Sports
ಶ್ರೀಲಂಕಾ ವಿರುದ್ಧ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ, ಹರ್ಭಜನ್ ಸಿಂಗ್ ದಾಖಲೆ ಮುರಿದ ಮೆಹದಿ ಹಸನ್
ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಐತಿಹಾಸಿಕ ಜಯ ಸಾಧಿಸಿದೆ.
ಕೊಲಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಐತಿಹಾಸಿಕ ಜಯ ಸಾಧಿಸಿದ್ದು, ತಂಡದ ಸ್ಟಾರ್ ಬೌಲರ್ ಮೆಹದಿ ಹಸನ್ ಭಾರತದ ಸ್ಪಿನ್ ಲೆಜೆಂಡ್ ಹರ್ಭಜನ್ ಸಿಂಗ್ ದಾಖಲೆ ಮುರಿದಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಐತಿಹಾಸಿಕ ಜಯ ಸಾಧಿಸಿದೆ. ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.
ಆರ್ ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಸ್ಸಾಂಕಾ (46 ರನ್) ಮತ್ತು ಶನಕ (35 ರನ್) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು.
ಈ ಸುಲಭದ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ಪರ ತಂಝೀಮ್ ಹಸನ್ ತಮೀಮ್ 47 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 1 ಫೋರ್ನೊಂದಿಗೆ ಅಜೇಯ 73 ರನ್ ಬಾರಿಸಿದರು. ಇನ್ನು ನಾಯಕ ಲಿಟ್ಟನ್ ದಾಸ್ 32 ರನ್ ಕಲೆಹಾಕಿದರು. ಇನ್ನು ತೌಹಿದ್ ಹೃದೋಯ್ 27 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡವು 16.3 ಓವರ್ಗಳಲ್ಲಿ 133 ರನ್ ಬಾರಿಸಿ, 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಬಾಂಗ್ಲಾದೇಶಕ್ಕೆ ಐತಿಹಾಸಿಕ ಜಯ
ಇನ್ನು ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಬಾಂಗ್ಲಾದೇಶಕ್ಕೆ ಇದು ಚೊಚ್ಚಲ ಸರಣಿ ಜಯವಾಗಿದೆ. ಬಾಂಗ್ಲಾದೇಶ ತಂಡವು ಈವರೆಗೆ ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದಿಲ್ಲ. ಈ ಬಾರಿ ಲಂಕಾ ಪಡೆ ವಿರುದ್ಧ 2-1 ಅಂತರದಿಂದ ಸರಣಿ ಗೆಲ್ಲುವ ಮೂಲಕ ಬಾಂಗ್ಲಾದೇಶ್ ತಂಡವು ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದೆ.
ಹರ್ಭಜನ್ ದಾಖಲೆ ಮುರಿದ ಮೆಹದಿ ಹಸನ್
ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಮೆಹದಿ ಹಸನ್ 4 ಓವರ್ ನಲ್ಲಿ ಕೇವಲ 2.80 ಸರಾಸರಿಯಲ್ಲಿ ಕೇವಲ 11ರನ್ ನೀಡಿದ್ದರು. ಈ ಪೈಕಿ ಒಂದು ಮೇಡಿನ್ ಕೂಡ ಸೇರಿತ್ತು. ಇದು ಪ್ರೇಮದಾಸ ಕ್ರೀಡಾಂಗಣದಲ್ಲಿ ಬೌಲರ್ ಒಬ್ಬರ ಟಿ20 ಪಂದ್ಯದ ಅತ್ಯುತ್ತಮ ಪ್ರದರ್ಶನವಾಗಿ ದಾಖಲಾಗಿದೆ.
ಈ ಹಿಂದೆ ಈ ದಾಖಲೆ ಭಾರತದ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. 2012ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಭಜನ್ ಸಿಂಗ್ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಇದು ಈ ಕ್ರೀಡಾಂಗಣದಲ್ಲಿ ವಿದೇಶಿ ಬೌಲರ್ ಒಬ್ಬರ ಅತ್ಯುತ್ತಮ ಪ್ರದರ್ಶನವಾಗಿತ್ತು. ಇದೀಗ ಈ ದಾಖಲೆಯನ್ನು ಬಾಂಗ್ಲಾದೇಶದ ಮೆಹದಿ ಹಸನ್ ಹಿಂದಿಕ್ಕಿದ್ದಾರೆ.
ಉಳಿದಂತೆ ಈ ಮೈದಾನದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ದಾಖಲೆ ಶ್ರೀಲಂಕಾದ ವನಿಂದು ಹಸರಂಗ ಹೆಸರಲ್ಲಿದೆ. ಅವರು ಕೇವಲ 9 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.
Sports
IPL 2026; RCB ಖರೀದಿಗೆ ಪೈಪೋಟಿ; ರೇಸ್ನಲ್ಲಿ ಎಸ್ಐಐ, ಹೊಂಬಾಳೆ ಫಿಲ್ಮ್ಸ್ ಜೊತೆ ಇಂಗ್ಲೆಂಡ್ನ ಹಂಡ್ರೆಡ್ ಫ್ರಾಂಚೈಸಿ!
ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.
ಐಪಿಎಲ್ 2026 ಕ್ಕೂ ಮುನ್ನ ಐಪಿಎಲ್ ಫ್ರಾಂಚೈಸಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಖರೀದಿಸಲು ಆಧಾರ್ ಪೂನಾವಾಲಾ ಮತ್ತು ಹೊಂಬಾಳೆ ಫಿಲ್ಮ್ಸ್ ಬಳಿಕ ಮತ್ತೊಂದು ಸಂಸ್ಥೆ ಆಸಕ್ತಿ ತೋರಿಸಿದೆ. ಸದ್ಯ ಡಯಾಜಿಯೊ (Diageo) ಒಡೆತನದ ಈ ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದ್ದು, ಈ ಪ್ರಕ್ರಿಯೆಯು 2026ರ ಮಾರ್ಚ್ 31 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈಗ, ದಿ ಹಂಡ್ರೆಡ್ ಫ್ರಾಂಚೈಸಿಯಾದ ವೆಲ್ಶ್ ಫೈರ್ ಆರ್ಸಿಬಿಯನ್ನು ಸ್ವಾಧೀನಪಡಿಸಿಕೊಳ್ಳಲು ಆಸಕ್ತಿ ತೋರಿಸಿದೆ ಎಂದು ಬೆಳಕಿಗೆ ಬಂದಿದೆ.
ದಿ ಟೆಲಿಗ್ರಾಫ್ ಯುಕೆ ಪ್ರಕಾರ, ಗ್ಲಾಮೋರ್ಗನ್ ಕ್ರಿಕೆಟ್ ಕ್ಲಬ್ ಮತ್ತು ಅಮೆರಿಕನ್ ಟೆಕ್ ಬಿಲಿಯನೇರ್ ಸಂಜಯ್ ಗೋವಿಲ್ ಒಡೆತನದ ಕ್ರಿಕೆಟ್ ತಂಡವಾದ ವೆಲ್ಷ್ ಫೈರ್, ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ನಲ್ಲಿ ಮುಂಬರುವ ತಂಡಗಳ ಮಾರಾಟದ ಮೇಲೆ ತೀವ್ರ ನಿಗಾ ಇಟ್ಟಿದ್ದು, ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಸಹ ಸಹ ಆಸಕ್ತಿ ಹೊಂದಿದೆ. ಐಪಿಎಲ್ ತಂಡವನ್ನು ಖರೀದಿಸಲು ತಮ್ಮ ಬಳಿ ಸಾಕಷ್ಟು ಹಣವನ್ನು ಹೊಂದಿದೆ ಎಂದು ವರದಿಯಾಗಿದೆ. ಈ ಹಿಂದೆ, ಆರ್ಸಿಬಿಯನ್ನು $2 ಬಿಲಿಯನ್ಗೆ ಮಾರಾಟ ಮಾಡಬಹುದು ಎಂದು ವರದಿಗಳು ತಿಳಿಸಿವೆ.
‘ಫೈರ್ ಮತ್ತು ಫ್ರೀಡಂ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದಾಗ್ಯೂ, ನಾವು ಜಾಗತಿಕ ಕ್ರಿಕೆಟ್ ಫ್ರಾಂಚೈಸಿಗಳನ್ನು ಖರೀದಿಸುವ, ನಿರ್ವಹಿಸುವ ಮತ್ತು ಅಭಿವೃದ್ಧಿಪಡಿಸುವ ವ್ಯವಹಾರದಲ್ಲಿದ್ದೇವೆ. ಜಾಗತಿಕ ಕ್ರಿಕೆಟ್ ಸ್ವತ್ತುಗಳಲ್ಲಿ ಏಕೀಕರಣದ ಕಡೆಗೆ ಪ್ರಸ್ತುತ ರಚನಾತ್ಮಕ ಪ್ರವೃತ್ತಿಗಳನ್ನು ನಾವು ಗಮನಿಸುತ್ತೇವೆ ಮತ್ತು ನಮ್ಮ ಷೇರುದಾರರಿಗೆ ಮೌಲ್ಯವನ್ನು ಸೃಷ್ಟಿಸುವಾಗ ಆ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ಭಾಗವಹಿಸಲು ಉದ್ದೇಶಿಸಿದ್ದೇವೆ’ ಎಂದು ಗ್ಲಾಮೋರ್ಗನ್ ಅಧ್ಯಕ್ಷ ಮಾರ್ಕ್ ರೈಡರ್ಚ್-ರಾಬರ್ಟ್ಸ್ ಪ್ರಕಟಣೆಗೆ ತಿಳಿಸಿದ್ದಾರೆ.
ಈ ಹಿಂದೆ, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಧಾರ್ ಪೂನವಾಲಾ ಮತ್ತು ಬ್ರೋಕರೇಜ್ ಪ್ಲಾಟ್ಫಾರ್ಮ್ ಜೆರೋಧಾದ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಗುಂಪಿನ (ಎಂಇಎಂಜಿ) ಅಧ್ಯಕ್ಷ ರಂಜನ್ ಪೈ ಅವರು ಆರ್ಸಿಬಿಯನ್ನು ಖರೀದಿಸಲು ಎದುರು ನೋಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.
Sports
IND v/s SA ODI : 4 ವಿಕೆಟ್ಗಳ ರೋಚಕ ಜಯಗಳಿಸಿದ ಸೌತ್ ಆಫ್ರಿಕಾ
ರಾಯ್ಪುರ: ಕಳಪೆ ಫೀಲ್ಡಿಂಗ್, ಬೌಲಿಂಗ್ಗೆ ಭಾರತ ಬೆಲೆತೆತ್ತಿದೆ. ಏಡನ್ ಮಾರ್ಕ್ರಂ ಅಮೋಘ ಶತಕದ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ರಲ್ಲಿ ಸಮಬಲ ಸಾಧಿಸಿದೆ.
ರಾಯ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 5 ವಿಕೆಟ್ ನಷ್ಟಕ್ಕೆ 358 ರನ್ ಗಳಿಸಿತ್ತು. ಗೆಲುವಿಗೆ 359 ರನ್ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ 49.2 ಓವರ್ಗಳಲ್ಲೇ 6 ವಿಕೆಟ್ ನಷ್ಟಕ್ಕೆ 362 ರನ್ ಸಿಡಿಸಿ ಗೆಲುವು ಸಾಧಿಸಿದೆ.
ಚೇಸಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಪಡೆದು ಆಘಾತ ನೀಡಿತ್ತು. ಆದ್ರೆ 2ನೇ ವಿಕೆಟ್ಗೆ ನಾಯಕ ಟೆಂಬಾ ಬವುಮಾ-ಮಾರ್ಕ್ರಂ 101 ರನ್ಗಳ (96 ಎಸೆತ) ಜೊತೆಯಾಟ, 3ನೇ ವಿಕೆಟಿಗೆ ಮಾರ್ಕ್ರಂ-ಬ್ರೀಟ್ಜ್ಕೆ 70 ರನ್ಗಳ ಜೊತೆಯಾಟ, 4ನೇ ವಿಕೆಟಿಗೆ ಬ್ರೀಟ್ಜ್ಕೆ-ಡೇವಾಲ್ಡ್ ಬ್ರೇವಿಸ್ 92 ರನ್ಗಳ ಬೃಹತ್ ಜೊತೆಯಾಟ ತಂಡಕ್ಕೆ ಚೇತರಿಕೆ ನೀಡಿತು. ಅಲ್ಲದೇ ರನೌಟ್, ಕ್ಯಾಚ್ ಕೈಚೆಲ್ಲಿದ ಜೊತೆಗೆ ಅನಗತ್ಯ ರನ್ ಬಿಟ್ಟುಕೊಟ್ಟ ಪರಿಣಾಮ ಗೆಲುವು ದಕ್ಷಿಣ ಆಫ್ರಿಕಾದ ಪಾಲಾಯಿತು.

ದಕ್ಷಿಣ ಆಫ್ರಿಕಾ ಪರ ಏಡನ್ ಮಾರ್ಕ್ರಂ 110 ರನ್ (98 ಎಸೆತ, 4 ಸಿಕ್ಸ್, 10 ಬೌಂಡರಿ), ಮ್ಯಾಥ್ಯೂ ಬ್ರೀಟ್ಜ್ಕೆ 68 ರನ್ (64 ಎಸೆತ, 5 ಬೌಂಡರಿ), ಡೇವಾಲ್ಡ್ ಬ್ರೇವಿಸ್ 54 ರನ್ (34 ಎಸೆತ, 5 ಸಿಕ್ಸ್), ಟೋನಿ ಡಿ ಜೋರ್ಜಿ 17 ರನ್, ಕ್ವಿಂಟನ್ ಡಿಕಾಕ್ 8 ರನ್, ಮಾರ್ಕೋ ಜಾನ್ಸೆನ್ 2 ರನ್ ಗಳಿಸಿದ್ರೆ ಕಾರ್ಬಿನ್ ಬಾಷ್ 15 ಎಸೆತಗಳಲ್ಲಿ ಸ್ಫೋಟಕ 29 ರನ್, ಕೇಶವ್ ಮಹಾರಾಜ್ 10 ರನ್ ಗಳಿಸಿ ಅಜೇಯರಾಗುಳಿದರು. ಅಲ್ಲದೇ ವೈಡ್, ನೋಬಾಲ್, ಲೆಗ್ಬೈಸ್ನಿಂದ 18 ರನ್ ಹೆಚ್ಚುವರಿಯಾಗಿ ತಂಡಕ್ಕೆ ಸೇರ್ಪಡೆಯಾಯಿತು.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ವಿಕೆಟ್ ನಷ್ಟಕ್ಕೆ 358 ರನ್ ಸಿಡಿಸಿತ್ತು. ಹಿಟ್ ಮ್ಯಾನ್ ರೋಹಿತ್ ವಿಕೆಟ್ ಬೇಗನೇ ಸಿಕ್ಕಿತೆಂದು ನಿಟ್ಟುಸಿರು ಬಿಟ್ಟಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಅನಿರೀಕ್ಷಿತ ಆಘಾತ ನೀಡಿದರು. ಋತುರಾಜ್ ಅವರು ತಮ್ಮ ಏಕದಿನ ಅಂತಾರಾಷ್ಟ್ರೀಯ ವೃತ್ತಿ ಜೀವನದ ಪ್ರಥಮ ಶತಕ ಗಳಿಸಿದ್ರೆ, ವಿರಾಟ್ ಕೊಹ್ಲಿ ಅವರು ಈ ಸರಣಿಯಲ್ಲಿ ಸತತ 2 ಶತಕ ಮತ್ತು ಏಕದಿನ ಕ್ರಿಕಟ್ ನ 53ನೇ ಶತಕ ಗಳಿಸಿದರು. ಕೊನೆಯಲ್ಲಿ ಕೆ.ಎಲ್ ರಾಹುಲ್ ಅವರ ಸ್ಫೋಟಕ ಅರ್ಧಶತಕದ ಪರಿಣಾಮ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 358 ರನ್ ಗಳನ್ನು ಕಲೆ ಹಾಕಿತು.
ಋತುರಾಜ್ -ವಿರಾಟ್ ಕೊಹ್ಲಿ ಶತಕಗಳ ಅಬ್ಬರ
ಇವರಿಬ್ಬರು 3ನೇ ವಿಕೆಟ್ ಗೆ ಅಮೂಲ್ಯ 195 ರನ್ ಗಳ ಜೊತೆಯಾಟವಾಡಿದರು. ಇದು ಭಾರತ ತಂಡದ ಇನ್ನಿಂಗ್ಸ್ ಗೆ ಭದ್ರ ಬುನಾದಿ ಹಾಕಿತು. ಕ್ರೀಸ್ಗೆ ಬಂದೊಡನೆ ಮೊದಲನೇ ಎಸೆತವನ್ನೇ ಬೌಂಡರಿಗಟ್ಟಿದ ಋತುರಾಜ್ ಅವರು ಕೇವಲ 77 ಎಸೆತಗಳಲ್ಲೇ ಶತಕ ಪೂರೈಸಿದರು. ಅದರಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದವು. ಅಂತಿಮವಾಗಿ ಅವರು 83 ಎಸೆತಗಳಿಂದ 105 ರನ್ ಗಳಿಸಿ ಔಟಾದರು. ಋತುರಾಜ್ ಗಾಯಕ್ವಾಡ್ ಔಟಾದ ಬಳಿಕ ವಿರಾಟ್ ಕೊಹ್ಲಿ ಅವರು ತಮ್ಮ ಬ್ಯಾಟಿಂಗ್ ಮುಂದುವರಿಸಿ 39ನೇ ಓವರ್ ನಲ್ಲಿ 90 ಎಸೆತಗಳಿಗೆ ಶತಕ ಪೂರೈಸಿದರು.
Sports
India v/s South Africa T-20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ BCCI
ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯೂ (BCCI) ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ-20 ಸರಣಿಗೆ 15 ಸದಸ್ಯರನ್ನೊಳಗೊಂಡ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ಬಿಸಿಸಿಐ ಪ್ರಕಟಿಸಿರುವ ತಂಡದ ವಿಶೇಷತೆ ಎಂದರೆ ಶುಭ್ಮನ್ ಗಿಲ್ ಹಾಗೂ ಹಾರ್ದಿಕ್ ಪಾಂಡ್ಯ ಗಾಯದ ನಂತರ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಹಾಗೆಯೇ ಶುಭ್ಮನ್ ಗಿಲ್ಗೆ ಉಪನಾಯಕತ್ವವನ್ನು ನೀಡಲಾಗಿದೆ. ಆದರೆ ಸರಣಿಯಲ್ಲಿ ಅವರ ಭಾಗವಹಿಸುವಿಕೆಯು ಅವರ ಫಿಟ್ನೆಸ್ ಅನ್ನು ಅವಲಂಬಿಸಿರುತ್ತದೆ. ಇನ್ನೂ, ಈ ಸರಣಿಯಿಂದ ರಿಂಕು ಸಿಂಗ್ ಅವರನ್ನು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವೆಲ್ಲಾ ಆಟಗಾರರು ಇದ್ದಾರೆ?
ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಸಂಜು ಸ್ಯಾಮ್ಸನ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಹರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಇರಲಿದ್ದಾರೆ.
-
State10 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
State23 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Hassan7 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
National24 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Chikmagalur13 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan10 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Politics23 hours agoಡಿಕೆ ಬ್ರದರ್ಸ್ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು
-
Mysore11 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
