Connect with us

National

ಏಕದಿನ ಕ್ರಿಕೆಟ್‌ಗೆ 40 ಓವರ್‌ ಮಾದರಿ? : ಐಸಿಸಿ ಗಂಭೀರ ಚಿಂತನೆ

Published

on

ನವದೆಹಲಿ: ಟಿ-20 ಕ್ರಿಕೆಟ್‌ನ ಹೆಚ್ಚುತ್ತಿರುವ ಜನಪ್ರಿಯತೆ ಹಾಗೂ ಬದಲಾಗುತ್ತಿರುವ ಪ್ರೇಕ್ಷಕರ ಅಭಿರುಚಿಗೆ ಅನುಗುಣವಾಗಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಏಕದಿನ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ ತರಲು ಗಂಭೀರ ಚಿಂತನೆ ನಡೆಸಿದೆ. ಸದ್ಯದ 50 ಓವರ್‌ಗಳ ಏಕದಿನ ಪಂದ್ಯಗಳನ್ನು 40 ಓವರ್‌ಗಳಿಗೆ ಇಳಿಸುವ ಪ್ರಸ್ತಾವನೆ ಐಸಿಸಿ ಪರಿಶೀಲನೆಯಲ್ಲಿದೆ.

ಕ್ರಿಕೆಟ್‌ನ ಭವಿಷ್ಯದ ಕಾರ್ಯತಂತ್ರದ ಕುರಿತು ಜಾಗತಿಕ ಸಲಹಾ ಸಂಸ್ಥೆ ಮೆಕಿನ್ಸೆ ನಡೆಸಿದ ಅಧ್ಯಯನದಲ್ಲಿ, ಏಕದಿನ ಕ್ರಿಕೆಟ್‌ನ್ನು ಉಳಿಸಿಕೊಳ್ಳಬೇಕಾದರೆ ಕ್ರಾಂತಿಕಾರಿ ಬದಲಾವಣೆಗಳು ಅಗತ್ಯ ಎಂದು ಶಿಫಾರಸು ಮಾಡಲಾಗಿದೆ.

ಓವರ್ ಕಡಿತಕ್ಕೆ ಪ್ರಮುಖ ಕಾರಣಗಳು:

  • ಮೂರುರಿಂದ ನಾಲ್ಕು ಗಂಟೆಗಳಲ್ಲಿ ಮುಗಿಯುವ ಟಿ-20 ಪಂದ್ಯಗಳಿಗೆ ಹೋಲಿಸಿದರೆ ಸುಮಾರು ಎಂಟು ಗಂಟೆಗಳ ಕಾಲ ನಡೆಯುವ ಏಕದಿನ ಪಂದ್ಯಗಳ ಬಗ್ಗೆ ಪ್ರೇಕ್ಷಕರ ಆಸಕ್ತಿ ಕಡಿಮೆಯಾಗುತ್ತಿದೆ.
  • ಪಂದ್ಯವನ್ನು 40 ಓವರ್‌ಗಳಿಗೆ ಇಳಿಸಿದರೆ ಸುಮಾರು ಆರು ಗಂಟೆಗಳಲ್ಲಿ ಪೂರ್ಣಗೊಳ್ಳಲಿದ್ದು, ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ.
  • 50 ಓವರ್ ಪಂದ್ಯಗಳಲ್ಲಿ 15ರಿಂದ 40ನೇ ಓವರ್‌ಗಳ ನಡುವಿನ ಆಟ ಹೆಚ್ಚು ರೋಚಕವಾಗಿರುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಆರಂಭದಿಂದ ಅಂತ್ಯದವರೆಗೆ ಪಂದ್ಯವನ್ನು ಕುತೂಹಲಕರವಾಗಿರಿಸುವುದು ಐಸಿಸಿಯ ಉದ್ದೇಶವಾಗಿದೆ.
  • ಆಟಗಾರರ ಮೇಲಿನ ದೈಹಿಕ ಒತ್ತಡ ಮತ್ತು ಗಾಯದ ಸಮಸ್ಯೆಗಳನ್ನು ಕಡಿಮೆ ಮಾಡುವ ಉದ್ದೇಶವೂ ಈ ಪ್ರಸ್ತಾವನೆಯ ಹಿಂದಿದೆ.

ಮೆಕಿನ್ಸೆ ಸಂಸ್ಥೆಯ ಪ್ರಮುಖ ಶಿಫಾರಸುಗಳು:

  • 50 ಓವರ್‌ಗಳ ಬದಲಿಗೆ 40 ಓವರ್‌ಗಳ ಏಕದಿನ ಪಂದ್ಯಗಳನ್ನು ಪರಿಚಯಿಸುವುದು.
  • ಏಕದಿನ ವಿಶ್ವಕಪ್‌ಗೆ ಮುನ್ನ 18 ತಿಂಗಳ ಅವಧಿಯಲ್ಲಿ ಮಾತ್ರ ಏಕದಿನ ಸರಣಿಗಳನ್ನು ಆಯೋಜಿಸುವುದು.
  • ಟೆಸ್ಟ್, ಏಕದಿನ ಹಾಗೂ ಟಿ-20 ಮಾದರಿಗಳಿಗೆ ಪ್ರತ್ಯೇಕ ಹಾಗೂ ನಿಗದಿತ ವೇಳಾಪಟ್ಟಿಯನ್ನು ರೂಪಿಸುವುದು.
  • ಏಷ್ಯಾಕಪ್ ಮಾದರಿಯಲ್ಲಿ ಇತರ ಖಂಡಗಳಲ್ಲಿಯೂ ಕಾಂಟಿನೆಂಟಲ್ ಟೂರ್ನಿಗಳು ಹಾಗೂ ತ್ರಿಕೋನ ಸರಣಿಗಳನ್ನು ಉತ್ತೇಜಿಸುವುದು.

ಈ ಪ್ರಸ್ತಾವನೆಯ ಕುರಿತು ಎಡಿನ್‌ಬರ್ಗ್‌ನಲ್ಲಿ ನಡೆಯಲಿರುವ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 12 ಪೂರ್ಣ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಚರ್ಚೆ ನಡೆಸಲಿದ್ದಾರೆ. ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಆದಾಗ್ಯೂ, ಯಾವುದೇ ಹೊಸ ನಿಯಮಗಳು 2027ರ ಏಕದಿನ ವಿಶ್ವಕಪ್‌ಗೂ ಮುನ್ನ ಜಾರಿಗೆ ಬರುವುದಿಲ್ಲ. ಪ್ರಸ್ತುತ ಜಾರಿಯಲ್ಲಿರುವ ಫ್ಯೂಚರ್ ಟೂರ್ಸ್ ಪ್ರೋಗ್ರಾಂ (FTP) ಹಾಗೂ ಜಾಗತಿಕ ಕ್ರಿಕೆಟ್ ವೇಳಾಪಟ್ಟಿಯನ್ನು ಪರಿಶೀಲಿಸಿದ ಬಳಿಕವೇ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಎಲ್ಲಾ ಏಕದಿನ ಪಂದ್ಯಗಳು ಸಾಂಪ್ರದಾಯಿಕ 50 ಓವರ್‌ಗಳ ಮಾದರಿಯಲ್ಲೇ ಮುಂದುವರಿಯಲಿವೆ.

Continue Reading

National

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

Published

on

ನವದೆಹಲಿ,ಜು.: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ.


ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಅಯೋಧ್ಯೆ ರಾಮಮಂದಿರದಲ್ಲಿನ ದೇಣಿಗೆ ಕಳ್ಳತನದ ಆರೋಪ, ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ವಿವಾದಗಳು ಅಧಿವೇಶನದ ಆರಂಭದಿಂದಲೇ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.

ಚರ್ಚೆಗೆ ನಿಗದಿಯಾಗಿರುವ ಪ್ರಮುಖ ಮಸೂದೆಗಳಲ್ಲಿ ‘ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026’ ಸೇರಿದ್ದು, ಇದರ ಚರ್ಚೆಗೆ ನಾಲ್ಕು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಹಾಗೆಯೇ, ‘ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026’ ರ ಕುರಿತು ಲೋಕಸಭೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಲಿದೆ.

 

Continue Reading

National

ಮೆಸ್ಸಿಯ ಕೊನೆಯ ವಿಶ್ವಕಪ್ ಕನಸು ಭಗ್ನ’ : ಸ್ಪೇನ್‌ಗೆ ವಿಶ್ವಕಪ್, ಅರ್ಜೆಂಟೀನಾ ಸೋಲು

Published

on

ನ್ಯೂಯಾರ್ಕ್: ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿಯ ಕೊನೆಯ ವಿಶ್ವಕಪ್ ಗೆಲ್ಲುವ ಕನಸು ಈಡೇರಲಿಲ್ಲ. 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾ 1-0 ಗೋಲುಗಳ ಅಂತರದಲ್ಲಿ ಸೋತು, ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು ಸ್ಪೇನ್‌ಗೆ ವಿಶ್ವಕಪ್ ಕಿರೀಟ ತಂದುಕೊಟ್ಟಿತು.

ಪಂದ್ಯದ ಆರಂಭದಿಂದಲೇ ಸ್ಪೇನ್ ಚೆಂಡಿನ ಮೇಲೆ ಹಿಡಿತ ಸಾಧಿಸಿ ಅರ್ಜೆಂಟೀನಾ ಮೇಲೆ ನಿರಂತರ ಒತ್ತಡ ಹೇರಿತು. ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಕೆಲ ಅವಕಾಶಗಳನ್ನು ಸೃಷ್ಟಿಸಿದರೂ, ಸ್ಪೇನ್‌ನ ಸಂಘಟಿತ ರಕ್ಷಣೆಯನ್ನು ಭೇದಿಸಲು ಸಾಧ್ಯವಾಗಲಿಲ್ಲ. ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಸ್ ಹಲವು ಅದ್ಭುತ ಸೇವ್‌ಗಳನ್ನು ಮಾಡಿ ತಂಡವನ್ನು ಪಂದ್ಯದಲ್ಲಿ ಉಳಿಸಿದ್ದರು.

ನಿಗದಿತ 90 ನಿಮಿಷಗಳಲ್ಲಿ ಯಾವುದೇ ತಂಡ ಗೋಲು ದಾಖಲಿಸದ ಕಾರಣ ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿತು. 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು ಬಾರಿಸಿ ಸ್ಪೇನ್‌ಗೆ ಮುನ್ನಡೆ ತಂದುಕೊಟ್ಟರು. ಕೊನೆಯ ಕ್ಷಣಗಳಲ್ಲಿ ಅರ್ಜೆಂಟೀನಾ ಸಮಬಲ ಸಾಧಿಸಲು ಹೋರಾಡಿದರೂ ಯಶಸ್ವಿಯಾಗಲಿಲ್ಲ.

ಈ ಗೆಲುವಿನೊಂದಿಗೆ ಸ್ಪೇನ್ 2010ರ ಬಳಿಕ ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮತ್ತೊಂದೆಡೆ, ಮೆಸ್ಸಿಗೆ ಇದು ವಿಶ್ವಕಪ್‌ನಲ್ಲಿ ಕೊನೆಯ ಪಂದ್ಯವಾಗುವ ಸಾಧ್ಯತೆ ಇದ್ದು, ಮತ್ತೊಮ್ಮೆ ಟ್ರೋಫಿ ಎತ್ತುವ ಅವರ ಕನಸು ಭಗ್ನಗೊಂಡಿತು.

Continue Reading

Hassan

ಚೆನ್ನಮ್ಮರವರ ನಿಧನ: ಸೋಮವಾರ ಅಂತ್ಯಕ್ರಿಯೆ

Published

on

ಬೆಂಗಳೂರು/ಹಾಸನ : ಇಂದು ರಾತ್ರಿ 9 ಗಂಟೆಗೆ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಪದ್ಮನಾಭನಗರಕ್ಕೆ ರವಾನಿಸಲಾಗುತ್ತದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಗೆ ತರಲಿದ್ದು, ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಸೋಮವಾರ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತದೆ.

Continue Reading

Trending

error: Content is protected !!