Mysore
ಅ.18 ಕ್ಕೆ ಸಿಎಂ ಕಪ್ ಸಮಾರಂಭ- ಶಿವಣ್ಣ

ಮೈಸೂರು: ದಸರಾ ಅಂಗವಾಗಿ ಆಯೋಜಿಸಿರುವ ದಸರಾ ಸಿಎಂ ಕಪ್ ಅತಂತ್ಯ ಯಶಸ್ವಿಯಾಗಿ ನಡೆಯುತ್ತಿದ್ದು, 21 ರಂದು ಸಿಎಂ ಕಪ್ ಕ್ರೀಡಾಕೂಟದ ಸಮಾರೋಪ ಸಮಾರಂಭ ಆಯೋಜಿಸಿದ್ದು ಅಂದು ಮುಖ್ಯಮಂತ್ರಿಗಳು ಕ್ರೀಡಾಪಟುಗಳಿಗೆ ಪದಕ, ಕಪ್ ಗಳನ್ನು ವಿತರಿಸಲಿದ್ದಾರೆ ಎಂದು ದಸರಾ ಕ್ರೀಡಾ ಉಪಸಮಿತಿ ಅಧ್ಯಕ್ಷರಾದ ಕಾಂಗ್ರೆಸ್ ನಗರ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಅ.11 ರಿಂದ 14 ರವರೆಗೆ ಕ್ರೀಡಾ ಕೂಟದಲ್ಲಿ 28 ಕ್ರೀಡೆಗಳಲ್ಲಿ ಒಟ್ಟು 3509 ಕ್ರೀಡಾಪಟುಗಳು ಭಾಗವಹಿಸಿದ್ದರು. 540 ಮಂದಿ ತಾಂತ್ರಿಕ ಸಿಬ್ಬಂದಿ ಕಾರ್ಯಕ್ರಮ ಯಶಸ್ಸಿಗೆ ದುಡಿದಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ಕಲ್ಬುರ್ಗಿ, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಯ ಕ್ರೀಡಾ ಪಟುಗಳು ಪಾಲ್ಗೊಂಡು ಚಿನ್ನ, ಬೆಳ್ಳಿ, ಕಂಚು ಸೇರಿ ಒಟ್ಟು 696 ಪದಕಗಳನ್ನು ಪಡೆದಿದ್ದಾರೆ ಎಂದರು.
ಹೀಗೆ ಮೊದಲ ಹಂತದ ಪ್ರತಿಭಾನ್ವೇಷಣ ರಾಜ್ಯ ಮಟ್ಟದ ಸಿಎಂ ಕಪ್ ಕ್ರೀಡಾಕೂಟ ಯಶಸ್ವಿಯಾಗಿ ನಡೆದಿದೆ.
ಎರಡನೇ ಹಂತದ ಸಿಎಂ ಕಪ್ ಕ್ರೀಡಾಕೂಟ ಅ.15 ರಿಂದ 21ರವರೆಗೆ ನಡೆಯಲಿದ್ದು, ಒಟ್ಟು 25 ಕ್ರೀಡೆಗಳು 4076 ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ಊಟ, ವಸತಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ನೀಡಲಾಗಿದೆ. ಕ್ರೀಡೆಯಲ್ಲಿ ವಿಜೇತರಾದವರಿಗೆ ವೈಯುಕ್ತಿಕ ಕ್ರೀಡೆ ವಿಭಾಗದಲ್ಲಿ ಗೆಲುವು ಕಂಡ ಕ್ರೀಡಾಪಟುಗಳಿಗೆ ನೇರ ನಗದು ಮೂಲಕ ನೀಡಲಾಗುತ್ತಿದೆ.
21 ರಂದು ಸಿಎಂ ಕಪ್ ಕ್ರೀಡಾಕೂಟದ ಸಮಾರೋಪ ಸಮಾರಂಭ ಆಯೋಜಿಸಿದ್ದು ಅಂದು ಮುಖ್ಯಮಂತ್ರಿಗಳು ಕ್ರೀಡಾಪಟುಗಳಿಗೆ ಪದಕ, ಕಪ್ ಗಳನ್ನು ವಿತರಿಸಲಿದ್ದಾರೆ. ಕ್ರೀಡಾ ಸಚಿವ ನಾಗೇಂದ್ರ, ಶಾಸಕ ತನ್ವೀರ್ ಸೇಠ್ ಸೇರಿ ಹಲವರು ಭಾಗವಹಿಸುವರು. ಪ್ರತಿಭಾನ್ವೇಷಣೆ ದಸರಾ ಸಿಎಂ ಕಪ್, ಒಲಿಂಪಿಕ್ ಮಾದರಿಯ ದಸರಾ ಸಿಎಂ ಕಪ್ ನಲ್ಲಿ ಪಾಲ್ಗೊಂಡಿದ್ದ 2 ಸಾವಿರಕ್ಕೂ ಹೆಚ್ಚು ಮಂದಿಗೆ ಪಾರಿತೋಷಕ ನೀಡಲಿದೆ ಎಂದರು.
ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ದಸರಾ ಕ್ರೀಡಾ ಉಪಸಮಿತಿ ಉಪಾಧ್ಯಕ್ಷರಾದ ಕಾಂತರಾಜು, ಪರಶಿವಮೂರ್ತಿ, ಸದಸ್ಯ ಹಿನಕಲ್ ವೆಂಕಟೇಶ್, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಕಿರಣ್ ಉಪಸ್ಥಿತರಿದ್ದರು.
Mysore
ನಂಜನಗೂಡಿನಲ್ಲಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ ವಿಜೃಂಭಣೆ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ
ಚಿಕ್ಕ ಜಾತ್ರೆ ಮಹೋತ್ಸವ ಮಂಗಳವಾರ ವೈಭವಯುತವಾಗಿ ನೆರವೇರಿತು.
ಬೆಳಿಗ್ಗೆ 10.45 ರಂದು ಸಲ್ಲುವ ಶುಭ ಮಕರ ಲಗ್ನದಲ್ಲಿ ದೇಗುಲದ ಪ್ರಧಾನ ಆಗಮಿಕ ಜೆ. ನಾಗ ಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕಯ೯ ನೆರವೇರಿಸಿ ರಥಗಳಿಗೆ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಉತ್ಸವ ರಥಕ್ಕೆ ಚಾಲನೆ ನೀಡಿ ತೇರನ್ನು ಎಳೆದರು.
ಹೂವಿನ ಹಾರ ಅಲಂಕೃತಗೊಂಡ ರಥೋತ್ಸವ ನಂಜುಂಡೇಶ್ವರ ಸ್ವಾಮಿಯ ಹಾಗೂ ಪಾರ್ವತಿ ದೇವಿ ಸಮೇತ ಉತ್ಸವ ಮೂರ್ತಿ, ಗಣಪತಿ ಚಂಡಿಕೇಶ್ವರ, ಸೇರಿದಂತೆ ಮೂರು ರಥಗಳು ರಥ ಬೀದಿಯಲ್ಲಿ
ರಥಗಳನ್ನು ಸಾವಿರಾರು ಭಕ್ತಾದಿಗಳು ಹಗ್ಗ ಹಿಡಿದು ಜೈ ನಂಜುಂಡೇಶ್ವರ, ಜೈ ಶ್ರೀಕಂಠೇಶ್ವರ, ಜೈ ನಂಜುಂಡ, ಎಂಬ ಘೋಷಣೆಗಳನ್ನು ಕೂಗುತ್ತಾ ಎಳೆದರು.
ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ರಥಕ್ಕೆ ಹಣ್ಣು ದವನ ಎಸೆದು ಪುನೀತರಾದರು.
ರಥ ಬೀದಿಗಳಲ್ಲಿ ನಿಧಾನವಾಗಿ ಚಲಿಸಿ ಭಕ್ತಾದಿಗಳು ಭಕ್ತಿಯಿಂದ ನಮಿಸಿದರು.
ಪೋಲಿಸ್ ಇಲಾಖೆಯಿಂದ ಬಿಗಿ ಬಂದೋಬಸ್ತು ಇರುವುದರಿಂದ ರಥದಲ್ಲಿ ಯಾವುದೇ ಅಡೆ-ತಡೆಗಳಿಲ್ಲದೆ ಮೂರು ರಥಗಳು 12.50 ಗಂಟೆಗೆ ಸ್ವಸ್ಧಾನಕ್ಕೆ ಸೇರಿದವು.
ಜಾತ್ರಾಯಲ್ಲಿ: ಶಾಸಕರಾದ ದರ್ಶನ್ ಧ್ರುವನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಕಾರ್ಯನಿವ೯ಹಣಾಧಿಕಾರಿ ಎಂ. ಜಗದೀಶ್ ಕುಮಾರ್, ಪೌರಾಯುಕ್ತಧಿಕಾರಿ ನಂಜುಂಡಸ್ವಾಮಿ, ಡಿಎಸ್ಪಿ ಗೋವಿಂದ್ ರಾಜ್, ಇದ್ದರು.
Mysore
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

ಮೈಸೂರು : ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆಯಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ಗೆ ಪತ್ರ ಬರೆದಿದ್ದರು.ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಸೂಚಿಸಿದ್ದ ಡಿ ಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದರು. ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಅದರಂತೆ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.1,18,000 ರೂಪಾಯಿ ಹಣ ದೇಗುಲಕ್ಕೆ ನೀಡಿಕೆಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
Mysore
ಪತ್ರಕರ್ತ ಪುನೀತ್ ಗೆ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿ

ಪಿರಿಯಾಪಟ್ಟಣ: ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಜನಮಿತ್ರ ವರದಿಗಾರ ಪತ್ರಕರ್ತ ಸಿ.ಜಿ ಪುನೀತ್ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿ ವರ್ಷ ಸಾಧಕರನ್ನು ಗುರುತಿಸಿ ನೀಡಲಾಗುವ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಪ್ರಸ್ತಕ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದ ಸೇವೆಗೆ ಸಿ.ಜಿ ಪುನೀತ್ ಆಯ್ಕೆಯಾಗಿದ್ದು, ನ.29ರ ಬುಧವಾರ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಕನ್ನಡಾಂಬೆ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ