Chikmagalur
ಬಾಳೆಹೊನ್ನೂರು: ದುರ್ಗಾದೇವಿ ವಿಗ್ರಹ ನಿರ್ಮಾಣಕ್ಕೆ ಚಾಲನೆ
 
																								
												
												
											

Chikmagalur
ಇವಿಎಂ ಮೇಲಿರುವ ಗಮನ ಅಭಿವೃದ್ಧಿಯ ಮೇಲೆ ಯಾಕಿಲ್ಲ: ಮಾಲತೇಶ್
 
														ಬಾಳೆಹೊನ್ನೂರು: ದೇಶದ ಚುನಾವಣಾ ವ್ಯವಸ್ಥೆ ಮೇಲೆ ನಂಬಿಕೆಯೇ ಇಲ್ಲದ, ಇವಿಎಂ ಮೇಲೆ ಎಳ್ಳ? ವಿಶ್ವಾಸವಿಲ್ಲದ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ಮುಂದಾಗಿರುವುದು ಆ ಪಕ್ಷದ ಇಬ್ಬಗೆಯ ನೀತಿಯನ್ನು ಎತ್ತಿ ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಮಾಲತೇಶ್ಗೌಡ ಸಿಗಸೆ ಹೇಳಿದ್ದಾರೆ.
ಸದಾ ಗೆದ್ದೆತ್ತಿನ ಬಾಲ ಹಿಡಿಯುವ ಮತ್ತು ದೇಶದ ಜನರನ್ನು ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್ ಗೆದ್ದರೆ ಪಕ್ಷದ ಗೆಲುವು ಅಂತ ಎದೆಯುಬ್ಬಿಸಿ ಬೀಗುತ್ತಾ, ಸೋತಾಗ ದೇಶದ ಚುನಾವಣಾ ವ್ಯವಸ್ಥೆ ಮತ್ತು ಇವಿಎಂನತ್ತ ಬೊಟ್ಟು ಮಾಡುವ ನೀಚ ರಾಜಕೀಯ ಮಾಡುತ್ತಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಸರಣಿಯಾಗಿ ಮತಗಳ್ಳತನದ ಆರೋಪ ಮಾಡುವ ಮೂಲಕ ಕಾಂಗ್ರೆಸ್ನವರು ಸಾಂವಿಧಾನಿಕ ಮತ್ತು ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನೇ ಅನುಮಾನಿಸುವ ಮೂಲಕ ರಾಹುಲ್ಗಾಂಧಿ ಅವರು ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ಇದೀಗ ಕಾಂಗ್ರೆಸ್ ಮುಖಂಡರು ತನ್ನ ಪಕ್ಷದ ವರಿ?ರನ್ನು ಮೆಚ್ಚಿಸುವ ಸಲುವಾಗಿ ಇವಿಎಂ ಸಾಕು, ಬ್ಯಾಲೆಟ್ ಪೇಪರ್ ಬೇಕು ಎನ್ನುವ ಮೂಲಕ ಹೊಸ ನಾಟಕ ಶುರು ಮಾಡಿಕೊಂಡಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹಿಂದೊಮ್ಮೆ ಭಾಷಣ ಮಾಡುವಾಗ ಈ ಹಿಂದೆ ಕಾಂಗ್ರೆಸ್ ಪಕ್ಷ ಹೇಗೆ ಚುನಾವಣೆಗಳನ್ನು ಕಳ್ಳತನದಿಂದ ಗೆಲ್ಲುತ್ತಿತ್ತು ಎಂಬುದನ್ನು ಹೇಳಿದ್ದರು. ಬ್ಯಾಲೆಟ್ ಪೇಪರ್ ಇದ್ದ ದಿನಗಳಲ್ಲಿ ನಮಗೆ ಬೇಕಾದವರಿಗೆ ವೋಟ್ ಗುದ್ದಿ ಚುನಾವಣೆಯನ್ನು ನಡೆಸುತ್ತಿದ್ದೆವು. ಇವಿಎಂ ಬಂದ ಮೇಲೆ ಆ ರೀತಿಯ ಚುನಾವಣೆಗಳನ್ನು ನಡೆಸಲು ಆಗುತ್ತಿಲ್ಲ ಎಂದು ಬಹಿರಂಗವಾಗಿಯೇ ಸತ್ಯವನ್ನು ಒಪ್ಪಿಕೊಂಡಿದ್ದರು.

ಈ ರೀತಿಯ ಪ್ರಸಂಗಗಳು ಕಾಂಗ್ರೆಸ್ ಸರ್ಕಾರದ ಆಲೋಚನೆ ಮತ್ತು ಮನಸ್ಥಿತಿ ಎಂಥದ್ದು ಎನ್ನುವುದಕ್ಕೆ ಉದಾಹರಣೆಯಾಗಿದೆ. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನ ಉಳಿಸಿ ಎಂದು ದೇಶದ ಜನರ ಮುಂದೆ ನಾಟಕ ಮಾಡುವ ಕಾಂಗ್ರೆಸ್ ಪಕ್ಷ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳುಗೆಡವಲು ಯಾವ ಕಾನೂನುಗಳು ಬೇಕೋ ಆ ಎಲ್ಲಾ ಕಾನೂನುಗಳನ್ನು ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಂದೊಂದಾಗೇ ಜಾರಿಗೆ ತರುತ್ತಿದೆ. ಜನರ ಮುಂದೆ ಬಣ್ಣ ಹಚ್ಚದೆಯೇ ನಾಟಕವಾಡುವ ಕಾಂಗ್ರೆಸ್ ಪಕ್ಷ ಒಂದು ಸರ್ಕಾರವಾಗಿ ಬಂದಾಗ ಸಂವಿಧಾನದ ಆಶಯಗಳಿಗೆ ಮಣ್ಣು ಮುಕ್ಕಿಸುವ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೆಲಸ ಮಾಡುತ್ತಿದೆ.
ದೇಶದ ರಾಜಕಾರಣದಲ್ಲಿ ತನ್ನ ಇರುವಿಕೆಯನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ಹಿಂಬಾಗಿಲ ಮೂಲಕ ಅಧಿಕಾರಕ್ಕೇರುವ ಕನಸನ್ನು ಕಾಣುತ್ತಿದೆ. ಸೋಲುಗಳು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಆ ಪಕ್ಷದ ದೇಶ ವಿರೋಧಿ ಮನಸ್ಥಿತಿ, ಹಿಂದುತ್ವ, ಹಿಂದೂ ಧರ್ಮ ಮತ್ತು ಸಹಬಾಳ್ವೆಯ ಬಗ್ಗೆ ಅವರಿಗಿರುವ ವಿರೋಧದ ಮನಸ್ಥಿತಿ, ರಾಷ್ಟ್ರೀಯತೆ ಮೇಲೆ ಕಾಂಗ್ರೆಸ್ ಪಕ್ಷಕ್ಕಿರುವ ಅಸಡ್ಡೆತನ ಈ ರೀತಿಯ ಕಾನೂನುಗಳನ್ನು ಜಾರಿಗೆ ತರುವುದರ ಹಿಂದೆ ಎದ್ದು ಕಾಣುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ಈ ಮನಸ್ಥಿತಿ ಹೀಗೆಯೇ ಮುಂದುವರೆದರೆ ಮುಂದೊಂದು ದಿನ ಕಾಂಗ್ರೆಸ್ ಎನ್ನುವ ಹೆಸರು ಇತಿಹಾಸದ ಪುಟಗಳನ್ನು ಸೇರುವ ದಿನ ದೂರವಿಲ್ಲ.

ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಕಾಯ್ದೆ, ನಿಯಮಗಳಿಗೆ ತಿದ್ದುಪಡಿ ಮಾಡಿದರೆ ಅದರ ಪ್ರಕಾರ ಮಾಡಬೇಕಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವಿಧಾನಸಭಾ ಚುನಾವಣಾ ಮತದಾರರ ಪಟ್ಟಿ ಪರಿಗಣಿಸಬೇಕು ಎಂದು ಕೇಂದ್ರದ ಅಥವಾ ರಾಜ್ಯದ ಯಾವುದೇ ನಿಯಮದಲ್ಲೂ ಹೇಳಿಲ್ಲ. ಗ್ಯಾರಂಟಿ ಯೋಜನೆಯ ಜಪದಲ್ಲೇ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಅಭಿವೃದ್ಧಿ, ರಾಜ್ಯದ ಜನರ ಅಭ್ಯುದಯದ ಬಗ್ಗೆ ಮಾತ್ರ ಚಕಾರವೆತ್ತುತ್ತಿಲ್ಲ.
ಸಾಂವಿಧಾನಿಕ ಮತ್ತು ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನು ಅನುಮಾನಿಸುವ ಮತ್ತು ಅವಮಾನಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ ತರವಲ್ಲ. ಇನ್ನಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುರುಳಿಲ್ಲದ ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದೇಶದ ರಾಜಕಾರಣದಲ್ಲಿ ತನ್ನ ಇರುವಿಕೆಯನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ಹಿಂಬಾಗಿಲ ಮೂಲಕ ಅಧಿಕಾರಕ್ಕೇರುವ ಕನಸನ್ನು ಕಾಣುತ್ತಿದೆ. ಸೋಲುಗಳು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಆ ಪಕ್ಷದ ದೇಶ ವಿರೋಧಿ ಮನಸ್ಥಿತಿ, ಹಿಂದುತ್ವ, ಹಿಂದೂ ಧರ್ಮ ಮತ್ತು ಸಹಬಾಳ್ವೆಯ ಬಗ್ಗೆ ಅವರಿಗಿರುವ ವಿರೋಧದ ಮನಸ್ಥಿತಿ, ರಾಷ್ಟ್ರೀಯತೆ ಮೇಲೆ ಕಾಂಗ್ರೆಸ್ ಪಕ್ಷಕ್ಕಿರುವ ಅಸಡ್ಡೆತನ ಈ ರೀತಿಯ ಕಾನೂನುಗಳನ್ನು ಜಾರಿಗೆ ತರುವುದರ ಹಿಂದೆ ಎದ್ದು ಕಾಣುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ಈ ಮನಸ್ಥಿತಿ ಹೀಗೆಯೇ ಮುಂದುವರೆದರೆ ಮುಂದೊಂದು ದಿನ ಕಾಂಗ್ರೆಸ್ ಎನ್ನುವ ಹೆಸರು ಇತಿಹಾಸದ ಪುಟಗಳನ್ನು ಸೇರುವ ದಿನ ದೂರವಿಲ್ಲ.

ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಕಾಯ್ದೆ, ನಿಯಮಗಳಿಗೆ ತಿದ್ದುಪಡಿ ಮಾಡಿದರೆ ಅದರ ಪ್ರಕಾರ ಮಾಡಬೇಕಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವಿಧಾನಸಭಾ ಚುನಾವಣಾ ಮತದಾರರ ಪಟ್ಟಿ ಪರಿಗಣಿಸಬೇಕು ಎಂದು ಕೇಂದ್ರದ ಅಥವಾ ರಾಜ್ಯದ ಯಾವುದೇ ನಿಯಮದಲ್ಲೂ ಹೇಳಿಲ್ಲ. ಗ್ಯಾರಂಟಿ ಯೋಜನೆಯ ಜಪದಲ್ಲೇ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಅಭಿವೃದ್ಧಿ, ರಾಜ್ಯದ ಜನರ ಅಭ್ಯುದಯದ ಬಗ್ಗೆ ಮಾತ್ರ ಚಕಾರವೆತ್ತುತ್ತಿಲ್ಲ.
ಸಾಂವಿಧಾನಿಕ ಮತ್ತು ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನು ಅನುಮಾನಿಸುವ ಮತ್ತು ಅವಮಾನಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ ತರವಲ್ಲ. ಇನ್ನಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುರುಳಿಲ್ಲದ ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Chikmagalur
ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನದ ಹಣತೆ ಹಚ್ಚಿದವರು: ಸಿ.ಟಿ.ರವಿ
 
														ಚಿಕ್ಕಮಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತೀಯತೆಯ ವಿರುದ್ಧ ಖಡ್ಗವನ್ನು ಹಿಡಿಯಲಿಲ್ಲ. ಬದಲಾಗಿ ಜನರ ಹೃದಯದಲ್ಲಿ ಜ್ಞಾನದ ಹಣತೆಯನ್ನು ಹಚ್ಚಿದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ನಿನ್ನೆ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ವಸ್ತುಗಳು ಪಂಚಭೂತಗಳಿಂದಾಗಿವೆ. ಮನುಷ್ಯ ದೇವರ ಸೃಷ್ಟಿಯಾಗಿದ್ದು, ದೇವರು ಜಾತಿಯನ್ನು ಸೃಷ್ಟಿಸಲಿಲ್ಲ. ಜನ್ಮದಿಂದ ಬ್ರಾಹ್ಮಣನಾಗಿದ್ದರೂ ಗುಣಗ್ರಾಹಿಯಾಗಿರದಿದ್ದರೆ ಆತ ಶೂದ್ರನೇ ಆಗುತ್ತಾನೆ. ಶೂದ್ರನಾಗಿದ್ದು, ವಿದ್ವತ್ತನ್ನು ಗಳಿಸಿದ್ದರೆ ಆತ ಶ್ರೇಷ್ಠ ವಿದ್ವಾಂಸನಾಗುತ್ತಾನೆ ಎಂದು ಹೇಳಿದರು.
ನಾರಾಯಣ ಗುರುಗಳು ಕೆಳಜಾತಿಯಲ್ಲಿ ಹುಟ್ಟಿದ್ದರೂ ಸಂಸ್ಕೃತ, ಮಲಯಾಳಂ, ತಮಿಳು ಮೂಲಕ ಅಪಾರ ಜ್ಞಾನವನ್ನು ಸಂಪಾದಿಸಿ ಬ್ರಹ್ಮಶ್ರೀಗಳಾದರು. ಯಾವುದೇ ಮಹಾನುಭಾವರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಹಾಗೆ ಸೀಮಿತಗೊಳಿಸಿದರೆ ಆ ಜಾತಿಗೆ ಅಪಚಾರ ಮಾಡಿದಂತಾಗುತ್ತದೆ. ದೇವರನಾಡು ಎಂದೇ ಹೆಸರಾದ ಕೇರಳದಲ್ಲಿ ಮತಾಂತರ ಮಾಯಾಜಾಲವಾಗಿ ಹಬ್ಬಿಕೊಂಡಿದ್ದ ಸಂದರ್ಭದಲ್ಲಿ ಕೆಳ ವರ್ಗದವರು ಮತಾಂತರಗೊಳ್ಳದಂತೆ ಪಾರು ಮಾಡಿದವರೇ ನಾರಾಯಣ ಗುರುಗಳು ಎಂದು ತಿಳಿಸಿದರು.

ಶಾಸಕ ಹೆಚ್.ಡಿ.ತಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡ ಸಂಸ್ಕಾರವಂತ ದೇಶ ನಮ್ಮದು. ಶೋಷಿತ ಸಮಾಜದ ಗುರುಗಳು ಬುದ್ಧ, ಬಸವ, ಅಂಬೇಡ್ಕರರಂತೆ ವಿಶ್ವ ಕ್ರಾಂತಿ ಮಾಡಿದರು. ವಿವಿಧತೆಯಲ್ಲಿ ಏಕತೆ ಇರುವ, ಸಂಸ್ಕಾರವಿರುವ ದೇಶವೆಂದರೆ ಅದು ಭಾರತ. ಒಟ್ಟು ಕುಟುಂಬದಲ್ಲಿ ಒಗ್ಗಟ್ಟು, ಸಾಮರಸ್ಯವಿರುತ್ತದೆ ಎಂದು ಕೂಡು ಕುಟುಂಬದ ಬಗ್ಗೆ ತಿಳಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಸಾಹಿತಿ ಬಿ.ತಿಪ್ಪೇರುದ್ರಪ್ಪ ಉಪನ್ಯಾಸ ನೀಡಿ, ಮಹನೀಯರ ಜೀವನ, ಸಾಧನೆ ಮೆಲುಕು ಹಾಕುವುದರ ಮೂಲಕ ನಮ್ಮ ಬದುಕನ್ನು ಉನ್ನತೀಕರಿಸಿಕೊಳ್ಳುವುದೇ ಆಗಿದೆ. ಭರತ ಭೂಮಿಯಲ್ಲಿ ಸಮಾಜದ ಅನಿಷ್ಠ, ಅಂಟು ಜಾಢ್ಯಗಳಾದ ಜಾತೀಯತೆ, ಅಸ್ಪೃಶ್ಯತೆ, ಅಸಮಾನತೆ, ಸಾಮಾಜಿಕ ಅನ್ಯಾಯ ತುರಿಯಾವಸ್ಥೆಯಲ್ಲಿದ್ದಾಗ ಬಸವ, ಬುದ್ಧ, ಅಂಬೇಡ್ಕರ್ ಅವುಗಳನ್ನು ನಿವಾರಿಸಲು ಶ್ರಮಿಸಿದರು. ಅದೇ ಸಾಲಿನಲ್ಲಿ ನಿಲ್ಲುವವರು ನಾರಾಯಣ ಗುರುಗಳು ಎಂದು ಹೇಳಿದರು.

ಬ್ರಹ್ಮಶ್ರೀ ಎಂದರೆ ಬ್ರಹ್ಮಜ್ಞಾನವನ್ನು ಪಡೆದವರು ಎಂದು ಅರ್ಥ. ಯಾವಾಗ ಜಗತ್ತಿನಲ್ಲಿ ಅಧರ್ಮ, ಅಶಾಂತಿ ತಾಂಡವವಾಡುತ್ತೊ ಆಗ ಜಗತ್ತನ್ನು ಉದ್ಧರಿಸಲು ಮಹಾತ್ಮರು ಜನಿಸುತ್ತಾರೆ. ನಾರಾಯಣ ಗುರುಗಳು ಜನರ ಮನಸ್ಸಿನಲ್ಲಿ ಉತ್ಪತ್ತಿಯಾದ ಜಾತೀಯತೆಯ ಕಸವನ್ನು ಗುಡಿಸುವ ಕೆಲಸ ಮಾಡಿದರು. ವಿಧವೆಯ ಕಣ್ಣೀರನ್ನು ಒರೆಸದ, ಹಸಿದವರಿಗೆ ಅನ್ನವನ್ನು ನೀಡದ ಧರ್ಮ ಧರ್ಮವಲ್ಲ, ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು ಎಂದು ಪ್ರತಿಪಾದಿಸಿ ಶೋಷಿತ ವರ್ಗದವರಿಗೂ ದೇವರಿದ್ದಾನೆ ಎಂದು ತೋರಿಸಿಕೊಡುವ ಮೂಲಕ ಅನೇಕ ದೇವಾಲಯಗಳನ್ನು ನಿರ್ಮಿಸಿದರು.
ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ಅನುಸರಿಸಿ ಅದ್ವೈತ ಗುರು ಎಂದೆನಿಸಿದ್ದಾರೆ. ಯೋಗದಲ್ಲಿ ಪತಂಜಲಿ, ಜ್ಞಾನದಲ್ಲಿ ಶಂಕರ, ಅಹಿಂಸೆಯಲ್ಲಿ ಬುದ್ಧ, ಮಾನವೀಯತೆಯಲ್ಲೂ ಏಸುವಿನಂತಿದ್ದವರು ನಾರಾಯಣ ಗುರುಗಳು ಎಂದು ಹೇಳಿದರು.

ಶ್ರೀ ನಾರಾಯಣ ಗುರು ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ್, ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಗುಣಶೇಖರ್, ಜಿಲ್ಲಾ ಬಿಲ್ಲವ ಸಂಘದ ಮಹಿಳಾ ಅಧ್ಯಕ್ಷರಾದ ಪ್ರಮಿಳಾ ವಿಜಯ, ಜಿಲ್ಲಾ ನಾರಾಯಣ ಗುರು ಸಮಿತಿ ಮಹಿಳಾ ಅಧ್ಯಕ್ಷೆ ಶಶಿಕಲಾ ಅಶೋಕ್, ಕೆ.ಸಿ.ಶಾಂತಕುಮಾರ್, ವಾಸು ಪೂಜಾರಿ, ರಾಜಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Chikmagalur
ಮದ್ದೂರು ಕಲ್ಲು ತೂರಾಟ ಪ್ರಕರಣ| ಮತಾಂಧರು, ಮುಸ್ಲಿಂ ಮತಾಂಧರು ಕಲ್ಲು ತೂರಾಟ ಮಾಡಿದ್ದಾರೆ: ಸಿ.ಟಿ.ರವಿ
 
														ಚಿಕ್ಕಮಗಳೂರು : ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮತಾಂಧರು, ಮುಸ್ಲಿಂ ಮತಾಂಧರು ಕಲ್ಲು ತೂರಾಟ ಮಾಡಿದ್ದಾರೆ. ಕಳೆದ ವರ್ಷ ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿ, 30ಕ್ಕೂ ಹೆಚ್ಚು ಅಂಗಡಿಗಳನ್ನು ಟಾರ್ಗೆಟ್ ಮಾಡಿದರು. ಸರ್ಕಾರ ಮುಂಜಾಗ್ರತೆ ವಹಿಸಬೇಕಿತ್ತು, ಜಿಲ್ಲಾಡಳಿತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕಿತ್ತು. ಯಾವುದನ್ನು ಮಾಡದೇ ಕಿಡಿಗೇಡಿಗಳ ಮೇಲೆ ಕ್ರಮಕೈಗೊಳ್ಳದೇ ಶಾಂತಿಯಿಂದ ಪ್ರತಿಭಟನೆ ಮಾಡಿದವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದರು.

ಮುಖ್ಯಮಂತ್ರಿಗಳೇ ಈದ್ ಮಿಲಾದ್ ಭಾಷಣದಲ್ಲಿ ಒಂದು ಮಾತನ್ನು ಹೇಳಿದ್ದರು, ಇಸ್ಲಾಂ ಅಂದರೆ ಶಾಂತಿ, ಮಹಮ್ಮದ್ ಪೈಗಂಬರ್ ಅಂದ್ರೆ ಶಾಂತಿ ಧೂತ ಅಂದಿದ್ದರು. ನಿಮ್ಮ ದೃಷ್ಟಿಯಲ್ಲಿ ದಲಿತ ಶಾಸಕನ ಮನೆ ಸುಟ್ಟಿದ್ದು, ಠಾಣೆ ಸುಟ್ಟಿದ್ದು,ಕೆ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟಿದ್ದು ಶಾಂತಿ ದೂತರು ಮಾಡಬೇಕಾದ ಕರ್ತವ್ಯವೆಂದು ಭಾವಿಸಿದ್ದರಾ? ಅಲ್ಲದೇ ಸಾಗರದಲ್ಲಿ ಗಣೇಶ ಮೆರವಣಿಗೆ ಮೇಲೆ ಚಿಕ್ಕ ಮಕ್ಕಳು ಉಗುಳಿದರು, ಮಕ್ಕಳು ದೇವರು ಎಂದು ಭಾವಿಸುತ್ತೇವೆ. ಮಕ್ಕಳ ಹೃದಯದಲ್ಲಿ ದ್ವೇಷದ ವಿಷ ಬೀಜ ಬಿತ್ತಿದ್ದವರು ಯಾರು..? ಅವರ ತಂದೆ ತಾಯಿಗಳ ಅಥವಾ ಅವರ ಮದ್ರಸಾದಲ್ಲಿ ನಡಿತಾ ಇದೇಯಾ.. ಮತೀಯಾ ಗ್ರಂಥಗಳಲ್ಲಿ ಹೇಳಿ ಕಂಠಪಾಟ ಮಾಡಿಸ್ತಾರಾ..? ಇದು ಶಾಂತಿ ಧೂತರು ಮಾಡುವ ಕೆಲಸವೇ..? ಶಾಂತಿ ಧೂತರೇ ಭಾರತ ವಿಭಜನೆಗೆ ಮತ್ತು ಲಕ್ಷಾಂತರ ಮರಣಕ್ಕೆ ಕಾರಣವಾದರು ಎಂದು ವಾಗ್ದಾಳಿ ನಡೆಸಿದರು.
ಜಾಗತಿಕ ಭಯೋತ್ಪಾದನೆ ಶೇಕಡ. 90ರಷ್ಟು ಕೊಡುಗೆ ನೀಡುತ್ತ ಇರುವಂತವರು ಇದನ್ನೇ ನೀವು ಶಾಂತಿ ಎನ್ನುವುದಾದರೇ ಸ್ಮಶಾನದ ಶಾಂತಿ ಆಗುತ್ತದೆ. ಇದು ನೆಮ್ಮದಿ ಕೊಡುವಂತಹ ಬದುಕನ್ನು ಅರಳಿಸುವಂತಹ ಶಾಂತಿ ಆಗಲ್ಲಾ? ಇದೇ ಶಾಂತಿ ಧೂತರು ನಗು ನಗುತ್ತಾ ಇದ್ದ ಬುದ್ದನ ವಿಗ್ರಹವನ್ನ ಪಿರಂಗಿ ಇಟ್ಟು ಉಡಾಯಿಸಿದರು. ನಿಮಗೆ ಸತ್ಯ ಹೇಳೋಕೆ ಧೈರ್ಯ ಇಲ್ವಾ..? ಓಟಿನ ಆಸೆಗೆ ಎಲ್ಲಾವನ್ನು ಒಪ್ಕೊಂಡು ಕಲ್ಲು ತೂರಾಟವನ್ನು ಮಾಡಿದವರನ್ನೆ ಪ್ರಶಂಸಿಸಿ. ಠಾಣೆಗೆ ಬೆಂಕಿ ಇಟ್ಟವರಿಗೆ ಶಾಂತಿಯ ಪಟ್ಟ ಕಟ್ಟಿದ್ರೆ, ನಿಮಗೂ ಸತ್ಯಕ್ಕೂ ಸಂಬಂಧವಿಲ್ಲದಂತಾಗುತ್ತದೆ ಎಂದು ಕಿಡಿಕಾರಿದರು.

ಸರ್ಕಾರದ ನಡೆ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ನೀತಿಯದ್ದು, ಹಿಂದೂಗಳಿಗೆ ಸುಣ್ಣ ಮುಸಲ್ಮಾನರಿಗೆ ಬೆಣ್ಣೆ. ಮೈಕ್ ಹಾಕಿದರೆ ಕಂಡಿಷನ್, ಡ್ಯಾನ್ಸ್ ಮಾಡಿದ್ರೆ ಕೇಸ್ ಇದು ಕೆಟ್ಟ ಪರಂಪರಗೆ ಕಾರಣ ಆಗಿದೆ. ಕಲ್ಲು ತೂರಾಟ ಮಾಡಿದವರ ಹಿಂದೆ ಯಾರಿದ್ದಾರೆ ..? ಎಲ್ಲಿ ಟ್ರೈನಿಂಗ್ ಪಡೆದಿದ್ದಾರೆ ಅನ್ನೋದು ಗೊತ್ತಾಬೇಕಲ್ವಾ? ಧರ್ಮಸ್ಥಳಕ್ಕೆ ಪ್ರಕರಣದಲ್ಲಿ ಎಸ್ ಐಟಿ ಮಾಡಿದ್ರಲ್ವಾ,ಸಾಗರದಲ್ಲಿ ಮಕ್ಕಳ ಹೃದಯದಲ್ಲಿ ವಿಷ ಬೀಜ ಬಿತ್ತಿದ್ದವರ ಬಗ್ಗೆ ತನಿಖೆ ಆಗಲಿ. ಇದರ ಬಗ್ಗೆ ಎಸ್.ಐ.ಟಿ. ಮಾಡಿ ಸತ್ಯವನ್ನ ಅನಾವರಣಗೊಳಿಸಿ. ಶಾಂತಿಧೂತರು ಯಾರು,ಮತಾಂಧರು ಯಾರು ಜಗತ್ತಿನಲ್ಲಿ ಹಿಂಸೆ ಹರಡುತ್ತಿರುವವರು ಯಾರೆಂದು ಗೊತ್ತಾಗುತ್ತದೆ ಎಂದು ತಿಳಿಸಿದರು.
- 
																	   Mysore6 hours ago Mysore6 hours agoಬಾನು ಮುಷ್ತಾಕ್ ಕ್ಷಮೆ ಕೇಳಿದರೆ ಪಿಐಎಲ್ ವಾಪಸ್: ಪ್ರತಾಪ್ ಸಿಂಹ 
- 
																	   Kodagu9 hours ago Kodagu9 hours agoಸೋಮವಾರಪೇಟೆ: ತಾಲೂಕು ಆಸ್ಪತ್ರೆಯ ನರ್ಸ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ 
- 
																	   Mysore2 hours ago Mysore2 hours agoಅರ್ಧವೃತ್ತಾಕಾರದ ಬೆಂಜ್ ಜೋಡಣೆ ಸಮಾನ ಕಲಿಕೆಗೆ ಪೂರಕ: ಸಂಶೋಧಕ ಸಂಜಯ್ ಸಿಂಗಮಾರನಹಳ್ಳಿ 
- 
																	   Mandya1 hour ago Mandya1 hour agoಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ 
- 
																	   Hassan10 hours ago Hassan10 hours agoಮಾಡಾಳು ಗ್ರಾಮದಲ್ಲಿ ಸ್ವರ್ಣಗೌರಮ್ಮ ದೇವಿಯ ಅದ್ದೂರಿ ವಿಸರ್ಜನೆ 
- 
																	   Kodagu3 hours ago Kodagu3 hours agoಸೆ.11 ಕ್ಕೆ “ವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ತರಬೇತಿ 
- 
																	   Hassan5 hours ago Hassan5 hours agoಹೊಳೆನರಸೀಪುರದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದ, ಸುಳ್ಳು ದಾಖಲೆ, ಸುಳ್ಳು ಸಾಕ್ಷಿ : ನಟರಾಜು ಆರೋಪ 
- 
																	   Manglore6 hours ago Manglore6 hours agoಮಂಗಳೂರು: ಎಸ್ಐಟಿ ಕಚೇರಿಗೆ ಆಗಮಿಸಿದ ಕೇರಳದ ಯೂಟ್ಯೂಬರ್ ಮನಾಫ್ 

 
											 
											 
											 
											 
											