Mysore
ಅಕ್ರಮ ಒತ್ತುವರಿ ಆರೋಪ ಸತ್ಯಕ್ಕೆ ದೂರ: ಕೀರ್ತಿ, ಉದಯ ರವಿ ಸ್ಪಷ್ಟನೆ
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ಮಾದನಹಳ್ಳಿ ಗ್ರಾಮದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಬೆಂಬಲಿಗ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಹದೇವಪ್ಪ ಅಕ್ರಮವಾಗಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಕರ್ನಾಟಕ ಪ್ರತಿನಿಧಿ ವೇದಿಕೆ ತಾಲೂಕು ಅಧ್ಯಕ್ಷ ಕೀರ್ತಿ ಹಾಗೂ ಹರದನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಉದಯ ರವಿ ಸ್ಪಷ್ಟಪಡಿಸಿದ್ದಾರೆ.
ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೂರ್ತಿ, ಉದಯ ರವಿ, ಕೀರ್ತಿ ಸೇರಿದಂತೆ ಹಲವರು ಮಾತನಾಡಿದರು.

ಹುಲ್ಲಹಳ್ಳಿ ಹೋಬಳಿಯ ಮಾದನಹಳ್ಳಿ ಗ್ರಾಮದ ಸರ್ವೆ ನಂ. 12/1ರಲ್ಲಿರುವ 2 ಎಕರೆ 7 ಕುಂಟೆ ಜಮೀನು ಸಂಬಂಧ 2019ರಲ್ಲಿ ದಾವೆ ದಾಖಲಾಗಿತ್ತು. ಈ ಪ್ರಕರಣವನ್ನು ಉಚ್ಚ ನ್ಯಾಯಾಲಯ ವಜಾಗೊಳಿಸಿದ್ದು, ತೀರ್ಪು ನಮ್ಮ ಪರವಾಗಿದೆ ಎಂದು ಅವರು ತಿಳಿಸಿದರು.
ಮಾದನಹಳ್ಳಿ ಗ್ರಾಮದ ಗಿರೀಶ್ ಅವರು ಆಧಾರರಹಿತ ಆರೋಪಗಳನ್ನು ಮಾಡಿ, ಮಾಜಿ ಶಾಸಕ ಹರ್ಷವರ್ಧನ್ ಅವರ ಬೆಂಬಲಿಗರು ಅಕ್ರಮ ಒತ್ತುವರಿ ನಡೆಸಿದ್ದಾರೆ ಎಂದು ದೂರಿದ್ದಾರೆ. ಆದರೆ ಆ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜಮೀನು ವಿಚಾರದಲ್ಲಿ ಅನಾವಶ್ಯಕವಾಗಿ ಹರ್ಷವರ್ಧನ್ ಅವರ ಹೆಸರನ್ನು ಎಳೆದು ತರುವುದು ಸರಿಯಲ್ಲ. ಈ ರೀತಿಯ ಸುಳ್ಳು ಆರೋಪಗಳು ಹಾಗೂ ಅಪಪ್ರಚಾರವನ್ನು ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೀರ್ತಿ ಮತ್ತು ಉದಯ ರವಿ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮೂರ್ತಿ, ಮಲ್ಲಿಕಾರ್ಜುನ, ಮಹದೇವಪ್ಪ, ಶಿವಣ್ಣ, ಅಬ್ದುಲ್ ರಜಾಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Mysore
ದೈವ ನಿಂದನೆ ಪ್ರಕರಣ: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್
ಮೈಸೂರು : ಚಾಮುಂಡಿ ಬೆಟ್ಟಗೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿ, ಚಾಮುಂಡಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೈವ ನರ್ತನ ಕುರಿತ ಅವಹೇಳನಕಾರಿ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಮೇರೆಗೆ ಅವರು ದೇವಿಯ ಮುಂದೆ ಕ್ಷಮೆ ಯಾಚಿಸಿದರೆಂದು ತಿಳಿದುಬಂದಿದೆ.
ಸಾಮಾನ್ಯ ಭಕ್ತರಂತೆ ಕ್ಯೂನಲ್ಲಿ ನಿಂತು ದೇವಿಯ ದರ್ಶನ ಪಡೆದ ನಟ, ಗರ್ಭಗುಡಿ ವರೆಗೆ ಮಾಸ್ಕ್ ಧರಿಸಿಕೊಂಡೇ ಬಂದರು. ಬಳಿಕ ಗರ್ಭಗುಡಿಗೆ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದರು. ಯಾವುದೇ ವಿಶೇಷ ಆರ್ಭಟವಿಲ್ಲದೆ ಖಾಲಿ ಕೈಯಲ್ಲಿ ಆಗಮಿಸಿದ ಅವರು, ಮೂಲ ವಿಗ್ರಹ ಹಾಗೂ ಉತ್ಸವಮೂರ್ತಿ ಮುಂದೆ ಕುಳಿತು ಪ್ರಾರ್ಥನೆ ಸಲ್ಲಿಸಿದರು.

ಯಾರಿಗೂ ಪೂರ್ವ ಮಾಹಿತಿ ನೀಡದೇ ಸಾಮಾನ್ಯರಂತೆ ದೇವಸ್ಥಾನಕ್ಕೆ ಬಂದಿದ್ದ ರಣವೀರ್ ಸಿಂಗ್, ಪೂಜೆ ಹಾಗೂ ದರ್ಶನದ ಬಳಿಕ ಮೌನವಾಗಿ ದೇವಸ್ಥಾನದಿಂದ ನಿರ್ಗಮಿಸಿದರು.
Mysore
ದೇವೇಗೌಡರ ಕುಟುಂಬದ ವಿರುದ್ಧ ದ್ವೇಷ ರಾಜಕಾರಣ: ಕಾಂಗ್ರೆಸ್ ವಿರುದ್ಧ ಸಾ.ರಾ ಮಹೇಶ್ ವಾಗ್ದಾಳಿ
ಮೈಸೂರು: ಮೇ 26, ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ ಮಹೇಶ್ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಎಸ್ಐಟಿ ತನಿಖೆ, ಭೂ ಅತಿಕ್ರಮಣ ಪ್ರಕರಣ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಅವರ ಕೇತಗಾನಹಳ್ಳಿ ತೋಟದ ಭೂ ವಿವಾದ ಕುರಿತು ಕಾಂಗ್ರೆಸ್ ನಾಯಕರು ಚರ್ಚೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, “40 ವರ್ಷಗಳ ಹಿಂದೆ ಖರೀದಿಸಿದ ಜಮೀನಿನ ವಿಚಾರವನ್ನು ಈಗ ಎಸ್ಐಟಿಗೆ ನೀಡಿರುವುದು ಉದ್ದೇಶಪೂರ್ವಕ. ರಾಜ್ಯದ ಇತಿಹಾಸದಲ್ಲಿ ಅನೇಕ ರಾಜಕಾರಣಿಗಳ ವಿರುದ್ಧ ಭೂ ಒತ್ತುವರಿ ಆರೋಪಗಳಿದ್ದರೂ, ಒಂದೇ ಒಂದು ಪ್ರಕರಣವನ್ನೂ ಎಸ್ಐಟಿಗೆ ನೀಡಲಾಗಿಲ್ಲ. ಆದರೆ ಕುಮಾರಸ್ವಾಮಿ ಅವರ ಪ್ರಕರಣವನ್ನು ಮಾತ್ರ ಎಸ್ಐಟಿಗೆ ಒಪ್ಪಿಸಿರುವುದು ದ್ವೇಷ ರಾಜಕಾರಣದ ಭಾಗ,” ಎಂದು ಆರೋಪಿಸಿದರು.

ದೇವೇಗೌಡರ ಕುಟುಂಬವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ ಸಾ.ರಾ ಮಹೇಶ್, “ಕಾಂಗ್ರೆಸ್ ನಾಯಕರಲ್ಲಿ ಭೂ ಅತಿಕ್ರಮಣ ಪ್ರಕರಣಗಳೇ ಇಲ್ಲವೇ? ಅವುಗಳನ್ನು ಯಾಕೆ ತನಿಖೆಗೆ ಕೊಡಲಿಲ್ಲ?” ಎಂದು ಪ್ರಶ್ನಿಸಿದರು.ನಿಖಿಲ್ ಕುಮಾರಸ್ವಾಮಿ ಸೋಲಿನ ಕುರಿತು ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು ನೀಡಿದ ಅವರು, “ರಾಜಕಾರಣದಲ್ಲಿ ಎಲ್ಲರೂ ಯಾವಾಗಲಾದರೂ ಸೋಲುತ್ತಾರೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಐದುವರೆ ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಅಷ್ಟು ಮತಗಳನ್ನು ಕಾಂಗ್ರೆಸ್ ನಾಯಕರು ಪಡೆದಿದ್ರಾ?” ಎಂದು ಪ್ರಶ್ನಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾದರೆ ಕಾಂಗ್ರೆಸ್ಗೆ ಭಯ ಏಕೆ?” ಎಂದು ಪ್ರಶ್ನಿಸಿದರು.ಕುಮಾರಸ್ವಾಮಿ ಅವರ ಆಸ್ತಿ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವುದನ್ನು ಖಂಡಿಸಿದ ಸಾ.ರಾ ಮಹೇಶ್, “ಕುಮಾರಸ್ವಾಮಿ ಸಿನಿಮಾ ನಿರ್ಮಾಪಕರಾಗಿದ್ದರು. ನಿಖಿಲ್ ನಟನಾಗಿ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಿಮ್ಮ ಸಮಾಜವಾದಿ ನಾಯಕರು ಭತ್ತ ಬೆಳೆದಿದ್ರಾ, ರಾಗಿ ಬೆಳೆದಿದ್ರಾ?” ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

“ರಾಜಕಾರಣದಲ್ಲಿ ಎಲ್ಲರೂ ಪ್ರಾಮಾಣಿಕರಲ್ಲ. ಕೆಲವರು ಮಾತ್ರ ಪ್ರಾಮಾಣಿಕರಾಗಿರಬಹುದು. ಇಂದಿನ ವ್ಯವಸ್ಥೆಯಲ್ಲಿ ಹಣವಿಲ್ಲದೆ ರಾಜಕಾರಣ ಸಾಧ್ಯವಿಲ್ಲ,” ಎಂದು ಹೇಳಿದ ಅವರು, “ಜೆಡಿಎಸ್ಗಿಂತ ಹೆಚ್ಚು ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದಲ್ಲಿದೆ. ಜನರು ಮುಂದಿನ ಚುನಾವಣೆಗೆ ಕಾಯುತ್ತಿದ್ದಾರೆ. ಕಾಂಗ್ರೆಸ್ಗೆ ಜನ ಬುದ್ದಿ ಕಲಿಸಲಿದ್ದಾರೆ,” ಎಂದು ವಾಗ್ದಾಳಿ ನಡೆಸಿದರು.ಮೈಸೂರು ನಗರ ಪಾಲಿಕೆ ಮತ್ತು ಮುಡಾ ಕಚೇರಿಗಳಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ಇಬ್ಬರನ್ನು ಬಿಟ್ಟು ಎಲ್ಲರನ್ನೂ ವರ್ಗಾವಣೆ ಮಾಡಲಾಗಿದೆ. ಆದರೆ ಹೊಸ ನೇಮಕಾತಿಗಳು ಆಗಿಲ್ಲ,” ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕರ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಸಾ.ರಾ ಮಹೇಶ್, “ಲೀಡರ್ಶಿಪ್ ಬದಲಾವಣೆ ಅಥವಾ ರಿನಿವಲ್ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಇಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳನ್ನು ನೋಡಿಕೊಂಡೇ ತಿಳಿದುಕೊಂಡಿದ್ದೇವೆ. ರಿನಿವಲ್ಗಾಗಿ ಕರೆದಿರಬಹುದು ಎಂಬುದು ನಮ್ಮ ಭಾವನೆ,” ಎಂದು ಹೇಳಿದರು
Mysore
ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
ಮೈಸೂರು: ಮಡಿಕೇರಿಯ ಹೊಸೊಕ್ಲು ನಿವಾಸಿ ರೋಷನ್ ಬಾಲಕೃಷ್ಣ (43) ಅವರು ಮೈಸೂರುದಲ್ಲಿ ಸಿಡಿಲು ಬಡಿದು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಮುನೇಶ್ವರ ದೇವಾಲಯದ ಸಮೀಪ ವಾಸವಾಗಿದ್ದ ರೋಷನ್, ಎಕ್ಸೈಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ದಿವಂಗತ ಬಾಲಕೃಷ್ಣ ಅವರ ಪುತ್ರರಾಗಿದ್ದರು. ಐಟಿ ಕ್ಷೇತ್ರದಲ್ಲಿ ಉದ್ಯೋಗಿಯಾಗಿದ್ದ ಅವರು ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ನಿರ್ವಹಿಸುತ್ತಿದ್ದರು.

ಇಂದು ಮೈಸೂರುದಲ್ಲಿದ್ದ ತಮ್ಮ ಜಮೀನು ವೀಕ್ಷಣೆಗೆ ತೆರಳಿದ್ದ ವೇಳೆ, ಜಮೀನಿನಲ್ಲಿ ನಿಂತಿದ್ದ ಸಂದರ್ಭ ಏಕಾಏಕಿ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.
ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಿಸಿದೆ.
-
State18 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Hassan20 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Kodagu22 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan1 hour ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Mysore7 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Chamarajanagar19 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Kodagu21 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ
-
Hassan2 hours agoಬಕ್ರಿದ್ ವೇಳೆ ಗೋವಂಶ ವಧೆ ಬೇಡ: ಹಾಸನ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ
