National - International
ಅಣ್ಣಾಮಲೈ ಒಬ್ಬ ಪುವರ್ ಮ್ಯಾನ್: ಡಿಕೆ ಶಿವಕುಮಾರ್ ಹೀಗೇಳಿದ್ದೇಕೆ?
ತಮಿಳುನಾಡು: ಜನಸಂಖ್ಯಾ ಆಧಾರಿತ ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಐಎನ್ಡಿಐಎ ಮೈತ್ತಿ ಪಕ್ಷಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು.
ಈ ಸಭೆಯಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ಈ ಸಭೆ ವಿರುದ್ಧ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಮೇಕೆದಾಟು ಯೋಜನೆಗೆ ಮುಂದಾಗಿ ತಮಿಳುನಾಡು ರಾಜ್ಯದ ಜನರಿಗೆ ಅನ್ಯಾಯ ಮಾಡಿ, ಕ್ಷೇತ್ರ ಮರುವಿಂಗಡಣೆ ಸಭೆಗೆ ಹಾಜರಾಗಿದ್ದಾರೆ ಎಂದು ವಿರೋಧಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.
ಇನ್ನು ತಮ್ಮ ಎಕ್ಸ್ ಖಾತೆಯಲ್ಲಿ ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆದ, ನಮ್ಮ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು ಶೋಷಿಸುತ್ತಿರುವ ಮತ್ತು ತಮಿಳುನಾಡು ಗಡಿ ಜಿಲ್ಲೆಗಳನ್ನು ಕೇರಳದ ವೈದ್ಯಕೀಯ ತ್ಯಾಜ್ಯವನ್ನು ಸುರಿಯುವ ಸ್ಥಳವನ್ನಾಗಿ ಪರಿವರ್ತಿಸುತ್ತಿರುವ ತಮ್ಮ INDIA ಮೈತ್ರಿಕೂಟದ ಪಾಲುದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಸಹೋದರ ಸಹೋದರಿಯರು ತಮ್ಮ ಮನೆಗಳ ಮುಂದೆ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬರೆದುಕೊಂಡದ್ದರು.
ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅಣ್ಣಾಮಲೈ ಒಬ್ಬ ಪುವರ್ ಮ್ಯಾನ್, ಕರ್ನಾಟಕದಲ್ಲಿ ಕೆಲಸ ನಿರ್ವಹಿಸುವ ವೇಳೆ ನನ್ನ ಶಕ್ತಿ ಬಗ್ಗೆ ಆತನಿಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆತನಿಗೆ ಶುಭವಾಗಲಿ ಎಂದು ನಸುನಕ್ಕರು.
https://x.com/annamalai_k/status/1903348499267326152
ಡಿಕೆ ರಿಯಾಕ್ಷನ್ಗೆ ಮತ್ತೊಂದು ಪೋಸ್ಟ್ ಮಾಡಿರುವ ಅಣ್ಣಾಮಲೈ, ಹೌದು, ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಗಮನಾರ್ಹ ಉಲ್ಲೇಖಕ್ಕಾಗಿ ಧನ್ಯವಾದಗಳು ಡಿಸಿಎಂ ಡಿಕೆ ಶಿವಕುಮಾರ್ ಅವರೇ.
ಅಲ್ಲದೆ, ಈ ಬಡವನಿಗೆ ಶುಭ ಹಾರೈಸಿದ್ದಕ್ಕಾಗಿ ಧನ್ಯವಾದಗಳು ಮತ್ತು ಸಿದ್ದರಾಮಯ್ಯ ಅವರನ್ನು ಅವರ ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಲ್ಲಿ ನಿಮಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
National - International
NISAR ಉಪಗ್ರಹ ಉಡಾವಣೆ ಯಶ್ವಸಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಹತ್ವ ಮೈಲಿಗಲ್ಲು
ಶ್ರೀಹರಿಕೋಟ: ಪ್ರಥಮ ಬಾರಿಗೆ ಭಾರತದ ಇಸ್ರೊ ಹಾಗೂ ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿದ ಭೂಮಿ ಸಮೀಕ್ಷೆಯ ಸಿಂಥೆಟಿಕ್ ಅಪರ್ಚರ್ ರೇಡಾರ್ (NISAR) ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ.

ಎಲ್–ಬ್ಯಾಂಡ್ ಅನ್ನು ನಾಸಾ ತಯಾರಿಸಿದ್ದರೆ ಎಸ್–ಬ್ಯಾಂಡ್ ಅನ್ನು ಇಸ್ರೊ ತಯಾರಿಸಿದೆ. ಎಸ್–ಬ್ಯಾಂಡ್ ಅನ್ನು ಸಿಂಥೆಟಿಕ್ ಅಪರ್ಚರ್ ರೇಡಾರ್ನಲ್ಲಿ ಅಳವಡಿಸಲಾಗುತ್ತದೆ. ಇದರಿಂದ ಭೂಮಿಗೆ ಸಂಬಂಧಿಸಿದಂತೆ ದತ್ತಾಂಶ ಸಂಗ್ರಹ ಸಾಧ್ಯವಾಗಲಿದೆ.
NISAR 13,000 ಕೋಟಿ ರೂ. ವೆಚ್ಚ
ಇನ್ನೂ ನಿಸಾರ್ ಭೂಸರ್ವೇಕ್ಷಣಾ ಉಪಗ್ರಹಕ್ಕೆ 13,000 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ವಿಶ್ವದ ಅತ್ಯಂತ ದುಬಾರಿ ಕಣ್ಗಾವಲು ಉಪಗ್ರಹವಾಗಿ ಗುರುತಿಸಿಕೊಂಡಿದೆ. ಅಲ್ಲದೇ ನಿಸಾರ್ ಉಪಗ್ರಹವು ಒಂದು ಬಾರಿಗೆ 242 ಕಿಮೀ ಭೂವಿಸ್ತೀರ್ಣವನ್ನು ನೋಡುವ ಸಾಮರ್ಥ್ಯ ಹೊಂದಿದೆ. 97 ನಿಮಿಷಕ್ಕೆ ಭೂಮಿಗೆ ಒಂದು ಸುತ್ತು ಬರಲಿದೆ. ಮುಖ್ಯವಾಗಿ ನಿಸಾರ್ ಉಪಗ್ರಹವು ಕಳುಹಿಸುವ ಎಲ್ಲ ಮಾಹಿತಿಗಳು ಹಾಗೂ ದತ್ತಾಂಶಗಳನ್ನು ಉಚಿತವಾಗಿ ಎಲ್ಲಾ ದೇಶಗಳು ಅಧ್ಯಯನಕ್ಕೆ ಬಳಸಿಕೊಳ್ಳಬಹುದಾಗಿದೆ.
NISAR ಉಪಹ್ರಹದಿಂದ ಏನು ಲಾಭ?
ಅರಣ್ಯ ಹಾಗೂ ಜೀವವೈವಿಧ್ಯ ಸಂರಕ್ಷಣೆ: ದಟ್ಟವಾದ ಸಸ್ಯವರ್ಗವನ್ನು ಭೇದಿಸುವ ಸಾಮರ್ಥ್ಯವನ್ನು NISAR ಹೊಂದಿರುವುದು ವಿಶೇಷ. ಅರಣ್ಯನಾಶ, ಅರಣ್ಯದಲ್ಲಿ ಆಗುವ ಬದಲಾವಣೆಯನ್ನು ನಕ್ಷೆ ಮಾಡುವಲ್ಲಿ ಪ್ರಬಲ ಸಾಧನವಾಗಿ ಬಳಕೆಯಾಗಲಿದೆ. ಅಕ್ರಮ ಮರ ಕಡಿಯುವಿಕೆಯನ್ನು ಪತ್ತೆಹಚ್ಚಲು, ಅಳಿವಿನಂಚಿನಲ್ಲಿರುವ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಡೇಟಾವನ್ನು ಬಳಸಬಹುದು.

ವಿಪತ್ತು ನಿರ್ವಹಣೆ: ಭೂಕಂಪಗಳು, ಭೂಕುಸಿತಗಳು, ಪ್ರವಾಹಗಳು, ಜ್ವಾಲಾಮುಖಿ ಚಟುವಟಿಕೆಗಳು ಮತ್ತು ಇತರ ನೈಸರ್ಗಿಕ ವಿಕೋಪಗಳ ಬಗ್ಗೆ NISAR ರಿಯಲ್ ಟೈಂ ಡೇಟಾವನ್ನು ಒದಗಿಸಲಿದೆ.ಅಧಿಕಾರಿಗಳು ಈ ಡೇಟಾವನ್ನು ಬಳಸಿಕೊಂಡು ಹಾನಿಯನ್ನು ನಕ್ಷೆ ಮಾಡಲು, ವಿಪತ್ತಿನ ಪ್ರಗತಿಯನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.
ಹವಾಮಾನ ಮೇಲ್ವಿಚಾರಣೆ: ಉಪಗ್ರಹವು ಹಿಮನದಿ ಕರಗುವಿಕೆ, ಸಮುದ್ರ ಮಟ್ಟ ಏರಿಕೆ, ಮಣ್ಣಿನ ತೇವಾಂಶ ಟ್ರ್ಯಾಕ್ ಮಾಡುತ್ತದೆ. ವಿಜ್ಞಾನಿಗಳಿಗೆ ಜಾಗತಿಕ ತಾಪಮಾನ ಏರಿಕೆಯ ವೇಗ ಮತ್ತು ಅದರ ಪ್ರಾದೇಶಿಕ ಪರಿಣಾಮಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ಕೃಷಿ ಮುನ್ಸೂಚನೆ: NISAR ಬೆಳೆ ಬೆಳವಣಿಗೆ, ಮಣ್ಣಿನ ಸ್ಥಳಾಂತರ, ನೀರಾವರಿ ಮಟ್ಟಗಳು ಮತ್ತು ಭೂ ಬಳಕೆಯ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಬಹುದು. ಇದು ಸರ್ಕಾರಗಳು ಇಳುವರಿಯನ್ನು ಊಹಿಸಲು, ನೀರಿನ ಬಳಕೆಯನ್ನು ನಿರ್ವಹಿಸಲು ಮತ್ತು ಬರ ಬರಬಹುದಾ? ಇಲ್ಲವೋ ಎಂಬುದನ್ನು ಮೊದಲೇ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ.
ನಗರ ಮತ್ತು ಮೂಲಸೌಕರ್ಯ ಯೋಜನೆ: ವಿಶೇಷವಾಗಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಭೂ ಕುಸಿತ ಮತ್ತು ರಚನಾತ್ಮಕ ಬದಲಾವಣೆಗಳ ಮಾಹಿತಿ ಸಿಗಲಿದೆ. ಅಣೆಕಟ್ಟುಗಳು, ರಸ್ತೆಗಳು, ಸೇತುವೆಗಳು ಮತ್ತು ಕಟ್ಟಡಗಳ ಮೇಲ್ವಿಚಾರಣೆಯಲ್ಲಿ ಉಪಗ್ರಹ ಸಹಾಯ ಮಾಡಲಿದೆ.
National - International
ಭಾರತದಿಂದ ಮಾಲ್ಡೀವ್ಸ್ಗೆ 4,850 ಕೋಟಿ ಸಾಲ ಘೋಷಣೆ: ಪ್ರಧಾನಿ ಮೋದಿ
ಮಾಲೆ: ಭಾರತ ಹಾಗೂ ಮಾಲ್ಡೀವ್ಸ್ ತಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದ್ದು, ರಾಜತಾಂತ್ರಿಕ ಸಂಬಂಧಗಳ 60ನೇ ವರ್ಷವನ್ನು ಆಚರಿಸುತ್ತಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ರಾಷ್ಟ್ರಗಳ ಮಧ್ಯೆ ಶಾಶ್ವತ ಸ್ನೇಹದ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ದ್ವೀಪ ರಾಷ್ಟ್ರದ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಬೆಂಬಲಿಸಲು 4,850 ಕೋಟಿ ರೂ. ಮೌಲ್ಯದ ಹೊಸ ಸಾಲವನ್ನು ಘೋಷಿಸಿದ್ದಾರೆ.
ಮಾಲ್ಡೀವ್ಸ್ನ ಸ್ವಾತಂತ್ರ್ಯ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ಮಾಲೆಗೆ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳನ್ನು ಶ್ಲಾಘಿಸಿದ್ದಾರೆ.
ಎರಡೂ ರಾಷ್ಟ್ರಗಳು ತಮ್ಮ ರಾಜತಾಂತ್ರಿಕ ಸಂಬಂಧಗಳ 60 ವರ್ಷಗಳನ್ನು ಆಚರಿಸುತ್ತಿವೆ. ಈ ಸಂಬಂಧಗಳ ಬೇರುಗಳು ಆ ಇತಿಹಾಸಕ್ಕಿಂತ ಹಳೆಯವು ಮತ್ತು ಸಮುದ್ರದಷ್ಟು ಆಳವಾಗಿವೆ. ನಮಗೆ ಯಾವಾಗಲೂ ಸ್ನೇಹವೇ ಮೊದಲು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ಎರಡೂ ದೇಶಗಳ ಸಾಂಪ್ರದಾಯಿಕ ದೋಣಿಗಳನ್ನು ಒಳಗೊಂಡ ಸ್ಮರಣಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದರು. ಇದು ಅವರ ಹಂಚಿಕೆಯ ಕಡಲ ಪರಂಪರೆಯನ್ನು ಸಂಕೇತಿಸುತ್ತದೆ. ನಾವು ಕೇವಲ ನೆರೆಹೊರೆಯವರಲ್ಲ, ಸಹ-ಪ್ರಯಾಣಿಕರು ಕೂಡ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಭಾರತ, ಮಾಲ್ಡೀವ್ಸ್ಗೆ 4,850 ಕೋಟಿ ರೂ. ಸಾಲವನ್ನು ನೀಡಲು ತೀರ್ಮಾನಿಸಿದೆ. ಎರಡೂ ದೇಶಗಳ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಆರಂಭವಾಗಿದೆ. ನಮ್ಮ ಆರ್ಥಿಕ ಪಾಲುದಾರಿಕೆಯನ್ನು ವೇಗಗೊಳಿಸಲು ನಾವು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಮ್ಮ ಹಂಚಿಕೆಯ ಹೂಡಿಕೆಯನ್ನು ವೇಗಗೊಳಿಸಲು ನಾವು ಶೀಘ್ರದಲ್ಲೇ ದ್ವಿಪಕ್ಷೀಯ ಹೂಡಿಕೆ ಒಪ್ಪಂದವನ್ನು ಅಂತಿಮಗೊಳಿಸುವತ್ತ ಕೆಲಸ ಮಾಡುತ್ತೇವೆ. ಮುಕ್ತ ವ್ಯಾಪಾರ ಒಪ್ಪಂದದ ಕುರಿತಾದ ಮಾತುಕತೆಗಳು ಕೂಡ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.
National - International
ಪಾಕಿಸ್ತಾನ ಭಯೋತ್ಪಾದನೆ, ಮತಾಂಧತೆಯಲ್ಲಿ ಮುಳುಗಿದೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ
ನ್ಯೂಯಾರ್ಕ್: ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಚೋದಿಸುವ ದೇಶಗಳ ವಿರುದ್ಧ ಗಂಭೀರ ಕ್ರಮವಹಿಸಬೇಕು. ನಮ್ಮ ನೆರೆಯ ದೇಶವಾಗಿರುವ ಪಾಕಿಸ್ತಾವೂ ಭಯೋತ್ಪಾದನೆ, ಮತಾಂಧ ಹಾಗೂ ಸರಣಿ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶ ಎಂದು ಭಾರತ ವಾಗ್ದಾಳಿ ನಡೆಸಿದೆ.
ಭಾರತ, ವಿಶ್ವಸಂಸ್ಥೆಯಲ್ಲಿ ಇಂದು ಪಾಕಿಸ್ತಾನ ಅಧ್ಯಕ್ಷತೆಯಲ್ಲಿ ನಡೆದ ಭದ್ರತ ಮಂಡಳಿ ಸಭೆಯಲ್ಲಿ ಪಾಕ್ ವಿರುದ್ದ ಪ್ರತಿಪಾದಿಸಿದೆ.

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಪರ್ವತನೇನಿ ಹರೀಶ್, ಅಂತರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸುವಾಗ, ಕೆಲ ಮೂಲಭೂತ ತತ್ವಗಳನ್ನು ಗುರುತಿಸುವುದು ಅಗತ್ಯವಾಗಿದೆ. ಅವುಗಳಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುವಾಗಿರುವುದು ಪ್ರಮುಖವಾಗಿದೆ ಎಂದು ತಿಳಿಸಿದ್ದಾರೆ.
ಭಾರತವೂ ಒಂದೆಡೆ ಅಭಿವೃದ್ಧಿಯತ್ತ ಸಾಗುತ್ತಿದೆ. ಪ್ರಬುದ್ಧ ಪ್ರಜಾಪ್ರಭುತ್ವ, ಬಹುತ್ವ ಮತ್ತು ಎಲ್ಲರನ್ನು ಒಳಗೊಂಡ ಸಮಾಜದೊಂದಿಗೆ ವೃದ್ಧಿಸುತ್ತಿರುವ ಆರ್ಥಿಕತೆಯತ್ತ ಮುಂದೆ ಸಾಗುತ್ತಿದೆ. ಆದರೆ ಇನ್ನೊಂದೆಡೆ ಪಾಕಿಸ್ತಾನವು ಭಯೋತ್ಪಾದನೆ ಹಾಗೂ ಮತಾಂಧತೆಯಲ್ಲಿ ಮುಳುಗಿದೆ. ಅಲ್ಲದೇ ಅಂತರಾಷ್ಟ್ರೀಯ ಹಣಕಾಸು ನಿಧಿಯಿಂದ ಸರಣಿ ಸಾಲಗಾರನಾಗಿದೆ ಎಂದು ಹೇಳಿದ್ದಾರೆ.
-
Hassan17 hours agoಹುಡಾ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ: ಪಕ್ಷಗೋಸ್ಕರ ಕೆಲಸ ಮಾಡಿದವರಿಗೆ ಸ್ಥಾನ ನೀಡುವಂತೆ ಕಯುಮ್ ಆಗ್ರಹ
-
Hassan20 hours agoನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಸೈಯದ್ ತಾಜಿಂ ಬೃಹತ್ ಪ್ರತಿಭಟನೆ.
-
Chikmagalur23 hours agoರೈತನ ಮೇಲೆ ಕಾಡಾನೆ ದಾಳಿ, ಬದುಕುಳಿದ ರೈತ ಫಿಲಿಪ್
-
Kodagu16 hours agoಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ
-
Manglore17 hours agoಧರ್ಮಸ್ಥಳ ಪ್ರಕರಣ- ಕಾಡಿನಲ್ಲಿ ಶೋಧನೆ ನಡೆಸಿ ತೆರಳಿದ ಎಸ್ಐಟಿ ತಂಡ
-
Hassan19 hours agoಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ
-
Hassan21 hours agoಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
-
Mysore17 hours agoಪುರಸಭೆ ವಂಚನೆ ಪ್ರಕರಣ: ಸಿಐಡಿ ತನಿಖೆಯಾಗಬೇಕೆಂದು ಆಗ್ರಹಿಸಿದ ಡಾ. ಎ. ಎಸ್.ಚಂದ್ರಶೇಖರ್
