Connect with us

Uncategorized

ರಾಜ್ಯ ಸರ್ಕಾರ ಹಾಲು ಉತ್ಪಾಧಕ ರೈತರಿಗೆ 67 ಕೋಟಿ. ರೂ ಬಾಕಿ ಉಳಿಸಿಕೊಂಡಿದೆ – ಮನ್ ಮುಲ್ ಉಪಾಧ್ಯಕ್ಷ ರಘುನಂದನ್ ಆರೋಪ

Published

on

ಮಂಡ್ಯ : ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮಂಡ್ಯ ಜಿಲ್ಲಾ ಜೆಡಿಎಸ್ ವಕ್ತಾರ ಹಾಗೂ ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಆಗ್ರಹ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಿಂದಿನ ಸರ್ಕಾರ ರೈತರಿಗೆ ಗುಣಮಟ್ಟದ ಹಾಲು ಸರಬರಾಜು ಮಾಡುವ ಉತ್ಪಾದಕರಿಗೆ ಪ್ರತಿ ಲೀಟರ್ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿತ್ತು. ಆದರೆ ಇತ್ತೀಚೆಗೆ ಕಾಂಗ್ರೆಸ್ ಸರ್ಕಾರ ಹೈನುಗಾರಿಕೆಗೆ ಹೊಡೆತ ಬೀಳುವ ಹಾಗೆ ನಿರ್ಧಾರ ಕೈಗೊಂಡಿದೆ ಎಂದು ದೂರಿದರು.

ಹಾಲು ಉತ್ಪಾದಕರಿಗೆ ಸರಿಯಾದ ಸಮಯದಲ್ಲಿ ಪ್ರೋತ್ಸಾಹ ಧನ ನೀಡುತ್ತಿಲ್ಲ. ರಾಜ್ಯದಲ್ಲಿ 600 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಬೇಕಿದ್ದು, ಇದರಲ್ಲಿ ಮಂಡ್ಯ ಜಿಲ್ಲೆಗೆ 67 ಕೋಟಿ ರೂಪಾಯಿ ಕೊಡಬೇಕಾಗಿದೆ. ಆದ್ದರಿಂದ ತಕ್ಷಣವೇ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ದನವನ್ನು ವಿತರಿಸಬೇಕು ಎಂದು ಆಗ್ರಹ ಪಡಿಸಿದರು .

ಮಂಡ್ಯ ಜಿಲ್ಲೆಯಲ್ಲಿರುವ ಸಹಕಾರ ಇಲಾಖೆ ಅಧಿಕಾರಿಗಳು ಮಂಡ್ಯ ಉಪ ವಿಭಾಗ ಹಾಗೂ ಪಾಂಡವಪುರ ವಿಭಾಗದ ಅಧಿಕಾರಿಗಳು ಸರ್ಕಾರದ ಕೈ ಗೊಂಬೆಯಂತೆ ವರ್ತಿಸುತ್ತಿದ್ದಾರೆ. ಜಾತ್ಯಾತೀತ ಜನತಾದಳ ಮತ್ತು ಭಾರತೀಯ ಜನತಾಪಕ್ಷದ ಆಡಳಿತವಿರುವ ಸಹಕಾರ ಸಂಘಗಳಲ್ಲಿ ಮನಸ್ಸು ಇಚ್ಛೆ ಬಂದ ಹಾಗೆ ನಿರ್ದೇಶಕರನ್ನು ವಜಾ ಮಾಡಲಾಗುತ್ತಿದೆ ಎಂದು ಆರೋಪಿಸಿದರು .

ಸಹಕಾರ ಸಂಘಗಳನ್ನು ವಜಾ ಮಾಡುವುದರ ಮುಖಾಂತರ ಕಾಂಗ್ರೆಸ್ ಕೈಗೊಂಬೆಗಳಾಗಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ.

ಇದು ಸಹಕಾರ ತತ್ವ ನಿಯಮಗಳು ಮತ್ತು ಕಾಯಿದೆಗೆ ವಿರುದ್ಧವಾಗಿದೆ ಎಂದು ಕಿಡಿ ಕಾರಿದರು .

ಇದೇ ರೀತಿ ಸಂಘಗಳನ್ನು ನಿರ್ದೇಶಕರನ್ನು ವಜಾ ಮಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ಸಹಕಾರ ಇಲಾಖೆಯಲ್ಲಿ ಅನವಶ್ಯಕ ರಾಜ್ಯ ಸರ್ಕಾರದ ಹಸ್ತಕ್ಷೇಪ ಹಾಗೂ ಪ್ರಭಾವಕ್ಕೆ ಒಳಗಾಗಿ ಸಹಕಾರ ಸಂಘಗಳ ಇಲ್ಲದಂತಾಗುತ್ತದೆ. ಆದ್ದರಿಂದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು .

ಡಿ.ಆರ್ ಮತ್ತು ಎ.ಆರ್ ರಾಜಕೀಯ ಪ್ರೇರಿತವಾಗಿ ಕಾನೂನು ತತ್ವ ಸಿದ್ಧಾಂತ ಪಾಲಿಸದೆ ಜೆಡಿಎಸ್ ಮತ್ತು ಬಿಜೆಪಿ ನಿರ್ದೇಶಕರು ಇರುವ ಸಂಘವನ್ನು ವಜಾ ಮಾಡುತ್ತಿದ್ದಾರೆ. ರಾಮಚಂದ್ರು, ರೂಪ ಸೇರಿದಂತೆ ಇತರರನ್ನು ವಜಾ ಮಾಡಿದ್ದು, ಆದರೆ ನ್ಯಾಯಾಲಯ ಇದಕ್ಕೆ ತಡೆಯಾಜ್ಞೆ ನೀಡಿದೆ ಎಂದು ತಿಳಿಸಿದರು.

ಕಾಳೇಗೌಡ ಅವರು ಮಾತನಾಡಿ, ಹಿಂದಿನ ಆಡಳಿತ ಮಂಡಳಿಯ ವೈಫಲ್ಯವನ್ನು ಮುಚ್ಚಿಡಲಾಗುತ್ತಿದೆ. ನಮ್ಮ ಕೆಲಸಗಳನ್ನು ಮಾಡಿಕೊಡಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಆದರೆ ಚುನಾವಣೆ ವಿಚಾರದಲ್ಲಿ ಮಾತ್ರ ನಮ್ಮನ್ನು ಗುರಿಯಾಗಿಟ್ಟುಕೊಂಡು ತೊಂದರೆ ನೀಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು .

ಗೋಷ್ಟಿಯಲ್ಲಿ ರಾಮಚಂದ್ರ, ರೂಪ, ನೆಲ್ಲಿಗೆರೆ ಬಾಲು, ವಸಂತ್ ಕುಮಾರ್ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Uncategorized

ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ‌ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ

Published

on

ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ‌ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ

ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ರೂವಾರಿಗಳಿಗೆ ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ, ನೆಲಯೋಗಿ ಸಮಾಜಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಸುರೇಶ್‌ಕಂಠಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭವು ಜನವರಿ ೨೬ರ ಸಂಜೆ.೦೬ಕ್ಕೆ ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ, ಅಭಿನಂದಿತರನ್ನು ಅಭಿನಂದಿಸುವರು ಎಂದು ಹೇಳಿದರು.

ಅಭಿನಂದಿತರಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಎ.ಬಿ.ರಮೇಶ್‌ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ.ಮಂಜು, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ, ಸಮ್ಮೇಳನದ ಸಂಚಾಲಕರಾಗಿದ್ದ ಡಾ.ಮೀರಾ ಶಿವಲಿಂಗಯ್ಯ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ಸಂಚಾಲಕ ಕೆ.ಹೆಚ್.ಲವ, ಕಾಂಗ್ರೆಸ್ ಪರಿಶಿಷ್ಠ ಜಾತಿ ರಾಜ್ಯ ಉಪಾಧ್ಯಕ್ಷ ತಿಬ್ಬನಹಳ್ಳಿ ರಮೇಶ್, ಮುಖಂಡ ಮಹದೇವು, ವೀಣಾ ಶಂಕರ್, ಶ್ರೀಧರ್ ಉಪಸ್ಥಿತರಿದ್ದರು.

Continue Reading

Uncategorized

ಸಾಯಿ ಶಂಕರ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ದಿನಾಚರಣೆ

Published

on

ಪೊನ್ನಂಪೇಟೆ : ಪೊನ್ನಂಪೇಟೆ ಸಾಯಿ ಶಂಕರ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ದಿನಾಚರಣೆ ನಡೆಸಲಾಯಿತು. ಕ್ರೀಡಾ ದಿನಾಚರಣೆಯ ಅಧ್ಯಕ್ಷತೆಯನ್ನು ಸಾಯಿ ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೊಳೆರ ಝರು ಗಣಪತಿ ವಹಿಸಿದ್ದರು. ನಂತರ ಅಧ್ಯಕ್ಷೀಯ ನುಡಿಯಾಡಿದ ಅವರು, ಕ್ರೀಡೆಗಳು ಸಣ್ಣಪ್ರಾಯದಲ್ಲೇ ಶಾಲಾ ವಾತಾವರಣದಲ್ಲಿ ಮಕ್ಕಳಲ್ಲಿ ಅನ್ಯೂನತೆಯನ್ನು ಬೆಳೆಸಿ ಸಹಕಾರ ಮನೋಭಾವನೆಯನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಯಿ ಶಂಕರ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಆಕರ್ಷಕವಾದ ಕವಾಯತ್ತು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವೇದಿಕೆಯಲ್ಲಿ ಸಾಯಿ ಶಂಕರ್ ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ ರಮ್ಯ, ಮುಖ್ಯೋಪಾಧ್ಯಾಯನಿ ನಿವ್ಯ, ರೀನಾ ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕಿ ಮಾಲಾ ಸ್ವಾಗತಿಸಿ ಬಿ .ಇಡಿ ಕಾಲೇಜಿನ ಪ್ರಾಂಶುಪಾಲ ಪಿ.ಎ ನಾರಾಯಣ ವಂದಿಸಿದರು. ಸಂಸ್ಥೆಯ ಶಿಕ್ಷಕಿ ಭವಾನಿ ಮತ್ತು ರೇಷ್ಮಾ ನಿರೂಪಿಸಿದರು.

Continue Reading

Uncategorized

ಅಕ್ರಮ ಬಾಂಗ್ಲಾ ವಲಸಿಗರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಠವಾಗುವ ಸಾಧ್ಯತೆ: ಕವನ್ ಗೌಡ

Published

on

ಹಾಸನ: ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಇದು ಪ್ರತಿಕೂಲ ಪರಿಣಾಮ ಬೀರಲಿದೆ. ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ವಕೀಲ ಕವನ್ ಗೌಡ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತಾಡಿದ ಅವರು, ಆಲೂರು, ಸಕಲೇಶಪುರ, ಬೇಲೂರು ಸೇರಿದಂತೆ ಮಲೆನಾಡಿನ ವಿವಿದೆಡೆ ಕೂಲಿ ಕಾರ್ಮಿಕರ ಹೆಸರಿನಲ್ಲಿ ಬಂದು ಇಲ್ಲೇ ಬಾಡಿಗೆ ಮನೆ ಪಡೆದು ವ್ಯಾಪಾರ ವಹಿವಾಟುಗಳನ್ನು ಪಡೆದುಕೊಂಡು ಹಂತಃ ಹಂತವಾಗಿ ಆಧಾರ್ ಕಾರ್ಡ್, ಓಟರ್ ಐಡಿ ಪಡೆದು ಭಾರತ ದೇಶದ ಪ್ರಜೆಯಾಗಿ ಇಲ್ಲೇ ನೆಲೆಸುವ ತಂತ್ರಗಾರಿಕೆ ನಡೆಯುತ್ತಿದೆ. ಕಾನೂನು ಪ್ರಕಾರ ವಿದೇಶಿಗರಿಗೆ ಭಾರತ ದೇಶದಲ್ಲಿ ನೆಲೆಸಲು ಅವಕಾಶ ಇಲ್ಲ, ಆದರೂ ನುಸುಳು ಕೋರರು ಈಗಾಗಲೇ ಒಳ ನುಸುಳಿದ್ದಾರೆ, ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಿ ಅವರ ಬಗ್ಗೆ ತನಿಖೆ ನಡೆಸಿ ಅಗತ್ಯ ದಾಖಲೆಗಳು ಇಲ್ಲದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದರೆ ದೇಶಿಯರಿಗೆ ಮುಂದಿನ ದಿನಗಳಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದರು.

ವಲಸಿಗರು ಈಗಾಗಲೇ ಬಾಡಿಗೆ ಮನೆ ಪಡೆದುಕೊಂಡು ಕರಾರು ಪತ್ರ ಪಡೆದುಕೊಂಡು ಹಂತ ಹಂತವಾಗಿ ಭಾರತೀಯ ಪ್ರಜೆಯಾಗಿ ಉಳಿಯುವ ಒಳಸಂಚು ನಡೆದಿದೆ, ಇದನ್ನು ನಿರ್ಲಕ್ಷ್ಯ ಮಾಡುವುದು ಬೇಡ ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಅಕ್ರಮ ಬಾಂಗ್ಲಾ ವಲಸಿಗರು ಕಂಟಕ ವಾಗಲಿದ್ದಾರೆ ಈ ಬಗ್ಗೆ ಎಚ್ಚರ ಅಗತ್ಯವಾಗಿದೆ ಎಂದು ಹೇಳಿದರು.

ಈ ವಿಚಾರವಾಗಿ ಕಾಫಿ ಬೆಳೆಗಾರರು ಹಾಗೂ ಪೊಲೀಸ್ ಇಲಾಖೆಯ ಬಹುದೊಡ್ಡ ಜವಾಬ್ದಾರಿ ಇದೆ, ಆರಂಭದಲ್ಲಿಯೆ ಮುಂದಾಗಬಹುದಾದ ಅನಾಹುತಗಳಿಗೆ ಕಡಿವಾಣ ಹಾಕದಿದ್ದರೆ. ಭಾರತೀಯ ಪ್ರಜೆಗಳಿಗೆ ಸಮಸ್ಯೆ ಅಗಳಿವೆ ಜೊತೆಗೆ ದೇಶೀಯ ಪ್ರಜೆಗಳ ಹಕ್ಕು ಬಾಧ್ಯತೆಗಳನ್ನು ಕಿತ್ತುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಇದೆ ರೀತಿಯ ಸಮಸ್ಯೆ ಉಂಟಾದಾಗ ಅಲ್ಲಿನ ಎಸ್ಪಿ ಎಚ್ಚೆತ್ತುಕೊಂಡು ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಅದೇ ರೀತಿ ಹಾಸನಲ್ಲಿ ಕೂಡ ಸ್ಥಳೀಯ ಪೊಲೀಸ್ ಠಾಣೆ ಹಂತದಲ್ಲಿ ಅವರ ದಾಖಲೆ ಪರಿಶೀಲನೆ ಮಾಡುವ ಕೆಲಸಗಳು ಆಗಬೇಕಿದೆ ಎಂದು ಸಲಹೆ ನೀಡಿದರು.

Continue Reading

Trending

error: Content is protected !!