Connect with us

Politics

ಭಾರತವನ್ನು ಮುನ್ನಡೆಸುವುದಕ್ಕೆ ಪ್ರಧಾನಿ ಮೋದಿ ಅವರಿಂದ ಸಾಧ್ಯ: ಬಿ.ವೈ. ವಿಜಯೇಂದ್ರ

Published

on

ಬೆಂಗಳೂರು: ಪ್ರಧಾನಿ ಮೋದಿ ಅವರಿಂದ ಮಾತ್ರ ಭಾರತವನ್ನು ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಸಾರ್ವಜನಿಕರು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ. ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ ಜನತೆ ಕಾಂಗ್ರೆಸ್ ಪಕ್ಷದ  ಬಗ್ಗೆ ಏಕೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕು ಅಥವಾ ಚಿಂತನೇ ಮಾಡಬೇಕೆ ವಿನಾಃ ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಜೀ ಅವರಿಂದ ಮಾತ್ರ ಭಾರತವನ್ನ ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಜನ ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ  ಅವರು ಇದನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದೆ ಪ್ರಸ್ತುತ ಇವಿಎಂ  ಮೇಲೆ ದೂರುವುದು ಮತ್ತು ದೋಷಪೂರಿತ ಎಂದು ಕಾಂಗ್ರೆಸ್ ಹೇಳುತ್ತಿರುವುದು ಹುಚ್ಚುತನದ ಪರಮಾವಧಿ ಎಂದು ಲೇವಡಿ ಮಾಡಿದರು.

ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರಿಗೆ ಇವಿಎಂ ಮೇಲೆ ಏಕೆ ವಿಶ್ವಾಸ ಕಡಿಮೆ ಆಗಿದೆ? ರಾಹುಲ್ ಗಾಂಧಿಯವರು ಸತತವಾಗಿ 3 ಬಾರಿ ಕೇಂದ್ರ ಲೋಕಸಭಾ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದರು.

ಬ್ಯಾಲೆಟ್ ಪೇಪರ್ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯು ಬ್ಯಾಲೆಟ್ ಪೇಪರ್‌ಗೆ ಹೆದರುವುದಿಲ್ಲ, ನಾವು ಏಕೆ ಹೆದರಬೇಕು? ಎಂದು ಕೇಳಿದರಲ್ಲದೇ ಕೇಂದ್ರದಲ್ಲಿ ಸತತವಾಗಿ 3 ಬಾರಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಇದೆ. ಬಿಜೆಪಿ ಬ್ಯಾಲೆಟ್ ಪೇಪರ್‌ಗೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಇವಿಎಂ ಬಗ್ಗೆಯೂ ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

Continue Reading

Hassan

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಈಗ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌

Published

on

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಅತ್ಯಾಚಾರ ಪ್ರಕರಣದಲ್ಲಿ  ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು,  ಪರಪ್ಪನ ಅಗ್ರಹಾರದಲ್ಲಿ  ಸಾಮಾನ್ಯ ಕೈದಿಗಳಂತೆ ತಮ್ಮ ತಪ್ಪಿಗೆ ಶಿಕ್ಷೆಯನ್ನ ಅನುಭವಿಸುತ್ತಿದ್ದಾರೆ.

ಜೈಲಾಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ನೀಡುವುದು ಹಾಗೂ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಪ್ರಜ್ವಲ್‌ ಸದ್ಯ ಒಂದು ದಿನದ ಮಟ್ಟಿಗೆ  ಕೆಲಸ ಮಾಡಿದ್ದು, ದಿನಗೂಲಿಯಾಗಿ ದಿನಕ್ಕೆ 522 ರೂ. ಗಳನ್ನು ನೀಡಲಾಗುತ್ತದೆ.  ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ.

ಇನ್ನೂ ಟ್ರಯಲ್ ಕೋರ್ಟ್‌ಗೆ ಆಗಾಗ ಬರಬೇಕಾಗಿರುವುದರಿಂದ ಹಾಗೂ ವಕೀಲರ ಜೊತೆ ಇತರೆ ಪ್ರಕರಣಗಳ ಸಂಬಂಧ ಚರ್ಚೆ ಮಾಡಬೇಕಾಗಿರುವ ಕಾರಣ ಪ್ರಜ್ವಲ್‌  ಅವರನ್ನು ಪೂರ್ತಿ ಕೆಲಸಕ್ಕೆ ನಿಯೋಜಿಸಿಲ್ಲ.

Continue Reading

Hassan

ಹಾಸನ ಮಹಾನಗರ ಪಾಲಿಕೆಗೆ ಸರ್ಕಾರದಿಂದ ಆಗಿರುವ ಅನ್ಯಾಯದ ಬಗ್ಗೆ ಸದನದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಧ್ವನಿ

Published

on

ಬೆಂಗಳೂರು: ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿರುವ ಸರ್ಕಾರ ಅದಕ್ಕನುಗುಣವಾಗಿ ಅನುದಾನ ನೀಡದೆ ವಂಚನೆ ಮಾಡಿದೆ ಎಂದು ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು.

ಅಧಿವೇಶನದಲ್ಲಿ ಇಂದು ಈ ಬಗ್ಗೆ ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದ್ದು ಸಂತೋಷದ ವಿಚಾರ ಇದಕ್ಕೆ ನಾವು ಕೂಡ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದೆವು ಆದರೆ ಕೇವಲ ನಾಮಕಾವಸ್ಥೆಗೆ ಮೇಲ್ದರ್ಜೆಗೇರಿಸಿ ಅನುದಾನ ನೀಡದೆ ಇದ್ದರೆ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಮಹಾನಗರ ಪಾಲಿಕೆಗಾಗಿ ಹಾಸನದ ಸುತ್ತಮುತ್ತಲ 37 ಹಳ್ಳಿಗಳನ್ನು ನಗರಸಭೆಗೆ ಸೇರಿಸಿಕೊಂಡಿದೆ ಆದರೆ ಅವರಿಗೆ ನೀಡಬೇಕಾಗಿರುವ ಸೌಲಭ್ಯಗಳಲ್ಲಿ ವಂಚನೆ ಮಾಡಿದಂತಾಗಿದೆ. ಈ ಹಿಂದೆ ಗ್ರಾಮ ಪಂಚಾಯಿತಿಗಳಲ್ಲಿ ಇದ್ದ ಗ್ರಾಮಗಳು ಇದೀಗ ಮಹಾನಗರ ಪಾಲಿಕೆಗೆ ಒಳಗೊಂಡಿವೆ. ಅದಕ್ಕನುಗುಣವಾಗಿ ಅವರು ಕೂಡ ಹತ್ತುಪಟ್ಟು ಹೆಚ್ಚು ಕಂದಾಯ ಕಟ್ಟುತ್ತಿದ್ದಾರೆ. ಆದರೆ ಆ ಗ್ರಾಮಗಳನ್ನು ಮಹಾನಗರ ಪಾಲಿಕೆ ಹಂತದಲ್ಲಿ ಅಭಿವೃದ್ಧಿಪಡಿಸಲು ಆಗುತ್ತಿಲ್ಲ. ಈ ಹಿಂದೆ ಸರ್ಕಾರ ಅನುದಾನ ನೀಡುವ ಭರವಸೆ ನೀಡಿ ಇದೀಗ ಪೌರಾಡಳಿತ ಇಲಾಖೆಗೆ ಮುಂದಿನ ಮೂರು ವರ್ಷಗಳು ಯಾವುದೇ ನೇಮಕಾತಿ ಅಥವಾ ಹಣ ಬಿಡುಗಡೆ ಮಾಡಲು ಆಗುವುದಿಲ್ಲ ಎಂಬ ಪತ್ರವನ್ನು ಹೊರಡಿಸಿದೆ ಇದರಿಂದ ನಮಗೆ ತುಂಬಾ ಅನ್ಯಾಯವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಈಗಾಗಲೇ ಹಾಸನ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು ರಸ್ತೆಗಳು ಗುಂಡಿಮಯವಾಗಿದೆ ಆದರೆ ಅವುಗಳನ್ನು ಮುಚ್ಚಲು ಹಣವಿಲ್ಲದೆ ಪರದಾಡುವಂಥಾಗಿದೆ, ಕೆಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಯನ್ನು ಹಾಕುತ್ತಿದ್ದು ನಮ್ಮ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಇದನ್ನು ಮನಗಂಡು ಆಡಳಿತ ಪಕ್ಷದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ಹೆಚ್ಚಿನ ಅನುದಾನ ನೀಡಿ ಹೊಸದಾಗಿ ಶಾಸಕರಾಗಿರುವ ನಮಗೆ ಹೆಚ್ಚಿನ ಕೆಲಸ ಮಾಡಲು ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

Continue Reading

Politics

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ: ಎಚ್‌.ಕೆ.ಪಾಟೀಲ್‌

Published

on

ಗದಗ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಎಂದು ನೋಡಲು ಪ್ರಯತ್ನ ಮಾಡುತ್ತಿದ್ದು, ಈ ವಿಚಾರದಲ್ಲಿ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಗದಗದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ವಿಚಾರ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ ತನಿಖೆ ನಡೆದಿದೆ. ತನಿಖೆಯು ಯಾವ ಹಂತದಲ್ಲಿದೆ ಎಂಬ ಕೆಲವು ಭಾಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಬಹುಶಃ ಸೋಮವಾರ ಇನ್ನು ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರು ನೀಡುತ್ತಾರೆ ಎಂದಿದ್ದಾರೆ ಎಂದು ಹೇಳಿದರು.

ಶಾಸನ ಸಭೆಯಲ್ಲಿ ಚರ್ಚೆ ಮಾಡಿದ್ದರಿಂದ ಸೋಮವಾರ ಸರ್ಕಾರ ತನ್ನ ಉತ್ತರ ನೀಡಲಿದೆ. ನಾವು ಧರ್ಮಸ್ಥಳ ಮಂಜುನಾಥನ ಸನ್ನಿಧಾನ ಬಗ್ಗೆ ವಿಶೇಷ ಭಕ್ತಿ, ಗೌರವ, ಅಭಿಮಾನ ಹೊಂದಿದವರು. ಆದ್ದರಿಂದ ಸರ್ಕಾರದ ಬಗ್ಗೆ ಯಾರು ಅನುಮಾನದ ಮಾತುಗಳನ್ನಾಡುತ್ತಿದ್ದಾರೆ. ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ. ಇವತ್ತು ಮಾತನಾಡುವವರು 10 ದಿನಗಳ ಹಿಂದೆ ಯಾಕೆ ಮಾತನಾಡಲಿಲ್ಲ? ಸಮಯದ ಉಪಯೋಗ ಮಾಡಿಕೊಂಡು ಏನಾದ್ರು ಮಾಡುವ ಪ್ರಯತ್ನಿಸಿದರೆ ಅದರಿಂದ ಏನು ಲಾಭ ಆಗುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ  ಒಳಮೀಸಲಾತಿ ಬಗ್ಗೆ ಮಾತನಾಡಿದ ಅವರು, ಒಳಮೀಸಲಾತಿಗೆ ಸಂಬಂಧಪಟ್ಟಂತೆ ಆ.16 ರಂದು ವಿಶೇಷ ಸಚಿವ ಸಂಪುಟ ಕರೆಯಲಾಗಿತ್ತು. ಆದರೆ ಈ ಬಗ್ಗೆ ಕೆಲವು ಸಚಿವರು, ಸಿಎಂ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚೆ ಮಾಡ್ತಿದ್ದಾರೆ. ಅದಕ್ಕೆ ಒಂದೆರಡು ದಿನ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದಾರೆ. ಆದ್ದರಿಂದ ಆ.19ರಂದು ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ. ಅದರೊಳಗೆ ನಾಗಮೋಹನ್‌ದಾಸ್ ವರದಿ ಬಗ್ಗೆ ಅಂತಿಮವಾಗಿ ಚರ್ಚೆ ಹಾಗೂ ನಿರ್ಣಯ ಆಗುತ್ತದೆ ಎಂದು ಹೇಳಿದರು.

Continue Reading

Trending

error: Content is protected !!