Hassan
ಫೆಬ್ರವರಿ 17 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ

ಹಾಸನ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ 17 ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಸೋಮವಾರ ಮಾತಾಡಿದ ಅವರು, ಅಂದು ನಡೆಯುವ ಸಮ್ಮೇಳನದಲ್ಲಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು ಎಲ್ಲಾ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು.
ಹಳೆ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಟಾನ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ಇದೇ ವೇಳೆ ಹಾಸನ ಜಿಲ್ಲಾ ಸಂಘದ ಬಗ್ಗೆ ಕೆಲ ಅಪಪ್ರಚಾರ ಮಾಡಲಾಗುತ್ತಿದೆ, ಸಭೆಯಲ್ಲಿ ಕೋರಂ ಕೊರತೆ, ಹಾಗೂ ಸಂಘದ ಪದಾಧಿಕಾರಿಗಳ ನಡುವೆ ವೈಮನಸ್ಯ ಹಾಗೂ ಸಂಘದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಕೆಲ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸುಳ್ಳು ಸ್ಪಷ್ಟಪಡಿಸಿದರು.
ಈವರೆಗೂ ಸಂಘದ ಬೈಲಾ ಅನುಗುಣವಾಗಿ ಕೆಲಸ ಮಾಡಿದ್ದೇನೆ, ಸಂಘದ ಬೈಲಾ ವಿರುದ್ದವಾಗಿ ಯಾವುದೇ ಕೆಲಸ ಮಾಡಿಲ್ಲ, ಜೊತೆಗೆ ಈ ವರೆಗೆ ಅನೇಕ ಕಾರ್ಯಕ್ರಮವನ್ನು ಆಯೋಜನೆ ಮಾಡಿಯು ಪ್ರಸ್ತುತ 7 ಲಕ್ಷಕ್ಕೂ ಅಧಿಕ ಜನವನ್ನು ಸಂಘದ ಖಾತೆಯಲ್ಲಿ ಉಳಿಸಲಾಗಿದೆ. ತಾನು ಅಧ್ಯಕ್ಷನಾಗಿ ಆಯ್ಕೆಗೊಂಡ ನಂತರ, ಸರ್ಕಾರಿ ನೌಕರರ ಸಂಘದ ಭವನದಲ್ಲಿ 2ನೇ ಹಂತದಲ್ಲಿ ನಡೆಯುತ್ತಿದ್ದ ಕ್ಲಬ್ ಅನ್ನು ಸರ್ಕಾರಿ ನೌಕರರು ಹಾಗೂ ಅವರ ಕುಟುಂಬಸ್ಥರ ಹಿತದೃಷ್ಟಿಯಿಂದ ಸದಸ್ಯರ ಒಮ್ಮತ ಅಭಿಪ್ರಾಯ ಪಡೆದು ರದ್ದುಪಡಿಸಲಾಗಿದೆ. ಕಳೆದ 4 ವರ್ಷ 6 ತಿಂಗಳು ನನ್ನ ಅವಧಿಯಲ್ಲಿ ಸರ್ಕಾರಿ ನೌಕರರ/ಅಧಿಕಾರಿ ವರ್ಗದ ಸುಮಾರು 5000 ಮಕ್ಕಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿರುತ್ತದೆ. ನನ್ನ ಅವಧಿಯಲ್ಲಿ 04 ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿದ್ದು, ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 3000 ಕ್ಕೂ ಅಧಿಕ ಸರ್ಕಾರಿ ನೌಕರರು/ಅಧಿಕಾರಿಗಳು ಭಾಗವಹಿಸಿರುತ್ತಾರೆ ಎಂದು ಹೇಳಿದರು. ನನ್ನ ಅವಧಿಯಲ್ಲಿ ಬೈಲಾ ನಿಯಮಾನುಸಾರ ಸಂಘದ 33 ಸಭೆಗಳನ್ನು ನಡೆಸಿ 4 ವರ್ಷಗಳ ಆಡಿಟ್ ವರದಿಯನ್ನು ಮಾಡಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ನಂತರ ಕೇಂದ್ರ ಸಂಘದ ಅನುಮೋದನೆಯನ್ನು ಸಹ ಪಡೆಯಲಾಗಿರುತ್ತದೆ. ಜಿಲ್ಲೆಯ ಸರ್ಕಾರಿ ನೌಕರರು/ಅಧಿಕಾರಿಗಳ ವೇತನದಿಂದ ಖಜಾನೆ-2 ರ ಮೂಲಕ ಕೇಂದ್ರ ಸಂಘಕ್ಕೆ ಸಂದಾಯ ಮಾಡಿದ ನೌಕರರ ವಂತಿಗೆಯಲ್ಲಿ ನಿಯಮಾನುಸಾರ ಜಿಲ್ಲಾ ಸಂಘಕ್ಕೆ ಬರಬೇಕಾದ ವಂತಿಗೆಯನ್ನು ಸಹ ಕೇಂದ್ರ ಸಂಘದಿಂದ ಪಡೆಯಲಾಗಿರುತ್ತದೆ. ಜಿಲ್ಲೆಯ ಸರ್ಕಾರಿ ನೌಕರರು ರಾಜ್ಯ ಮಟ್ಟದ 2023 ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿದ ಮೇರೆಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹಾಸನ ಜಿಲ್ಲೆಯನ್ನು ರಾಜ್ಯದಲ್ಲೇ ಸಮಗ್ರ ಕ್ರೀಡಾ ಪ್ರಶಸ್ತಿಯನ್ನು 3ನೇ ಸ್ಥಾನಕ್ಕೆ ತೆಗೆದುಕೊಂಡು ಹಾಸನ ಜಿಲ್ಲೆಗೆ ಕೀರ್ತಿ ಬರುವಂತೆ ಶ್ರಮಿಸಲಾಗಿದೆ.
ಜಿಲ್ಲಾ ಮಟ್ಟದಿಂದ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಪ್ರತಿಯೊಬ್ಬ ಸರ್ಕಾರಿ ನೌಕರರಿಗೆ/ಅಧಿಕಾರಿಗಳಿಗೆ ನೌಕರರ ಸಂಘದಿಂದ ಆರ್ಥಿಕ ಪ್ರೋತ್ಸಾಹ ಧನವನ್ನು ಪಾವತಿ ಮಾಡಿ ಪ್ರೋತ್ಸಾಹ ನೋಡಲಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ದಿನೇಶ್, ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಶಿವಶಂಕರ್, ಕುಮಾರಸ್ವಾಮಿ, ಲಕ್ಷ್ಮೀಕಾಂತ್, ಮಂಜಪ್ಪ, ಇತರರು ಉಪಸ್ಥಿತರಿದ್ದರು.
Hassan
ಜಮೀನು ವಿಚಾಕ್ಕೆ ಕೊಲೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲ್ಲೂಕಿನ ಉಮಾದೇವರಹಳ್ಳಿ ಗ್ರಾಮದಲ್ಲಿ ಶನಿವಾರ ಜಮೀನು ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.
ತಾಲ್ಲೂಕಿನ ತೇಜೂರು ಗ್ರಾಮದ ಕೆ.ಎಂ. ಪ್ರತಾಪ್ (43) ಮೃತರು. ತೊರಗರವಳ್ಳಿ ಗ್ರಾಮದ ಈರಯ್ಯ ಅವರ ಪುತ್ರರಾದ ಚಂದ್ರಶೇಖರ್, ಮೋಹನ್ ಹಾಗೂ ಟ್ರ್ಯಾಕ್ಟರ್ ಚಾಲಕ ಮೂವರು ಸೇರಿ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಉಮಾದೇವರಹಳ್ಳಿ ಗ್ರಾಮದ ಸರ್ವೆ ನಂ. 179ರ 3 ಎಕರೆ ಜಮೀನನ್ನು ಕಳೆದ 30 ವರ್ಷಗಳ ಹಿಂದೆ ಬ್ಯಾಂಕ್ ಹರಾಜಿನಲ್ಲಿ ಮೃತ ಪ್ರತಾಪ್ ಅವರ ತಾಯಿ ಚನ್ನಮ ಖರೀದಿಸಿದ್ದರು. ಇತ್ತೀಚೆಗೆ ಆ ಜಮೀನನ್ನು ಕೆ.ಎಂ. ಪ್ರತಾಪ್ ಹೆಸರಿಗೆ ಖಾತೆ ಮಾಡಿಕೊಳ್ಳಲಾಗಿತ್ತು. ಹಲವು ವರ್ಷಗಳಿಂದ ಪ್ರತಾಪ್ ಹಾಗು ಕುಟುಂಬಸ್ಥರೇ ಉಳುಮೆ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ.
ತೊರಗರವಳ್ಳಿ ಗ್ರಾಮದ ಚಂದ್ರಶೇಖರ್ ಹಾಗು ಮೋಹನ್ ಜಮೀನು ತಮಗೆ ಸೇರಬೇಕೆಂದು ಆಗಾಗ ಗಲಾಟೆ ಮಾಡುತ್ತಿದ್ದರು. ಶನಿವಾರ ಬೆಳಿಗ್ಗೆ ಉಳುಮೆ ಮಾಡಲು ಈರಯ್ಯನ ಮಕ್ಕಳು ಟ್ರ್ಯಾಕ್ಟರ್ ಸಮೇತ ಬಂದಿದ್ದು ವಿಷಯ ತಿಳಿದು ಅಲ್ಲಿಗೆ ಪ್ರತಾಪ್, ತಾಯಿ ಚನ್ನಮ, ಚಿಕ್ಕಪ್ಪನ ಮಗ ಬಸವರಾಜ, ಸ್ನೇಹಿತ ಹೇಮಂತ್ ಅವರು ಜಮೀನಿಗೆ ಬಂದು ವಾಗ್ವಾದ ನಡೆಸಿದ್ದಾರೆ.
ಎರಡೂ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮೂವರು ಸೇರಿ ಪ್ರತಾಪ್ನನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್

ಹಾಸನ: ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ. ತಮ್ಮ ಮಕ್ಕಳು ಎಷ್ಟೇ ದೊಡ್ಡ ಮಟ್ಟದ ಹುದ್ದೆಯಲ್ಲಿದ್ದರೂ ಕುಟುಂಬ ಸಮುದಾಯದ ವಿಚಾರ ಬಂದಾಗ ಸಂಸ್ಕಾರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಬಿ.ಆರ್. ಗುರುದೇವ್ ತಿಳಿಸಿದರು.
ನಗರದ ಸಾಲಗಾಮೆ ರಸ್ತೆಯಲ್ಲಿರುವ ರೆಡ್ ಕ್ರಾಸ್ ಸಭಾಂಗಣದಲ್ಲಿ ಇಂದು(ಏಪ್ರಿಲ್.26) ಆಯೋಜಿಸಲಾಗಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸಮುದಾಯ ಅಭಿವೃದ್ಧಿ ಪಥದತ್ತ ಸಾಗಲು ಒಗ್ಗಟ್ಟು ಬಹಳ ಮುಖ್ಯ. ಈ ನಿಟ್ಟಿನಲ್ಲಿ ವೀರಶೈವ ಸಮುದಾಯದ ಅಭಿವೃದ್ಧಿ ಹಾಗೂ ತಮ್ಮ ಬೇಡಿಕೆಗಳ ಈಡೇರಿಕೆಗೆ ಸಂಘಟನೆ ಬಹಳ ಮುಖ್ಯ. ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ. ತಮ್ಮ ಮಕ್ಕಳು ಎಷ್ಟೇ ದೊಡ್ಡ ಮಟ್ಟದ ಹುದ್ದೆಯಲ್ಲಿದ್ದರೂ ಕುಟುಂಬ ಸಮುದಾಯದ ವಿಚಾರ ಬಂದಾಗ ಸಂಸ್ಕಾರಕ್ಕೆ ಮೊದಲ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ವೀರಶೈವ ಮಹಾಸಭಾ ಕೆಲಸ ಮಾಡಬೇಕು ಎಂದರು.
ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ವಚನಗಳನ್ನು ಬೋಧಿಸುವುದು ಅವುಗಳ ಅರ್ಥವನ್ನು ಅರ್ಥೈಸುವುದು ಹಾಗೂ ಎಲ್ಲರೂ ಒಂದೆಡೆ ಸೇರಿ ಬುದ್ಧಿಜೀವಿಗಳಿಂದ ವಿಚಾರಗಳನ್ನು ಹಂಚಿಕೊಳ್ಳುವುದು ಹೀಗೆ ಒಗ್ಗಟ್ಟಿನ ಮಂತ್ರ ಪಠಿಸುವ ಅಗತ್ಯವಿದೆ. ಅಖಿಲ ಭಾರತ ವೀರಶೈವ ಮಹಾಸಭ ಸ್ಥಾಪನೆಯಾಗಿ 104 ವರ್ಷಗಳು ಕಳೆದಿವೆ. ಆದರೆ ಇನ್ನೂ ಹೆಚ್ಚಿನ ಸಂಘಟನೆಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಇಂದಿನ ಜನಾಂಗ ಹಿರಿಯರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಕೆಲಸಗಳಾಗಬೇಕು. ಸಂಘ- ಸಮುದಾಯಕ್ಕೆ ನಮ್ಮ ಪೂರ್ವಜರಲ್ಲಿ ಹಲವರು ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಅವರನ್ನು
ಸ್ಮರಿಸದೆ ಇರುವುದು ನಮ್ಮ ದೌರ್ಭಾಗ್ಯ. ಅವರ ಅವಿರತ ಶ್ರಮದಿಂದ ಇಂದು ಸಮುದಾಯ ಪ್ರಗತಿಯತ್ತ ಆಗುತ್ತಿದೆ ಆದುದರಿಂದ ಹಿರಿಯರನ್ನು ನೆನಪಿಸಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಅಧ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಹಾಸನ ತಾಲ್ಲೂಕು ವೀರಶೈವ ಲಿಂಗಾಯತ ಮಹಸಭಾ ಅಧ್ಯಕ್ಷ ಕಟ್ಟಾಯ ಶಿವಕುಮಾರ ಮಾತನಾಡಿ, ವೀರಶೈವ ಲಿಂಗಾಯತ ಮಹಾಸಭಾ ಶತಮಾನೋತ್ಸವ ಪೂರೈಸಿದ ಮಹಾಸಭೆಗೆ ನಾಡಿನ ಪ್ರಮುಖ ಗಣ್ಯರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಸಂಘಟನೆ ಒತ್ತು ನೀಡುವ ಸಮುದಾಯದ ಮೇಲೆ ಕೆಲ ಪಟ್ಟಭದ್ರರು ದುರುದ್ದೇಶದಿಂದ ಜಾತಿಗಣತಿಯಲ್ಲಿ ಜನಾಂಗದ ಸಂಖ್ಯೆಯನ್ನು ಇಳಿಮುಖ ಮಾಡುವ ಮೂಲಕ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದರು.
ಈಗಾಗಲೇ ಮಹಾಸಭಾ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ವೀರಶೈವ ಲಿಂಗಾಯತ ಜನಾಂಗ ತಮ್ಮ ಒಳ ಪಂಗಡಗಳನ್ನು ಮರೆತು ಒಗ್ಗಟ್ಟು ಪ್ರದರ್ಶನ ಅನಿರ್ವಾಯತೆದ್ದು, ಹಾಸನ ಜಿಲ್ಲೆಯಲ್ಲಿ ಕೂಡ ಮಹಾಸಭಾ ಸಕ್ರಿಯಾಗಿದ್ದು, ಮಹಿಳಾ ಘಟಕ ಕೂಡ ಉತ್ತಮವಾಗಿ ಮುಂದಿನ ಕೆಲಸ ಮಾಡಲಿ ಎಂದು ನೂತನ ಪದಾಧಿಕಾರಿಗಳಿಗೆ ಹಾರೈಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷರಾದ ಬಿ.ಮುಕ್ತಾಂಬಾ ಮಾತನಾಡಿ, ಹೆಣ್ಣ ಮನೆಯ ಕಣ್ಣು ಹಾಗೇಯೆ ಸಮಾಜಕ್ಕೆ ದೊಡ್ಡ ಶಕ್ತಿಯಾಗಿದೆ. ಬಸವಣ್ಣನವರು ಮಹಿಳೆ ಮೊದಲು ಸಮಾನತೆ ನೀಡಿದ ಮಾಹನ್ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.
ಇತ್ತೀಚಿನ ದಿನದಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾಳೆ. ಆದರೂ ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿರುವುದು ನಿಜಕ್ಕೂ ಶೋಚನೀಯ. ಗಂಡು ಹೆಣ್ಣು ಸಮಾಜದ ಯುವ ಶಕ್ತಿ, ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಸಮಾನತೆ ಕೊರತೆ ಇದೆ. ಒಳ ಪಂಗಡಗಳನ್ನು ಮರೆತರೆ ಮಾತ್ರ ವೀರಶೈವ ಲಿಂಗಾಯತ ಸಮಾಜ ಪ್ರಭಲವಾಗಲಿದೆ ಎಂದ ಅವರು ಸಮಾನತೆ ನೀಡಿದ ಸಮಾಜದವರು ನಮಗೆ ಮೀಸಲಾತಿಗೆ ಹೋರಾಟ ನಡೆಯುತ್ತಿದೆ.ಮಹಿಳಾ ಘಟಕ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಮನೋಹರ ಅಬ್ಬಿಗೆರೆ ಮಾತನಾಡಿ, ಹಾನಗಲ್ ಶ್ರೀಗಳು ಸ್ಥಾಪಿಸಿದ ವೀರಶೈವ ಲಿಂಗಾಯತ ಮಹಾಸಭಾ ಇನ್ನೂ ಹೆಚ್ಚಿನ ಸಂಘಟನೆಗೆ ಒತ್ತು ನೀಡಲು ಯುವಕರು ಇಂತಹ ಕಾರ್ಯಕ್ರಮಕ್ಕೆ ಆಗಮಿಸಬೇಕಿದೆ. ಆಗ ಮಾತ್ರ ಸಂಘಟನೆ ಸಾಧ್ಯ, ಸಿದ್ದಗಂಗಾ ಶ್ರೀಗಳ ರೀತಿಯಲ್ಲಿ ಸೌಹಾರ್ದತೆ ಬಾಳು ನಮ್ಮದಾಗಲಿ, ಪ್ರತಿ ಮನೆ ಮನೆಯಲ್ಲಿ ಕಡ್ಡಾಯವಾಗಿ ಸದಸ್ಯತ್ವ ನೊಂದಣಿ ಮಾಡಿ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಲು ಮುಂದಾಗಿ ಎಂದು ತಿಳಿಸಿದರು.
ಹಾಸನ ತಾಲ್ಲೂಕು ವೀರಶೈವ ಲಿಂಗಾಯತ ಮಹಿಳಾ ಘಟಕ ನೂತನ ಅಧ್ಯಕ್ಷೆ ಮಮತಾ ಪಾಟೀಲ್ ಮಾತನಾಡಿ, ಮಹಿಳಾ ಘಟಕದಿಂದ ಮೊದಲಿಗೆ ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ನಡೆಸಲಾಗುತ್ತದೆ. ಆರೋಗ್ಯ, ಶಿಕ್ಷಣ, ಪರಿಸರ, ದಾರ್ಮಿಕ ಸೇವೆ ಮಾಡುವ ಭರವಸೆ ನೀಡಲಾಗುತ್ತದೆ. ನಮ್ಮನ್ನು ಗುರುತಿಸಿ ಅಧ್ಯಕ್ಷ ಸ್ಥಾನ ನೀಡಿದ ಕಟ್ಟಾಯ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತನೆ. ಬಸವ ಮತ್ತು ರೇಣುಕರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಲು ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ತಿಳಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಸನ ತಾಲ್ಲೂಕು ಮಹಿಳಾ ಘಟಕದ ಪದಗ್ರಹಣ ಸಮಾರಂಭವನ್ನು ವೇದಿಕೆ ಮೇಲಿನ ಗಣ್ಯರು ಉದ್ಘಾಟನೆ ನಡೆಸಿದರು.
ಇದೇ ವೇಳೆ ನೂತನವಾಗಿ ಆಯ್ಕೆಯಾದ ಮಹಿಳಾ ಪದಾಧಿಕಾರಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸುವ ಜೊತೆಗೆ, ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೇ ಸಮುದಾಯ ಕಟ್ಟುವ ನಿಟ್ಟಿನಲ್ಲಿ ತಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ನಮ್ಮೆಲ್ಲರ ಸಹಮತ ಇದೆ ಎಂದು ಎಲ್ಲಾ ಸದಸ್ಯರು ಒಮ್ಮತದ ಅಭಿಪ್ರಾಯ ಸೂಚಿಸಿದರು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಹಿರಿಯ ಸದಸ್ಯರಾದ ಗುರುನಾಥ್, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಉಪಾಧ್ಯಕ್ಷರಾದ ಆಶಾದೇವಿ, ಶೀಲಾ ವಿಶ್ವನಾಥ್, ಎಂ.ಬಿ. ಗಿರಿಜಾಂಬಿಕ, ಧನಲಕ್ಷ್ಮಿ, ಶೊಭ ಚಂದ್ರಶೇಖರ್, ಹೆಚ್,ಎಂ. ಇಂದಿರಾ, ಬೇಲೂರು ತಾಲ್ಲೂಕು ಉಪಾಧ್ಯಕ್ಷೆ ಗೀತಾ ಪುಟ್ಟಸ್ವಾಮಿ, ಶೋಭ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Hassan
ಮರು ಮೌಲ್ಯಮಾಪನದ ನಂತರವೂ ಸೆಂಟ್ರಲ್ ಕಾಮರ್ಸ್ ಕಾಲೇಜು ಜಿಲ್ಲೆಗೆ ಪ್ರಥಮ

ಹಾಸನ : 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ಸತತ 8ನೇ ವರ್ಷ ಶೇ.100 ರಷ್ಟು ಫಲಿತಾಂಶ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ಸೆಂಟ್ರಲ್ ಕಾಮರ್ಸ್ ಕಾಲೇಜು ಮರು ಮೌಲ್ಯಮಾಪನದ ನಂತರ ಫಲಿತಾಂಶ ಉತ್ತಮಪಡಿಸಿಕೊಂಡಿದ್ದಲ್ಲದೇ ಹಾಸನ ಜಿಲೆಯಲ್ಲಿ ತನ್ನ ಅಧಿಪತ್ಯ ಮುಂದುವರೆಸಿದೆ.
ಮರುಮೌಲ್ಯಮಾಪನದ ನಂತರ ಕಾಲೇಜಿನ ಗಗನ್ ಗೌಡ ಪಿ. 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 4ನೇ Rank, ಸ್ಪೂರ್ತಿ ಎಸ್. 595 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ 5ನೇ Rank ಹಾಗೂ ರಾಜಶೇಕರಯ್ಯ 593 ಅಂಕಗಳನ್ನು ಪಡೆದು ಜಿಲೆಗೆ 3ನೇ ಸ್ಥಾನ ಹಾಗೂ ರಾಜ್ಯಕ್ಕೆ 7ನೇ Rank ಪಡೆದಿರುತ್ತಾರೆ.
ಕಾಮರ್ಸ್ ವಿಭಾಗದಲ್ಲಿ ಜಿಲ್ಲೆಯ ಪ್ರಥಮ 10 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಸೆಂಟ್ರಲ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿಗಳೇ ಪಡೆದಿರುವುದು ಹಾಗೂ ರಾಜ್ಯದ ಪ್ರಥಮ 10 ಸ್ಥಾನಗಳಲ್ಲಿ ಕಾಲೇಜಿನ 6 ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ. ಉತ್ತಮ ಫಲಿತಾಂಶ ಪಡೆದ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಾಂಶುಪಾಲೆ ಶ್ರೀಮತಿ ಪರಿಮಳ ಮಹೇಶ್ ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.
-
State10 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized6 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore11 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Hassan5 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Hassan3 hours ago
ಜಮೀನು ವಿಚಾಕ್ಕೆ ಕೊಲೆ
-
Kodagu6 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ