Hassan
ದಲಿತ ಉದ್ದಿಮೆದಾರರ ಸಂಘದವತಿಯಿಂದ ಅನಿರ್ಧಿಷ್ಟವಧಿ ಧರಣಿ

ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ೨೪ ಹಾಗೂ ಸಾಮಾನ್ಯ ವರ್ಗದ ೧೨ ಸೇರಿ ಒಟ್ಟು ೩೮ ಉದ್ಯಮದಾರರಿಗೆ ಕೈಗಾರಿಕೆಗಳನ್ನು ಸ್ಥಾಪಿಸಲು ಎದುರಾಗುತ್ತಿರುವ ನಿವೇಶನದ ತೊಂದರೆಯನ್ನು ಸರಿಪಡಿಸಿಕೊಡದ ಜಿಲ್ಲಾಡಳಿತ ಮತ್ತು ಕೆ.ಐ.ಎ.ಡಿ.ಬಿ. ರವರಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಅನಿರ್ಧಿಷ್ಟವಧಿ ಕಾಲ ಧರಣಿಯನ್ನು ಕಛೇರಿ ಮುಂದೆ ಹಾಸನ ಜಿಲ್ಲಾ ದಲಿತ ಉದ್ದಿಮೆದಾರರ ಸಂಘದವತಿಯಿಂದ ಪ್ರಾರಂಭಿಸಿದರು.
ಆರ್.ಪಿ.ಐ. ಪಕ್ಷದ ಮುಖಂಡರಾದ ಶ್ರೀಧರ್ ಕಲವೀರ್ ಮತ್ತು ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ರಾಜ್ಯಾ ಕಾರ್ಯಾಧ್ಯಕ್ಷರಾದ ಸಿ.ಜಿ. ಶ್ರೀನಿವಾಸ್ ಉದ್ದೇಶಿಸಿ ಮಾತನಾಡಿದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಒಬಿಸಿ ವರ್ಗದ ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಲ್ಲೊಂದಾದ “ಉದ್ಯಮ ಸ್ನೇಹಿ” ಉದ್ಯಮಿಯಾಗಿ ಉದ್ಯೋಗ ನೀಡು ಎಂಬ ಯೋಜನೆಯನ್ನು ೨೦೧೫-೧೬ ಸಾಲಿನಲ್ಲಿ ಈಗಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಜಾರಿಗೊಳಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಆರ್ಥಿಕವಾಗಿ ಸದೃಢಗೊಳಿಸಿ, ಉದ್ಯಮದಲ್ಲಿ ತೊಡಗುವಂತೆ ಮಾಡಬೇಕು ಎಂದು ಸರ್ಕಾರದ ಸಹಾಯಧನದೊಂದಿಗೆ ಕೆ.ಐ.ಎ.ಡಿ.ಬಿ.ಯ ನಿವೇಶನಗಳಲ್ಲೂ ಮೀಸಲಾತಿಯನ್ನು ನೀಡಬೇಕೆಂದು ಆದೇಶ ಮಾಡಲಾಗಿತ್ತು ಎಂದರು. ಇದರ ಪರಿಣಾಮ ಹಾಸನ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಉದ್ಯಮಿಗಳಾಗುವ ಕನಸು ಕಟ್ಟಿಕೊಂಡು ಕೆ.ಐ.ಎ.ಡಿ.ಬಿ ಹಾಗೂ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರ ಕಛೇರಿಗೆ ನಿವೇಶನಗಳಿಗೆ ಅರ್ಜಿ ಸಲ್ಲಿಸಿದವು. ನಂತರ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತಾಧಿಕಾರದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಯೋಜನೆಗಳು ಅನುಮೋದನೆಗೊಂಡು ಕೆ.ಐ.ಎ.ಡಿಬಿಯವರು ಕೌಶಿಕ ಗ್ರಾಮದ ಸರ್ವೇ ನಂ.೩೨೮ ರಲ್ಲಿ ನಿರ್ಮಾಣ ಮಾಡಿರುವ ಉಪ ಬಡಾವಣೆ ೪ ರಲ್ಲಿರುವ ನಿವೇಶನಗಳನ್ನು ಮಂಜೂರು ಮಾಡಿ ನಂತರ ಹಣ ಪಾವತಿಸಿಕೊಂಡು ನಿವೇಶನದ ಹಂಚಿಕೆ ಪತ್ರಗಳನ್ನು ನೀಡಿದ ನಂತರ ಉಳಿಕೆ ಹಣವನ್ನು ಪಾವತಿಸಲು ವಿಳಂಬ ಮಾಡಿದ್ದೇವೆ ಎಂದು ಬಡ್ಡಿಯನ್ನು ಸಹ ವಿಧಿಸಿ ನಾವುಗಳು ಬಡ್ಡಿಯೊಂದಿಗೆ ನಿವೇಶನದ ಸಂಪೂರ್ಣ ಹಣವನ್ನು ಪಾವತಿಸಿದ ನಂತರ ಹಾಸನ ತಾಲೂಕಿನ ಉಪನೊಂದಣಾಧಿಕಾರಿಯವರ ಕಚೇರಿಯಲ್ಲಿ ನಿವೇಶನದ ನೋಂದಣಿಯನ್ನು ಮಾಡಿಸಿ ಕೌಶಿಕ ಗ್ರಾಮ ಪಂಚಾಯಿತಿಯಲ್ಲಿ ಈ ಸ್ವತ್ತನ್ನು ಪಡೆದುಕೊಂಡು ಉದ್ಯಮವನ್ನು ಪ್ರಾರಂಭಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಪಡೆದುಕೊಂಡು ಅನೇಕರು ಕೆ.ಎಸ್.ಎಫ್.ಸಿ. ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲಗಳನ್ನು ಪಡೆಯಲು ಎಲ್ಲಾ ದಾಖಲಾತಿಗಳನ್ನು ನೀಡಿ ಸಾಲಗಳು ಮಂಜೂರಾಗಿದ್ದವು ಎಂದು ಹೇಳಿದರು.
ಎಲ್ಲಾ ದಾಖಲಾತಿಗಳನ್ನು ಪಡೆದುಕೊಂಡು ನಮಗೆ ನೀಡಿರುವ ಕೌಶಿಕ ಗ್ರಾಮದ ಸರ್ವೆ ನಂಬರ್ ೩೨೮ ರಲ್ಲಿರುವ ಉಪ ಬಡಾವಣೆ ೪ ರಲ್ಲಿನ ನಿವೇಶನಗಳಲ್ಲಿ ಕೆಲಸ ಪ್ರಾರಂಭಿಸಲು ಜೆಸಿಬಿ ಯಂತ್ರಗಳನ್ನು ತೆಗೆದುಕೊಂಡು ಹೋದಾಗ ಕೌಶಿಕ ಗ್ರಾಮದ ಗ್ರಾಮಸ್ಥರು ಇದು ನಮ್ಮೂರಿನ ಗೋಮಾಳ ಜಾಗ ಎಂದು ನಮ್ಮಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ಮೇಲೆ ಹಲ್ಲೆಗೂ ಸಹ ಮುಂದಾದರು. ನಂತರ ಕೆ.ಐ.ಎ.ಡಿ.ಬಿ ಕಚೇರಿಗೆ ತೆರಳಿ ಕೌಶಿಕ ಗ್ರಾಮಸ್ಥರು ನಮ್ಮೂರಿನ ಗೋಮಾಳ ಎಂದು ಗಲಾಟೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಕ್ಕೆ ನಿಮಗಳಿಗೆ ನೀಡಿರುವ ನಿವೇಶನಗಳು ಗೋಮಾಳ ಜಾಗವಲ್ಲ ರೈತರಿಂದ ಸ್ವಾದಿನ ಪಡಿಸಿಕೊಂಡಿರುವ ನಿವೇಶನಗಳು ಎಂದು ತಿಳಿಸಿ ಅವರುಗಳು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಪಡಲೇ ಇಲ್ಲ ಎಂದರು. ನಂತರ ನಾವುಗಳು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಕೋರಿಕೊಂಡೆವು. ಅಲ್ಲಿಯೂ ಪ್ರಯೋಜನವಾಗಿಲ್ಲ. ನಂತರ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅವರಿಗೆ ಸಾಕಷ್ಟು ಬಾರಿ ಅರ್ಜಿಗಳನ್ನು ನೀಡಿ ಸಮಸ್ಯೆಯನ್ನು ಬಗೆಹರಿಸುವಂತೆ ಕೇಳಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ನಂತರ ಮುಂದುವರೆದಂತೆ ಹಾಸನ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಾಕಷ್ಟು ಬಾರಿ ನಮ್ಮಗಳಿಗೆ ನೀಡಿರುವ ನಿವೇಶನಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ಉದ್ಯಮವನ್ನು ಪ್ರಾರಂಭ ಮಾಡಲು ಅನುವು ಮಾಡಿಕೊಡಬೇಕೆಂದು ಅರ್ಜಿಗಳನ್ನು ಸಾಕಷ್ಟು ಬಾರಿ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಕೆ.ಎನ್. ರಾಜಣ್ಣನವರಿಗೂ ಕೂಡ ಸಮಸ್ಯೆಯನ್ನು ಬಗೆಹರಿಸುವಂತೆ ಮೂರು ಬಾರಿ ಮನವಿ ಪತ್ರಗಳನ್ನು ನೀಡಿದ್ದೇವೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಚನ್ನರಾಯಪಟ್ಟಣದಲ್ಲಿ ನಡೆಸಿದ “ಜನತಾದರ್ಶನ” ಕಾರ್ಯಕ್ರಮದಲ್ಲೂ ಕೂಡ ಅರ್ಜಿ ಸಲ್ಲಿಸಿದವು. ಉಸ್ತುವಾರಿ ಮಂತ್ರಿಗಳಿಗೆ ಎಷ್ಟು ಬಾರಿ ಅರ್ಜಿ ಸಲ್ಲಿಸಿದರು ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು. ನಂತರ ನಾವು ಈ ನಾಡಿನ ದೊರೆಗಳಾದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ೨೦೨೪ ಫೆಬ್ರವರಿಯಲ್ಲಿ ರಂದು ವಿಧಾನಸೌಧದ ಆವರಣದಲ್ಲಿ ನಡೆಸಿದ “ಜನಸ್ಪಂದನ” ಕಾರ್ಯಕ್ರಮಕ್ಕೆ ತೆರಳಿ ನಮ್ಮಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಕೋರಿ ಅರ್ಜಿ ನೀಡಿದವು. ನಂತರ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಅರ್ಜಿಯನ್ನು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ವರ್ಗಾಯಿಸಿದರು. ನಂತರ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ಈ ವಿಷಯಕ್ಕೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ. ನೀವು ಕೆ.ಐ.ಎ.ಡಿ.ಬಿ. ಕಾರ್ಯಪಾಲಕ ಅಭಿಯಂತರರನ್ನು ಸಂಪರ್ಕಿಸಿ ಅವರ ಬಳಿ ಸರಿಪಡಿಸಿಕೊಳ್ಳಿ ಎಂದು ಹಿಂಬರಹವನ್ನು ನೀಡಿರುತ್ತಾರೆ. ನಾವು ಯಾರ ಬಳಿ ಹೋದರೂ ನಮ್ಮ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಇದರಿಂದ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ೨೪ ಜನರು ಮತ್ತು ಸಾಮಾನ್ಯ ವರ್ಗದ ೧೨ ಜನರು ಸಾಲಗಳನ್ನು ಮಾಡಿಕೊಂಡು ನಿವೇಶನದ ಹಣವನ್ನು ಪಾವತಿಸಿರುವ ನಮ್ಮಗಳ ಬದುಕು ತುಂಬಾ ಕಷ್ಟಕರವಾಗಿದೆ ಎಂದು ಅಳಲು ತೋಡಿಕೊಂಡಿದ್ದರು. ಜಿಲ್ಲಾಡಳಿತ ಮತ್ತು ಕೆ.ಐ.ಎ.ಡಿ.ಬಿ. ಅವರಿಂದ ಆಗಿರುವ ಅನ್ಯಾಯವನ್ನು ಖಂಡಿಸಿ ನಮ್ಮಗಳಿಗೆ ನ್ಯಾಯ ಸಿಗುವವರೆಗೂ ಕೆ.ಐ.ಎ.ಡಿ.ಬಿ. ಕಛೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಧರಣಿಯಲ್ಲಿ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ರಾಜ್ಯಾ ಕಾರ್ಯಾಧ್ಯಕ್ಷರಾದ ಸಿ.ಜಿ. ಶ್ರೀನಿವಾಸ್, ಭೀಮ್ ಆರ್ಮಿಯ ಪ್ರಸನ್ನ, ರಾಜ್ಯಾಧ್ಯಕ್ಷ ರಾಜಗೋಪಾಲ್, ಆರ್.ಪಿ.ಐ. ರಾಜ್ಯಾಧ್ಯಕ್ಷ ಸತೀಶ್, ವೆಂಕಟೇಶ್ ಹಾಗೂ ರಾಜ್ಯ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ದಲಿತ ಉದ್ದಿಮೆದಾರರ ಸಂಘದ ಎಲ್ಲಾ ಜಿಲ್ಲೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು
Hassan
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪ ತಹಶೀಲ್ದಾರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.
ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.
Hassan
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ

ಹಾಸನ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕೈಗೆ ಹಾಕಿದ್ದ ಕಾಶೀ ದಾರವನ್ನು ತೆಗೆದು ಹಾಕಲು ಹೇಳಿದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬ್ರಾಹ್ಮಣ ಸಂಘದ ಸದಸ್ಯ ವೇಣುಗೋಪಾಲ್ ಬೇಸರವ್ಯಕ್ತಪಡಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವರ ಅವರ ಧರ್ಮದ ಆಚರಣೆಗಳನ್ನು, ಇನ್ನೊಬ್ಬರಿಗೆ ತೊಂದರೆ ಆಗದಂತೆ, ಪಾಲಿಸುವ ಅವಕಾಶ ನೀಡಿದೆ. ಹೀಗಿರುವಾಗ ಸಾಮಾನ್ಯ ನಾಗರೀಕನ ಹಕ್ಕನ್ನು ಮೋಟಕುಗೊಳಿಸುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನೆಪದಲ್ಲಿ ಬ್ರಾಹ್ಮಣ ಸಮಾಜದ ಧಾರ್ಮಿಕ ಆಚರಣೆಗಳನ್ನು ತಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Hassan
ತಾಲೂಕಿನ ವಿವಿಧ ಚರ್ಚ್ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ವಿವಿಧ ಚರ್ಚ್ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ಹಲವು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಚರ್ಚ್ಗಳಲ್ಲಿ ಮೇಣದ ಬತ್ತಿ ಹಿಡಿದು ಪ್ರಾರ್ಥನೆ ಸಲ್ಲಿದ ದೃಶ್ಯ ಕಂಡು ಬಂತು.
ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದ ಸಂತ ಜೋಸೆಫರ ಚರ್ಚ್ನಲ್ಲಿ ಹಾಗೂ ಮಗ್ಗೆ ಗ್ರಾಮದಲ್ಲಿರುವ ಸೆಂಟ್ ಫ್ರಾನ್ಸಿಸ್ ಕ್ಷವಿಯರ್ ಚರ್ಚ್ನಲ್ಲಿ ಯೇಸು ಕ್ರಿಸ್ತನು ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಯ ಮೇಲೆ ಮರಣ ಹೊಂದುವ ತನಕದ ವಿವಿಧ ಘಟನೆಗಳನ್ನು ನೆನಪಿಸುವ ಪ್ರದರ್ಶನದ ಮೂಲಕ ಜನರಿಗೆ ಏಸು ಕ್ರಿಸ್ತನ ಕುರಿತ ಸಂದೇಶ ಸಾರಲಾಯಿತು. ನಂತರ ಯೇಸು ಕ್ರಿಸ್ತನು ಆಡಿದ ಮಹತ್ವದ ಏಳು ಮಾತುಗಳ ಕುರಿತು ಪ್ರವಚನ ನೀಡಲಾಯಿತು.
ಜೋಸೆಫ್ ನಗರದಲ್ಲಿರುವ ಜೋಸೆಫರ ಚರ್ಚ್ ನ ಧರ್ಮ ಗುರುಗಳಾದ ಒಂದನೆಯ ಫಾದರ್ ಆಲ್ವಿನ್ ಡಿಸೋಜಾ ಮಾತನಾಡಿ, ಕ್ರಿಶ್ಚಿಯನ್ ಧರ್ಮದಲ್ಲಿ ಮಹತ್ವದ ತಿರುವು ಪಡೆದ ಯೇಸುಕ್ರಿಸ್ತನ ಶಿಲುಬೆಗೇರಿಸುವಿಕೆಯ ಸನ್ನಿವೇಶವು ಗುಡ್ ಪ್ರೈಡೇಗೆ ಅಡಿಪಾಯವನ್ನು ಹಾಕಿದೆ. ಯೇಸುಕ್ರಿಸ್ತನು 2000 ಸಾವಿರ ವರ್ಷಗಳ ಹಿಂದೆ ಭೂಲೋಕಕ್ಕೆ ಮನುಷ್ಯ ಅವತಾರ ತಾಳಿ ಬಂದನು. ಮನುಷ್ಯನಂತೆ ಲೋಕದಲ್ಲಿ ಜೀವಿಸಿದನು. ಆದರೆ, ಪಾಪ ಮಾತ್ರ ಮಾಡಲಿಲ್ಲ. ಆದರೂ ಆಗಿನ ರೋಮ್ ಸಾಮ್ರಾಜ್ಯದಲ್ಲಿ ಯೆಹೂದ್ಯರು ಆತನನ್ನು ಶಿಲುಬೆಯ ಮರಣಕ್ಕೆ ಒಪ್ಪಿಸಿದರು. ಆದರೆ, ಆತನು ಮೂರು ದಿನಗಳ ನಂತರ ಪುನರುತ್ಥಾನವಾದನು. ಹೀಗಾಗಿ ಕ್ರೈಸ್ತರು ಕೂಡ ಲೋಕದಲ್ಲಿ ಇರುವಾಗ ಕ್ರಿಸ್ತನಿಗೆ ವಿರುದ್ಧವಾದ ಕೆಲಸಗಳನ್ನು ಮಾಡಬಾರದು. ಕ್ರಿಸ್ತನಂತೆ ಜೀವನ ಮಾಡಬೇಕು ಎಂದು ಸಂದೇಶ ನೀಡಿದರು.
ಪೋಟೋ ಕ್ಯಾಪ್ಶನ್: ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚ್ ನಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu19 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu16 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar14 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ