Mandya
ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು
ಶ್ರೀರಂಗಪಟ್ಟಣ : ತಾಲ್ಲೂಕಿನ ಬಲಮುರಿ ಪ್ರವಾಸಿ ತಾಣದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ನಂಜನಗೂಡ ತಾಲ್ಲೂಕಿನ ಸಾಲುಂಡಿ ಗ್ರಾಮದ ಬೀರಪ್ಪ ಎಂಬುವರ ಮಗ ರವಿಕುಮಾರ್ (18) ಸಾವನ್ನಪ್ಪಿರುವ ಯುವಕ.
ಈತ ತನ್ನ ಸ್ನೇಹಿತರ ಜೊತೆ ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದು, ನೀರಿನಲ್ಲಿ ಈಜಾ ಡುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ.
ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊನ್ನೆಯಷ್ಟೇ ಜನಮಿತ್ರ ಪತ್ರಿಕೆ ಮೃತ್ಯುಕೂಪವಾಗುತ್ತಿದೆ ಬಲಮುರಿ ಎಂಬ ಶೀರ್ಷಿಕೆಯಡಿ ವಿಶೇಷ ಸುದ್ದಿ ಪ್ರಕಟಿಸಿ ಎಚ್ಚರಿಸಿತ್ತು.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore23 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Education23 hours ago
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ
-
Cinema24 hours ago
ಬಿಗ್ಬಾಸ್ ಸೀಸನ್ 11: ಮೀಸಲಾತಿ ಮೂಲಕ ಹನುಮಂತು ಫೈನಲ್ಸ್ ತಲುಪಿದ್ದಾರೆ ಎಂದ ನಟಿ ಹಂಸ
-
Mysore8 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu9 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Chamarajanagar24 hours ago
ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು: ಟಿ ಹಿರಲಾಲ್
-
Kodagu9 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Mysore5 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ