ 2 ಹಂತದ ತಪಾಸಣೆ: ಈಶ್ವರ ಖಂಡ್ರೆ