Hassan
ಶ್ರೀಮದ್ ರಂಭಾಪುರೀ ವೀರಾಸಿಂಹಾಸನ ಶಾಖಾ ಸಂಸ್ಥಾನ ಕಾರ್ಜುವಳ್ಳಿ ಹಿರೇಮಠದಲ್ಲಿ ಡಿ.17 ರಿಂದ 21ರ ವರೆಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ

ಆಲೂರು: ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿರುವ ಶ್ರೀಮದ್ ರಂಭಾಪುರಿ ವೀರಸಿಂಹಾಸನ ಶಾಖಾ ಸಂಸ್ಥಾನ ಹಿರೇಮಠದಲ್ಲಿ ಡಿ. 17 ರಿಂದ ಡಿ. 21 ವರೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳವರ ದಿವ್ಯ ಸಾನಿದ್ಯದಲ್ಲಿ ಶ್ರೀ ಷ.ಬ್ರ.ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳವರ ಪಟ್ಟಾಧಿಕಾರದ ತೃತೀಯ ವರ್ಷದ ವಾರ್ಷಿಕೋತ್ಸವ, ಲಿಂ. ಶ್ರೀ ಷ.ಬ್ರ. ರುದ್ರಮುನಿಶಿವಾಚಾರ್ಯಸ್ವಾಮಿಗಳವರ 45ನೇ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ಷ.ಬ್ರ. ಸದಾಶಿವ ಶಿವಾಚಾರ್ಯ ಸ್ವಾಮಿಗಳವರ ಜನ್ಮ ವರ್ಧಂತಿ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ.ಷ.ಬ್ರ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.
ತಾಲೂಕಿನ ಪಾಳ್ಯ ಹೋಬಳಿ ಕಾರ್ಜುವಳ್ಳಿ ಹಿರೇಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು. ಡಿ. 17 ರ ರವಿವಾರ
ಶ್ರೀ. ಷ.ಬ್ರ. ಸದಾಶಿವ ಶಿವಾಚಾರ್ಯ ಸ್ವಾಮಿಗಳವರ ಪಟ್ಟಾಭಿಷೇಕದ ತೃತೀಯ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಬೆಳಗ್ಗೆ 7ಗಂಟೆಗೆ ಶ್ರೀ. ಷ.ಬ್ರ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ತಪೋಕ್ಷೇತ್ರ ಕಡೇನಂದಿಹಳ್ಳಿ ಇವರ ನೇತೃತ್ವದಲ್ಲಿ ಮಹಾರುದ್ರಾಭಿಷೇಕ, ದುರ್ಗಾಸೂಕ್ತ ಪಾರಾಯಣ, ಪೂರ್ವಕ ಕ್ಷೀರಾಭಿಷೇಕ. 8.30 ಗಂಟೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಸನ್ನಿಧಿಯಲ್ಲಿ ವಿವಿಧ ತರಕಾರಿ ಅಲಂಕಾರ ಸಹಸ್ರ ಪುಷ್ಪಾರ್ಚನೆ, ರಾಜೋಪಚಾರ ಪೂಜೆ, ಶ್ರೀ ವನದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಪಂಚಸಹಸ್ರ ದೂರ್ವಾರ್ಚನೆ ಶ್ರೀ ಇಷ್ಟನಾಗ ಸಿದ್ದಿನಾಗ ಮುಕ್ತಿನಾಗ, ದೇವರ ಸನ್ನಿದಾನದಲ್ಲಿ ಸಹಸ್ರ ಅಡಿಕೆ ಹೊಂಬಾಳೆ ಪುಷ್ಪಾರ್ಚನೆ ಶ್ರೀ ಮಠದ ಮುಂಭಾಗದಲ್ಲಿ ರುದ್ರಹೋಮ ಪ್ರಾರಂಭ ಶ್ರೀ. ಷ.ಬ್ರ ಸದಾಶಿವಚಾರ್ಯ ಸ್ವಾಮಿಗಳವರಿಗೆ ಮಹಾಭಿಷೇಕ. ಡಿ. 18ನೇ ಸೋಮವಾರ ಚಂಪಾ/ಸುಬ್ರಮಣ್ಯ ಷಷ್ಠಿ ಹಾಗೂ ಲಿಂ. ಶ್ರೀ, ಷ. ಬ್ರ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳರವರ 45ನೇ ವರ್ಷದ ಪುಣ್ಯರಾಧನೆ ಮತ್ತು ಶ್ರೀ ಮಠದಲ್ಲಿ ವಿಶೇಷ ಪುರಸ್ಕಾರಗಳು ನೇರವೇರಲಿದೆ. ಡಿ.19ನೇ ಮಂಗಳವಾರ ಶ್ರೀ. ಷ.ಬ್ರ ಸದಾಶಿವ ಶಿವಾಚಾರ್ಯ ಸ್ವಾಮಿಗಳವರ ಜನ್ಮ ವರ್ಧಂತಿಯ ಅಂಗವಾಗಿ ಶ್ರೀ. ಷ.ಬ್ರ. ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು, ಶ್ರೀ ರಾಮಲಿಂಗೇಶ್ವರ ಮಠ ಹಾರನಹಳ್ಳಿ ಇವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಡಿ. 20 ನೇ ಬುಧವಾರ ಪ್ರದೇಶಾಭಿವೃದ್ಧಿಗಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶ್ರಿ.ಷ.ಬ್ರ. ಪಟ್ಟದ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿಗಳು, ಶ್ರೀ ನಾಗಲಾಪುರಮಠ ಕೋಲಾರ ಇವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಲಿದೆ. ಡಿ.21ನೇ ಗುರುವಾರ ಶ್ರೀ ಕ್ಷೇತ್ರಕ್ಕೆ ಗುರುಬಲ ಪ್ರಾಪ್ತಿಗಾಗಿ ಧರ್ಮ ಸಂವರ್ಧನಾ ಸಭೆ ದಿವ್ಯ ಸಾನಿಧ್ಯ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧಿಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಾಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರು ಇವರ ದಿವ್ಯ ಸಾನಿಧ್ಯದಲ್ಲಿ 2024ನೇ ವರ್ಷದ ಶ್ರೀ ಮಠದ ಕ್ಯಾಲೆಂಡರ್ ಬಿಡುಗಡೆ, ಶ್ರೀ ಮಠದ ನೂತನ ಮಾಸ ಪತ್ರಿಕೆಯ ಪ್ರಾಯೋಗಿಕ ಪ್ರತಿ ಬಿಡುಗಡೆ, ಧರ್ಮ ಸಂವರ್ಧಕ ಪ್ರಶಸ್ತಿ ಪ್ರಧಾನ, ಧರ್ಮ ಹಿತಚಿಂತಕ ಪ್ರಶಸ್ತಿ ಪ್ರಧಾನ, ದಾಸೋಹ ಸೇವಾ ಭೂಷಣಾ ಪ್ರಶಸ್ತಿ ಪ್ರದಾನ ನೆರವೇರಲಿದೆ.
ಧರ್ಮ ಸಂವರ್ಧಕ, ಧರ್ಮ ಹಿತಚಿಂತಕ, ದಾಸೋಹ ಸೇವಾ ಭೂಷಣಾ ಪ್ರಶಸ್ತಿಗಳ ಪ್ರದಾನ ಸಮಾರಂಭ : ಈ ಭಾರಿಯ ಧರ್ಮ ಸಂವರ್ಧಕ ಪ್ರಶಸ್ತಿಯನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಸಮಾಜ ಸೇವಕ ಹಾಗು ಸ್ಟೋನ್ ಕ್ರಷರ್ ಮಾಲೀಕರಾಗಿರುವ ಶ್ರೀ ಸುರೇಶ್ ರವರಿಗೆ ಮತ್ತು ಧರ್ಮ ಹಿತಚಿಂತಕ ಪ್ರಶಸ್ತಿಯನ್ನು ಅಖಿಲ ಭಾರತ ವೀರಶೈವ ಸಭಾ ಹಾಗೂ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ತಾಲ್ಲೂಕು ಅಧ್ಯಕ್ಷರಾದ
ಶಿವಮೂರ್ತಿ ಎಸ್.ಎಸ್ ರವರಿಗೆ ಹಾಗು ದಾಸೋಹ ಸೇವಾ ಪೋಷಣಾ ಪ್ರಶಸ್ತಿಯನ್ನು ಜಿಲ್ಲಾ ಹೆಚ್.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಜಗದೀಶ್ ಕಬ್ಬಿನಹಳ್ಳಿ ರವರಿಗೆ ಗೌರವಿ ಸನ್ಮಾನಿಸಲಾಗುವುದು
ಎಂದು ತಿಳಿಸಿದರು.
ವರದಿ ಸತೀಶ್ ಚಿಕ್ಕಕಣಗಾಲು
Hassan
ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ

ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ತಾಲ್ಲೂಕಿನ ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಎಲ್ಲಾ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕುಮಾರ್ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಸಾಮಾನ್ಯ ಕ್ಷೇತ್ರದಿಂದ ಕೆ.ಕೆ. ಜಯರಾಮ, ಹೆಚ್.ಎಂ. ನಾರಾಯಣ, ಕೆ.ಟಿ. ಬೋರೇಗೌಡ, ಸುಬ್ಬೇಗೌಡ, ವೆಂಕಟೇಗೌಡ, ಮಹಿಳಾ ಕ್ಷೇತ್ರದಿಂದ ಶಕುಂತಲ, ಪ್ರತಿಮ, ನಂಜಶೆಟ್ಟಿ (ಹಿಂದುಳಿದ ವರ್ಗ ಎ), ಕೆ. ಜಗದೀಶ್ (ಹಿಂದುಳಿದ ವರ್ಗ ಬಿ), ರಂಗಸ್ವಾಮಿ (ಪ.ಜಾ.) ಹಾಗು ಪರಿಶಿಷ್ಟ ಪಂಗಡದ ಒಂದು ಸ್ಥಾನಕ್ಕೆ ಯಾರೂ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಸ್ಥಾನ ಖಾಲಿಯಿದೆ. ಸಾಲಗಾರರಲ್ಲದ ಕ್ಷೇತ್ರದಿಂದ ಕೆ.ಸಿ. ಸಂತೋಷ್ ಅವರು ಆಯ್ಕೆಯಾದರು. 2030ರ ಫೆ. 9ರ ವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ.
ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಕುಮಾರಸ್ವಾಮಿ, ನಂಜೇಶ್ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಹಾಜರಿದ್ದರು.
Hassan
ಫೆ.11 ರಿಂದ 13 ವರೆಗೆ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ

ಬೇಲೂರು: ಬೇಲೂರಿನ ಚನ್ನಾಪುರ ರಸ್ತೆಯಲ್ಲಿರುವ ಕೋವಿಪೇಟೆಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ ಫೆ. 11 ರಿಂದ ಫೆ.13ರ ವರೆಗೂ ನಡೆಯಲಿದೆ, ಪ್ರತಿಯೊಬ್ಬ ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇಗುಲದ ಪ್ರಧಾನ ಅರ್ಚಕ ರವಿಸ್ವಾಮಿ ತಿಳಿಸಿದ್ದಾರೆ.
ಜಾತ್ರಾ ಮಹೋತ್ಸವ ನಿಮಿತ್ತ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಫೆ.11 ಮಂಗಳವಾರ ಸಂಜೆ 6.00 ಗಂಟೆಗೆ ಗಂಗಪೂಜೆ ಮತ್ತು ಕಳಸ ಸ್ಥಾಪನೆ, ಪಂಚಾಮೃತ, ಅಭಿಷೇಕ, ಗಣ ಹೋಮ, ನವಗ್ರಹ ಹೋಮ ಚಂಡಿ ಹೋಮ, ದುರ್ಗಾ ಹೋಮ, ಜಯಾವಿ ಹೋಮಗಳು ನಡೆಯುತ್ತದೆ.
ಫೆ.12 ರ ಬುಧವಾರ ಬೆಳಗ್ಗೆ 8.00 ಗಂಟೆಗೆ 12.30 ವರೆಗೂ ಬೇಲೂರಿನ ವಿಷ್ಣು ಸಮುದ್ರದಲ್ಲಿ (ಅಷ್ಟಮ್ಮನಕೆರೆ) “ಗಂಗಾ ಪೂಜೆ’ ನಂತರ ನಗರದ ಪ್ರಮುಖ ಬೀದಿಗಳಲ್ಲಿ ವೀರಗಾಸೆ ಕುಣಿತ, ಡೊಳ್ಳು ಕುಣಿತ, ನಂದಿ ಧ್ವಜ ಮತ್ತು ಚೌಡಿಕೆ ಪದಗಳೊಂದಿಗೆ ಹಲವು ವಾದ್ಯ ಗೋಷ್ಠಿಯೊಂದಿಗೆ 101 ಕುಂಭಾಷೇಕಗಳೊಂದಿಗೆ ಪ್ರಷಾಲಂಕಾರಗೊಂಡ ಶ್ರೀ ರೇಣುಕಾ ಅಮ್ಮನವರ ಪಲ್ಲಕ್ಕಿ ಮೆರವಣಿಗೆ ಮತ್ತು ಬೆಳಗ್ಗೆ 11.30 ಕ್ಕೆ “ಶ್ರೀ ರೇಣುಕಾ ಯಲ್ಲಮ್ಮನವರ ಕೆಂಡೋತ್ಸವ” ನಡೆಯುತ್ತದೆ. ನಂತರ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ಇರುತ್ತದೆ. “ಮದ್ಯಾಹ್ನ 1-00 ಗಂಟೆಗೆ ಅನ್ನ ಸಂತರ್ಪಣೆ” ನಡೆಯುತ್ತದೆ.
ಫೆ.13 ರ ಬೆಳಿಗ್ಗೆ 8.00 ರಿಂದ ಶ್ರೀ ಹುಚ್ಚಂಗಿ ಅಮ್ಮನವರ ಜಾತ್ರಾ ಮಹೋತ್ಸವ ಉತ್ಸವ” ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ದೇವಿಗೆ ಹರಕೆ ಸೇವೆ ಇರುತ್ತದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ ತನು, ಮನ, ಧನ ಸಹಾಯದೊಂದಿಗೆ ಸಹಕರಿಸಿ ಶ್ರೀ ದೇವಿಯವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Hassan
ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ ಕಂಪನಿಗೆ ಒಂದು ಲಕ್ಷ ರೂ. ದಂಡ

ಚಾಮರಾಜನಗರ, ಫೆ.06:- ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ್ದ ತಮಿಳುನಾಡಿನ ಕಂಪನಿಯೊಂದಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ನ್ಯಾಯನಿರ್ಣಾಯಕ ಅಧಿಕಾರಿ ಗೀತ ಹುಡೇದ ಅವರು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಹನೂರು ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿರುವ ಶ್ರೀ ಮಹದೇಶ್ವರ ಸ್ಟೋರ್ ಗೆ ಕಳೆದ 2024ರ ಜುಲೈ 29ರಂದು ಕೊಳ್ಳೇಗಾಲ ತಾಲ್ಲೂಕಿನ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಂಗಡಿಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವಿ.ಕೆ.ಎಸ್.ಟ್ರೂ ಸಾಲ್ಟ್ (VKS TRUE SALT) ಎಂಬ ಹೆಸರಿನ ಉಪ್ಪಿನ ಆಹಾರ ಮಾದರಿಯನ್ನು ಸಂಗ್ರಹಿಸಿ ಮೈಸೂರಿನ ವಿಭಾಗೀಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.
ಸದರಿ ಉಪ್ಪಿನ ಮಾದರಿಯು ವಿಶ್ಲೇಷಣಾ ವರದಿಯಿಂದ ಕಳಪೆ ಗುಣಮಟ್ಟ (ಸಬ್ ಸ್ಟ್ಯಾಂಡರ್ಡ್) ಎಂದು ದೃಡಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಮೊಕದ್ದಮೆ ಹೂಡಲಾಗಿತ್ತು.
ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಾಯಕ ಅಧಿಕಾರಿಗಳಾದ ಗೀತಾ ಹುಡೇದ ಅವರು ಪ್ರಕರಣದ ವಿಚಾರಣೆ ನಡೆಸಿ ತಯಾರಕರಾದ ತಮಿಳುನಾಡಿನ ತೂತುಕುಡಿಯ ವಿ.ಕೆ.ಎಸ್. ಪುಡ್ ಪ್ರಾಡಕ್ಟ್ಸ್ ಕಂಪನಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮ ನಿಬಂಧನೆ 2011ರ ರಿತ್ಯಾ ಸೆಕ್ಷನ್ 51 ರಡಿಯಲ್ಲಿ ಒಂದು ಲಕ್ಷ ರೂ. ದಂಡ ವಿಧಿಸಿ ಫೆಬ್ರವರಿ 3 ರಂದು ಆದೇಶಿಸಿದ್ದಾರೆ.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan9 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್