Connect with us

Agriculture

ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ.

Published

on

– ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ.

ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ.


ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ.


ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ.

ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ.
ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ.


ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Agriculture

25 ಲಕ್ಷದವರೆಗೆ ಸಾಲ ಮತ್ತು ಅದಕ್ಕೆ 35% ಸಬ್ಸಿಡಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಯಾರಿಗೆ ಸಿಗಲಿದೆ ಈ ಸೌಲಭ್ಯ?

Published

on

PMEGP Scheme | How to apply? – ಕೇಂದ್ರ ಸರ್ಕಾರವು ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವ ಯುವ ಜನತೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ಆದರೆ ಹಲವು ಜನರಿಗೆ ಈ ಯೋಜನೆಗಳ ಮಾಹಿತಿ ತಿಳಿದಿರುವುದೇ ಇಲ್ಲ. ಈ ಒಂದು ಲೇಖನದಲ್ಲಿ ಕೇಂದ್ರ ಸರ್ಕಾರದ ಒಂದು ಉತ್ತಮ ಯೋಜನೆಯ ಬಗ್ಗೆ ತಿಳಿಸಲಿದ್ದೇವೆ.

ಯಾವುದು ಈ ಯೋಜನೆ?

ಈ ಯೋಜನೆಯ ಹೆಸರು ” ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ “. ಈ ಯೋಜನೆಯನ್ನು 2008 ಆಗಸ್ಟ್ 15ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರು ಜಾರಿಗೋಳಿಸಿದ್ದರು. ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವವರಿಗೆ ಆರ್ಥಿಕ ಸಹಾಯ ಮಾಡುವುದಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಬ್ಯಾಂಕಗಳು ನಿಮ್ಮ ಯೋಜನಾ ಮೊತ್ತದ ಗರಿಷ್ಟ 90% ನಿಂದ 95% ವರೆಗಿನ ಹಣವನ್ನು ಮಂಜೂರು ಮಾಡುತ್ತವೆ. ನೀವು ಪಡೆದ ಸಾಲದ ಮೊತ್ತದ ಮೇಲೆ PMEGP ಯೋಜನೆಯ ಅಡಿಯಲ್ಲಿ 15% ನಿಂದ 35% ನವರೆಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ.

ಹಾಗಿದ್ದರೆ ಈ ಯೋಜನೆಗೆ ಅರ್ಜಿ ಯಾರು ಸಲ್ಲಿಸಬಹುದು? ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ದಾಖಲೆಗಳು ಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಯಾರು ಅರ್ಹರು?

ಕನಿಷ್ಠ 8ನೇ ತರಗತಿ ಪಾಸಾದಂತಹ 18 ವರ್ಷದ ಮೇಲಿನ ಭಾರತೀಯ ಪ್ರಜೆಗಳಾಗಿರಬೇಕು. ಈ ಮೊದಲು ಉದ್ಯಮ ಆರಂಭಿಸಲು ಸರ್ಕಾರದಿಂದ ಯಾವುದೇ ರೀತಿಯ ಲಾಭ ಪಡೆದುಕೊಂಡಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವಂತಹ ಅವಶ್ಯಕ ದಾಖಲೆಗಳು :

ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅರ್ಹರಿದ್ದರೆ ಈ ಕೆಳಗಿನ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ.
1. ಪಾಸ್ಪೋರ್ಟ್ ಅಳತೆಯ ಭಾವಚಿತ್ರ
2. ಶೈಕ್ಷಣಿಕ ಪ್ರಮಾಣಪತ್ರ
3. ವಿವರವಾದ ಯೋಜನಾ ವರದಿ
4. ಜಾತಿ ಪ್ರಮಾಣಪತ್ರ
5. ಗ್ರಾಮೀಣ ಪ್ರಮಾಣ ಪತ್ರ (ಅನ್ವಯವಾದಲ್ಲಿ ಮಾತ್ರ)

ಅರ್ಜಿ ಹೇಗೆ ಸಲ್ಲಿಸಬೇಕು?

ಅರ್ಹತೆ ಹೊಂದಿರುವ ಅಭ್ಯರ್ಥಿಗಳು PMEGP ಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ನೋಂದಣಿ ಮಾಡಿಕೊಂಡು ಬೇಕಾಗುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.

PMEGP ಅಧಿಕೃತ ಜಾಲತಾಣ –
https://www.kviconline.gov.in/pmegpeportal/pmegphome/index.jsp

Continue Reading

Agriculture

ಆರ್ ಬಿ ಐ ನಿಂದ ರೈತರಿಗೆ ಗುಡ್ ನ್ಯೂಸ್ : ಅಡಮಾನ ಇಲ್ಲದೆ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ

Published

on

Loan for farmers upto 2 lakh without Surity – ದೇಶದ ರೈತರಿಗೆ ಮೇಲಾಧಾರ – ಮುಕ್ತ ಕೃಷಿ ಸಾಲದ ಮಿತಿಯನ್ನು ಏರಿಸಲಾಗಿದೆ. ಈ ಮೊದಲು ₹1.6 ಲಕ್ಷ ರೂ. ವರೆಗೆ ಇದ್ದ ಸಾಲದ ಮಿತಿಯನ್ನು ₹2.0 ಲಕ್ಷ ರೂ. ಗೆ ಏರಿಸಲಾಗಿದೆ. ಈ ನಿರ್ಧಾರವನ್ನು ಜನವರಿ 01, 2025 ರಿಂದಲೇ ಜಾರಿಗೆ ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ.

ಈ ಹೊಸ ಉಪಕ್ರಮದ ಮೂಲ ಉದ್ದೇಶವೇನು?

ಕೃಷಿ ವಲಯದ ಅಧಾಯವನ್ನು ಬೆಂಬಲಿಸಲು ಮತ್ತು ಹೆಚ್ಚಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈಗಿನ ಸಮಯದಲ್ಲಿ ಆಗಿರುವ ಹಣದುಬ್ಬರ (Inflation) ಮತ್ತು ಹೆಚ್ಚುತ್ತಿರುವ ಕೃಷಿ ಒಳಹರಿವಿನ ವೆಚ್ಚಕ್ಕೆ ರೈತರಿಗೆ ಸಹಾಯವಾಗುವಂತೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಇದರಿಂದ ರೈತರಿಗೆ ಆರ್ಥಿಕ ನೆರವು ಸಿಗಲಿದೆ.

ಈ ಉಪಕ್ರಮದಿಂದ ದೇಶದ 86% ಕ್ಕಿಂತಲೂ ಹೆಚ್ಚು ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಪ್ರಯೋಜನ ಸಿಗಲಿದೆ. ಆರ್ ಬಿಐ ನ ಈ ಹೊಸ ಮಾರ್ಗಸೂಚಿಯು ದೇಶದ ಪ್ರತಿಯೊಬ್ಬ ರೈತನಿಗೂ ತಲುಪಲಿ ಎಂಬ ಉದ್ದೇಶದಿಂದ ಸರ್ಕಾರವು ವ್ಯಾಪಾಕ ಪ್ರಚಾರ ಕೈಗೊಳ್ಳಲಿದೆ.

ಇದರಿಂದ ಕೃಷಿ ವಲಯದಲ್ಲಿ ಹೆಚ್ಚಿನ ಹೂಡಿಕೆ, ರೈತರ ಜೀವನ ಅಭಿವೃದ್ಧಿಗೊಳ್ಳಲಿದೆ. ಮುಂದಿನ ವರ್ಷ ಅಂದರೆ, ಜನವರಿ 01, 2025ರಿಂದ ದೇಶಾದ್ಯಂತ ಇದು ಜಾರಿಯಾಗಲಿದ್ದು ಇದರ ಲಾಭ ಪಡೆಯಲು ರೈತರು ತಮ್ಮ ಬ್ಯಾಂಕ್ ಗಳಿಗೆ ಭೇಟಿ ನೀಡಿ ಇದರ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

Continue Reading

Agriculture

ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ

Published

on

ಚಿಕ್ಕಮಗಳೂರು: ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒತ್ತುವರಿ ಸಮಸ್ಯೆ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಲೋಕಸಭೆ ಮಾಜಿ ಸದಸ್ಯ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ತಾವೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೇ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಮನವರಿಕೆ ಮಾಡಿದ್ದೀವೆ ಎಂದು ಹೇಳಿದರು.


ಬಹಳಷ್ಟು ಉಹಾಪೋಹಗಳು ಭೂ ಒತ್ತುವರಿ ಬಗ್ಗೆ ಹರಿದಾಡುತ್ತಿದ್ದು, ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಅಪಪ್ರಚಾರ ಮಾಡುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಈಗಾಗಲೇ ಸರ್ಕಾರ ಒತ್ತುವರಿ ತೆರವು ಕಾರ್ಯವನ್ನು ಸ್ಥಗಿತಗೊಳಿಸಿ ಆದೇಶಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನವನ್ನು ನೀಡಿದ್ದಾರೆ. ಜತೆಗೆ ಕಾನೂನಿನ ಚೌಕಟ್ಟಿನಡಿಯಲ್ಲಿ ಅರ್ಹ ಪ್ರಕರಣಗಳಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒತ್ತುವರಿ ಸಮಸ್ಯೆ ಬಹಳಷ್ಟು ವರ್ಷಗಳ ಸಮಸ್ಯೆಯಾಗಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಜನಸಂಖ್ಯೆಯಲ್ಲಿ ಭಾರೀ ಪ್ರಮಾಣದ ಬದಲಾವಣೆಯಾಗಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತುವರಿಯೂ ನಡೆದಿದೆ. ಅರಣ್ಯವೂ ಕ್ಷೀಣಿಸಿದೆ ಎಂದು ತಿಳಿಸಿದರು.

Continue Reading

Trending

error: Content is protected !!