Kodagu
ಅಕ್ರಮ ವನ್ಯಮೃಗ ಬೇಟೆ ಇರ್ವರ ಬಂಧನ – ಮೂವರು ಪಾರಾರಿ

ಮಾಂಸ, ಕೋವಿ, ವಾಹನ ವಶಕ್ಕೆ : ವಿರಾಜಪೇಟೆ ಅರಣ್ಯ ಸಂಚಾರಿ ದಳದ ಕಾರ್ಯಚರಣೆ
=================
ವಿರಾಜಪೇಟೆ : ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿ, ವನೃಮೃಗಗಳನ್ನು ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನಿಸುತಿದ್ದ ಇರ್ವರನ್ನು ಮಾಲು ಸಮೇತ ಬಂಧಿಸಿದ ಘಟನೆ ವಿರಾಜಪೇಟೆ ನಗರ ಹೊರ ವಲಯ ಬಿಟ್ಟಂಗಾಲ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ತಾಲೂಕು ಬೇಟೋಳಿ ಗ್ರಾಮದ ನಿವಾಸಿ ಬೇಕರಿ ಮಾಲೀಕ ಎಂ.ಎA ಅಜೀಜ್ ಅಲಿಯಾಸ್ ಆಜಿ (45), ವಿರಾಜಪೇಟೆ ನಗರದ ನೆಹರುನಗರದ ನಿವಾಸಿ ಆಟೋ ಚಾಲಕ ಹುಸೈನ್ ಸಿ.ಎ. ಅಲಿಯಾಸ್ ಜಂಶೀರ್ (32) ಬಂಧಿತ ಆರೋಪಿಗಳು. ಚಾಮಿಯಾಲ ಮೈತಾಡಿ ಗ್ರಾಮದ ನಿವಾಸಿ ಆಜೀಜ್ ಅಲಿಯಾಸ್ ಆಜ್ಜು, ಬೇಟೋಳಿ ಗುಂಡಿಗೆರೆ ಗ್ರಾಮದ ನಿವಾಸಿ ಆಶ್ರಫ್ ಆಲಿಯಾಸ್ ಆಚ್ಚು ಮತ್ತು ಶಿಯಾಬ್ ಪ್ರಕರಣದಲ್ಲಿ ಭಾಗಿಗಳು ಎನ್ನಲಾಗಿದ್ದು, ಇವರುಗಳು ಪಾರಾರಿಯಾಗಿದ್ದಾರೆ.
ಘಟನೆಯ ವಿವರ: ಆರೋಪಿಗಳು ಸಂಚು ರೂಪಿಸಿ ಹೆಗ್ಗಳ ಗ್ರಾಮ ಅರಣ್ಯ ಪ್ರದೇಶಕ್ಕೆ ತೆರಳಿದ್ದಾರೆ. ಬೇಟೆಯ ಸಂಧರ್ಭದಲ್ಲಿ ಎರಡು ಜಿಂಕೆಗಳನ್ನು ಗುಂಡಿಕ್ಕಿ ಕೊಂದು ಮಾಂಸವನ್ನಾಗಿಸಿ ಹಂಚಿಕೊAಡು ಉಳಿದ ಮಾಂಸವನ್ನು ಮಾರಾಟ ಮಾಡುವ ಯುತ್ನದಲ್ಲಿರುತ್ತಾರೆ. ಈ ವೇಳೆಯಲ್ಲಿ ಬೇಟೆಯಿಂದ ಪಡೆದ ಮಾಂಸವನ್ನು ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಇನ್ನೋವ ಕಾರಿನಲ್ಲಿ ಪೆರುಂಬಾಡಿ ಗ್ರಾಮದ ಮೂಲಕ ಬಿಟ್ಟಂಗಾಲ ಮಾರ್ಗವಾಗಿ ಬರುವುದಾಗಿ ವಿರಾಜಪೇಟೆ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳಿಗೆ ಮಾಹಿತಿ ಲಭಿಸುತ್ತದೆ. ಮಾಹಿತಿ ಅನ್ವಯ ಸಂಚಾರಿ ದಳದ ಸಿಬ್ಬಂದಿಗಳು ಎಲ್ಲಾ ವಾಹನಗಳನ್ನು ತಪಾಸಣೆ ಒಳಪಡಿಸಿದ್ದಾರೆ. ಈ ಸಂಧರ್ಭದಲ್ಲಿ ಮಾಹಿತಿಯಲ್ಲಿ ಉಲ್ಲೇಖಿಸಲಾದ ವಾಹನ ಆಕಸ್ಮಿಕವಾಗಿ ಬರುತ್ತದೆ. ಆರೋಪಿಗಳಿಗೆ ಸಂದೇಹ ಬಾರದಂತೆ ಎಲ್ಲಾ ವಾಹನಗಳನ್ನು ತಪಾಸಣೆ ಮಾಡುವ ನೆಪದಲ್ಲಿ ಆರೋಪಿಗಳ ವಾಹನವನ್ನು ತಪಾಸಣೆಗೆ ಒಳಪಡಿಸುತ್ತಾರೆ. ವಾಹನದ ಹಿಂಬದಿಯಲ್ಲಿ ಚೀಲದಲ್ಲಿರಿಸಲಾದ ಜಿಂಕೆಯ ಎರಡು ತಲೆ, ಸೇರಿದಂತೆ ಸುಮಾರು 44 ಕೆ.ಜಿ ಹಸಿ ಮಾಂಸ ಪತ್ತೆಯಾಗುತ್ತದೆ. ಬೇಟೆಯಾಡಿದ ಮಾಂಸದೊAದಿಗೆ ಒಂದು ಒಂಟಿ ನಳಿಕೆಯ ಕೋವಿ, ಎರಡು ಕಬ್ಬಿಣದ ಕತ್ತಿ, ಮೂರು ಚೂರಿಗಳು ಪತ್ತೆಯಾಗಿದೆ.
ಅರೋಪಿಗಳನ್ನು ವಶಕ್ಕೆ ಪಡೆದಿರುವ ವಸ್ತುಗಳೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Kodagu
ಸುಂಟ್ಟಿಕೊಪ್ಪ: ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ?

ಮಡಿಕೇರಿ: ಸುಂಟಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಮುಂದಿನ ಮೂರು ದಿನಗಳೊಳಗೆ, ತಮ್ಮ ಹಿತೈಷಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಅನೂಪ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅನೂಪ್ ಕುಮಾರ್, ನಾನು ಕಳೆದ ಹಲವು ವರ್ಷಗಳಿಂದ ಯುವ ಕಾಂಗ್ರೆಸ್ ಕಾರ್ಯರ್ತನಾಗಿ ನಂತರ ಸುಂಟಿಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದೇನೆ. ಅದಲ್ಲದೇ ಸುಂಟಿಕೊಪ್ಪ ಭಾಗದಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದು ಯುವ ಕಾಂಗ್ರೆಸ್ ಬಲಪಡಿಸುವ ಕೆಲಸ ಮಾಡಿದ್ದೇನೆ.
ಆದರೆ ಕಿಡಿಗೇಡಿಗಳ ಗುಂಪೊಂದು ನನ್ನ ಮೇಲೆ ಹಲ್ಲೆ ಮಾಡಿದ ಸಂದರ್ಭ, ಸುಂಟಿಕೊಪ್ಪ ಠಾಣೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಲತೀಫ್ ಸುಂಟಿಕೊಪ್ಪ ಮತ್ತು ಸಿಸಿಬಿ ವಿರಾಜಪೇಟೆ ತಂಡದ ಯುವಕರು ಹೊರತುಪಡಿಸಿ ಯಾರು ಕೂಡ ನನ್ನ ಬೆಂಬಲಕ್ಕೆ ನಿಂತಿಲ್ಲ.
ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಸುಂಟ್ಟಿಕೊಪ್ಪ ನಗರ ಕಾಂಗ್ರೆಸ್ ನಾಯಕರ ಗಮನಕ್ಕೆ ತಂದರು ಕೂಡ, ನನ್ನ ಬೆಂಬಲಕ್ಕೆ ನಿಲ್ಲದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅನೂಪ್ ಕುಮಾರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರ ಈ ಧೋರಣೆಯಿಂದ ಬೇಸತ್ತು ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಮುಂದಿನ ಮೂರು ದಿನಗಳಲ್ಲಿ ನಿರ್ಧಾರ ತಿಳಿಸುವುದಾಗಿ ಅನೂಪ್ ಕುಮಾರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಅನೂಪ್ ಕುಮಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಜನಸೇವೆಗೆ ಸದಾ ಸಿದ್ಧನಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡಿದ್ದ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ಸ್ಪರ್ಧಿಸಿದ್ದರು. ಅದಲ್ಲದೇ ಅನೂಪ್ ಕುಮಾರ್ ಅವರ ಗೆಲುವು ಕೂಡ ಬಹುತೇಕ ಖಚಿತಗೊಂಡಿತ್ತು. ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುವ ಮುನ್ನ ಅನೂಪ್ ಕುಮಾರ್ ಅವರ ರಾಜೀನಾಮೆ ನೀಡಲು ಮುಂದಾಗಿರುವುದು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.
ಸುಂಟಿಕೊಪ್ಪ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅನೂಪ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದರು.
Kodagu
ಅಡ್ಮಿನ್ಗಳ ವಿರುದ್ಧ ಕಾಂಗ್ರೆಸ್ ದೂರು: ಬಿಜೆಪಿ ತೀವ್ರ ಅಸಮಾಧಾನ

ಮಡಿಕೇರಿ: ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಗ್ರೂಪ್ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ದೂರು ನೀಡಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ದೇಶದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಇದನ್ನು ಮನಗಂಡು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು” ಎಂಬ ವಾಟ್ಸ್ಆಪ್ ಗ್ರೂಪ್ ನಲ್ಲಿ ಚರ್ಚೆ ನಡೆದಿದೆ. ಶೌಚಾಲಯದ ಫೋಟೋಕ್ಕೆ ಸ್ಥಳೀಯ ಶಾಸಕರ ಫೋಟೋವನ್ನು ಎಡಿಟ್ ಮಾಡಿ ಹಾಕಿದರು ಎಂಬ ಕಾರಣಕ್ಕೆ ವಾಟ್ಸ್ಆಪ್ ಗ್ರೂಪ್ ನ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರಕರಣ ದಾಖಲಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡದೆ ಇದ್ದಾಗ ಆ ಕ್ಷೇತ್ರದ ಶಾಸಕರ ಗಮನಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಶಾಸಕರು ಸಮಸ್ಯೆಯ ಬಗ್ಗೆ ಗಮನಹರಿಸಿ ಶೌಚಾಲಯವನ್ನು ಶುಚಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕಾಗಿತ್ತು. ಶಾಸಕರ ಫೋಟೋ ಹಾಕಿದ್ದರಿಂದ ತೇಜೋವಧೆ ಆಗಿದ್ದರೆ ಪ್ರಕರಣ ದಾಖಲಿಸಲಿ. ಅದನ್ನು ಬಿಟ್ಟು ಚರ್ಚೆ ಮಾಡಿದ ಗ್ರೂಪ್ ಅಡ್ಮಿನ್ ಗಳ ವಿರುದ್ಧವೇ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿರುವುದು ಸರಿಯಲ್ಲವೆಂದು ಹೇಳಿದ್ದಾರೆ.
ಆಡಳಿತ ಪಕ್ಷ ಪೊಲೀಸ್ ಇಲಾಖೆಯನ್ನು ತಮ್ಮ ಪರ ಕೆಲಸ ಮಾಡುವಂತೆ ಒತ್ತಾಯಿಸಿ ಈ ರೀತಿ ಪ್ರಕರಣ ದಾಖಲು ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರು ಕೂಡ ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸದೆ ಕಾನೂನಿಗೆ ಗೌರವ ನೀಡಿ ಕರ್ತವ್ಯ ನಿರ್ವಹಿಸಬೇಕೆಂದು ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ.
Kodagu
ತಾಳತ್ತಮನೆ : ಫೆ.11 ಮತ್ತು 12 ರಂದು ಶ್ರೀ ದುರ್ಗಾ ಭಗವತಿ ದೇವಾಲಯದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

ಮಡಿಕೇರಿ: ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ, ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.11 ಮತ್ತು 12 ರಂದು ನಡೆಯಲಿದೆ.
ದೇವಾಲಯದಲ್ಲಿ ಎರಡು ದಿನಗಳ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ.
ಫೆ.11 ರಂದು ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ಸಂಜೆ 6 ಗಂಟೆಗೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ.
ಫೆ.12 ರಂದು ಬೆಳಿಗ್ಗೆ 10 ಗಂಟೆಯಿAದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 4.30 ಗಂಟೆಗೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, ಸಂಜೆ 6 ಗಂಟೆಗೆ ರಂಗಪೂಜೆ, 7 ಗಂಟೆಯಿAದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಕೋರಿದೆ.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್