Connect with us

Special

ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ..

Published

on

Anganawadi Recruitment 2025 : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮುಗಿಸಿದಂತಹ ಅಭ್ಯರ್ಥಿಗಳಿಗೆ ಖಾಲಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 250ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ.

ಹುದ್ದೆಗಳ ವಿವರ :
ಒಟ್ಟು 277 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
• ಅಂಗನವಾಡಿ ಕಾರ್ಯಕರ್ತೆ – 56 ಹುದ್ದೆಗಳು
• ಅಂಗನವಾಡಿ ಸಹಾಯಕಿ – 221 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
• ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಅರ್ಹತೆ ನೋಡುವುದಾದರೆ ಅಭ್ಯರ್ಥಿಗಳು 19 ವರ್ಷದಿಂದ ಗರಿಷ್ಠ 35 ವರ್ಷದ ಒಳಗಿರಬೇಕು.

ನೇಮಕಾತಿಯ ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ – 02ನೇ ಸೆಪ್ಟೆಂಬರ್ 2025
• ಅರ್ಜಿ ಸಲ್ಲಿಕೆ ಮುಕ್ತಾಯಗೊಳ್ಳುವ ದಿನಾಂಕ 10ನೇ ಅಕ್ಟೋಬರ್ 2025

ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕ್ – https://karnemakaone.kar.nic.in/abcd/ApplicationForm_JA_org.aspx

Continue Reading

Special

KMF ನಲ್ಲಿ ಹಲವು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಇನ್ನೂ ಕೆಲವೇ ದಿನಗಳು ಬಾಕಿ

Published

on

KMF SHIMUL Recruitment 2025 : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.

ಈ ಒಂದು ನೇಮಕಾತಿಯಲ್ಲಿ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಈ ನೇಮಕಾತಿಯ ಹುದ್ದೆಗಳ ವಿವರ :

ಒಟ್ಟು ವಿವಿಧ 27 ಖಾಲಿ ಇರುವ ಹುದ್ದೆಗಳನ್ನು ಪ್ರಸ್ತುತ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಹುದ್ದೆಗಳ ವಿವರ ಈ ಕೆಳಗಿನಂತಿದೆ.
• ಸಹಾಯಕ ವ್ಯವಸ್ಥಾಪಕರು – 03 ಹುದ್ದೆಗಳು
• ವಿಸ್ತರಣಾಧಿಕಾರಿ ಗ್ರೇಡ್ 3 – 05 ಹುದ್ದೆಗಳು
• ಕೆಮಿಸ್ಟ್ ಗ್ರೇಡ್ 2 ( ಕೆಮಿಸ್ಟ್ರಿ ವಿಭಾಗ )- 04 ಹುದ್ದೆಗಳು
• ಕೆಮಿಸ್ಟ್ ಗ್ರೇಡ್ 2 ( ಮೈಕ್ರೋ ಬಯೋಲಜಿ ವಿಭಾಗ )- 02 ಹುದ್ದೆಗಳು
• ಜೂನಿಯರ್ ಸಿಸ್ಟಮ್ ಆಪರೇಟರ್ – 03 ಹುದ್ದೆಗಳು
• ಜೂನಿಯರ್ ಟೆಕ್ನೀಷಿಯನ್ (ಎಲೆಕ್ಟ್ರಿಕಲ್) – 05 ಹುದ್ದೆಗಳು
• ಜೂನಿಯರ್ ಟೆಕ್ನೀಷಿಯನ್ (ರಿಫ್ರೆಜರೇಟರ್) – 05 ಹುದ್ದೆಗಳು
• ಬಾಯ್ಲರ್ ಅಟೆಂಡೆಂಟ್ – 03 ಹುದ್ದೆಗಳು

ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ – ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 34,100ರೂ. ಯಿಂದ 1,55,200ರೂ. ವರೆಗೆ ಸಿಗಲಿದೆ.

ಶೈಕ್ಷಣಿಕ ಅರ್ಹತೆ – ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ ಅಥವಾ ಪದವಿ ಮುಗಿಸಿರಬೇಕು.

ವಯೋಮಿತಿ – 18 ರಿಂದ 40 ವರ್ಷದ ಒಳಗಿರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಜಿ ಶುಲ್ಕ :
• ಪ್ರವರ್ಗ-1, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ರೂ. 500
• ಉಳಿದ ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ. 1,000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 29, 2025

ಅರ್ಜಿ ಸಲ್ಲಿಸಲು ಹಾಗೂ ಇತರೆ ಮಾಹಿತಿಗಾಗಿ ಅಧಿಕೃತ ಜಲತನದ ಲಿಂಕ್ – https://virtualofficeerp.com/shimul_2025/instruction

Continue Reading

Special

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಕೌ – ಮ್ಯಾಟ್ ಖರೀದಿಸಲು ಸಬ್ಸಿಡಿ : ಅರ್ಜಿ ಸಲ್ಲಿಸುವುದು ಹೇಗೆ?

Published

on

Subsidy Schemes for Farmers : ರೈತರಿಗೆ ಹೈನುಗಾರಿಕೆ ಮಾಡಲು ಸಹಾಯವಾಗುವಂತೆ ಕರ್ನಾಟಕ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮೇವು ಕತ್ತರಿಸುವ ಯಂತ್ರ ಹಾಗೂ ರಬ್ಬರ್ ನೆಲಹಾಸು (Rubber Cow Mat) ಖರೀದಿಸಲು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ.

2025-26ನೇ ಸಾಲಿಗೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ರಾಜ್ಯದಂತ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಅರ್ಹ ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ರಬ್ಬರ್ ಕೌ ಮ್ಯಾಟ್ ಖರೀದಿಸಲು ಸಹಾಯವಾಗುವಂತೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ.

ಸಹಾಯಧನದ ವಿವರ :

• 2HP ಎಲೆಕ್ಟ್ರಿಕ್ ಮೇವು ಕತ್ತರಿಸುವ ಯಂತ್ರ ಖರೀದಿಸಲು ಘಟಕದ ವೆಚ್ಚ 34,000ರೂ. ಇದ್ದು, ಇದರ ಶೇಕಡಾ 50% ಹಣವನ್ನು ಅಂದರೆ 17,000ರೂ. ಹಣವನ್ನು ಸರ್ಕಾರ ಸಹಾಯಧನದ ರೂಪದಲ್ಲಿ ನೀಡುವುದು ಹಾಗೂ ಉಳಿದ 17,000ರೂ. ಮೊತ್ತವನ್ನು ಅರ್ಜಿದಾರರು ಪಾವತಿಸಬೇಕು.

• ರಬ್ಬರ್ ಕೌ – ಮ್ಯಾಟ್ ಖರೀದಿಸಲು ರೈತರು 2,850ರೂ. ಮಾತ್ರ ಪಾವತಿಸಿ, ಉಳಿದ ಹಣವನ್ನು ಸರ್ಕಾರ ಭರಿಸುವುದು.

ಯಾವ ರೈತರು ಅರ್ಜಿ ಸಲ್ಲಿಸಬಹುದು?

ರಾಜ್ಯದ ಎಲ್ಲಾ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಮ್ಮ ತಾಲೂಕಿನ ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು 30 ಸೆಪ್ಟೆಂಬರ್ 2025 ಕೊನೆಯ ದಿನಾಂಕವಾಗಿದೆ.

Continue Reading

Special

ಒಳಮೀಸಲಾತಿ ಅನುಷ್ಠಾನದ ಬಳಿಕ ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ 30 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳ ನೇಮಕಾತಿ

Published

on

Upcoming Recruitments in Karnataka Government : ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಒಳಮೀಸಲಾತಿ ಪ್ರಕರಣ ಮುಗಿದ ನಂತರ ರಾಜ್ಯದ್ಯಂತ ವಿವಿಧ ಇಲಾಖೆಗಳಲ್ಲಿ 30,000ಕ್ಕೂ ಅಧಿಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಈ ಒಂದು ಲೇಖನದಲ್ಲಿ ಯಾವೆಲ್ಲಾ ಇಲಾಖೆಗಳಲ್ಲಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು? ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂಬ ಮಾಹಿತಿಯನ್ನು ತಿಳಿಸಲಾಗಿದೆ.

ಇಲಾಖಾವರು ಹುದ್ದೆಗಳ ವಿವರ :

* ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 2,000 ಕ್ಕೂ ಅಧಿಕ Police Constable (PC) ಹುದ್ದೆಗಳು ಖಾಲಿ ಇವೆ. ನೇಮಕಾತಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯು ಅತ್ಯಂತ ತುರ್ತು ಕ್ರಮ ವಹಿಸುತ್ತಿದೆ.
• ವಾಣಿಜ್ಯ ತೆರಿಗೆ ಇಲಾಖೆ, ಅರಣ್ಯ ಇಲಾಖೆ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಕ್ಕೂ ಅಧಿಕ SDA & FDA ಹುದ್ದೆಗಳ ನೇಮಕಾತಿ.

* KPSC ಯಿಂದ ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ
• KEA ವತಿಯಿಂದಲೂ ಕೂಡ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಸಾವಿರಾರು ಹುದ್ದೆಗಳ ನೇಮಕಾತಿ:
* ಅಗ್ನಿಶಾಮಕ  ಇಲಾಖೆಯಲ್ಲಿ 66 Fire Station Officer ಸೇರಿದಂತೆ ಒಟ್ಟು 1,488 ಹುದ್ದೆಗಳ ನೇಮಕಾತಿ:

* ಸಣ್ಣ ನೀರಾವರಿ ಇಲಾಖೆಯಲ್ಲಿ AEE, AE, JE, SDA, SDAA, FDA, FDAA, Stenographer, Driver, Cook, Peon & Watchman ಸೇರಿದಂತೆ ಸಾವಿರಾರು ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ಈ ಹುದ್ದೆಗಳಿಗೂ ಕೂಡ ನೇಮಕಾತಿ ನಡೆಯಲಿದೆ
* ಅಬಕಾರಿ ಇಲಾಖೆಯಲ್ಲಿ 265 Excise Sub Inspector & 942 Constable ಹುದ್ದೆಗಳ ನೇಮಕಾತಿ:
* ಹೈದರಾಬಾದ್ ಕರ್ನಾಟಕದ ಭಾಗದಲ್ಲಿ 5,267 ಸರ್ಕಾರಿ ಪ್ರಾಥಮಿಕ & ಪ್ರೌಢ ಶಾಲಾ ಶಿಕ್ಷಕರ ಹಾಗೂ 820 ವಸತಿ ಶಾಲೆ & 50 ಕಂಪ್ಯೂಟರ್ ಶಿಕ್ಷಕರ ನೇಮಕಾತಿ.

* ವಿವಿಧ ವಸತಿ ಶಾಲೆಗಳಲ್ಲಿ ಶಿಕ್ಷಕರು, ಪ್ರಾಂಶುಪಾಲರು & FDA Cum Computer Operator ಸೇರಿದಂತೆ ಹಲವಾರು ಬ್ಯಾಕ್ ಲಾಗ್ ಹುದ್ದೆಗಳು ಖಾಲಿ ಇವೆ.
* ಸಾರಿಗೆ ಇಲಾಖೆಯಲ್ಲಿ RTO Inspector, SDA, FDA, AE, JE & AEE ಹುದ್ದೆಗಳ ನೇಮಕಾತಿ.
* KEA ವತಿಯಿಂದ ವಿವಿಧ ಇಲಾಖೆಗಳಲ್ಲಿ 650 Assistant ಪ್ರೊಫೆಸರ್ ಹಾಗೂ 1,200 ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ.

* ರಾಜ್ಯದ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ 14,523 ಹುದ್ದೆಗಳ ನೇಮಕಾತಿ:
•ವಿವಿಧ ಗ್ರಾಮ ಪಂಚಾಯತಿಗಳಲ್ಲಿನ Water Operator & Cleaners, Clerk Cum Data Entry Operator, Bill Collector, ಹುದ್ದೆಗಳ ನೇಮಕಾತಿ:

* BCM Hostel ಗಳಲ್ಲಿ 150 ವಾರ್ಡನ್ ಹುದ್ದೆಗಳ ನೇಮಕಾತಿ.
• 350ಕ್ಕೂ ಅಧಿಕ ಗೆಜೆಟೆಡ್ ಪ್ರೊಬೆಷನಸ್೯ ಅಂದರೆ KAS ಹುದ್ದೆಗಳ ನೇಮಕಾತಿ:

ವಿಶೇಷ ಸೂಚನೆ: ಮೇಲೆ ನೀಡಿರುವ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿ ವಿವರವು ವಿವಿಧ ಮೂಲಗಳಿಂದ ಆಯ್ದುಕೊಂಡಿರುವ ಮಾಹಿತಿಯಾಗಿದ್ದು, ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕೃತ ಮಾಹಿತಿಯಿಂದ ಪರಿಶೀಲಿಸಿಕೊಳ್ಳಿ. ಅದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ನೇಮಕಾತಿ ಪರೀಕ್ಷೆಗಳಿಗೆ ಈಗಿನಿಂದಲೇ ತಮ್ಮ ತಯಾರಿ ನಡೆಸಿ.

Continue Reading

Trending

error: Content is protected !!