Connect with us

National - International

7th Pay Commisson DA Arrears: ಕೇಂದ್ರ ನೌಕರರಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಗುಡ್ ನ್ಯೂಸ್ -ಖಾತೆಗೆ ಜಮಾ ಆಗಲಿದೆ ಇಷ್ಟು ಹೆಚ್ಚಿಗೆ ಮೊತ್ತ !!

Published

on

7th Pay Commisson DA Arrears: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸರ್ಕಾರ ಶೀಘ್ರದಲ್ಲೇ ಡಿಎ ಬಾಕಿ ಬಿಡುಗಡೆ (7th Pay Commisson DA Arrears) ಮಾಡಲಿದೆ ಎನ್ನಲಾಗಿದೆ. ಸುಮಾರು 1 ಕೋಟಿ ಉದ್ಯೋಗಿಗಳು ಇದರ ಲಾಭ ಪಡೆಯಲಿದ್ದಾರೆ.

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಸರ್ಕಾರ ನೀಡಿರಲಿಲ್ಲ. ಇದೀಗ ಮೋದಿ ಸರ್ಕಾರವು 1 ಜನವರಿ 2020 ರಿಂದ 30 ಜೂನ್ 2021 ರವರೆಗಿನ ಡಿಎ ಬಾಕಿಯನ್ನು ನೌಕರರ ಖಾತೆಗಳಿಗೆ ಜಮಾ ಮಾಡಿಲ್ಲ. ಈ ಡಿಎ ಬಾಕಿಯನ್ನು ನೀಡುವಂತೆ ನೌಕರರು ಬಹಳ ದಿನಗಳಿಂದ ಮನವಿ ಮಾಡುತ್ತಿದ್ದಾರೆ.

ಒಂದುವೇಳೆ ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವ ಮುನ್ನ, ಕೊರೊನಾ ಅವಧಿಯ 18 ತಿಂಗಳ ಡಿಎ ಬಾಕಿಯನ್ನು ಸರ್ಕಾರಿ ನೌಕರರಿಗೆ ನೀಡಿದರೆ, ಉನ್ನತ ಹುದ್ದೆಯಲ್ಲಿರುವ ನೌಕರರ ಖಾತೆಗೆ ಸುಮಾರು 2 ಲಕ್ಷ 18 ಸಾವಿರ ರೂ. ಜಮಾ ಆಗಬಹುದು. ಇದರಿಂದ ಉದ್ಯೋಗಿಗಳಿಗೆ ಭಾರೀ ಲಾಭವಾಗಲಿದೆ.

ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ಪರಿಸ್ಥಿತಿಯಲ್ಲಿ, ಕೇಂದ್ರ ಸರ್ಕಾರಿ ನೌಕರರ ಬೆಂಬಲವನ್ನು ಪಡೆಯಲು ಸರ್ಕಾರವು ಅವರ ಬಹುಕಾಲದ ಬೇಡಿಕೆಗಳಾದ ಡಿಎ ಬಾಕಿ ಮೊತ್ತ, ಫಿಟ್‌ಮೆಂಟ್ ಅಂಶವನ್ನು ಈಡೇರಿಸಬಹುದು ಎಂದು ನಿರೀಕ್ಷಿಸಲಾಗಿದೆ. ಸರ್ಕಾರದ ಮೂಲಗಳ ಪ್ರಕಾರ ಹೊಸ ವರ್ಷಕ್ಕೂ ಮುನ್ನ ಸರ್ಕಾರ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಲೆಕ್ಕಾಚಾರ ಪ್ರಕಾರ, ಕೇಂದ್ರ ಸರ್ಕಾರಿ ನೌಕರರಿಗೆ ಫಿಟ್‌ಮೆಂಟ್ ಅಂಶವು 2.60 ರಿಂದ 3.0 ಪಟ್ಟು ಹೆಚ್ಚಾಗಬಹುದು ಎಂದು ಸೂಚಿಸುತ್ತದೆ. ಫಿಟ್‌ಮೆಂಟ್ ಅಂಶದ ಬಗ್ಗೆ ಸರ್ಕಾರ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೆ ಮಾಧ್ಯಮ ವರದಿಗಳು ಶೀಘ್ರದಲ್ಲೇ ಹೆಚ್ಚಳವಾಗಲಿದೆ ಎಂದು ಸೂಚಿಸುತ್ತದೆ.

National - International

ಆಕ್ಸಿಯಮ್‌-4 ಯಶಸ್ವಿ ಲ್ಯಾಂಡ್: ಬ್ಯಾಹಾಕಾಶದಿಂದ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ ಟೀಂ

Published

on

ಕ್ಯಾಲಿಫೋರ್ನಿಯಾ:  ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಇನ್ನಿತರ ನಾಲ್ವರು ಗಗನಯಾತ್ರಿಗಳು ಇದೀಗ  ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಯಶಸ್ವಿಯಾಗಿ ಬಂದಿಳಿದ್ದಾರೆ.

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ 18 ದಿನಗಳನ್ನುಕಳೆದು ಇದೀಗ ಹಿಂದಿರುಗಿದ್ದು, ಎಲ್ಲೆಡೆ ಸಂತಸ ಮನೆ ಮಾಡಿದೆ. ಜುಲೈ. 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ಬಳಿಕ ತಂಡವೂ ಈಗ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಪೆಸಿಫಿಕ್ ಮಹಾಸಾಗರದಲ್ಲಿ ಸ್ಪ್ಲಾಶ್‌ಡೌನ್ ಮಾಡಿದೆ.

ಭಾರತೀಯ ಗ್ರೂಪ್ ಕ್ಯಾ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ ನ ಮಿಷನ್ ಸ್ಪೆಷಲಿಸ್ಟ್ ಸ್ಲಾವೋಸ್ಜ್ ಉಜ್ನಾನ್ಸ್ಕಿ, ಹಂಗೇರಿಯಾದ ಗಗನಯಾನಿ ಟಿಬೋರ್ ಕಾಪು ಅವರು ಭೂಮಿ ಮೇಲೆ ಲ್ಯಾಂಡ್ ಆಗಿದ್ದಾರೆ. ಆಕ್ಸಿಯಮ್ ಯೋಜನೆ ಯಶಸ್ವಿಯಾಗಿದ್ದು, ಸುರಕ್ಷಿತವಾಗಿ ಗಗನಯಾನಿಗಳು ಭೂಮಿಗೆ ತಲುಪಿದ್ದಾರೆ.

ಇನ್ನು  ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶಕ್ಕೆ ನೌಕೆ ಬಂದಿಳಿದಿದೆ. ಈ ಖುಷಿ ಕ್ಷಣವನ್ನು ಶುಭಾಂಶು ಶುಕ್ಲಾ ಪೋಷಕರು ಕಣ್ತುಂಬಿಕೊಂಡಿದ್ದು ಭಾವುಕರಾಗಿದ್ದಾರೆ.

Continue Reading

National - International

ಸಾಂಸ್ಕೃತಿಕ ಸಂಪರ್ಕದ ವಿಷಯಕ್ಕೆ ಬಂದಾಗ ದೂರವು ಅಡ್ಡಿಯಲ್ಲ: ಪ್ರಧಾನಿ ಮೋದಿ

Published

on

ಬ್ಯೂನಸ್‌ ಐರಿಸ್‌/ನವದೆಹಲಿ: ಅರ್ಜೆಂಟಿನಾಗೆ ಬಂದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಲಿನ ಭಾರತೀಯ ವಲಸಿಗರು ಸಾಂಪ್ರದಾಯಿಕ ನೃತ್ಯದ ಮೂಲಕ ವಿಶೇಷ ಸ್ವಾಗತ ಕೋರಿದ್ದಾರೆ. ಹೀಗಾಗಿ ಅವರ ಸ್ವಾಗತಕ್ಕೆ ಮೋದಿ ಅವರು ಸಂತಸಗೊಂಡು ಸಾಂಸ್ಕೃತಿಕ ಸಂಪರ್ಕದ ವಿಷಯಕ್ಕೆ ಬಂದಾಗ ದೂರವು ಅಡ್ಡಿಯಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಬ್ಯೂನಸ್ ಐರಿಸ್‌ನಲ್ಲಿರುವ ಭಾರತೀಯ ಸಮುದಾಯದಿಂದ ದೊರೆತ ಆತ್ಮೀಯ ಸ್ವಾಗತದಿಂದ ಗೌರವಿಸಲ್ಪಟ್ಟಿದೆ. ಮನೆಯಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ನಮ್ಮ ಭಾರತೀಯ ಸಮುದಾಯದ ಮೂಲಕ ಭಾರತದ ಚೈತನ್ಯವು ಹೇಗೆ ಪ್ರಕಾಶಮಾನವಾಗಿ ಹೊಳೆಯುತ್ತದೆ ಎಂಬುದನ್ನು ನೋಡುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿದೆ ಎಂದು ಹೇಳಿದ್ದಾರೆ.

Continue Reading

National - International

ಟಾಪ್‌ 100 ಬ್ರ್ಯಾಂಡ್‌ಗಳಲ್ಲಿ ಕನ್ನಡಿಗರ ನಂದಿನಿಗೆ 4ನೇ ಅಗ್ರ ಶ್ರೇಯಾಂಕ

Published

on

ಬೆಂಗಳೂರು: ರಾಜ್ಯದ ಸಹಕಾರಿ ಹಾಲು ಮಾರಾಟ ಮಹಾಮಂಡಳದ ಬ್ರ್ಯಾಂಡ್‌ ಆಗಿರುವ ನಂದಿನಿಯೂ ಇದೀಗ ದೇಶದ ಆಹಾರ ಮತ್ತು ಪಾನೀಯ ಉತ್ಪನ್ನಗಳ ಮಾರಾಟ ವಹಿವಾಟಿನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, 4ನೇ ಅಗ್ರ ಶ್ರೇಯಾಂಕವನ್ನು ಪಡೆದು ತನ್ನ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿಕೊಂಡಿದೆ.

ವಿಶ್ವದ ಮುಖ್ಯ ಬ್ರ್ಯಾಂಡ್‌ ಮೌಲ್ಯಮಾಪನ ಸಂಸ್ಥೆಯಾದ ಬ್ರ್ಯಾಂಡ್‌ ಫೈನಾನ್ಸ್‌ ತನ್ನ 2025ರ ವರದಿಯನ್ನು ಬಿಡುಗಡೆಗೊಳಿಸಿದೆ. ಈ ವರದಿಯ ಪ್ರಕಾರ ನಂದಿನಿ ಬ್ರ್ಯಾಂಡ್‌ ಗಮನಾರ್ಹ ಪ್ರಗತಿ ಸಾಧಿಸಿದೆ. ದೇಶದ ಮುಖ್ಯ ಬ್ರ್ಯಾಂಡ್‌ಗಳೊಂದಿಗೆ ತೀವ್ರ ಪೈಪೋಟಿ ಮಧ್ಯೆಯೂ ಆಹಾರ ಹಾಗೂ ಪಾನೀಯಗಳ ವಿಭಾಗದಲ್ಲಿ ಭಾರತದಲ್ಲಿಯೇ ನಾಲ್ಕನೇಯ ಸ್ಥಾನವನ್ನು ಕಾಯ್ದುಕೊಂಡಿದೆ.

ದಕ್ಷಿಣ ಭಾರತದಲ್ಲಿ ನಂದಿನಿ ವಿಸ್ತಾರಗೊಂಡಿದೆ. ಉತ್ತರ ಪ್ರದೇಶದಲ್ಲಿ ಹಂತ ಹಂತವಾಗಿ ವಹಿವಾಟವನ್ನು ವಿಸ್ತರಿಸುತ್ತಿದ್ದು, ಇದೀಗ ಸಿಂಗಾಪುರ ಮತ್ತು ದುಬೈ ರಾಷ್ಟ್ರಗಳಿಗೂ ನಂದಿನಿ ವ್ಯಾಪಾರ ವಹಿವಾಟು ಪ್ರಾರಂಭಿಸಿದೆ. ಅಲ್ಲದೇ ಈಗ ನಂದಿನಿ ತುಪ್ಪಕ್ಕೆ ಗಣನೀಯ ಬೇಡಿಕೆ ಇದ್ದು, ಆಂಧ್ರದ ತಿರುಪತಿ ದೇವಾಲಯಕ್ಕೆ ಪ್ರತಿ ತಿಂಗಳು 300 ಮೆಟ್ರಿಕ್‌ ಟನ್‌ ತುಪ್ಪವನ್ನು ಕೆಎಂಎಫ್‌ ಪೂರೈಕೆ ಮಾಡುತ್ತಿದೆ.

ಇನ್ನೂ ಬ್ರ್ಯಾಂಡ್‌ ಫೈನಾನ್ಸ್‌ ಮೌಲ್ಯಮಾಪನ ಸಂಸ್ಥೆ ಬ್ರ್ಯಾಂಡ್‌ಗಳ ಆರ್ಥಿಕ ಸದೃಢತೆ, ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡ್‌ಗಳ ಮೌಲ್ಯಮಾಪನವನ್ನು ಅಳೆಯುವ ಸಂಸ್ಥೆಯಾಗಿದೆ. ಲಂಡನ್‌ನಲ್ಲಿ ಇದರ ಕೇಂದ್ರ ಕಚೇರಿಯನ್ನು ಒಳಗೊಂಡಿದ್ದು, ಸುಮಾರು 25 ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕಾರ್ಯ ನಿರ್ವಹಿಸುತ್ತದೆ. ವಾರ್ಷಿಕವಾಗಿ 6,000ಕ್ಕೂ ಹೆಚ್ಚು ಬ್ರ್ಯಾಂಡ್‌ಗಳನ್ನು ಮೌಲ್ಯಮಾಪನಕ್ಕೆ ಒಳಪಡಿಸುತ್ತದೆ. ಬ್ರ್ಯಾಂಡ್‌ ಫೈನಾನ್ಸ್‌ ವಿವಿಧ ಬ್ರ್ಯಾಂಡ್‌ಗಳ ಆರ್ಥಿಕ ಮೌಲ್ಯವನ್ನು ಅಳೆಯುವುದರಿಂದ ಕಂಪನಿಗಳು ಕಾರ್ಯತಂತ್ರದ ತೀರ್ಮಾನಗಳನ್ನು ತೆಗೆದುಕೊಳ್ಳಲು ಈ ಸಂಸ್ಥೆಯ ವರದಿಯೂ ಸಹಾಯಕಾರಿಯಾಗಿದೆ.

 

Continue Reading

Trending

error: Content is protected !!