Connect with us

Mandya

ಮಂಡ್ಯ ಜಿಲ್ಲೆಯ ಅಂಧ ಮಕ್ಕಳಿಗೆ ಮೈಸೂರು ಅಂಧ ಮಕ್ಕಳ ಪ್ರವೇಶ ಶಾಲೆಯಲ್ಲಿ ಅವಕಾಶ – ಎಡಿಸಿ ಡಾ.ಹೆಚ್.ಎಲ್ ನಾಗರಾಜು

Published

on

ಮಂಡ್ಯ: ಜಿಲ್ಲೆಯ ಅಂಧ ಮಕ್ಕಳಿಗೆ ಮೈಸೂರಿನ ತಿಲಕ್ ನಗರದಲ್ಲಿರುವ ಅಂಧ ಮಕ್ಕಳ ಪ್ರವೇಶ ಶಾಲೆಯಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ
ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶೇ. 40 ಕ್ಕಿಂತ ಹೆಚ್ಚು ದೃಷ್ಟಿದೋಷವುಳ್ಳ ಮಕ್ಕಳನ್ನು ಅಂಧ ಮಕ್ಕಳ ಪಾಠಶಾಲೆಗೆ ದಾಖಲಿಸುವ ಹಾಗೂ ನೇತ್ರ ತಜ್ಞರಿಂದ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಸಂಬಂಧ ಸಭೆ ನಡೆಸಿ ಮಾತನಾಡಿದರು.

ಮೈಸೂರಿನ ತಿಲಕ್ ನಗರದಲ್ಲಿರುವ ಸರ್ಕಾರಿ ಅಂಧ ಮಕ್ಕಳ ಶಾಲೆಯಲ್ಲಿ ವಸತಿ, ಊಟ, ಆರೋಗ್ಯ ತಪಾಸಣೆ, ಕೌಶಲ್ಯಾಭಿವೃದ್ಧಿ ತರಬೇತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿದ್ದು, ಇಲ್ಲಿ ಒಳ್ಳೆಯ ಶಿಕ್ಷಣ ಪಡೆದು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬಹುದಾಗಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿರುವ ದೃಷ್ಟಿ ದೋಷವುಳ್ಳ ಮಕ್ಕಳನ್ನು ಮೈಸೂರಿನಲ್ಲಿರುವ ಸರ್ಕಾರಿ ಅಂಧ ಮಕ್ಕಳ ಪಾಠಶಾಲೆಗೆ ದಾಖಲಿಸಲು ದೃಷ್ಟಿ ದೋಷವುಳ್ಳ ಮಕ್ಕಳ ಪೋಷಕರನ್ನು ಭೇಟಿ ಮಾಡಿ. ಅಲ್ಲಿ ಸಿಗುವ ಸೌಲಭ್ಯ ಸವಲತ್ತುಗಳ ಬಗ್ಗೆ ತಿಳಿಸಿ ಪೋಷಕರ ಮನವೊಲಿಸಿ ಎಂದರು.

ಜಿಲ್ಲೆಯಲ್ಲಿ 6 ರಿಂದ 16 ವರ್ಷದೊಳಗಿನ ಒಟ್ಟು 89 ಜನ ದೃಷ್ಠಿ ದೋಷವುಳ್ಳ ವಿಕಲಚೇತನರಿದ್ದು, ಅದರಲ್ಲಿ 83 ಜನ ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಉಳಿದ 6 ಜನ ಮಕ್ಕಳು ಯಾವುದೇ ಶಾಲೆಯಲ್ಲಿ ವ್ಯಾಸಂಗ ಮಾಡದೆ ಮನೆಯಲ್ಲಿಯೇ ಉಳಿದುಕೊಂಡಿರುತ್ತಾರೆ. ಅವರ ಪೋಷಕರನ್ನು ಮೈಸೂರಿನ ಅಂಧ ಮಕ್ಕಳ ಶಾಲೆಗೆ ದಾಖಲಿಸಲು ತಿಳಿಸಿ ಎಂದರು.

ಜಿಲ್ಲೆಯಲ್ಲಿ ಒಟ್ಟು 2966 ಜನ ವಿಕಲತೆವುಳ್ಳ ಅಂಧ ವಿಕಲಚೇತನರಿದ್ದಾರೆ. ಮಂಡ್ಯ ತಾಲ್ಲೂಕಿನಲ್ಲಿ – 744, ಮದ್ದೂರು – 420, ಮಳವಳ್ಳಿ – 528, ಶ್ರೀರಂಗಪಟ್ಟಣ – 206, ಪಾಂಡವಪುರ – 294, ನಾಗಮಂಗಲ – 348, ಕೆ ಆರ್ ಪೇಟೆ ತಾಲ್ಲೂಕಿನಲ್ಲಿ – 426 ಅಂಧ ವಿಕಲಚೇತನರಿದ್ದಾರೆ ಎಂದರು.

ಮೈಸೂರಿನ ತಿಲಕ ನಗರದಲ್ಲಿರುವ ಸರ್ಕಾರಿ ಅಂಧ ಮಕ್ಕಳ ಪಾಠ ಶಾಲೆಯಲ್ಲಿ ಈಗಾಗಲೇ ವ್ಯಾಸಂಗ ಮಾಡಿದ ಅನೇಕ ವಿದ್ಯಾರ್ಥಿಗಳು ಒಳ್ಳೆಯ ಹುದ್ದೆಯಲ್ಲಿದ್ದಾರೆ. ಕೆಲ ಅಂಧ ಮಕ್ಕಳ ಪೋಷಕರಿಗೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಆರ್ಥಿಕವಾಗಿ ಸಬಲರಾಗಿರುವುದಿಲ್ಲ. ಅಂತವರಿಗೆ ಇದು ಒಳ್ಳೆಯ ಅವಕಾಶವಾಗಿದೆ ಎಂದರು.

ಜಿಲ್ಲೆಯಲ್ಲಿರುವ ಒಟ್ಟು 89 ಮಕ್ಕಳು ಅಲ್ಲಿ ಶಿಕ್ಷಣ ಪಡೆಯುವಂತೆ ತಿಳಿಸಿ. ಎಲ್ಲಾ ಅಂಧ ಮಕ್ಕಳ ಪೋಷಕರು ಮೈಸೂರಿನ ಅಂಧ ಮಕ್ಕಳ ಶಾಲೆಗೆ ಒಮ್ಮೆ ಭೇಟಿ ನೀಡಿದಾಗ ಅಲ್ಲಿ ಸಿಗುವ ಸೌಲಭ್ಯಗಳ ಅರಿವಾಗುತ್ತದೆ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್ ರಾಜಮೂರ್ತಿ, ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ. ಮೋಹನ್, ಜಿಲ್ಲಾ ಪಂಚಾಯತ್ ನ ಸಹಾಯಕ ಕಾರ್ಯದರ್ಶಿ ಮೋಹನ್ ಕುಮಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್, ಮಿಮ್ಸ್ ಅಧೀಕ್ಷಕರು ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Mandya

ಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ

Published

on

ಶ್ರೀರಂಗಪಟ್ಟಣ : 66/11ಕೆವಿ ವಿದ್ಯುತ್ ಉಪ-ವಿತರಣ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ನಾಳಿದ್ದು(ಡಿ.10) ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತಗೊಳಿಸುವುದಾಗಿ ಎಇಇ ಮಂಜುನಾಥ್ ಪ್ರಸಾದ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಶ್ರೀರಂಗಪಟ್ಟಣ, ಗಂಜಾಂ, ಮಂಡ್ಯ ವಾಟರ್ ಸಪ್ಲೆ, ಪಾಂಡವಪುರ ವಾಟರ್ ಸಪ್ಲೆ, ನಗುವನಹಳ್ಳಿ, ಬೆಳವಾಡಿ, ಬೊಮ್ಮೂರು ಅಗ್ರಹಾರ, ಕಿರಂಗೂರು, ಕೆ.ಶೆಟ್ಟಹಳ್ಳಿ, ಶ್ರೀನಿವಾಸ ಅಗ್ರಹಾರ, ಚಂದಗಾಲು, ದರಸಗುಪ್ಪೆ, ಚಿಂದಗಿರಿಕೊಪ್ಪಲು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಿಗೆ ಅಂದು ಬೆ.10 ರಿಂದ ಸಂಜೆ 06 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಾಯವಾಗುವುದಾಗಿ ಅವರು ತಿಳಿಸಿದ್ದಾರೆ.

Continue Reading

Mandya

ಆಸ್ಪತ್ರೆಗೆ ಡಿಸಿ ಭೇಟಿ : ಅಪಘಾತಕ್ಕೀಡಾಗಿರುವ ಪ್ರಯಾಣಿಕರ ಆರೋಗ್ಯ ವಿಚಾರಣೆ

Published

on

ಮಂಡ್ಯ: ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು.

ಮದ್ದೂರು ತಾಲ್ಲೂಕಿನ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 275 ರ ಮದ್ದೂರು ತಾಲೂಕು ಅಗರಲಿಂಗನ ದೊಡ್ಡಿ ಸರ್ವಿಸ್ ರೋಡ್ ಬಳಿ ಅಮ್ಮ‌ ಟೂರ್ಸ್ ಅಂಡ್ ಟ್ರಾವೆಲ್ಸ್ ರವರ ಮಾಲೀಕತ್ವದ ಸಂಖ್ಯೆ: KA51/EC/1665 ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ಸಿನ ಎಡಭಾಗಕ್ಕೆ ಮುಗುಚಿ ಬಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದರು.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಗಾಯಗೊಂಡ 25 ಪ್ರಯಾಣಿಕರನ್ನು ಕೂಡಲೇ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇಲ್ಲಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದರಿ ಬಸ್ಸು ಶಿಂಷಾ ಬ್ಲಫ್ ಬಳಿ ಇರುವ ದಂಡಿ ಮಾರಮ್ಮನ ದೇವಸ್ಥಾನ ದಿಂದ ಕೆ ಪಿ ಅಗ್ರಹಾರ ಬೆಂಗಳೂರು ಇಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ.

ಜಿಲ್ಲಾಧಿಕಾರಿಗಳು ಮಿಮ್ಸ್ ಸಂಸ್ಥೆಗೆ ಭೇಟಿ ನೀಡಿ ಸದರಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿರುವ ಪ್ರಯಾಣಿಕರ ಆರೋಗ್ಯದ ಸ್ಥಿತಿಗತಿಗಳ ಬಗ್ಗೆ ವಿಚಾರಿಸಿದರು. ಜೊತೆಗೆ ಸೂಕ್ತ ಹಾಗೂ ಉತ್ತಮ ಮಟ್ಟದ ಔಷಧೋಪಚಾರಗಳನ್ನು ತುರ್ತಾಗಿ ಮಾಡುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು.

Continue Reading

Mandya

ಕೃಷಿಕರು ಮಿಶ್ರ ಬೆಳೆಗೆ ಆದ್ಯತೆ ನೀಡಬೇಕು: ಡಾ. ಪಿ. ಎಲ್. ಪಾಟೀಲ

Published

on

ಮಂಡ್ಯ : ರೈತರು ಒಂದೇ ತರವಾದ ಬೆಳೆ ಬೆಳೆಯುವ ಬದಲು ಏಕ ದಳ. ದ್ವಿದಳ ಬೆಳೆ ಬೆಳೆಯುವುದು ಸೂಕ್ತ. ಇದರಿಂದ ಮಣ್ಣಿನ ಆರೋಗ್ಯ ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ವಿಷಮುಕ್ತ ಆಹಾರ ಪೂರೈಕೆ ಮಾಡಬಹುದು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಪಿ. ಎಲ್. ಪಾಟೀಲ ಅವರು ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ “ಸಮಗ್ರ ಕೃಷಿಯಿಂದ ಸುಸ್ಥಿರತೆ” ಎಂಬ ಶಿರ್ಷಿಕೆ ಅಡಿಯಲ್ಲಿ ಮೂರು ದಿನಕಾಲ ಮಂಡ್ಯದ ವಿ. ಸಿ. ಫಾರಂ ನಡೆದ ಕೃಷಿ ಮೇಳದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯ ವಿಶ್ವವಿದ್ಯಾಲಯದ ಮೊದಲ ಕೃಷಿ ಮೇಳ. ಸಮಗ್ರ ಕೃಷಿಯಿಂದ ಸುಸ್ಥಿರತೆಯಾಗಿದೆ . ರೈತ ಬಾಂಧವರು ಸುಸ್ಥಿರ ಕೃಷಿಗೆ ಮುಂದಾಗಬೇಕು ನಿಸರ್ಗದತ್ತವಾಗಿ ದೊರೆಯುವ ಮಣ್ಣು ಮತ್ತು ನೀರಿನ ಸಂಸ್ಕರಣೆ ಮಾಡುವುದು ಮುಖ್ಯ. ಮಂಡ್ಯ ಜಿಲ್ಲೆ ಶೇ. 70ಕ್ಕೂ ಹೆಚ್ಚು ಭೂಮಿ ಹಸಿರುಮಾಯವಾಗಿದೆ ಇದಕ್ಕೆ ಕಾವೇರಿ ಮಾತೆಗೆ ನೀವು ಚಿರಋಣಿಯಾಗಿರಬೇಕು ಎಂದು ಹೇಳಿದರು.

ಭೂಮಿಗೆ ಹರಿದು ಬರುವ ನೀರಿನ್ನು ಸಂಸ್ಕರಣ ಮಾಡಿ ಮಿತವಾಗಿ ಬಳಕೆ ಮಾಡಿ. ಭೂಮಿಯ ಸವಕಳಿಯನ್ನು ತಪ್ಪಿಸಿ. ಸಾವಯವ ಕೃಷಿ ಪದ್ಧತಿಯ ಮೂಲಕ ಉತ್ತಮ ಭತ್ತದ ಇಳುವರಿಯನ್ನು ಪಡೆಯಬಹುದು. ಕಬ್ಬಿನ ಬೆಳೆಗೆ ಸಾಲು ಸಾಲು ಬಿಟ್ಟು ನೀರು ಹಾಯಿಸಿ. ತೋಟಗಾರಿಕೆ ಬೆಳೆ ಜೊತೆ ಕುರಿ. ಕೋಳಿ ಸಾಕಾಣಿಕೆ ಜೊತೆಗೆ ಪಶುಪಾಲನೆ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ನಿರ್ದೇಶಕರಾದ ಆರ್. ನೆಹಲ್ ಅವರು ಮಾತನಾಡಿ ಸದರಿ ಕೃಷಿ ಮೇಳದಲ್ಲಿ 50 ಕ್ಕೂ ಹೆಚ್ಚು ಮಹಿಳೆಯರು ಮಳಿಗೆಯನ್ನು ತೆರೆದಿದ್ದಾರೆ. ನಮ್ಮ ರೈತ ಮಹಿಳೆಯರನ್ನು ಸುಸ್ಥಿರರನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಯ ಮೂಲಕ ಹಲವು ಸೌಲಭ್ಯವನ್ನು ನೀಡಲಾಗಿದೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಕುಕ್ಕುಟ ಸಂಜೀವಿನಿ. ಮತ್ಸ್ಯ ಸಂಜೀವಿನಿ ಯೋಜನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಸುತ್ತೂರಿನ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮಾತನಾಡಿ, ಇದೇ ಮೊದಲ ಬಾರಿಗೆ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಯೋಜಿಸಿರುವ ಕೃಷಿ ಮೇಳದಲ್ಲಿ ಭಾಗಿಯಾಗಿ ರೈತರು ಕೃಷಿ ಕುರಿತಾಗಿ ಮಾಹಿತಿ ಪಡೆಯಬೇಕು. ಭಾರತ ದೇಶದಲ್ಲಿ ಕೃಷಿ ಭೂಮಿ ಸವಿಸ್ತರವಾಗಿದೆ. ರೈತರು ಹಳೆಯ ಹಾಗೂ ಸಾoಪ್ರದಾಯಿಕ ಕೃಷಿ ಪದ್ದತಿಯನ್ನು ಬಿಟ್ಟು ಸಾವಯವ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಹೆಚ್ಚು ಲಾಭವನ್ನು ಪಡೆಯಬಹುದು. ನೀರು ಮತ್ತು ಮಣ್ಣಿನ ಪೋಷಣೆ ಮಾಡುವುದು ಪ್ರತಿಯೊಬ್ಬ ರೈತನ ಜವಾಬ್ದಾರಿಯಾಗಿದೆ. ಎಂದು ಆಶೀರ್ವಾಚನ ನೀಡಿದರು.

ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಧ್ಯಕ್ಷರಾದ ಶ್ರೀ ಡಾ.ನಿಶ್ಚಲಾನಂದನಾಥ ಮಹಾಸ್ವಾಮೀಜಿ ಮಾತನಾಡಿ, ಕೃಷಿಕರೇ ಹೆಚ್ಚಾಗಿರುವ ಸಂಶೋಧನ ಕೇಂದ್ರಕ್ಕೆ ವಿಶ್ವ ವಿದ್ಯಾಲಯ ನೀಡಿ 5 ಜಿಲ್ಲೆಗೆ ಅನುಕೂಲ ಮಾಡಿಕೊಟ್ಟಿರುವ ಸರ್ಕಾರದ ಕೆಲಸ ಉತ್ತಮವಾದದ್ದು. ಮಂಡ್ಯ ಜಿಲ್ಲೆಯ ರೈತರು ಕೃಷಿಯಲ್ಲಿ ತೊಡಗಿದ್ದರು ಸಹ ಇಳುವರಿ ಕಡಿಮೆ ಆದ್ದರಿಂದ ಪ್ರಗತಿಪರ ರೈತರ ಸಂಖ್ಯೆ ಹೆಚ್ಚಾಗಲು ವಿಶ್ವವಿದ್ಯಾಲಯ ತೆರೆದುಕೊಂಡು ಕೃಷಿ ಸಂಶೋಧಕರು ರೈತರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಗೆ ತಂತ್ರಜ್ಞಾನದ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಕುವೆಂಪುರವರ ನೇಗಿಲ ಯೋಗಿ ಹಾಡಿನಂತೆ ಭೂಮಿ ಮತ್ತು ನೀರನ್ನು ಮಾತೆಯಂತೆ ಪೂಜಿಸಬೇಕು. ಕೃಷಿ ಕ್ಷೇತ್ರಕ್ಕೆ ಯುವ ಸಮೂಹ ಹೆಚ್ಚಿನ ಆದ್ಯತೆ ನೀಡಿ ಆಧುನಿಕ ಯಂತ್ರೋಪಕರಣಗಳು ತಂತ್ರಜ್ಞಾನ ಬಳಸಿ ಕೃಷಿ ಮಾಡಿ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಗಣ್ಯರು ಕೃಷಿ ಕುರಿತು ಮಾಹಿತಿಯುಳ್ಳ ಹಸ್ತಪ್ರತಿಯನ್ನು ಬಿಡುಗಡೆಗೊಳಿಸಿ. ರೈತ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ವೇದಿಕೆಯಲ್ಲಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ನಿರ್ದೇಶಕ ನೇಹಲ್ ಆರ್.ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಉದ್ಯಮಿ. ಕನ್ನಡ ಚಲನಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ. ಸಂಶೋಧನ ನಿರ್ದೇಶಕ ಡಾ. ಜಿ. ಎಂ. ದೇವಗಿರಿ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Trending

error: Content is protected !!