Connect with us

Mysore

ಬಡವರ ಬದುಕಿಗೆ ನೆರವಾದ ಗ್ಯಾರಂಟಿ ಗಳು  , ಕೇಂದ್ರದ ಗ್ಯಾರಂಟಿಗಳು ಅನುಷ್ಠಾನ ಗೊಳ್ಳಲು ಕಾಂಗ್ರೆಸ್ ಅಭ್ಯರ್ಥಿ ಗೆ ಮತ ನೀಡಿ  ಮನವಿ :ಶಾಸಕ ಡಿ. ರವಿಶಂಕರ್ 

Published

on

ಸಾಲಿಗ್ರಾಮ :  ಬಡವರ ಬದುಕಿಗೆ ನೆರವಾಗಿರುವುದು  ಐದು ಗ್ಯಾರಂಟಿ ಯೋಜನೆಗಳು, ಕೇಂದ್ರದ ಗ್ಯಾರಂಟಿ ಗಳು ಅನುಷ್ಠಾನ ಗೊಳ್ಳಲು ಕಾಂಗ್ರೆಸ್ ಅಭ್ಯರ್ಥಿ ಗೆ ಮತ ನೀಡಿ ಎಂದು ಮನವಿ ಮಾಡಿದರು.

ತಾಲೂಕಿನ ಅರಕೆರೆ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಶಾಸಕ ಡಿ. ರವಿಶಂಕರ್ ರವರ ಸಾರಥ್ಯ ದೊಂದಿಗೆ ತೆರೆದ ವಾಹನದಲ್ಲಿ ಗ್ರಾಮಗಳಿಗೆ  ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು ಗೃಹಲಕ್ಷ್ಮಿ ಹಣದಿಂದ ವಿದ್ಯಾರ್ಥಿನಿಯರಿಗೆ ಅನುಕೂಲವಾಗಿದೆ. ಕೆಲವು ಮಹಿಳೆಯರು ಅಡವಿಟ್ಟ ಚಿನ್ನಾಭರಣ ಬಿಡಿಸಿ ಕೊಂಡಿರುವುದಾಗಿ ಹೇಳಿದ್ದಾರೆ.  ಗೃಹಪಯೋಗಿ ವಸ್ತುಗಳನ್ನು ಖರೀದಿ ಮಾಡಿರುವುದಾಗಿ ತಿಳಿಸಿದ್ದಾರೆ.  ಹೀಗೆ  ಪಂಚ ಗ್ಯಾರಂಟಿ  ಯೋಜನೆಗಳಿಂದ ಸರ್ವ ಜನಾಂಗವೂ ಸಂತೃಪ್ತ ರಾಗಿದ್ದಾರೆ ಎಂದರು.

ಇದೀಗ ಲೋಕಸಭೆ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷ 25 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಇದರಲ್ಲಿ ಮಹಿಳೆಯರಿಗೂ ನೀಡುವ ಯೋಜನೆ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ   ಅಭ್ಯರ್ಥಿ  ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ರವರಿಗೆ ಮತ ನೀಡಿ ಅಧಿಕ ಮತಗಳ ಅಂತರದಲ್ಲಿ  ಗೆಲ್ಲಿಸಿ ಕೊಡುವಂತೆ ಮನವಿ ಮಾಡಿದರು.

ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ, ನಾನೊಬ್ಬ ರೈತನ ಮಗ, ನಿಮ್ಮ ಜಿಲ್ಲೆಯವನು, ನಿಮ್ಮಗಳ ಆಶೀರ್ವಾದದಿಂದ ನನ್ನನ್ನು ಸಂಸತ್ ಗೆ ಚುನಾಯಿಸಬೇಕು ಎಂದು ಮನವಿ ಮಾಡಿದರು.

ಮುಂಜನಹಳ್ಳಿ, ಭೇರ್ಯ, ಮೇಲೂರು, ತಂದ್ರೆ, ಕರ್ಪೂರವಳ್ಳಿ, ಸೀಗಾವಳು, ಹರದನಹಳ್ಳಿ ಹೊನ್ನೇನಹಳ್ಳಿ, ಲಕ್ಷೀಪುರ, ಗ್ರಾಮ ಪಂಚಾಯತಿ  ಕೇಂದ್ರಗಳ ಪ್ರಮುಖ  ರಸ್ತೆಗಳ ಮೂಲಕ ತೆರೆದ ವಾಹನದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಕೆ ಪಿ ಸಿ ಸಿ ಸದಸ್ಯ ದೊಡ್ಡ ಸ್ವಾಮಿಗೌಡ, ಮಾಜಿ ಎಂ ಎಲ್ ಸಿ ಮರಿತಿಬ್ಬೇಗೌಡ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಸ್. ಎಸ್. ಸಂದೇಶ್, ರಾಜ್ಯ ಕಾಂಗ್ರೆಸ್  ಪ್ರಧಾನ  ಕಾರ್ಯದರ್ಶಿ ರಘು ಮಂಚನಹಳ್ಳಿ,  ಕಾಂಗ್ರೆಸ್ ಮುಖಂಡರುಗಳಾದ  ಹೆಬ್ಬಾಳು ನಾಗೇಂದ್ರ,  ಸಿ. ಪಿ. ರಮೇಶ್, ಹರದನಹಳ್ಳಿ ಮಂಜು, ಗಂಧನಹಳ್ಳಿ ವೆಂಕಟೇಶ್, ಜಿ ಕೆ ತೋಟಪ್ಪ ನಾಯಕ,  ಹಂಪಾಪುರ ಎಚ್ ವಿ ಪ್ರಶಾಂತ್, ಮಾರಗೋಡನಹಳ್ಳಿ ಫೋಟೋ ಮಹದೇವ್,   ಅಂಕನಹಳ್ಳಿ ಎ. ಟಿ. ಗೋವಿಂದೇಗೌಡ. ಲಕ್ಷ್ಮೀಪುರ ಸಣ್ಣಪ್ಪ,  ಲಕ್ಕಿಕುಪ್ಪೆ ಮಂಜೇಗೌಡ, ವೈ. ಡಿ. ಜಯಂತ್, ಮಹಿಳಾ ಪದಾಧಿಕಾರಿಗಳಾದ ಲತಾ, ಮಿರ್ಲೆ ರಾಣಿ,  ಸುನೀತಾ, ರಶ್ಮಿ, ಸರಿತಾ,  ಜಿ. ಪಂ. ಮಾಜಿ ಸದಸ್ಯರುಗಳಾದ, ಸಿದ್ದಪ್ಪ, ಅರ್ಜುನಲ್ಲಿ ರಾಜಪ್ಪ,ಕಳ್ಳಿಮುದ್ದನಹಳ್ಳಿ ಚಂದ್ರು, ಅರುಣರಾಜ್,ಪರಿಶೀತ್, ವಸಂತ್, ಕೊತ್ವಾಲ್ ಮಂಜು, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು ಇನ್ನಿತರರು ಇದ್ದಾ

Continue Reading
Click to comment

Leave a Reply

Your email address will not be published. Required fields are marked *

Mysore

ವಾಜಮಂಗಲ ಗ್ರಾಮದಲ್ಲಿ ಅಂಬೇಡ್ಕರ್ ಬ್ಯಾನರ್ ಹರಿದ ಕಿಡಿಗೇಡಿಗಳು

Published

on

ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಹರಿದ ಕಿಡಿಗೇಡಿಗಳು

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಅನ್ನು ಕತ್ತರಿಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ನಡೆದಿದೆ.

ವಾಜಮಂಗಲದಲ್ಲಿ ಗ್ರಾಮದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ವೇಳೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಕಿಡಿಗೇಡಿಗಳು ಶುಕ್ರವಾರ ರಾತ್ರಿ ವೇಳೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹರಿದು ಅವಮಾನ ಮಾಡಿದ್ದಾರೆ.

ಅಂಬೇಡ್ಕರ್ ಅವರ ನಾಮ ಫಲಕದ ಮೇಲೆ ಚಪಲ್ಲಿ ನೇತು ಹಾಕಿ ಅಪಮಾನ ಮಾಡಿದ್ದಾರೆ.

ಗ್ರಾಮಸ್ಥರು ಸ್ಥಳದಲ್ಲೇ ಕುಳಿತು ಪ್ರತಿಭಟನೆ ಮಾಡಿದರು.
ಘಟನೆಯ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮಾತನಾಡಿ, ಈ ಘಟನೆಗೆ ಕಾರಣರಾದವರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು.
ಜಿಲ್ಲೆಯ ಬೇರೆ ಯಾವ ಕಡೆಯೂ ಸಹ ಈ ರೀತಿಯ ಘಟನೆ ಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ದನ್, ತಹಶೀಲ್ದಾರ್ ಮಹೇಶ್ ಹಾಜರಿದ್ದರು.

Continue Reading

Mysore

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

Published

on

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.

ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

Mysore

ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

Published

on

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ  ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

 

ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.

 

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು  ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ.  ಸಣ್ಣ ಸಮುದಾಯದ ಬಗ್ಗೆ  ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.

ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ‌ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

.

ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.

 

ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ,  ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.

Continue Reading

Trending

error: Content is protected !!