Location
ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ

ಮೈಸೂರು: ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಶುಕ್ರವಾರ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದ ನಂತರ ವ್ಯಂಗ್ಯಚಿತ್ರಕಾರರಾದರು. ಇಂಡಿಯಾ ಟುಡೆ, ಔಟ್ ಲುಕ್, ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಗಳಿಗೆ ವ್ಯಂಗ್ಯಚಿತ್ರಕಾರರಾಗಿ ದುಡಿದರು.. ಇಂಡಿಯಾ ಟುಡೆ ಪತ್ರಿಕೆ ಬಳಗದ ‘ಟಾರ್ಗೆಟ್’ ಎಂಬ ಮಕ್ಕಳ ಪತ್ರಿಕೆಗೆ ‘ಡಿಟೆಕ್ಟಿವ್ ಮೂಚುವಾಲಾ’ ಎಂಬ ಸರಣಿ ವ್ಯಂಗ್ಯಚಿತ್ರಗಳನ್ನು ಪ್ರಕಟಿಸಿದರು.
ಬಳಿಕ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನಿತ್ಯ ವ್ಯಂಗ್ಯಚಿತ್ರ ಬರೆಯುತ್ತಿದ್ದರು.
ದೆಹಲಿಯಲ್ಲಿದ್ದ ಅವರು, ಎರಡು ವರ್ಷಗಳ ಹಿಂದೆ ನಗರದ ಕೆಆರ್ ಎಸ್ ರಸ್ತೆಯ ಬ್ರಿಗೇಡ್ ಸಿಂಫೋನಿ ಅಪಾಟ್೯ಮೆಂಟ್ ನ ಫ್ಲಾಟ್ ನಲ್ಲಿ ವಾಸಿಸುತ್ತಿದ್ದರು.
ಅವರ ಅಂತ್ಯಕ್ರಿಯೆ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಭಾನುವಾರ (ಸೆಪ್ಟೆಂಬರ್ 10) ಮಧ್ಯಾಹ್ನ ಒಂದು ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
Mysore
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ ಧರಣಪ್ಪಗೌಡ, ಕರ್ಪೂರವಳ್ಳಿ ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Hassan
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ

ಹಾಸನ : ಕಾಡಾನೆ ಸೆರೆ, ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಭಾರೀ ದುರಂತ
ಕಾಡಾನೆ ದಾಳಿಗೆ ಪಳಗಿದ ಆನೆ ಅರ್ಜುನ ಬಲಿ
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಯಸಳೂರು ಬಾಳೆಕೆರೆ ಫಾರೆಸ್ಟ್ ನಲ್ಲಿ ಘಟನೆ
ಅರ್ಜುನ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಇಂದೂ ಕಾರ್ಯಾ ಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ
ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಅರ್ಜುನನ ಮೇಲೆ ಅಟ್ಯಾಕ್ ಮಾಡಿದ ಒಂಟಿ ಸಲಗ
ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆಯೇ ಹಿಮ್ಮೆಟ್ಟಿದ ಉಳಿದ ಮೂರು ಸಾಕಾನೆಗಳು
ಒಂಟಿ ಸಲಗದ ಜೊತೆ ಕಾಳಗಕ್ಕಿಳಿದ ಅರ್ಜುನ
ಮದಗಜಗಳ ಕಾಳಗದಲ್ಲಿ ವೀರ ಮರಣ ಹೊಂದಿದ ಅರ್ಜುನ
ಎರಡು ಸಲಗ ಕಾಳಗಕ್ಕೆ ಇಳಿಯುತ್ತಿದ್ದಂತೆಯೇ ಅರ್ಜುನನ ಮೇಲಿನಿಂದ ಇಳಿದು ಓಡಿದ ಮಾವುತರು
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ
ಅರ್ಜುನ ಆನೆ ಸಾವಿನಿಂದ ಪ್ರಾಣಿಪ್ರಿಯರಿಗೆ ಶಾಕ್
ಹೊಟ್ಟೆ ಭಾಗಕ್ಕೆ ತಿವಿತಕ್ಕೆ ಒಳಗಾಗಿ ಕಣ್ಮುಚ್ಚಿದ ಅರ್ಜುನ
ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಜನಮನಗೆದ್ದಿದ್ದ ಅರ್ಜುನ
ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ
2012 ರಿಂದ 19 ರವರೆಗೆ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅರ್ಜುನ.
ಎಲ್ಲಾ ರೀತಿಯಲ್ಲೂ ಜನರ ಪ್ರೀತಿಗೆ ಪಾತ್ರನಾಗಿದ್ದ ಕ್ಯಾಪ್ಟನ್
ಅರ್ಜುನನ ಹಠಾತ್ ಸಾವು ಕಂಡು ಮಾವುತರು ಕಣ್ಣೀರು
ನ. 24 ರಿಂದ ಆರಂಭವಾಗಿದ್ದ ರೇಡಿಯೋ ಕಾಲರ್ ಅಳವಡಿಕೆ ಹಾಗೂ ಕಾಡಾನೆ ಸೆರೆ, ಸ್ಥಳಾಂತರ ಕಾರ್ಯಾಚರಣೆ
Hassan
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

ಹಾಸನ : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ
ಬೈಕ್ ಸವಾರ ಸ್ಥಳದಲ್ಲೇ ಸಾವು
ಮತ್ತಿಘಟ್ಟ ಗ್ರಾಮದ ವೇಣುಗೋಪಾಲ್ (38) ಮೃತ ವ್ಯಕ್ತಿ
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಳೇಬೀಡು-ಜಾವಗಲ್ ರಸ್ತೆಯಲ್ಲಿ ಘಟನೆ
ಸ್ವಗ್ರಾಮ ಮತ್ತಿಘಟ್ಟಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಣುಗೋಪಾಲ್
ಈ ವೇಳೆ ಡಿಕ್ಕಿ ಹೊಡೆದಿರುವ ಅಪರಿಚಿತ ವಾಹನ
ಅಪಘಾತದ ನಂತರ ವಾಹನ ನಿಲ್ಲಿಸದೆ ಎಸ್ಕೇಪ್ ಆಗಿರುವ ಚಾಲಕ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan4 hours ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore2 months ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore3 days ago
ಮುಖ್ಯ ಶಿಕ್ಷಕ ಮತ್ತು ಡಿ ದರ್ಜೆ ನೌಕರ, ಶಾಲಾ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ – ಆರೋಪ