Mandya
ರೈತರ ಕಣ್ಣೀರು ಒರೆಸಿದ ನಾಯಕ ಕುಮಾರಣ್ಣ – ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ

ಮಂಡ್ಯ: ರೈತರ ಕಣ್ಣೀರು ಒರೆಸಿದ ನಾಯಕ ಕುಮಾರಸ್ವಾಮಿ. ಅವರು ರೈತರ ಸಾಲಮನ್ನಾ ಮಾಡಿದ್ದಾರೆ.
ಯಾವುದೇ ಸಹಕಾರ ಇಲ್ಲದಿದ್ದರೂ ಸಾಲಮನ್ನಾ ಮಾಡಿದ್ದರು ಸಾಲ ಮನ್ನಾದಲ್ಲಿ ಸಿಂಹ ಪಾಲು ಮಂಡ್ಯ ರೈತರಿಗೆ ಅನುಕೂಲವಾಗಿದೆ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.
ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಜೆಡಿಎಸ್-ಬಿಜೆಪಿ ಮಹಿಳಾ ಘಟಕದ ವತಿಯಿಂದ ನೆಡೆದ ಜೆಡಿಎಸ್-ಬಿಜೆಪಿ ಮಹಿಳಾ ಸಮನ್ವಯ ಸಮಾವೇಶವನ್ನು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಏ. 26ಕ್ಕೆ ಚುನಾವಣೆ ಇದೆ.
ಮೈತ್ರಿ ಅಭ್ಯರ್ಥಿಯಾಗಿ ಎಚ್ಡಿಕೆ ಸ್ಪರ್ಧೆ ಮಾಡಿದ್ದಾರೆ. ಅವರು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಅಂತಾ ಅನ್ಕೊಂಡಿರಲಿಲ್ಲ. ದೇವರೇ ಅವರಿಗೆ ಮನಸ್ಸು ಕೊಟ್ಟಿರಬಹುದು ಮಂಡ್ಯ ಜನರ ಬಗ್ಗೆ ಅಭಿಮಾನ ಹೆಚ್ಚು ಎಂದು ಹೇಳಿದರು.
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ.ಹೋಬಳಿ ಮಟ್ಟಕ್ಕೆ ಆಸ್ಪತ್ರೆ, ಶಾಲಾ,ಕಾಲೇಜು, ವಿದ್ಯುತ್ ಸಬ್ ಸ್ಟೇಷನ್, ರಸ್ತೆ ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.
ಮಂಡ್ಯ ಜಿಲ್ಲೆಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಕೊಡುಗೆ ಅಪಾರವಾಗಿದೆ.ಪ್ರಧಾನಿಯಾಗಿ
ದ್ದಾಗ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಐತಿಹಾಸಿಕ ನ್ಯಾಯ ಕೊಡಿಸಿದ್ದಾರೆ.ಜಿಲ್ಲೆಯ ನೀರಾವರಿಗೆ ದೇವೇಗೌಡರ ಕೊಡುಗೆ ಅಪಾರವಾಗಿದ್ದು ,
ದೇವೇಗೌಡರ ಹೋರಾಟದ ಫಲ ಇವತ್ತು ಜಿಲ್ಲೆಗೆ ನೀರಾವರಿ ಯೋಜನೆ ಜಾರಿಯಾಗಿದೆ. ದೇವೇಗೌಡರ ಶ್ರಮ ಇಲ್ಲದಿದ್ದರೇ ಮಂಡ್ಯ ಬರಡು ಭೂಮಿಯಾಗಿರುತ್ತಿತ್ತು ಎಂದರು.
ರಸ್ತೆ,ನಾಲಾ ಅಭಿವೃದ್ಧಿ ಆಗಿವೆ.
ಎಲ್ಲಾ ರಾಜಕಾರಣಿಗಳಿಗೂ ಕೆಲಸಮಾಡುವ ಇಚ್ಛಾಶಕ್ತಿ ಇರಬೇಕು.ಮಂಡ್ಯಕ್ಕೆ ಕುಮಾರಸ್ವಾಮಿ, ದೇಶಕ್ಕೆ ಮೋದಿ ಬೇಕು. ನಮ್ಮ ಮಾವನವರು ಕೂಡ ಒಪ್ಪಿದ್ದಾರೆ. ಈ ದೇಶಕ್ಕೆ ಮೋದಿ
ಯಂತಹ ನಾಯಕತ್ವಬೇಕು ಅಂದಿದ್ದಾರೆ. ಈ ಬಗ್ಗೆ ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಟ್ಟು ಹೆಚ್ಚು ಮತ ಹಾಕಿಸಿ.
ಮಹಿಳೆಯರು ಅವಕಾಶ ವಂಚಿತರಾಗಿದ್ದಾರೆ.
ಮಹಿಳೆಯರಿಗೆ ಹೆಚ್ಚಿನ ಅವಕಾಶ ಸಿಗಬೇಕು. ಅವಕಾಶ ಸಿಕ್ಕಾಗ ಅದನ್ನ ಸದುಪಯೋಗ ಪಡೆದುಕೊಳ್ಳಬೇಕು.
ಮಂಡ್ಯ ಜಿಲ್ಲೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಮುಖಂಡ ಬಿ.ಆರ್.ರಾಮ
ಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉದಯಶಂಕರ್, ನಗರ ಘಟಕದ ಅಧ್ಯಕ್ಷೆ ಜಯಶೀಲಮ್ಮ, ಪದ್ಮಾವತಿ, ನಾಗಮ್ಮ, ಕಲ್ಪನಾ ರಾಮಚಂದ್ರ,ಮಂಗಳ ನವೀನ್ ಸೇರಿದಂತೆ ಇತರರು
ಭಾಗವಹಿಸಿದ್ದರು.
Mandya
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡಿದ್ದಾರೆ.
ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು, ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mandya
ವೈರಮುಡಿ ಉತ್ಸವದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು : ಎನ್.ಚಲುವರಾಯಸ್ವಾಮಿ

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಮೇಲುಕೋಟೆ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಏಪ್ರಿಲ್ 2 ರಿಂದ 14 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಏಪ್ರಿಲ್ 7 ರಂದು ನಡೆಯಲಿರುವ ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದಾರೆ ಎಂದರು.
ಬೇಸಿಗೆ ಬಿಸಿಲಿನ ತಾಪ ಹೆಚ್ಚಿದ್ದು, ಭಕ್ತಾಧಿಗಳಿಗೆ ಮುಖ್ಯವಾಗಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.
ಕುಡಿಯುವ ನೀರು, ದಸೋಹ ಭವನದಲ್ಲಿ ಆಹಾರ ವಿತರಣೆ ಹಾಗೂ ಪ್ರಸಾದ ವಿತರಣೆ ಭಾಗಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಪರೀಕ್ಷೆಗೆ ಒಳಪಡಿಸಿದ ನಂತರವೇ ವಿತರಣೆಯಾಗಬೇಕು.
ಮೇಲುಕೋಟೆಗೆ ವಿವಿಧ ಭಾಗಗಳಿಂದ ಸಂಪರ್ಕಿಸುವ ರಸ್ತೆಗಳ ದುರಸ್ತಿ ಕೆಲಸಗಳು ವೇಗವಾಗಿ ನಡೆಸಿ ಪೂರ್ಣಗೊಳಿಸಬೇಕು. ವಾಹನ ನಿಲುಗಡೆ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಟ್ಯಾಂಕರ್ ದೇವಸ್ಥಾನದ ಸುತ್ತಲೂ ,ಕಲ್ಯಾಣಿ, ಪಾರ್ಕಿಂಗ್ ಸ್ಥಳ ಸೇರಿದಂತೆ ಜನಸಂದಣಿ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆಯಾಗಬೇಕು ಭಕ್ತಾಧಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದರು.
ವೈರಮುಡಿ ಉತ್ಸವದಲ್ಲಿ ಭಾಗವಹಿಸುವ ಭಕ್ತಾಧಿಗಳಿಗೆ ದಸೋಹ ಭವನ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ ನೀಡಲು ದೇವಸ್ಥಾನದ ಸುತ್ತಲೂ ಸೂಚನಾ ಪಲಕಗಳನ್ನು ಅಳವಡಿಸಿ, ದಸೋಹ ಭವನದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು. ದಸೋಹಕ್ಕೆ ಬೇಕಿರುವ ಆಹಾರ ಸಾಮಗ್ರಿಗಳ ದಾಸ್ತಾನು ಆಗಬೇಕು.
ದೇವಸ್ಥಾನ ಸುತ್ತ ಹೆಚ್ಚಿನ ಟ್ರನ್ಸ್ ಪರ್ಮರ್ ಬೇಕಿದ್ದಲ್ಲಿ ವ್ಯವಸ್ಥೆ ಮಾಡಿಕೊಳ್ಳಿ, ಅಗತ್ಯವಿರುವ ಕಡೆ ಹೆಚ್ಚಿನ ವಿದ್ಯುತ್ ದೀಪಗಳ ವ್ಯವಸ್ಥೆಯಾಗಬೇಕು. ಕಲ್ಯಾಣಿಗಳ ಸ್ವಚ್ಛತೆಯನ್ನು ಕೈಗೊಳ್ಳಿ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಈ ಬಾರಿ 19 ಲಕ್ಷ ರೂ ವೆಚ್ಚದಲ್ಲಿ ಶಾಶ್ವತವಾಗಿ ಸಿ.ಸಿ.ಟಿ ವಿ ಅಳವಡಿಸಲಾಗುವುದು. ಇದನ್ನು ವೀಕ್ಷಿಸಲು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು.
ಕಲ್ಯಾಣಿಗಳ ಬಳಿ ನುರಿತ ಈಜುಗಾರರನ್ನು ನೇಮಿಸಬೇಕು. ಕಲ್ಯಾಣಿ ಯ ಹತ್ತಿರ ವಿದ್ಯುತ್ ದೀಪಗಳು ಹಾಗೂ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಾಯಿಸಲು ಶೆಡ್ ಗಳ ನಿರ್ಮಾಣವಾಗಬೇಕು ಎಂದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಹೆಚ್ಐವಿ ಸೋಂಕಿತರನ್ನು ತಾರತಮ್ಯ ಮಾಡುವುದು ಅಪರಾಧ: ಶ್ರೀವಿನಾಯಕ್

ಶ್ರೀರಂಗಪಟ್ಟಣ : ಹೆಚ್ಐವಿ ಸೋಂಕಿತರನ್ನು ಯಾವುದೇ ಕ್ಷೇತ್ರದಲ್ಲಿ ತಾರತಮ್ಯ ಮಾಡುವುದು ಅಪರಾಧವಾಗಿದ್ದು, ಕಾಯ್ದೆ ಉಲ್ಲಂಘಿಸಿದಲ್ಲಿ 6 ತಿಂಗಳು ಜೈಲು ಹಾಗೂ 2 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಜಿಲ್ಲಾ ಮೇಲ್ವಿಚಾರಕ ಶ್ರೀವಿನಾಯಕ್ ಹೇಳಿದರು.
ಅವರು ಪಟ್ಟಣದ ಕೋರುನ್ ಇಂಡಿಯಾ ಗಾರ್ಮೆಂಟ್ಸ್ ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಮಂಡೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಶ್ರೀರಂಗಪಟ್ಟಣದ ವತಿಯಿಂದ ಗಾರ್ಮೆಂಟ್ ನ ಆಡಳಿತ ವಿಭಾಗದ ಅಧಿಕಾರಿಗಳಿಗಾಗಿ ಹೆಚ್ಐವಿ ಏಡ್ಸ್ ನಿಯಂತ್ರಣ ಕಾಯ್ದೆ 2017 ಕುರಿತು ಏರ್ಪಡಿಸಿದ ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು.
ಹೆಚ್ಐವಿ ಏಡ್ಸ್ ರೋಗ ಲಕ್ಷಣ,ಚಿಕಿತ್ಸೆ ಕುರಿತು ಮಾಹಿತಿ ನೀಡಿದ ಅವರು ಹೆಚ್ಐವಿ ಸೋಂಕು ಹರಡುವುದು ಶೇಕಡ 90ರಷ್ಟು ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಲೇ ಬರುತ್ತದೆ ಸಂಸ್ಕರಿಸದ ಸೂಜಿ,ಸಿರಿಂಜಗಳು, ಸೋಂಕಿತ ರಕ್ತವನ್ನು ಪಡೆಯುವುದರಿಂದ ಹಾಗೂ ಸೋಂಕಿತ ತಾಯಿಯಿಂದ ಮಗುವಿಗೆ ಹರಡುವ ಪ್ರಮಾಣ ಶೇ10 ರಷ್ಟಿದ್ದು ಹಾಗಾಗಿ ಹೆಚ್ಐವಿ ಏಡ್ಸ್ ನಿಯಂತ್ರಿಸಲು ಯುವಜನತೆ ಮದುವೆಯಾಗುವ ತನಕ ಬ್ರಹ್ಮಚರ್ಯ ಪಾಲಿಸುವಂತೆ ತಿಳಿಸಿದರು.
ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಐವಿ ನಿಯಂತ್ರಣ ಸಲುವಾಗಿ ಎಲ್ಲಾ ಸಮುದಾಯಗಳಿಗೆ ಹಾಗೂ ಯುವ ಪೀಳಿಗೆಗೆ ಮಾಹಿತಿ ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇಂದಿನ ಯುವ ಜನಾಂಗ ಏಡ್ಸ್ ನಂತಹ ಖಾಯಿಲೆಗೆ ತುತ್ತಾಗುತ್ತಿರುವುದು ಕಳವಳಕಾರಿ ಸಂಗತಿ ಯುವಕರು ತಮ್ಮ ಜೀವನ ಹಾಳು ಮಾಡಿಕೊಳ್ಳದೆ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಏಡ್ಸ್ ಗೆ ಚಿಕಿತ್ಸೆ ಸಾಧ್ಯ ಆದರೆ ಸಂಪೂರ್ಣ ಗುಣ ಮುಖರಾಗಲು ಅಸಾಧ್ಯ. ಈ ಕಾರಣದಿಂದ ರೋಗಕ್ಕೆ ತುತ್ತಾಗದಂತೆ ಎಚ್ಚರ ವಹಿಸಬೇಕು. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.
ನಂತರ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿ, ಏಡ್ಸ್ ರೋಗ ನಿಯಂತ್ರಿಸಲು ಸಾಧ್ಯವಿದ್ದು ಪ್ರತಿಯೊಬ್ಬರಿಗೂ ಇದರ ಬಗ್ಗೆ ತಿಳುವಳಿಕೆ ಅಗತ್ಯವಾಗಿದೆ ಎಂದರು.
ಕಾರ್ಯಗಾರದಲ್ಲಿ ಹೆಚ್.ಆರ್ ಮ್ಯಾನೇಜರ್ ಸುಭಾಷ್ ಬಿ,ಶೃತಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಮೇಘನಾ, ಎಂ&ಇ ರಘು ಪ್ರಸಾದ್, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ್ ಎಂ ಸಿ, ಶುಶ್ರೂಷಕಿ ರೇಖಾ ಹಾಗೂ ಆಡಳಿತ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
-
Chamarajanagar22 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized20 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar22 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur24 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International14 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Chamarajanagar16 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ
-
Kodagu15 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Mandya18 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ