Cinema
ಅಭಿಷೇಕ್ ಅಂಬರೀಶ್ರಿoದ ಕಾವೇರಿಮಾತೆಗೆ ವಿಶೇಷ ಪೂಜೆ

ಮಡಿಕೇರಿ : ಸ್ಯಾಂಡಲ್ ವುಡ್ ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ವೇಳೆ ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥಿಸಿದ್ದಾರೆ. ಮಳೆ ಬರಲಿ ಜೊತೆಗೆ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
Cinema
ಲಾಂಗ್ ಹಿಡಿದು ರೀಲ್ಸ್ ಪ್ರಕರಣ: ಬಿಗ್ಬಾಸ್ ಖ್ಯಾತಿಯ ರಜತ್ ಮತ್ತೆ ಬಂಧನ

ಬೆಂಗಳೂರು: ಲಾಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಿಗ್ಬಾಸ್ ಖ್ಯಾತಿಯ ರಜತ್ನನ್ನು ಬುಧವಾರ ಬಂಧಿಸಲಾಗಿದೆ.
ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್ಗೆ ಪೊಲೀಸರು ನೋಟಿಸ್ ನೀಡಿದ್ದರು. ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದು. ಆದರೆ ರಜತ್ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್ಬಿಡಬ್ಲ್ಯೂ ಜಾರಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್ನನ್ನು ಬಂಧಿಸಿದ್ದಾರೆ.
Cinema
ಬಾಲಿವುಡ್ ಭಾಯ್ ಜಾನ್ಗೆ ಮತ್ತೆ ಕೊಲೆ ಬೆದರಿಕೆ ಸಂದೇಶ: ಆತಂಕದಲ್ಲಿ ಫ್ಯಾನ್ಸ್

ಮುಂಬೈ: ಬಾಲಿವುಡ್ನ ಭಾಯ್ ಜಾನ್ ಎಂದೇ ಹೆಸರುವಾಸಿಯಾಗಿರುವ ನಟ ಸಲ್ಮಾನ್ ಖಾನ್ಗೆ ಇಂದು (ಸೋಮವಾರ) ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದಾರೆ.
ಮುಂಬೈನ್ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್ಖಾನ್ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್ ನಂಬರ್ಗೆ ಸಂದೇಶ ಬಂದಿದೆ.
ಬೆದರಿಕೆ ಸಂದೇಶ ರವಾನಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಇದೀಗ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಬೆದರಿಕೆಯ ಹೊಣೆಯನ್ನೂ ಯಾರು ಸಹ ಹೊತ್ತುಕೊಂಡಿಲ್ಲ. ಇನ್ನು ನಟ ಸಲ್ಮಾನ್ ಖಾನ್ ಅವರಾಗಲಿ ಹಾಗೂ ಅವರ ಕುಟುಂಬಸ್ಥರಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿಂದೆಯೂ ಹಲವು ಬಾರಿ ಸಲ್ಮಾನ್ ಖಾನ್ಗೆ ಬೆದರಿಕೆಗಳು ಬಂದಿದ್ದವು. ಗ್ಯಾಂಗ್ಸ್ಟರ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ನಿಂದ ಬೆದರಿಕೆಗಳು ಬಂದಿವೆ.
ಈ ಹಿನ್ನೆಲೆಯಲ್ಲಿ ನಟ ಸಲ್ಮಾನ್ ಖಾನ್ ಮನೆಯ ಸುತ್ತಮತ್ತ ಹಲವು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
Cinema
ಸುದೀಪ್ ಫ್ಯಾನ್ಸ್ಗೆ ಗುಡ್ ನ್ಯೂಸ್: ಏ.16ರಿಂದ ಶುರುವಾಗಲಿದೆ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು.
ಈಗ ಏಪ್ರಿಲ್.16ಕ್ಕೆ ಏನಾಗಲಿದೆ ಎಂದು ಸ್ವತಃ ಸುದೀಪ್ ಹೇಳಿಕೊಂಡಿದ್ದಾರೆ. ‘ಏಪ್ರಿಲ್.16ರಂದು ಏನಾಗಲಿದೆ ಎಂಬ ಕುತೂಹಲವಿರುವವರಿಗೆ, ಅಂದು ನಮ್ಮ ‘ಬಿಲ್ಲ ರಂಗ ಭಾಷಾ’ ಚಿತ್ರ ಪ್ರಾರಂಭವಾಗಲಿದೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬಹಳ ಖುಷಿಯಾಗಿದ್ದಾರೆ.
ಕಳೆದ ವರ್ಷ ಸುದೀಪ್ ಹುಟ್ಟುಹಬ್ಬದಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು ನಿರ್ದೇಶಕ ಅನೂಪ್ ಭಂಡಾರಿ. ಅದರಂತೆ, ಅದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿತ್ತು. ಆದರೆ, ಸುದೀಪ್ ಆ ನಂತರ ‘ಬಿಗ್ ಬಾಸ್’, ‘ಮ್ಯಾಕ್ಸ್’, ಸಿಸಿಎಲ್ನಲ್ಲಿ ಬ್ಯುಸಿಯಾಗಿದ್ದರಿಂದ ಚಿತ್ರವು ವಿಳಂಬವಾಯಿತು. ಈಗ ಕೊನೆಗೂ ಚಿತ್ರ ಏಪ್ರಿಲ್.16ಕ್ಕೆ ಪ್ರಾರಂಭವಾಗುತ್ತಿದೆ.
‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದರು. ’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾ ಆಗಲಿದೆ. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಲಿದೆ’ ಎಂದು ಅವರು ಹೇಳಿದ್ದರು.
ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್ ಬಸ್ಟರ್ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan24 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur24 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Hassan24 hours ago
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ