Agriculture
ಉಪವಿಭಾಗಾಧಿಕಾರಿ ಶೃತಿ ಅವರಿಂದ ಬೆಳೆ ಹಾನಿ ವೀಕ್ಷಣೆ
ಆಲೂರು: ಮಳೆಯಿಂದಾಗಿ ತಾಲೂಕಿನಲ್ಲಿ ಹಾನಿಗೀಡಾದ ವಿವಿಧ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿಯ ವ್ಯಾಪ್ತಿಯ ಹೈದೂರು, ಹಾಗೂ ಕಾಡ್ಲೂರು ಗ್ರಾಮಗಳಿಗೆ ಅಧಿಕಾರಿಗಳ ಜೊತೆ ಭೇಟಿ ಕಾಫಿ, ಕಾಳುಮೆಣಸು, ಬಾಳೆ, ಅಡಿಕೆ, ಮೆಕ್ಕೆಜೋಳ, ಭತ್ತದ ಗದ್ದೆ, ತೋಟಗಳಿಗೆ ತೆರಳಿ ರೈತರೊಂದಿಗೆ ಸಮಾಲೋಚನೆ ನಡೆಸಿ, ಅಧಿಕಾರಿಗಳಿಂದ ಬೆಳೆಹಾನಿಯ ಮಾಹಿತಿ ಪಡೆದರು.ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರವರು, ಜುಲೈ ತಿಂಗಳಿನಲ್ಲಿ ಸುರಿದ ಮಳೆ, ಗಾಳಿಗೆ ಕಾಫಿ, ಕಾಳುಮೆಣಸು, ಅಡಿಕೆ, ತೆಂಗು, ಮಕ್ಕೇಜೋಳ, ಶುಂಠಿ, ಭತ್ತ ಮುಂತಾದ ಬೆಳೆಗಳು ಹಾನಿಗೀಡಾಗಿದ್ದು, ರೈತರಿಗೆ ಕೋಟ್ಯಾಂತರ ರೂ. ನಷ್ಟವಾಗಿದೆ. ಇದು ನಿಜಕ್ಕೂ ದುರಂತ. ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಅದರಂತೆ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಮಾಹಿತಿಯನ್ನು ಪಡೆದು ಸೂಕ್ತ ಪರಿಹಾರ ಕೊಡಿಸಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.
ಬೆಳೆ ಹಾನಿ ವೀಕ್ಷಣೆಗೂ ಮುನ್ನ ಅಪಾರ ಪ್ರಮಾಣದಲ್ಲಿ ಕಾಳು ಮೆಣಸು, ಕಾಫಿ ಬೆಳೆ ಹಾಳಾದ ಹಿನ್ನೆಲೆ ಕಾಫಿ ಬೋರ್ಡ್ ನಿಂದ ಆಗಮಿಸಿದ್ದ ಅಧಿಕಾರಿಗಳ ಉಪ ವಿಭಾಗ ಅಧಿಕಾರಿ ಶೃತಿ ರವರು ಜೊತೆ ಸಭೆ ನಡೆಸಿ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಕೇಶವ ಮೂರ್ತಿ, ಕಾಫಿ ಬೋರ್ಡ್ ಕ್ಷೇತ್ರ ಅಧಿಕಾರಿ ಜ್ಯೋತಿ, ಎ.ಹೆ.ಓ ಧನಂಜಯ್, ಉಪತಹಸೀಲ್ದಾರ್ ಮಧುಸೂದನ್, ರಾಜಸ್ವ ನಿರೀಕ್ಷಕ ವಸಂತ್, ಮಲ್ಲಾಪುರ ಸದಸ್ಯ ಸದಸ್ಯ ಚಂದನ್ ಹೈದೂರು, ಗ್ರಾಮಸ್ಥರಾದ ಮೋಹನ್ ಕುಮಾರ್, ಕಿರಣ್ ಕುಮಾರ್, ನಂದೀಶ್, ರವಿ ಮುಂತಾದವರು ಹಾಜರಿದ್ದರು.
Agriculture
ಆರ್ ಬಿ ಐ ನಿಂದ ರೈತರಿಗೆ ಗುಡ್ ನ್ಯೂಸ್ : ಅಡಮಾನ ಇಲ್ಲದೆ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ
Loan for farmers upto 2 lakh without Surity – ದೇಶದ ರೈತರಿಗೆ ಮೇಲಾಧಾರ – ಮುಕ್ತ ಕೃಷಿ ಸಾಲದ ಮಿತಿಯನ್ನು ಏರಿಸಲಾಗಿದೆ. ಈ ಮೊದಲು ₹1.6 ಲಕ್ಷ ರೂ. ವರೆಗೆ ಇದ್ದ ಸಾಲದ ಮಿತಿಯನ್ನು ₹2.0 ಲಕ್ಷ ರೂ. ಗೆ ಏರಿಸಲಾಗಿದೆ. ಈ ನಿರ್ಧಾರವನ್ನು ಜನವರಿ 01, 2025 ರಿಂದಲೇ ಜಾರಿಗೆ ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ.
ಈ ಹೊಸ ಉಪಕ್ರಮದ ಮೂಲ ಉದ್ದೇಶವೇನು?
ಕೃಷಿ ವಲಯದ ಅಧಾಯವನ್ನು ಬೆಂಬಲಿಸಲು ಮತ್ತು ಹೆಚ್ಚಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈಗಿನ ಸಮಯದಲ್ಲಿ ಆಗಿರುವ ಹಣದುಬ್ಬರ (Inflation) ಮತ್ತು ಹೆಚ್ಚುತ್ತಿರುವ ಕೃಷಿ ಒಳಹರಿವಿನ ವೆಚ್ಚಕ್ಕೆ ರೈತರಿಗೆ ಸಹಾಯವಾಗುವಂತೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಇದರಿಂದ ರೈತರಿಗೆ ಆರ್ಥಿಕ ನೆರವು ಸಿಗಲಿದೆ.
ಈ ಉಪಕ್ರಮದಿಂದ ದೇಶದ 86% ಕ್ಕಿಂತಲೂ ಹೆಚ್ಚು ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಪ್ರಯೋಜನ ಸಿಗಲಿದೆ. ಆರ್ ಬಿಐ ನ ಈ ಹೊಸ ಮಾರ್ಗಸೂಚಿಯು ದೇಶದ ಪ್ರತಿಯೊಬ್ಬ ರೈತನಿಗೂ ತಲುಪಲಿ ಎಂಬ ಉದ್ದೇಶದಿಂದ ಸರ್ಕಾರವು ವ್ಯಾಪಾಕ ಪ್ರಚಾರ ಕೈಗೊಳ್ಳಲಿದೆ.
ಇದರಿಂದ ಕೃಷಿ ವಲಯದಲ್ಲಿ ಹೆಚ್ಚಿನ ಹೂಡಿಕೆ, ರೈತರ ಜೀವನ ಅಭಿವೃದ್ಧಿಗೊಳ್ಳಲಿದೆ. ಮುಂದಿನ ವರ್ಷ ಅಂದರೆ, ಜನವರಿ 01, 2025ರಿಂದ ದೇಶಾದ್ಯಂತ ಇದು ಜಾರಿಯಾಗಲಿದ್ದು ಇದರ ಲಾಭ ಪಡೆಯಲು ರೈತರು ತಮ್ಮ ಬ್ಯಾಂಕ್ ಗಳಿಗೆ ಭೇಟಿ ನೀಡಿ ಇದರ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
Agriculture
ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ
ಚಿಕ್ಕಮಗಳೂರು: ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒತ್ತುವರಿ ಸಮಸ್ಯೆ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಲೋಕಸಭೆ ಮಾಜಿ ಸದಸ್ಯ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ತಾವೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೇ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಮನವರಿಕೆ ಮಾಡಿದ್ದೀವೆ ಎಂದು ಹೇಳಿದರು.
ಬಹಳಷ್ಟು ಉಹಾಪೋಹಗಳು ಭೂ ಒತ್ತುವರಿ ಬಗ್ಗೆ ಹರಿದಾಡುತ್ತಿದ್ದು, ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಅಪಪ್ರಚಾರ ಮಾಡುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಈಗಾಗಲೇ ಸರ್ಕಾರ ಒತ್ತುವರಿ ತೆರವು ಕಾರ್ಯವನ್ನು ಸ್ಥಗಿತಗೊಳಿಸಿ ಆದೇಶಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನವನ್ನು ನೀಡಿದ್ದಾರೆ. ಜತೆಗೆ ಕಾನೂನಿನ ಚೌಕಟ್ಟಿನಡಿಯಲ್ಲಿ ಅರ್ಹ ಪ್ರಕರಣಗಳಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒತ್ತುವರಿ ಸಮಸ್ಯೆ ಬಹಳಷ್ಟು ವರ್ಷಗಳ ಸಮಸ್ಯೆಯಾಗಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಜನಸಂಖ್ಯೆಯಲ್ಲಿ ಭಾರೀ ಪ್ರಮಾಣದ ಬದಲಾವಣೆಯಾಗಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತುವರಿಯೂ ನಡೆದಿದೆ. ಅರಣ್ಯವೂ ಕ್ಷೀಣಿಸಿದೆ ಎಂದು ತಿಳಿಸಿದರು.
Agriculture
ಯಂತ್ರೋಪಕರಣ ಬಳಸಿ ಉತ್ತಮ ಬೆಳೆ ಬೆಳೆಯಲು ರೈತರಲ್ಲಿ ಶಾಸಕ ಜಿ.ಟಿ.ಡಿ. ಕರೆ
ಮೈಸೂರು: ರೈತರು ಸರ್ಕಾರದ ಸಹಾಯಧನದಡಿಯಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆಯಬೇಕೆಂದು ರೈತರಲ್ಲಿ ಶಾಸಕ ಜಿಟಿ ದೇವೇಗೌಡ ಕರೆ ನೀಡಿದರು.ಅವರು ಇಂದು ಮೈಸೂರಿನ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ರೈತರಿಗೆ ಚಾಫ್ ಕಟರ್, ಪವರಿ ಟಿಲ್ಲರ್, ರೋಟ ವೇಟರ್ಗಳನ್ನು ವಿತರಿಸಿ ಮಾತನಾಡಿದರು.ಜಲದರ್ಶಿನಿಯ ಶಾಸಕರ ಕಛೇರಿಯಲ್ಲಿ ನಡೆದ ೨೦೨೪-೨೫ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಆಯ್ಕೆ ಸಮಿತಿ ಸಭೆಯಲ್ಲಿ ತಿಳಿಸಿದರು.
ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಬೀಮಾ (ವಿಮಾ) ಯೋಜನೆಯಡಿ ಬೆಳೆ ವಿಮೆಗೆ ನೊಂದಾಣಿ ಪ್ರಾರಂಭವಾಗಿದ್ದು, ರೈತರು ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬೇಕು, ಪ್ರಕೃತಿ ವಿಕೋಪ ಹಾಗೂ ಕೀಟರೋಗ ಬಾಧೆಯಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಸಿಗಲಿದೆ ಎಂದು ತಿಳಿಸಿದರು.ಕೃಷಿ ಭಾಗ್ಯ ಯೋಜನೆಯಡಿ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಕೃಷಿ ಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ ಹಾಗೂ ಹಲವಾರು ಸೌಲಭ್ಯಗಳಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಕುರಿತು ಸಹಾಯಕ ಕೃಷಿ ನಿರ್ದೇಶಕರಾದ ಬಿ.ಡಿ.ಜಯರಾಂ ರೈತರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಗೋಪಾಲಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ಬಸವೇಗೌಡ, ಸ್ವಾಮಿಗೌಡ, ಮಹೇಶ್, ದೇವೇಗೌಡ, ರಾಮಲಿಂಗ, ಸಣ್ಣಹೈದೇಗೌಡ, ತುಳಸಮ್ಮ, ಚಿಕ್ಕಣ್ಣನಾಯಕ ಹಾಗೂ ಹಲವಾರು ಮುಖಂಡರು ಹಾಜರಿದ್ದರು.
-
Mysore23 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Education24 hours ago
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ
-
Cinema24 hours ago
ಬಿಗ್ಬಾಸ್ ಸೀಸನ್ 11: ಮೀಸಲಾತಿ ಮೂಲಕ ಹನುಮಂತು ಫೈನಲ್ಸ್ ತಲುಪಿದ್ದಾರೆ ಎಂದ ನಟಿ ಹಂಸ
-
Mysore8 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu9 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Kodagu9 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Mysore6 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu7 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ