Connect with us

Chamarajanagar

ಪೊಡುಗಳ ನಿವಾಸಿಗಳು ಮುಂಬರುವ ಲೋಕಸಭಾ ಚುನಾವಣೆಯ ಬಹಿಷ್ಕರಿಸಲು ತೀರ್ಮಾನಿಸಿ ಧರಣಿ ನಡೆಸಿದರು

Published

on

ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಹೊಸ ಪೊಡು, ಯರಕನಗದ್ದೆ ಕಾಲೋನಿ, ಸೀಗೆಬೆಟ್ಟ ಪೊಡು ಮತ್ತು ಬಂಗ್ಲೆ ಪೊಡುಗಳ ನಿವಾಸಿಗಳು ಮುಂಬರುವ ಲೋಕಸಭಾ ಚುನಾವಣೆಯ ಬಹಿಷ್ಕರಿಸಲು ತೀರ್ಮಾನಿಸಿ ಧರಣಿ ನಡೆಸಿದರು.

ಈ ಬಗ್ಗೆ ಸೋಲಿಗ ಮುಖಂಡರು ಮಾತನಾಡಿ ಬೆಟ್ಟದ ಸೋಲಿಗರ ಕಂದಾಯ ಇಲಾಖೆಯಿಂದ 1962-63 ರಲ್ಲಿ ಕಂದಾಯ ಭೂಮಿಯನ್ನು ಆಗಿನ ಸರ್ಕಾರ ಮಂಜೂರು ಮಾಡ ಲಾಗಿದ್ದು ರೂ.30 ಸೋಲಿಗ ಕುಟುಂಬಗಳು ಪಡೆದುಕೊಂಡಿರುತ್ತಾರೆ ಅಲ್ಲಿಂದ ಪ್ರಸ್ತುತ ವರೆಗೂ ಭೂಮಿಯನ್ನು ವ್ಯವಸಾಯಕ್ಕಾಗಿ ಮಾಡಿಕೊಂಡು ಬಂದಿದ್ದಾರೆ ಅದರ ಕಳೆದ 4 ವರ್ಷಗಳಿಂದ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೆ ಮಾಡಿ ಸೋಲಿಗರ ಕುಟುಂಬಗಳ ಜಮೀನು ಅರಣ್ಯಕ್ಕೆ ಸೇರಿದೆ ಎಂದು ಹೇಳಿ ಮೂಲ ದಾಖಲಾತಿಗಳನ್ನು ಸಲ್ಲಿಸುವಂತೆ ಹಲವು ಬಾರಿ ತಹಸಿಲ್ದಾರ್ ಉಪವಿಭಾಗಾಧಿಕಾರಿ ನೋಟಿಸ್ ನೀಡಿದ್ದರು.

ಈ ಬಗ್ಗೆ ಆರ್ ಟಿ ಸಿ ಹಕ್ಕು ಪತ್ರ ಭೂಕಂದಾಯ ರಚನೆ ಕಟ್ಟಿರುವುದನ್ನು ಹಾಗೂ ಸರ್ಕಾರದ ಯೋಜನೆಗಳಿಂದ ಸಾಲ ಸೌಲಭ್ಯ ಪಡೆದುಕೊಂಡಿದ್ದಾರೆ ಬಿಳಿಗಿರಂಗನ ಬೆಟ್ಟ 595 ಕರೆ ಜಮೀನನ್ನು ಬೆಟ್ಟದಲ್ಲಿ ವಾಸವಾಗಿರುವ ಸೋಲಿಗರು ಮತ್ತು ಇತರ ಜನಾಂಗದ 135 ಜನರಿಗೆ ನೀಡುತ್ತಾರೆ ಆದರೆ ಸೋಲಿಗರ ಜಮೀನನ್ನು ಮಾತ್ರ ಅರಣ್ಯ ಇಲಾಖೆಗೆ ಸೇರಿದೆ ಎಂದು ಪ್ರತ್ಯೇಕ ಸರ್ವೇ ನಂಬರ್ ರಚಿಸಿ ಸೋಲಿಗರ ಜಮೀನುಗಳನ್ನು ಅರಣ್ಯಕ್ಕೆ ಸೇರಿಸಲು ತೀರ್ಮಾನಿಸಿದ್ದಾರೆ ಇತರ ವರ್ಗದ ಜಮೀನನ್ನು ಸರಿಯಾಗಿದೆ ಎಂದು ಹೇಳಿ ಬೆಟ್ಟದ ಮೂಲ ನಿವಾಸಿಗಳಾದ ನಮಗೆ ಅನ್ಯಾಯ ಮಾಡಲಾಗುತ್ತಿದೆ ಸೋಲಿಗರ ಜಮೀನನ್ನು ಪಕ್ಕ ಪೋಡಿ ಅಡಿಯಲ್ಲಿ ತರಬೇಕು ಹೊಸ ಮನೆಗಳಿಗೆ ಮಂಜೂರಾತಿ ನೀಡಿ ಮೂಲ ಸೌಲಭ್ಯ ನೀಡುವಂತೆ ಒತ್ತಾಯಿಸಿದ್ದಾರೆ ಸೋಲಿಗ ಸಮುದಾಯದ ಮುಖಂಡರಾದ ಗಿರಿ ಮಾದೇಗೌಡ ಬಸವರಾಜು ಸಿದ್ದೇಗೌಡ ನಂಜೇಗೌಡ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ ಸವಾರಿಗೆ ಗಾಯ

Published

on

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಬೆಟ್ಟದಮಾದಹಳ್ಳಿ ಹಾಗೂ ಭೋಗಯ್ಯನಹುಂಡಿಯ ಮುಖ್ಯ ರಸ್ತೆಯಲ್ಲಿ ಎರಡು ಸ್ಕೋಟರ್ ಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು.

ಗಾಯಾಳುಗಳಾದ ಭೋಗಯ್ಯನಹುಂಡಿ ಗ್ರಾಮದ ಸುನಿ ಹಾಗೂ ಬೆಟ್ಟದಮಾದಹಳ್ಳಿ ಗ್ರಾಮದ ರಂಗಸ್ವಾಮಿ ಎಂಬುವರ ಬೈಕ್ ಗಳ ನಡುವಿನ ಡಿಕ್ಕಿಯಾಗಿ ಇಬ್ಬರಿಗೂ ತಲೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

Continue Reading

Chamarajanagar

ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ

Published

on

ಹನೂರು : ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ..

ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ನಿವಾಸಿ ಪರಶುರಾಮ್( 32) ಮೃತಪಟ್ಟ ದುರ್ದೈವಿ.

ಕಳೆದ 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಕಳೆದ 2 ವರ್ಷಗಳಿಂದ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ಬೆಳಿಗ್ಗೆ ಕುಸಿದು ಬಿದಿದ್ದು ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ, ಮೃತ ವ್ಯಕ್ತಿಯು ರಾಯಚೂರು ಜಿಲ್ಲೆಯವರಾಗಿದ್ದು ಕುಟುಂಸ್ಥರಿಗೆ ರಾಮಾಪುರ ಪೊಲೀಸರು ಮಾಹಿತಿ ನೀಡಿ ಮೃತ ವ್ಯಕ್ತಿಯ ಶವವನ್ನು ಚಾಮರಾಜನಗರದ ಸೀಮ್ಸ್ ಆಸ್ಪತ್ರೆ ಇರಿಸಲಾಗಿದ್ದು, ಕುಟುಂಬಸ್ಥರು ಬಂದಾಗ ಅವರಿಗೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ..

ಸಂತಾಪ : ಮೃತ ಪರುಶುರಾಮ್ ಅವರಿಗೆ ಸಾವಿನ ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ರಾಮಾಪುರ ಠಾಣೆಯ ಸಿಬ್ಬಂದಿ ಮೃತ ವ್ಯಕ್ತಿಗೆ ಸಂತಾಪ ಸೂಚಿಸಿದ್ದಾರೆ…

Continue Reading

Chamarajanagar

ಏ.27 ರಂದು ನಗರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆ

Published

on

ಚಾಮರಾಜನಗರ, ಏಪ್ರಿಲ್ 26: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರ ಕುಂದು-ಕೊರತೆ ಸಭೆಯನ್ನು ಏ.27ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ (ಎಸ್.ಸಿ/ಎಸ್.ಟಿ ಜನಾಂಗದವರು) ಮುಖಂಡರು, ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸದುಪಯೋಗ ಪಡೆಯುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Trending

error: Content is protected !!