Connect with us

State

75 ವರ್ಷ ದಾಟಿದವರ ಮನೆಗೇ ಪಡಿತರ: ಆಹಾರ ಇಲಾಖೆ ಸಿದ್ಧತೆ

Published

on

ಬೆಂಗಳೂರು: ‘ಅನ್ನಭಾಗ್ಯ’ ಯೋಜನೆಯಡಿ ವಿತರಿಸುವ ಪಡಿತರವನ್ನು 75 ವರ್ಷ ದಾಟಿದವರ ಮನೆ ಬಾಗಿಲಿಗೇ ತಲುಪಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ಕೋರಿಕೆಯಷ್ಟು ಅಕ್ಕಿಯನ್ನು ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ (ಪ್ರತಿ ಕೆ.ಜಿಗೆ ₹ 34) ಪೂರೈಸಲು ಛತ್ತೀಸಗಢ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿವೆ.

ಇದೇ ತಿಂಗಳಿನಿಂದ ನಗದು ಬದಲು ಪೂರ್ಣ ಪ್ರಮಾಣದಲ್ಲಿ ಅಕ್ಕಿ ಪೂರೈಸಲು ನಿರ್ಧರಿಸಿರುವ ಇಲಾಖೆ, ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಮತ್ತೊಂದು ನಿರ್ಧಾರ ತೆಗೆದುಕೊಂಡಿದೆ. ಅದಕ್ಕಾಗಿ ಹಿರಿಯ ನಾಗರಿಕಸ್ನೇಹಿ ನೀತಿ ಪರಿಚಯಿಸುತ್ತಿದೆ.

ಇದುವರೆಗೂ ಪಡಿತರ ಕಾರ್ಡ್‌ ಹೊಂದಿರುವ ಕುಟುಂಬದ ಯಾರಾದರೂ ಒಬ್ಬ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಅಥವಾ ಅನ್ನಭಾಗ್ಯ ಪಡಿತರ ವಿತರಣಾ ಕೇಂದ್ರಗಳಿಗೆ ತೆರಳಿ ಬಯೊಮೆಟ್ರಿಕ್‌ ನೀಡಿದ ನಂತರ ತಮ್ಮ ಕುಟುಂಬಕ್ಕೆ ನಿಗದಿಪಡಿಸಿದ ಅಕ್ಕಿ ಮತ್ತಿತರ ಪಡಿತರ ಪಡೆಯಬೇಕಿತ್ತು. ವಯಸ್ಸಾದವರು ಪಡಿತರ ಕೇಂದ್ರಗಳಿಗೆ ಹೋಗಲು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಇಂತಹ ಸಮಸ್ಯೆಗಳಿಗೆ ಕೊನೆ ಹಾಡಲು ‘ಮನೆ ಬಾಗಿಲಿಗೆ ಪಡಿತರ’ ಯೋಜನೆ ರೂಪಿಸಲಾಗಿದೆ.

ಒಂಟಿ ಕುಟುಂಬಕ್ಕೆ ಮೊದಲ ಪ್ರಾಶಸ್ತ್ಯ:

ಮನೆ ಬಾಗಿಲಿಗೆ ಪಡಿತರ ವಿತರಿಸಬೇಕಾದರೆ ಅವರ ಕುಟುಂಬದಲ್ಲಿ (ಪಡಿತರ ಚೀಟಿಯಲ್ಲಿ ನಮೂದಿಸಿದಂತೆ) 75ರ ಒಳಗಿನ ಇತರೆ ಸದಸ್ಯರು ಇರಬಾರದು. ಇದ್ದರೆ, ಅವರು ವಿತರಣಾ ಕೇಂದ್ರಗಳಿಗೆ ಬಂದು ಪಡಿತರ ಪಡೆಯಬೇಕು ಎಂಬ ಷರತ್ತು ವಿಧಿಸಲಾಗಿದೆ. ಒಂಟಿ ವೃದ್ಧರು, 75 ದಾಟಿದ ದಂಪತಿಗಳ ಪ್ರತ್ಯೇಕ ಪಟ್ಟಿಯನ್ನು ಆಹಾರ ಇಲಾಖೆ ಈಗಾಗಲೇ ಸಿದ್ಧಪಡಿಸಿದೆ. ಒಂದು ವೇಳೆ ತಮ್ಮ ಕುಟುಂಬದ ಇತರೆ ಸದಸ್ಯರು ಬೇರೆ ಪ್ರದೇಶಗಳಿಗೆ ತೆರಳಿದ್ದರೆ, ಅಂತಹ ಸಮಯದಲ್ಲಿ ಊರಲ್ಲೇ ಉಳಿದ ವೃದ್ಧರು ಮನೆ ಬಾಗಿಲಿಗೇ ಪಡಿತರ ನೀಡುವಂತೆ ಕೋರಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

‘ಮನೆಬಾಗಲಿಗೆ ಪಡಿತರ ನೀಡುವುದು ಅತ್ಯಂತ ಪ್ರಯೋಜನಕಾರಿ. ಸಂಚಾರ ದಟ್ಟಣೆ ಅಥವಾ ವಯಸ್ಸಿನ ಕಾರಣಕ್ಕೆ ನ್ಯಾಯಬೆಲೆ ಅಂಗಡಿಗೆ ಹೋಗಲು ಸಾಧ್ಯವಾಗದೆ, ಕೆಲವೊಮ್ಮೆ ಸರದಿಯಲ್ಲಿ ನಿಲ್ಲಲು ಆಗದೇ ಕೆಲ ತಿಂಗಳು ಪಡಿತರವನ್ನೇ ಪಡೆಯಲಿಲ್ಲ. ಸರ್ಕಾರದ ಈ ನಿರ್ಧಾರ ತುಂಬಾ ಉಪಕಾರಿಯಾಗಿದೆ’ ಎನ್ನುತ್ತಾರೆ ಬೆಂಗಳೂರು ಎಂ.ಸಿ. ಲೇಔಟ್‌ನ 90 ವರ್ಷದ ನಾಗರಿಕ ರತ್ನಾಕರ ಶೆಣೈ.

State

ವಾಲ್ಮೀಕಿ ಹಗರಣದ ತನಿಖೆ ಚುರುಕುಗೊಳಿಸಿದ ಸಿಬಿಐ

Published

on

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದಾರೆ.

ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್‌ ಮತ್ತು ಕುಟುಂಬಸ್ಥರಿಗೆ ನೋಟಿಸ್‌ ಜಾರಿಗೊಳಿಸಿದೆ.

ಈ ಹಿಂದೆ ಚಂದ್ರಮೋಹನ್‌ ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ನಕಲಿ ಆಕೌಂಟ್‌ಗಳನ್ನು ಸೃಷ್ಠಿಮಾಡಿ 89 ಕೋಟಿ ರೂ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.

ಸಿಬಿಐ ಈಗಾಗಲೇ ಪ್ರಕರಣದ ಆರೋಪಿಗಳಾದ ಪರಶುರಾಮ್‌, ಸತ್ಯನಾರಾಯಣ ಇಟಕಾರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸುತ್ತಿದೆ.

Continue Reading

State

ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

Published

on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ‌.
ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು‌.
ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

Continue Reading

State

ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಮಾಡಿದವರು & ಮುಂದೆ ಮಾಡುವವರು ಈ ವಿಷಯಗಳನ್ನು ತಿಳಿದುಕೊಳ್ಳಿ

Published

on

ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್ವರ್ಕ್ – Microfinance Industry Network : ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳ, ಹಲವು ಬಡ ಜನರ ಜೀವ ಬಳಿ ತೆಗೆದುಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ.

ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದು, ಇದರ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು. ಇದರಿಂದ ಮುಂದೆ ನಿಮಗೆ ಆಗುವಂತಹ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು.

ಮಧ್ಯಮ ವರ್ಗದ ಅಥವಾ ಬಡಜನರ ಅತಿಯಾದ ಅವಶ್ಯಕತೆಯನ್ನು ಅವಕಾಶವಾಗಿ ಮಾಡಿಕೊಂಡು ಬಂಡವಾಳ ಮಾಡಿಕೊಳ್ಳುವ ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು, ವ್ಯಕ್ತಿಗಳು, ಅನಧಿಕೃತ ಲೇವಾದೇವಿದಾರರು ಬಡ ಜನರಿಗೆ ಜನರ ತುರ್ತು ಸಮಯದಲ್ಲಿ ಸಾಲದ ರೂಪದಲ್ಲಿ ಹಣ ನೀಡಿ, ಅದಕ್ಕೆ ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಿರುವದರ ಕುರಿತು ಸರ್ಕಾರದ ಮಾರ್ಗಸೂಚಿಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಸಾಲ ಮರುಪಾವತಿ ಮಾಡದೇ ಇರುವುದು ಅಪರಾಧವೆ?

ಹಲವು ವೈಯಕ್ತಿಕ ಕಾರಣಗಳಿಂದಾಗಿ ಪಡೆದಂತಹ ವೈಯಕ್ತಿಕ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡದಿರುವುದು ಕ್ರಿಮಿನಲ್ ಅಪರಾಧ ಆಗಿರುವುದಿಲ್ಲ. ಒಂದು ವೇಳೆ ನೀವು ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದಿದ್ದಲ್ಲಿ, ಮೈಕ್ರೋ ಫೈನಾನ್ಸ್ ಕಂಪನಿಯವರು ನಿಮಗೆ ಅತಿಯಾದ ಕಿರುಕುಳ ಅಥವಾ ತೊಂದರೆ ನೀಡಿದ್ದಲ್ಲಿ ಈ ಕೆಳಗಿನ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ.

• RBI ನಿಯಮಗಳ ಅನುಸಾರ, ಸಾಲ ವಸೂಲು ಮಾಡುವವರು ಪರಸ್ಪರ ನಿರ್ಧರಿಸಿದ ಅಥವಾ ಗೊಟ್ಟುಪಡಿಸಿದ ಸ್ಥಳದಲ್ಲಿ ಮಾತ್ರ ವಸೂಲಾತಿ ಮಾಡಲು ಅವಕಾಶವಿದೆ. ಒಂದು ವೇಳೆ ಸಾಲ ಪಡೆದ ಅಭ್ಯರ್ಥಿಯು ಎರಡು ಅಥವಾ ಹೆಚ್ಚಿನ ಸಂದರ್ಭದಲ್ಲಿ ಗೊತ್ತು ಪಡಿಸಿದ ಸ್ಥಳಕ್ಕೆ ಬರಲು ವಿಫಲವಾದಲ್ಲಿ ಮಾತ್ರ ಅವರ ಮನೆಗೆ ಹೋಗಲು ಅವಕಾಶವಿರುತ್ತದೆ.

• ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಅಥವಾ ಇತರೆ ಸಾಲ ನೀಡುವವರು ಹಣ ವಸೂಲಾತಿಗಾಗಿ ಯಾವುದೇ ರೀತಿಯ ಕಠಿಣ ವಿಧಾನಗಳನ್ನು ಬಳಸಲು ಅವಕಾಶವಿರುವುದಿಲ್ಲ.
• ಸಾಲಗಾರರಿಗೆ ಸಾಲ ವಸೂಲಾತಿ ಮಾಡಲು ನಿರಂತರ ಕರೆ ಮಾಡುವುದು ಅಥವಾ, ಬೆಳಿಗ್ಗೆ 9:00 ಗಂಟೆಯ ಮುಂಚೆ ಮತ್ತು ಸಾಯಂಕಾಲ 6:00 ನಂತರ ಕರೆ ಮಾಡಲು ಅನುಮತಿ ಇರುವುದಿಲ್ಲ.

 

ಒಂದು ವೇಳೆ ನಿಮಗೆ ಮೈಕ್ರೋಫೈನಾನ್ಸ್ ನವರು ಅಥವಾ ಇತರೆ ಅನಧಿಕೃತ ಸಾಲದಾರರು ಯಾವುದೇ ರೀತಿಯಲ್ಲಿ ಕಿರುಕುಳ ಕೊಟ್ಟರೆ ಸರ್ಕಾರದ 24×7 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.

24×7 ಟೋಲ್ ಫ್ರೀ ಸಂಖ್ಯೆ – 112 ಅಥವಾ 1902

Continue Reading

Trending

error: Content is protected !!