Connect with us

Mandya

ಅಪ್ಪಾಜಿಗೌಡ ಅವರು ಮನ್‌ಮುಲ್‌ ಅಧ್ಯಕ್ಷ ಸ್ಥಾನ ಕೇಳಿಲ್ಲ: ಎನ್.ಚಲುವರಾಯಸ್ವಾಮಿ

Published

on

ನಾಗಮಂಗಲ: ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವ ಜೆಡಿಎಸ್‌ ಮುಖಂಡ ಎನ್‌.ಅಪ್ಪಾಜಿಗೌಡ ಅವರು ಮನ್‌ಮುಲ್‌ ಅಧ್ಯಕ್ಷಸ್ಥಾನ ಕೇಳಿಲ್ಲ, ನಾವು ಸಹ ಎಲ್ಲಿಯೂ ಘೋಷಣೆ ಮಾಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ತಾಲ್ಲೂಕಿನ ದೇವಲಾಪುರ ಹೋಬಳಿಯ ಕುಂಟಾನುಕೊಪ್ಪಲು ಗ್ರಾಮದ ಮದ್ದೇನಹಟ್ಟಮ್ಮ ದೇವಿಯ ನೂನತ ದೇವಸ್ಥಾನ ಮತ್ತು ವಿಮಾನ ಗೋಪುರ ಪ್ರಧಾನ ಕಳಸ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದರು.

ಅಪ್ಪಾಜಿಗೌಡ ಅವರು ಕಾಂಗ್ರೆಸ್‌ ಸೇರ್ಪಡೆಯಾಗುವ ವಿಷಯ ಸದ್ಯದಲ್ಲಿಯೇ ಎಲ್ಲರಿಗೂ ಗೊತ್ತಾಗಲಿದೆ, ಅವರು ಮನ್‌ಮುಲ್ ಅಧ್ಯಕ್ಷ ಸ್ಥಾನ ಕೊಡಿ ಎಂದು ಎಲ್ಲಿಯೂ ನಮ್ಮನ್ನು ಕೇಳಿಲ್ಲ, ನಾವು ಕೂಡ ಎಲ್ಲಿಯೂ ಘೋಷಣೆ ಮಾಡಿಲ್ಲ. ಆದರೆ ಅವರು ನಮ್ಮ ಹಿತೈಷಿಗಳು, ಮೊದಲಿನಿಂದಲೂ ನಮ್ಮ ಜತೆಗಿದ್ದವರು, ವಿಶ್ವಾಸಿಗಳು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾನು ಜೆಡಿಎಸ್ ತೊರೆದು ಕಾಂಗ್ರೇಸ್ ಸೇರ್ಪಡೆಗೊಂಡೆ, ಆದರೆ ಅವರು ಜೆಡಿಎಸ್ ಪಕ್ಷದಲ್ಲಿಯೇ ಉಳಿದುಕೊಂಡಿದ್ದರು. ಅವರು ಈಗ ನಮ್ಮ ಪಕ್ಷಕ್ಕೆ ಬರುವುದರಲ್ಲಿ ತಪ್ಪೇನಿಲ್ಲ? ನಮ್ಮ ಅವರ ವಿಶ್ವಾಸ ಯಾವತ್ತು ಕೆಡದಿರುವುದರಿಂದ ನಮ್ಮ ಜತೆ ಬರುವುದರಲ್ಲಿ ತಪ್ಪೇನಿದೆ. ಬಹುತೇಕ ಆದಷ್ಟು ಬೇಗ ಇದಕ್ಕೆ ಫಲ ಸಿಗಲಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ದೇಶದ ಯಾವ ರಾಜ್ಯದವರಾದರೂ ಸ್ಪರ್ಧಿಸಬಹುದು. ಆದರೆ ನಮ್ಮ ನಿರ್ಣಯ ನಮ್ಮ ಜಿಲ್ಲೆಯ ಜನರಿಗೆ ಗೊತ್ತಿರುವಂತಹ ಜಿಲ್ಲೆಯವರೇ ಸ್ಪರ್ಧಿಸಬೇಕು ಎನ್ನುವುದಾಗಿದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರ ಪ್ರೀತಿಗಳಿಸಿದೆ. ಈ ಬಾರಿ ಜನತೆ ಕಾಂಗ್ರೆಸ್‌ ಸರ್ಕಾರದ ಕೈಹಿಡಿಯಲಿದ್ದಾರೆ. ಜನರನ್ನು ಪ್ರೀತಿಸುವ ಸರ್ಕಾರವನ್ನು ಜನರು ಪ್ರೀತಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸಲು ಈ ಹಿಂದೆ ಗೋಪಾಲಯ್ಯ, ಅಶೋಕ್ ಹೊರಗಿನವರು ಮಂತ್ರಿಯಾಗಿ ಎಷ್ಟು ದಿನ ಜಿಲ್ಲೆಗೆ ಬರುತ್ತಿದ್ದರು. ಅವರು ನೆಂಟರ ರೀತಿ ಜಿಲ್ಲೆಗೆ ಬರುತ್ತಿದ್ದರು. ಇದು ಶಾಸಕನಾದರೂ ಅಷ್ಟೇ, ಸಂಸದನಾದರೂ ಅಷ್ಟೆ. ಜಿಲ್ಲೆಗೆ ನೆಂಟರ ಅವಶ್ಯಕತೆಯಿಲ್ಲ, ಜಿಲ್ಲೆಯ ಮಗನ ಅವಶ್ಯಕತೆಯಿದೆ, ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪ್ರಬಲ ಆಕಾಂಕ್ಷಿಯಾಗಿದ್ದು ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಈ ಬಾರಿಯ ಬಜೆಟ್‌ನಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನಗಳನ್ನು ಘೋಷಣೆ ಮಾಡಿದ್ದಾರೆ. ಇದುವರೆಗೂ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಕೊಡುಗೆಯನ್ನು ಬೇರೆ ಯಾರೂ ನೀಡಿಲ್ಲ ಎಂದರು.

ಜೆಡಿಎಸ್‌ ಮುಖಂಡ ಎನ್.ಅಪ್ಪಾಜಿಗೌಡ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಎನ್.ಜೆ.ರಾಜೇಶ್, ಮುಖಂಡ ವೆಂಕಟರಮಣೇಗೌಡ(ಸ್ಟಾರ್ಚಂದ್ರು), ಸಂಪತ್‌ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮಂದಗೆರೆ ಕೃಷಿ‌ ಪತ್ತಿನ‌ ಸಹಕಾರ ಸಂಘದ ಚುನಾವಣೆಗೆಯಲ್ಲಿ ಜೆ.ಡಿ.ಎಸ್ ಪಕ್ಷದ ವಷಕ್ಕೆ

Published

on

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಮಂದಗರೆ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷದ ಅವದಿಯ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಗೆ ನಿಗದಿಯಾಗಿತ್ತು

ಸಾಲಗಾರ ಕೇತ್ರಕ್ಕೆ 20 ಜನ ಸ್ಪರ್ದೆ ಮಾಡಿದ್ದು ಅದರಲ್ಲಿ ಗದ್ದೇಹೊಸೂರು ಜಿ.ಎನ್ ದೀಪಕ್, ಜಿ.ಬಿ ಮನು, ಚಿಕ್ಕಮಂದಗರೆ ಗ್ರಾಮದ ರಮೇಶ್ ಕೆ.ಎನ್, ವಸಂತ, ಆಲೇನಹಳ್ಳಿ ಗ್ರಾಮದ ಆಶೋಕ, ಸಾವಿತ್ರಮ್ಮ, ಮಂದಗರೆ ಗ್ರಾಮದ ಮಂಜುನಾಥ್, ಮೂಡನಹಳ್ಳಿ ಗ್ರಾಮದ ನಿಂಗೇಗೌಡ, ತಿಮ್ಮನಾಯಕ, ಹೊನ್ನೇನಹಳ್ಳಿ ಗ್ರಾಮದ ಮಂಜೇಗೌಡ, ಶ್ರವಣಹಳ್ಳಿ ಗ್ರಾಮದ ಬೋಜಯ್ಯ, ಗೆಲುವು ಸಾದಿಸಿದ್ರೆ ಸಾಸಲಗಾರರಲ್ಲದ ಕ್ಷೇತ್ರದಿಂದ ಅಲೇನಹಳ್ಳಿ ಮಹೇಶ್ ರವರು ಗೆಲುವು ಸಾದಿಸಿದ್ರು

ನೂತನ ನಿರ್ದೇಶಕರಿಗೆ ಜೆ.ಡಿ.ಎಸ್ ಪಕ್ಷದ ಯುವ ನಾಯಕ ಗದ್ದೇಹೊಸೂರು ಜಗದೀಶ್ ಸಿಹಿ ತಿನ್ನಿಸಿ ಎಲ್ಲಾ ನಿರ್ದೇಶಕರಿಗೆ ಶುಭ ಕೋರಿ ಮಾತನಾಡಿ ಜೆ.ಡಿ.ಎಸ್ ಅಭ್ಯರ್ಥಿ 8 ಸ್ಥಾನ ಗೆಲುವು ಸಾದಿಸಿ ಅದಿಕಾರದ ಚುಕ್ಕಾಣೆ ಹಿಡಿಯಲಿದ್ದು ಎಲ್ಲಾ ನಿರ್ದೇಶಕರು ಪಕ್ಷಬೇದ ಮರೆತು ಸಂಘದ ಅಭಿವೃದ್ಧಿ ಶ್ರಮಿಸುವಂತೆ ಸಲಹೆ ನೀಡಿದ್ರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

Continue Reading

Mandya

ಕಡು ಬಡವರಿಗೂ ಗ್ಯಾರಂಟಿಗಳು ತಲುಪಿದಾಗ ಮಾತ್ರ ಯೋಜನೆಗಳು ಯಶಸ್ವಿಯಾದಂತೆ: ಚಿಕ್ಕಲಿಂಗಯ್ಯ

Published

on

ಮಂಡ್ಯ : ಸರ್ಕಾರದ ಕನಸಿನ ಕೂಸಾದ ಗ್ಯಾರಂಟಿ ಯೋಜನೆಗಳು ರಾಜ್ಯದ ಕಡು ಬಡವರ ಮನೆಯನ್ನು ತಲುಪಿದಾಗ ಮಾತ್ರ ಯೋಜನೆ ಯಶಸ್ವಿಯಾದಂತೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಲು ಪ್ರಾಧಿಕಾರವು ಸಹ ಶ್ರಮವಹಿಸಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಯ ಪ್ರಮುಖ ಯೋಜನೆ ಗೃಹಲಕ್ಷಿ ಯೋಜನೆ, ಈ ಯೋಜನೆಯಿಂದ ರಾಜ್ಯದ ಅನೇಕ ಕುಟುಂಬಗಳು ಸಬಲವಾಗಿವೆ, ಜಿಲ್ಲೆಯಲ್ಲಿ ಶೇ 100 ರಷ್ಟು ಅರ್ಹ ಮಹಿಳೆಯರಿಗೆ ಯೋಜನೆಗಳನ್ನು ತಲುಪಿಸುವುದು ಅತಿ ಮುಖ್ಯ, ಈಗಾಗಲೇ ಡಿಸೆಂಬರ್ ಮಾಹೆಯವರೆಗೂ ಗೃಹ ಲಕ್ಷ್ಮಿ ಯೋಜನೆಯಡಿ ಅನುದಾನ ಮಂಜೂರು ಮಾಡಲಾಗಿದೆ ಹಾಗೂ ಡಿ ಬಿ ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರೊಂದಿಗೆ ಚರ್ಚಿಸಿ ಕಾಲ ಕಾಲಕ್ಕೆ ಗೃಹಲಕ್ಷಿ ಹಣವನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಹಾಗೂ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಅನ್ನ ಭಾಗ್ಯ ಯೋಜನೆಯಡಿ 7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದೂ ಡಿಸೆಂಬರ್ ಮಾಹೆಯವರೆಗೆ ಒಟ್ಟು ರೂ. 402 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ, ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ರೂ. 23.06 ಕೋಟಿ ಹಣವನ್ನು ಪಡಿತರ ಚೀಟಿಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ, ಸರ್ಕಾರದ ನಿರ್ದೇಶನದಂತೆ ಫೆಬ್ರವರಿ ಮಾಹೆಯಿಂದ ಹಣದ ಬದಲು 15 ಕೆ.ಜಿ ಅಕ್ಕಿಯನ್ನೇ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲೆಡೆ ಈಗಾಗಲೇ ಫೆಬ್ರವರಿ ಮಾಹೆಯ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುತ್ತಿದೆ, ಪ್ರತಿ ಎರಡು ವರ್ಷಕ್ಕೊಮ್ಮೆ ತೂಕ ಮೌಲ್ಯ ಮಾಪನ ನಡೆಸಲಾಗುವುದು, ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಅಂಗಡಿಯ ಮಾಲೀಕನ ಮೇಲೆ ಕ್ರಮ ಜರುಗಿಸಲಾಗುವುದು, ಜಿಲ್ಲೆಯಲ್ಲಿ ಅನೇಕ ಕಡೆ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ, ಅಧಿಕಾರಿಗಳು ಈಗಾಗಲೇ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಹಣ ವಸೂಲಿ ಮಾಡದಂತೆ ಸೂಚನೆ ನೀಡಿದ್ದಾರೆ, ಅದನ್ನು ಮೀರಿ ಹಣ ವಸೂಲಿ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಲಾ ಕಾಲೇಜು ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಿ,
ಶಕ್ತಿ ಯೋಜನೆಯಡಿ ಫೆಬ್ರವರಿ ಮಾಹೆಯಲ್ಲಿ ಪ್ರತಿದಿನದ ಸರಾಸರಿಯಂತೆ 29 ಸಾವಿರಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರ ವಿತರಿಸಲಾಗಿದೆ, ಫೆಬ್ರವರಿ ಮಾಹೆಯಲ್ಲಿ 59.13 ಲಕ್ಷಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯಡಿ ನೀಡಲಾಗಿದೆ ಎಂದು ತಿಳಿಸಿದರು.

ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 5 ಲಕ್ಷದ 49 ಸಾವಿರಕ್ಕೂ ಹೆಚ್ಚಿನ ಫಲಾನುಭವಿಗಳು ಇದ್ದು, ಈವರೆಗೂ ಜಿಲ್ಲೆಗೆ 314 ಕೋಟಿ ಅನುದಾನ ನೀಡಲಾಗಿದೆ, ಜಿಲ್ಲೆಯಲ್ಲಿ ಶೇ 97 ರಷ್ಟು ಪ್ರಮಾಣದಲ್ಲಿ ಗೃಹ ಜ್ಯೋತಿ ಅನ್ನು ಎಲ್ಲಾ ಮನೆಗಳಿಗೂ ತಲುಪಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ 7 ತಾಲ್ಲೂಕಿನ ಎಲ್ಲಾ ಪದವಿ ಹಾಗೂ ಡಿಪ್ಲೋಮೋ ಕಾಲೇಜುಗಳಲ್ಲಿ ಯುವ ನಿಧಿ ಯೋಜನೆಯ ಕುರಿತು ಜಾಗೃತಿ ಮೂಡಿಸಲಾಗಿದೆ, 4702 ಅರ್ಹ ಫಲಾನುಭವಿಗಳು ಪ್ರಸ್ತುತ ಜಿಲ್ಲೆಯಲ್ಲಿದ್ದು ಎಲ್ಲರಿಗೂ ಡಿ.ಬಿ.ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ, ಯುವನಿಧಿ ಯೋಜನೆಯಡಿ 7 ಕೋಟಿ 12 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ್ ಬಾಬು ಕೆ.ಸಿ. ಗ್ಯಾರಂಟಿ ಯೋಜನೆಯ ಪ್ರಾಧಿಕಾರದ ಸದಸ್ಯರಾದ ವೀಣಾ ಶಂಕರ್, ರುದ್ರಪ್ಪ, ಮಹೇಶ್, ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಕೆ.ಎಸ್. ಆರ್. ಟಿ.ಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಜಾನಪದ ಜಾತ್ರೆ ಹಾಗೂ ಆಹಾರ ಮೇಳ

Published

on

ಕೆ.ಆರ್.ಪೇಟೆ : ಇಲ್ಲಿನ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳವು ಯಶಸ್ವಿಯಾಗಿ ನಡೆಯಿತು.

ಶಾಸಕ ಹೆಚ್.ಟಿ.ಮಂಜು ಎತ್ತಿನ ಗಾಡಿಯನ್ನು ಓಡಿಸುವ ಮೂಲಕ‌ ಜಾನಪಸ ಜಾತ್ರೆಗೆ ಚಾಲನೆ ನೀಡಿ, ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು.

ಬಳಿಕ ಮಾತನಾಡಿದ ಅವರು, ನಮ್ಮ ಪೂರ್ವಜರು ಬೇಸಾಯ ಮಾಡುವಾಗ ಮಾಡುತ್ತಿದ್ದ ನೃತ್ಯಗಳು, ಜಾನಪದ ಹಾಡುಗಳು ಇಂದಿಗೂ ಜನಪದರ ಬಾಯಿಂದ ಬಾಯಿಗೆ ಹರಿದಾಡುತ್ತಿವೆ. ಸುಗ್ಗಿ ಯ ಸಂಭ್ರಮದಲ್ಲಿ ಹಾಡುವ ಹಾಡುಗಳು ಇಂದಿಗೂ ನಮ್ಮ ಬದುಕಿನ ಜೀವ ಸೆಲೆಯಾಗಿವೆ. ಮೌಡ್ಯವಿಲ್ಲದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು, ಪಾಶ್ಚಾತ್ಯ ಸಂಸ್ಕೃತಿಗೆ ಆಕರ್ಷಿ ತವಾಗುತ್ತಿರುವ ಇಂದಿನ ದಿನಮಾನದಲ್ಲಿ ಮರಳಿ ಜಾನಪದ ಸಂಸ್ಕೃತಿಗೆ ಕರೆತರಲು ಇಂತಹ ಗ್ರಾಮೀಣ ಸೊಗಡಿನ ಕಾರ್ಯಕ್ರಮಗಳು ಸಹಾಯವಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಸುಮಾರಾಣಿ ಮಾತನಾಡಿ, ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ. ಜಾನಪದದ ಮೂಲ ಬೇರೆ ಹೆಣ್ಣಾ ಗಿರುವುದರಿಂದ ಹೆಣ್ಣಿಗೂ ಜಾನಪದಕ್ಕೂ ಅವಿನಾಭಾವ ಸಂಬಂಧವಿದೆ. ಹೆಣ್ಣು ಮಕ್ಕಳು ಆಯಾ ಸಂದರ್ಭಕ್ಕೆ ಅನುಗುಣವಾಗಿ ಹಾಡುವ ಹಾಡುಗಳು ಹಾಗೂ ನೃತ್ಯಗಳು ಜಾನಪದ ಕ್ಷೇತ್ರದ ಶಕ್ತಿಯನ್ನು ಇಮ್ಮಡಿಗೊಳಿಸಿವೆ ಎಂದು ಹೇಳಿದರು.

 

ಮಹಿಳಾ ಸರ್ಕಾರಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕೆ.ಬಿ. ಪ್ರತಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಇಂದು ವಿಶೇಷವಾಗಿ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳವನ್ನು ಆಯೋಜಿಸಲಾಗಿದೆ. ನಮ್ಮ ಸಂಸ್ಕೃತಿಯ ಪ್ರತಿಬಿಂಬವಾದ ಜಾನಪದಕ್ಕೆ ಶಕ್ತಿ ತುಂಬುವ ರೀತಿಯಲ್ಲಿ ಇಂದು ವಿದ್ಯಾರ್ಥಿನಿಯರು ರೇಷ್ಮೆ ಸೀರೆಯನ್ನು ಉಟ್ಟು ಮದುಮಗಳ ರೀತಿಯಲ್ಲಿ ಅಲಂಕಾರ ಮಾಡಿಕೊಂಡು ಬಂದಿದ್ದಾರೆ. ದನಕರುಗಳು ಹಾಗೂ ಪ್ರಕೃತಿಯೇ ಜನಪದದ ಜೀವಾಳವಾಗಿದೆ. ಮೋಸ, ವಂಚನೆಯ ಬಗ್ಗೆ ತಿಳಿಯದ, ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಯುವ ಸಮುದಾಯವನ್ನು ಜಾಗೃತಿಗೊಳಿಸಿ ಮುನ್ನಡೆಸಲು ಇಂತಹ ಕಾರ್ಯಕ್ರಮಗಳು ವರದಾನವಾಗಿವೆ ಎಂದು ಹೇಳಿದರು.

ಪುರಸಭೆ ಸದಸ್ಯ ಗಿರೀಶ್, ಶಾಮಿಯಾನ ತಿಮ್ಮೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್ ಸೇರಿದಂತೆ ಕಾಲೇಜಿನ ಅಧ್ಯಾಪಕ ವರ್ಗ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಚೇತನ್ ಕುಮಾರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Continue Reading

Trending

error: Content is protected !!