Connect with us

Hassan

ಅಯೋಧ್ಯೆಯ ಶ್ರೀ ರಾಮ ಮಂದಿರ ಮಂತ್ರಾಕ್ಷತೆ, ಕರಪತ್ರ, ಹಾಗೂ ಶ್ರೀ ರಾಮ ಮಂದಿರದ ಪೋಟೋವನ್ನು ಮನೆ ಮನೆಗೆ ವಿತರಣೆ

Published

on

ಹಾಸನ: ತಾಲ್ಲೂಕು ಕಟ್ಟಾಯ ಹೋಬಳಿಯ ಕಟ್ಟಾಯ ಗ್ರಾಮದ ಶ್ರೀ ಈಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ. ಹಾಗು ಶೆಟ್ಟಿಹಳ್ಳಿ ಮಲ್ಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಯ ಶ್ರೀ ರಾಮ ಮಂದಿರ ಮಂತ್ರಾಕ್ಷತೆಯನ್ನು ಮನೆ ಮನೆಗೆ ಹೋಗಿ ಅಯೋಧ್ಯೆಯ ಕರಪತ್ರ, ಮಂತ್ರಾಕ್ಷತೆ ಹಾಗೂ ಶ್ರೀ ರಾಮ ಮಂದಿರದ ಪೋಟೋವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ೈ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಮುಖರಾದ ಶ್ರೀ ಲಾ .ನಾ .ಶಾಸ್ತ್ರಿಗಳು ಮಾತಾನಾಡಿದ ಅವರು ಅಯೋಧ್ಯೆಯ ಶ್ರೀ ರಾಮ ಮಂದಿರ ಮಂತ್ರಾಕ್ಷತೆಯನ್ನು ಮನೆ ಮನೆಗೆ ಕೊಡುವ ಕೆಲಸವನ್ನು ವಿಶ್ವ ಹಿಂದೂ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಮಾಡುತ್ತಿದೆ. ಸುಮಾರು 50-ಲಕ್ಷ ಶ್ರೀ ರಾಮ ಭಕ್ತರು. ದೇಶದ ಮಠಾಧೀಶರು ದಿನಾಂಕ 22-1-2024 ರಂದು ಶ್ರೀ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಅವರಿಗೆ ವಾಸ್ತವ್ಯ , ಊಟದ ವ್ಯವಸ್ಥೆಗೆ ತಯಾರಿ ಯಾಗುತ್ತಿದೆ. ಕರ್ನಾಟಕದಿಂದ 2000 ರಾಮ ಭಕ್ತರು ,ಗಣ್ಯರು. ಕರಸೇವಕರು ಪಾಲ್ಗೊಳ್ಳುತ್ತಿದ್ದಾರೆ.ಎಂದರು.


ಅಂದು ಬೆಳಗ್ಗೆ 11-00 ಗಂಟೆಯಿಂದ ಮಧ್ಯಾಹ್ನ 1-00 ಘಂಟೆಯ ವರೆಗೆ ಉದ್ಘಾಟನೆ ನೆರವೇರುವುದು ಈ ಸಂದರ್ಭದಲ್ಲಿ ಎಲ್ಲಾ ಗ್ರಾಮಗಳಲ್ಲಿ , ನಗರಗಳಲ್ಲಿ, ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ ಹಾಗೂ ಶ್ರೀ ರಾಮನ ಜಪ ಉದ್ಯೋಘೋಷಗಳು, ನಡೆಯಲಿವೆ, ಹಾಗೂ ದೇವಾಲಯದಲ್ಲಿ ಬಂದಂತಹ ಶ್ರೀ ರಾಮ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲು ಸ್ಥಳೀಯ ಭಕ್ತರು ತಯಾರಿದ್ದಾರೆ ಎಂದು ತಿಳಿಸಿದರು.
ಅಂದು ಸಂಜೆ ಎಲ್ಲ ಮನೆಗಳ ಮುಂದೆ ಐದು ದೀಪಗಳನ್ನು ಉತ್ತರಾಭಿಮುಖವಾಗಿ ಹಚ್ಚಬೇಕು, ಮನೆ ಮುಂದೆ ರಂಗೋಲಿ ಹಾಕಿ ಹಬ್ಬದ ವಾತಾವರಣ ಮಾಡಲು ತಿಳಿಸಿದರು. ವಿಶೇಷವಾಗಿ ಹಿಂದೂ ಬಾಂಧವರಿಗೆ ಸಂತೋಷದ ದಿನವಾಗಿದೆ ಎಂದು ತಿಳಿಸಿದರು
.
ಕಾರ್ಯಕ್ರಮದಲ್ಲಿ ಮಾತನಾಡಿದ ಹಾಸನ ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ಮಾತನಾಡಿ. ಕಳೆದ ಮೂವತ್ತು ವರ್ಷದ ಹಿಂದೆ ಶ್ರೀ ಲಾಲ್ ಕೃಷ್ಣ ಆಡ್ವಾಣಿ ಅವರ ನೇತೃತ್ವದಲ್ಲಿ ಹೋರಟ ರಥಯಾತ್ರೆಗಳು ದೇಶಾದ್ಯಂತ ಸಂಚಾರ ಮಾಡಿದ ಸಂದರ್ಭದಲ್ಲಿ ಹಾಸನ ಜಿಲ್ಲೆಗೆ ಬಂದಂತ ಸಂದರ್ಭದಲ್ಲಿ ಜಿಲ್ಲಾಂದ್ಯಾಂತ ರಥಯಾತ್ರೆಯನ್ನು ಮೆರವಣಿಗೆ ಮೂಲಕ ಎಲ್ಲಾ ಕಡೆ ಸಂಚಾರಿಸಿ ಕಟ್ಟಾಯ ಹೋಬಳಿಯಲ್ಲಿ ಬಂದಾಗ ಒಂದು ರಾತ್ರಿ ಕಟ್ಟಾಯ ಗ್ರಾಮದಲ್ಲಿ ತಂಗಿದ್ದ ಶ್ರೀ ರಾಮನ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗತ್ತು. ಎಂದು ತಿಳಿಸಿದರು.


ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಹಾಸನ ಜಿಲ್ಲೆಯ ಮೂರು ಸ್ವಾಮಿಜಿ ರವರಿಗೆ ಅಹ್ವಾನ ಪತ್ರಿಕೆ ನೀಡಿ ಹಿರಿಯರು ಅಹ್ವಾನ ನೀಡಿದ್ದಾರೆ, ಶ್ರೀ ಆದಿಚುಂಚನಗಿರಿ ಮಠದ ಸ್ವಾಮೀಜಿರವರು, ಶ್ರೀ ಕೋಡಿಮಠದ ಶ್ರೀಗಳು. ಶ್ರವಣ ಬೆಳಗೊಳದ ಜ್ಯೈನಾ ಮುನಿಗಳನ್ನು ಅಹ್ವಾನ ನೀಡಿದ್ದಾರೆ. ಇಂದು. ಕಟ್ಟಾಯ ಗ್ರಾಮದಲ್ಲಿ ಹಾಗೂ ಶೆಟ್ಟಿಹಳ್ಳಿ ಗ್ರಾಮದಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮನೆ ಮನೆಗೆ ತೆರಳಿ ಸ್ಥಳೀಯ ಪ್ರಮುಖರ ಜೊತೆಯಲ್ಲಿ ಶ್ರೀ ರಾಮ ಮಂತ್ರಾಕ್ಷತೆ, ಶ್ರೀ ರಾಮ ಮಂದಿರ ಉದ್ಘಾಟನಾ ಸಮಾರಂಭದ ಕರಪತ್ರ. ಶ್ರೀ ರಾಮ ಮಂದಿರದ ಪೋಟೋ ನೀಡಲಾಯಿತು.


ಈ ಕಾರ್ಯಕ್ರಮದಲ್ಲಿ ಹಾಸನ ತಾಲ್ಲೂಕು ವಿಶ್ವ ಹಿಂದೂ ಪರಿಷತ್ತಿನ ಗ್ರಾಮಾಂತರ ಅಧ್ಯಕ್ಷರಾದ ಹಾಗೂ ಮಂತ್ರಾಕ್ಷತೆ ಸಮಿತಿ ಕಟ್ಟಾಯ ಹೋಬಳಿಯ ಸಂಚಾಲಕರಾಗದ ಕಟ್ಟಾಯಶಿವಪ್ಪ,. ಹಾಸನ ತಾಲ್ಲೂಕು ಸಹಸಂಚಾಲಕರಾದ , ಮುಟ್ಟನಹಳ್ಳಿ ಯೋಗೀಶ್. ಅರ್ಚಕರಾದ ರಮೇಶ್, ಬಿಜೆಪಿ ಜಿಲ್ಲಾ ಮುಖಂಡರಾದ ಕೆ. ಎಂ. ಅಮೃತ್, ಕಟ್ಟಾಯ ಹೋಬಳಿಯ ಬಿಜೆಪಿ ಅಧ್ಯಕ್ಷ ರಾದ ಕಿರಣ್ ಕುಮಾರ್. ಕೆ. ಕಾರ್ಯದರ್ಶಿ ಕೆ,ಎಂ. ಗಿರೀಶ್. ಸ್ಥಳೀಯ ಪ್ರಮುಖರಾದ ಕೆ ಪ್ರಕಾಶ್. ಜಯರಾಮ್ ಗಾಣಿಗರಕೊಪ್ಪಲು. , ಪಟೇಲ್ ಗಣೇಶ್. ಕೆ. ಪಿ. ಶಿವಕುಮಾರ್. ಕೆ ,ಸ್ವಾಮಿ ಗೌಡರು. ಕೆ .ಎಂ .ವರದೆಗೌಡ. ಮಧುಕೇಶ್ವರ , ರವಿಕುಮಾರ್, ಕರುಣಾಕರ್, ಕೆ ಬಾಲಕೃಷ್ಣ ,ಪಟೇಲ್ ಕುಮಾರ್.ರಮೇಶ್. ಪುಟ್ಟ ರಾಜು,ಪಟೇಲ್ ಮಂಜುನಾಥ್ ಮುಟ್ಟನಹಳ್ಳಿ, ವಿಶ್ವ ನಾಥ್ ಕಲ್ಲಹಳ್ಳಿ, ಸಿಮೆಂಟ್ ಹರೀಶ್ ಬೆಳ್ಳೇಕೆರೆ , ಪ್ರವೀಣ್ ಶೆಟ್ಟಿಹಳ್ಳಿ ರಾಜಣ್ಣ,ಮುಂತಾದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಸಂಭ್ರಮದಿಂದ ನಡೆದ ವೀರಭದ್ರೇಶ್ವರ ಸ್ವಾಮಿಯ 46ನೇ ಜಾತ್ರಾ ಮಹೋತ್ಸವ

Published

on

ಆಲೂರು: ತಾಲ್ಲೂಕಿನ ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ 46ನೇ ವರ್ಷದ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಸಂಭ್ರಮದಿಂದ ನಡೆಯಿತು.

ಮಾ.13ರ ಗುರುವಾರ ರಾಮೇಶ್ವರ ಹಳ್ಳದಲ್ಲಿ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರಿಗೆ ಗಂಗಾಸ್ನಾನ ಏರ್ಪಡಿಸಲಾಗಿತ್ತು. ಶ್ರೀ ಕ್ರೋಧಿನಾಮ ಸಂವತ್ಸರೇ ಉತ್ತರಾಯಣೇ ಶಿಶಿರ ಋತು ಫಾಲ್ಗುಣ ಶುಕ್ಲ ಪಕ್ಷ 1927 ಗತಕಲಿ 5101 ದಿನಾನಿ14 ಪೂರ್ವ ಭಾದ್ರಪದ ಉತ್ತರ ಪಲ್ಗುಣಿ ನಕ್ಷತ್ರ ಪೂರ್ಣಿಮೆಯ ಮಾ. 14 ರ ಶುಕ್ರವಾರ ಬೆಳಿಗ್ಗೆ 8-00 ಗಂಟೆಗೆ ಗ್ರಾಮದ ದೇವಸ್ಥಾನದಲ್ಲಿ ಶ್ರೀ ದೇವೀರಮ್ಮನವರ ಮೂಲಸ್ಥಾನದಲ್ಲಿ ಅಂಕುರಾರ್ಪಣ ರುದ್ರಾಭಿಷೇಕ ಮತ್ತು ಮಹಾಮಂಗಳಾರತಿಯನ್ನು ಏರ್ಪಡಿಸಿ ಮತ್ತು ಸಂಜೆ 3-00 ಗಂಟೆಗೆ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರ ಬೆಟ್ಟದಲ್ಲಿ ಶ್ರೀ ದೇವೀರಮ್ಮ- ಶ್ರೀ ವೀರಭದ್ರೇಶ್ವರ ಸ್ವಾಮಿಯವರಿಗೆ ರುದ್ರಾಭಿಷೇಕ ನಡೆಯಿತು, ಸಂಜೆ 7-30 ಗಂಟೆಗೆ ಸರಿಯಾಗಿ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರ ಬೆಟ್ಟದಿಂದ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಮುತ್ತಿನ ಮಂಟಪ ಉತ್ಸವ ನಂದಿಧ್ವಜ, ವೀರಭದ್ರ ಕುಣಿತ, ಕೋಲಾಟ, ಡೊಳ್ಳು ಕುಣಿತ ಹಾಗೂ ವಿವಿಧ ವಾದ್ಯದೊಂದಿಗೆ ಮೆರವಣಿಗೆ ಮೂಲಕ ಗ್ರಾಮಕ್ಕೆ ಆಗಮನ ರಾತ್ರಿ 8-30 ರಿಂದ 10-30ರವರೆಗೆ ಅರ್ಚನೆ ಮಹಾಮಂಗಳಾರತಿ ಕಾರ್ಯಕ್ರಮ ನಡೆದವು.
ರಾತ್ರಿ 10-30 ಗಂಟೆಯಿಂದ ನಂದಿಧ್ವಜದೊಂದಿಗೆ ಶ್ರೀ ದೇವೀರಮ್ಮ ಸ್ವಾಮಿಯವರ ಉತ್ಸವ ಜರುಗಿದವು.

ಮಾ.15ರ ಶನಿವಾರ ಬೆಳಗ್ಗೆ 5-30 ಗಂಟೆಯಿಂದ ಕಳಸ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಮೆರವಣಿಗೆಯೊಂದಿಗೆ ಕೆಂಡೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು. ಹೊತ್ತ ಭಕ್ತರು ಕೆಂಡ ಹಾಯ್ದರು. ಹರಕೆ ಹೊತ್ತ ಭಕ್ತರು ಕೆಂಡ ತುಳಿದು ತಮ್ಮ ಭಕ್ತಿ ಸಮರ್ಪಿಸಿದರು.

ಜಾತ್ರಾ ಮಹೋತ್ಸವ ಅಂಗವಾಗಿ ರಾತ್ರಿ “ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ” ಎಂಬ ಸುಂದರ ಪೌರಾಣಿಕ ನಾಟಕವನ್ನು ಏರ್ಪಡಿಸಲಾಗಿತ್ತು. ಮಾ.16 ನೇ ಭಾನುವಾರ ಬೆಳಿಗ್ಗೆ 9-00 ಗಂಟೆಯಿಂದ ಭೂತಪ್ಪನವರ ಸೇವಾ ಕಾರ್ಯಗಳು ನಡೆದವು.

ಮಾ.14 ರ ಶುಕ್ರವಾರ ರಾತ್ರಿಯಿಂದ ಮಾ.15ರ ಶನಿವಾರ ರಾತ್ರಿವರೆಗೆ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಬೇಲೂರು: ಟಿ.ವಿ.ಮಾಧ್ಯಮಗಳ ಹೊಡೆತಕ್ಕೆ ಸಿಲುಕಿ ನಲುಗಿರುವ ನಾಟಕ ಕಲೆ ಇಂದಿಗೂ ಜೀವಂತವಾಗಿದೆ ಎಂದರೆ, ಇದಕ್ಕೆ ಗ್ರಾಮೀಣ ಪ್ರದೇಶದ ಜನರ ಪ್ರೋತ್ಸಾಹ ಹಾಗೂ ಆಸಕ್ತಿಯೇ ಕಾರಣವಾಗಿದೆ ಎಂದು ಶಾಸಕ ಹೆಚ್.ಕೆ ಸುರೇಶ್ ತಿಳಿಸಿದರು.

ತಾಲೂಕಿನ ಹಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇರಿದ ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ 46ನೇ ವರ್ಷದ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ” ಎಂಬ ಸುಂದರ ಪೌರಾಣಿಕ ನಾಟಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಇಂದಿನ ದಿನಮಾನಗಳಲ್ಲಿ ಟಿವಿ, ಮೊಬೈಲ್‌ ಹಾವಳಿಯಿಂದ ಪೌರಾಣಿಕ ನಾಟಕಗಳು ನಶಿಸುತ್ತಿವೆ. ಗ್ರಾಮೀಣ ಭಾಗದ ಕಲಾಭಿಮಾನಿಗಳು ಪೌರಾಣಿಕ ನಾಟಕಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಕರೆ ನೀಡಿದರು. ಬಂಟೆನಹಳ್ಳಿಯ ಗ್ರಾಮಕ್ಕೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಸಮಸ್ಯೆಯನ್ನು ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಈ ಬಗ್ಗೆ ಸದನದಲ್ಲೂ ಕೂಡ ಸರ್ಕಾರವನ್ನ ಗಮನ ಸೆಳೆಯುವಂತಹ ಕೆಲಸ ಮಾಡುತ್ತೇನೆ ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ನವೀನ್, ಬಿಜೆಪಿ ಮುಖಂಡ ಡಿಶಾಂತ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮುತ್ತಣ್ಣ, ಪೃಥ್ವಿರಾಜ್, ವಕೀಲರಾದ ವೀರಭದ್ರೇಗೌಡ, ಗ್ರಾಮದ ಮುಖಂಡರಾದ ಸಿದ್ದಮಲ್ಲೇಗೌಡ, ಬಸವರಾಜ್, ವಿರುಪಾಕ್ಷ, ಜಯಣ್ಣ ಗ್ರಾಮಸ್ಥರು ಹಾಗೂ ಭಕ್ತರು ಹಾಜರಿದ್ದರು.

Continue Reading

Hassan

ಛತ್ರಪತಿ ಶಿವಾಜಿ ತತ್ವ ಆದರ್ಶ ಅನುಸರಿಸಿ: ಸಂಸದ ಶ್ರೇಯಸ್ ಪಟೇಲ್

Published

on

ಹಾಸನ : ಇಡೀ ದೇಶಕ್ಕೆ ಮಾದರಿಯಾದ ಛತ್ರಪತಿ ಶಿವಾಜಿ ಮಹಾರಾಜರ ತತ್ವ ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು.

ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರದಂದು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದ ಕ್ರಾಂತಿವೀರರು. ಮುಂದಿನ ಪೀಳಿಗೆಯವರು, ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಹೇಳಿದರು.

ಬೆಂಗಳೂರಿನ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಮಾತನಾಡಿ, ಛತ್ರಪತಿ ಶಿವಾಜಿಯವರು ಕೇವಲ ಮರಾಠ ಸಮಾಜಕ್ಕೆ ಸೀಮಿತವಲ್ಲ, ಇಡೀ ವಿಶ್ವಕ್ಕೆ ಆದರ್ಶ ಪುರುಷರಾಗಿದ್ದಾರೆ. ಶಿವಾಜಿ ರಾಷ್ಟ್ರ ನಾಯಕ, ಸ್ವರಾಜ್ಯ ಸ್ಥಾಪಕರಾಗಿದ್ದಾರೆ. ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ಆದರ್ಶ ಕೊಟ್ಟಿರುವ ಮಹಾಪುರುಷರಲ್ಲಿ ಶಿವಾಜಿ ಅವರೂ ಒಬ್ಬರು. ಶಿವಾಜಿವನ್ನು ನಾಲ್ಕು ಗೋಡೆಗೆ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಹೇಳಿದರು.

ಶಾಸಕ ಹೆಚ್.ಪಿ. ಸ್ವರೂಪ್ ಮಾತನಾಡಿ, ಶಿವಾಜಿಯವರು ವೀರ ಯೋಧರಾಗಿದ್ದು, ವಿಶ್ವ ಪ್ರಸಿದ್ಧರಾಗಿದ್ದಾರೆ. ಶಿವಾಜಿ ಅವರ ಪುತ್ತಳಿಯನ್ನು ಹಾಸನದಲ್ಲಿ ಶೀಘ್ರದಲ್ಲೇ ಅನಾವರಣ ಮಾಡೋಣ ಹಾಗೂ ಮರಾಠ ಸಮುದಾಯದ ಮಕ್ಕಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಿಕೊಡುವುದರ ಕುರಿತು ನೀವು ಕೂಡ ಮನವಿ ಮಾಡಿದ್ದೀರಿ ಅದನ್ನು ಶೀಘ್ರದಲ್ಲೇ ಶಾಸಕರ ನಿಧಿಯಿಂದ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮೊದಲು ೩೯೮ನೇ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪ, ಅಗ್ರಹಾರ, ಹಾಸನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಇಲ್ಲಿಂದ ಮೆರವಣಿಗೆ ಹೊರಟು ಹಳೆ ಬಸ್ ಸ್ಟ್ಯಾಂಡ್ ರಸ್ತೆ ಮಾರ್ಗವಾಗಿ ಕಲಾಭವನವರೆಗೆ ಮೆರವಣಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಚ್.ಪಿ. ತಾರಾನಾಥ್, ಹಾಸನ ಜಿಲ್ಲಾ ನೌಕರರ ಸಂಘದ ಗೌವಾಧ್ಯಕ್ಷರಾದ ಈ. ಕೃಷ್ಣೇಗೌಡ, ವಕೀಲರಾದ ವಿಜಯಕುಮಾರ್ ನಾರ್ವೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಹಾಸನ ಜಿಲ್ಲಾಧ್ಯಕ್ಷರಾದ ಎನ್ ಲೀಲಾಕುಮಾರ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎ.ವಿ. ರುದ್ರಪ್ಪಾಜಿರಾವ್ ಫೋರ್ಪಡೆ, ಗೌರವಾಧ್ಯಕ್ಷ ಹೆಚ್.ಜೆ. ತುಳಜಿರಾವ್ ಠಾಣ್ಗೆ, ಖಜಾಂಚಿ ಪ್ರಕಾಶ್, ನಿರ್ದೇಶಕ ಸುರೇಶ್ ಇತರರು ಉಪಸ್ಥಿತರಿದ್ದರು. ಯದೀಶ್ ಅವರು ಕಾರ್ಯಕ್ರಮ ನಿರೂಪಿಸಿದರು.

Continue Reading

Hassan

ಏ.12, 13ರಂದು ಹಾಸನದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

Published

on

ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಸೂಚನೆಯಂತೆ ಏಪ್ರಿಲ್ 12 ಮತ್ತು 13 ರಂದು ನಗರದ ಸರಕಾರಿ ಕಲಾ ಕಾಲೇಜು ಮತ್ತು ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ನಡೆಸಲು ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಭೆ ನಡೆಸಿ ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಮಾತನಾಡಿ, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಹಾಸನದಲ್ಲಿ ಆಯೋಜಿಸಲು ತೀರ್ಮಾನ ಮಾಡಲಾಗಿದ್ದು, ಕಳೆದ ವರ್ಷ ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಬಹಳ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ಅದಕ್ಕಿಂತ ಬಿನ್ನವಾಗಿ ಇಲ್ಲಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲು ಆಲೂಚನೆ ಇಟ್ಟುಕೊಂಡು ನಿರ್ಧರಿಸಲಾಗಿದೆ. ಕೊಪ್ಪಳದಲ್ಲಿ ನಡೆದ ಸಮ್ಮೇಳನದಲ್ಲಿ ಮದನ್ ಗೌಡರು ತಿಳಿಸಿದ್ದರು. ಏಪ್ರಿಲ್ ೧೨ ಮತ್ತು ೧೩ನೇ ದಿನಾಂಕದಂದು ಹಾಸನದಲ್ಲಿ ಏರ್ಪಡು ಮಾಡಲು ಭಾನುವಾರದಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.

ಯಾರು ಪತ್ರಕರ್ತರ ಸಂಘದ ಸದಸ್ಯರಾಗಿದ್ದಾರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ತಂಡ ಭಾಗವಹಿಸಲು ಅವಕಾಶ ಇರುತ್ತದೆ. ಪ್ರತಿಯೊಬ್ಬರ ಐಡಿ ಕಾರ್ಡ್ ಪರೀಕ್ಷೆ ಮಾಡಲಾಗುದು. ಹೊರ ಜಿಲ್ಲೆಯಿಂದ ಬರುವ ಪತ್ರಕರ್ತ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕ್ರೀಡಾಕೂಟ ಯಶಸ್ವಿಗೆ ಜಿಲ್ಲಾ ಸಮಿತಿ, ಉಪ ಸಮಿತಿ ಮಾಡಿಕೊಂಡು ಆವರವರ ಜವಬ್ಧಾರಿಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಹಿಸಿಕೊಡಲಿದೆ. ಪ್ರಾರಂಭದ ದಿನದಲ್ಲಿ ಮೊದಲ ಆಟ ಸೆಲೆಬ್ರೆಟಿ ಕ್ರಿಕೆಟ್ ನಡೆಯಲಿದೆ. ಮಂಗಳೂರಿನಲ್ಲಿಯೂ ಕೂಡ ಸೆಲಬ್ರಿಟಿ ಜನಪ್ರತಿನಿಧಿಗಳಿಂದ ಆಟೋಟ ನಡೆದಿತ್ತು. ಒಟ್ಟಾರೆ ರಾಜ್ಯ ಮಟ್ಟದ ಈ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿ ಮನವಿ ಮಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂರ್ಘದ ಅಧ್ಯಕ್ಷ ಕೆ.ಹೆಚ್. ವೇಣುಕುಮಾರ್ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಕ್ರಿಕೆಟ್ ಕ್ರೀಡಾಪಟುಗಳಿಗೆ ವಸತಿ ಸೌಲಭ್ಯ, ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ. ಕ್ರಿಕೆಟ್ ಪಂದ್ಯಾವಳಿಗೆ ವಿಶೇಷವಾಗಿ ರಾಜ್ಯ ಸಭಾಪತಿ ಯೂ.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಆಗಮಿಸಲಿದ್ದಾರೆ. .

ಸಭೆಯಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಹೆಚ್.ಬಿ. ಮದನ್ ಗೌಡ, ಮಾಜಿ ಅಧ್ಯಕ್ಷರಾದ ಮಂಜುನಾಥ್, ರವಿನಾಕಲಗೂಡು, ಬಿ.ಆರ್. ಉದಯಕುಮಾರ್, ಪ್ರಸನ್ನಕುಮಾರ್, ಕಾರ್ಯದರ್ಶಿ .ಪಿ.ಎ. ಶ್ರೀನಿವಾಸ್, ಕುಮಾರ್, ನಟರಾಜು, ಜಿ. ಪ್ರಕಾಶ್, ಹೆತ್ತೂರ್ ನಾಗರಾಜು, ಜ್ಞಾನೇಶ್, ಕುಶ್ವಂತ್, ಕೃಷ್ಣ, ನಾಗರಾಜು, ಮಂಜು, ಮೆಹಾಬೂಬ್, ದಯಾನಂದ್, ಶರತ್ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!