State
ಪ್ರಜ್ವಲ್ ರೇವಣ್ಣ ಪ್ರಕರಣ ಎಸ್ ಐಟಿ ತನಿಖೆ ದಿಕ್ಕುತಪ್ಪುತ್ತಿದೆ, ಸಿಬಿಐ ತನಿಖೆಗೆ ವಹಿಸಲಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಯಾರೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆಗೆ ಸಿಬಿಐಗೆ ವಹಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಂದರೆ, ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.
ಈ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಾರಣೆಯೂ ಮಾಡಬೇಕು ಎಂಬ ಕೆಲವರ ಆಗ್ರಹದ ಕುರಿತು ಕೇಳಿದ ಪ್ರಶ್ನೆಗೆ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ್ಯಾರ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯೂ ಮಾಡಲಿ ಅದಕ್ಕೇ ನಾವು ಪ್ರಕರಣ ಸಿಬಿಐಗೆ ಕೊಡಲಿ ಅಂತ ಕೇಳುತ್ತಿದ್ದೇವೆ ಎಂದರು.
ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆಯಾದ ಮೇಲೆ ಕೆಲವರಲ್ಲಿ ಅಸಮಧಾನವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಹಲವರು ಆಕಾಂಕ್ಷಿಗಳು ಇದ್ದರು. ಟಿಕೆಟ್ ಕೈತಪ್ಪಿದಾಗ ಸಹಜವಾಗಿ ಬೇಸರ ಆಗುತ್ತದೆ. ಎಲ್ಲವೂ ಸರಿ ಹೋಗುತ್ತದೆ. ಈಗಾಗಲೇ ಮೈತ್ರಿ ಬಗ್ಗೆ ವರಿಷ್ಠರು ಯಾವ ರೀತಿ ತೀರ್ಮಾನ ಮಾಡಿದ್ದಾರೋ ಅದರಂತೆ ನಡೆಯುತ್ತದೆ ಎಂದರು.
ಎಸ್ಎಂಕೆ ಆರೋಗ್ಯ ವಿಚಾರಣೆ
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ ವಿಚಾರಿಸಿದರು.
ಇದಕ್ಕೂ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಎಸ್ ಎಂ ಕೃಷ್ಣ ಅವರ ಆರೋಗ್ಯ ಎರಡು ದಿನಗಳಿಂದ ಕ್ಷೀಣಿಸಿದೆ. ಅವರು ಬೇಗ ಗುಣಮುಖರಾಗಲಿ ಅಂತ ಹಾರೈಸುತ್ತೇನೆ ಎಂದರು.
State
ಮುಡಾ ಸೈಟು ಮುಟ್ಟುಗೋಲು: ಸಿಎಂ ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ಈ ಸಂಬಂಧ ಮೊದಲ ಬಾರಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. 50:50 ಸೈಟುಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಾರೆ. ಕೇವಲ ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಟಾಂಗ್ ಕೊಟ್ಟರು.
ಇಡಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿರುವುದು ಬಿಜೆಪಿ. ಇದೊಂದು ರಾಜಕೀಯ ಉದ್ದೇಶಪೂರಿತವಾದ ಪಿತೂರಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
State
ಮೆಟ್ರೋ ದರ ಏರಿಕೆ: ಹೈಕ್ ಸಿದ್ದರಾಮಯ್ಯ ಎಂದು ಜರಿದ ಬಿಜೆಪಿ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಬಿಎಂಆರ್ಸಿಎಲ್ ಅಣಿಯಾಗಿರುವಾಗಲೇ ರಾಜ್ಯ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಇನ್ನುಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕ್ ಸಿದ್ದರಾಮಯ್ಯ ಎಂದು ಕರೆಯಬೇಕು ಜರಿದಿದೆ.
ರಾಜ್ಯದಲ್ಲಿ ಸಾರಿಗೆ ನಿಗಮಗಳಿಗೆ ಐಸಾ ಐಸಾ ಯೋಜನೆ ಕೊಟ್ಟು ಬಸ್ಗಳನ್ನು ತಳ್ಳುವಂತೆ ಮಾಡಿರುವ ಭ್ರಷ್ಟ ಸಿದ್ದರಾಮಯ್ಯ ಅವರು ಇದೀಗ ಎಲ್ಲಾ ಹೈಕ್ ಹೈಕ್ ಎನ್ನುತ್ತಾ 48% ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡುವ ಮೂಲಕ ಹೈಕ್ ರಾಮಯ್ಯ ಎನಿಸಿಕೊಂಡಿದ್ದಾರೆ.
ಬಸ್ ಪ್ರಯಾಣವೂ ದುಬಾರಿ ಮೆಟ್ರೋ ಬಲು ದುಬಾರಿ ಆಗಿದೆ. ಜನರಿಗೆ ಅಕ್ಕಿಯನ್ನೂ ಕೊಡುತ್ತಿಲ್ಲ, ಗೃಹ ಲಕ್ಷ್ಮಿ ಹಣವನ್ನು ನೀಡುತ್ತಿಲ್ಲ. ದುಡಿದು ತಿನ್ನೋಣ ಎಂದರೆ ಎಲ್ಲಾ ದರವನ್ನು ಏರಿಕೆ ಮಾಡಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದೆ ರಾಜ್ಯ ಕಾಂಗ್ರೆಸ್ ಸರಕಾರ ಎಂದು ಬಿಜೆಪಿ ಕಿಡಿಕಾರಿದೆ.
State
ಪರಿಶಿಷ್ಟರ ಹಣವು ಸಾಮಾಜಿಕ ಹೂಡಿಕೆಯಾಗಬೇಕೇ ಹೊರತು, ಸಾಮಾಜಿಕ ಖರ್ಚಾಗಬಾರದು: ಡಾ. ಎಚ್.ಸಿ.ಮಹದೇವಪ್ಪ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 334 ರಲ್ಲಿ SCSP ನೋಡಲ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದೆರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag ship ಯೋಜನೆಗಳನ್ನು ರೂಪಿಸಬೇಕೆಂದು ಸೂಚಿಸಿದರು.
ಸಹಕಾರಿ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟರ ನೊಂದಾವಣೆ ಮಾಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ SCSP ಹಣವನ್ನು ಪಡೆಯುವ ಇಲಾಖೆಗಳು ಸುಮ್ಮನೇ ಹಣ ಖರ್ಚು ಮಾಡದೇ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ಮಾಡುವ ಮೂಲಕ ಪರಿಶಿಷ್ಟ ಸಮುದಾಯದ ಹಣ ಸದ್ಬಳಕೆಯತ್ತ ಗಮನ ಹರಿಸಬೇಕೆಂದು ತಿಳಿಸಿದರು.
ಅಧಿಕಾರಿಗಳು ಮೌಲ್ಯಮಾಪನದ ಕಡೆ ಹೆಚ್ಚು ಗಮನ ಹರಿಸಿ, ವಸತಿ ಇಲ್ಲದ ಜನರು ಎಷ್ಟು ಮಂದಿ ಇದ್ದಾರೆ, ಕೃಷಿಯಲ್ಲಿ ತೊಂದರೆ ಅನುಭವಿಸುತ್ತಿರುವ ಪರಿಶಿಷ್ಟ ಸಮುದಾಯದವರು ಎಷ್ಟು ಮಂದಿ ಇದ್ದಾರೆ ಮತ್ತು ಯಾರಿಗೆಲ್ಲಾ ನಾವು ಉದ್ಯಮಗಳನ್ನು ಮಾಡಲು, ಕೌಶಲ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂಬುದರ ಕುರಿತು ಅಧಿಕಾರಿ ಮಿತ್ರರು ನೇರವಾಗಿ ಜನರ ಬಳಿ ಹೋಗಿ ವಾಸ್ತವಗಳನ್ನು ಅರಿಬೇಕೆಂದು ತಿಳಿಸಿದರು.
ಇನ್ನು ಪರಿಶಿಷ್ಟ ಸಮುದಾಯದವರಿಗೆ ಮನೆ ಕಟ್ಟಲು 5 ಲಕ್ಷ ರೂಪಾಯಿಯ unit fund ಅನ್ನು ನಿಗದಿಗೊಳಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸುವುದಾಗಿ ಹೇಳಿದರು.
ಉನ್ನತ ಶಿಕ್ಷಣ ಮಾಡುತ್ತಿರುವ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅವರಿಗೆ ಬರಬೇಕಾದ ವಿದ್ಯಾರ್ಥಿ ವೇತನವನ್ನು ನಿಗದಿತ ಸಮಯಕ್ಕೆ ಕಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಸಂದರ್ಭದಲ್ಲಿ ಕೆಲವೊಂದು ಗೊಂದಲ ಉಂಟಾಗಿದ್ದು, ಈ ಗೊಂದಲವನ್ನು ಶೀಘ್ರದಲ್ಲಿ ಪರಿಹಾರ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.
ಇನ್ನು ಸರ್ಕಾರದ ಎಲ್ಲಾ ಇಲಾಖೆಗಳೂ ಕೂಡಾ ಪರಿಶಿಷ್ಟರ ಹಣವನ್ನು ಸಾಮಾಜಿಕ ಖರ್ಚು ( Social Expenditure) ಎಂದು ಭಾವಿಸದೇ ಅದನ್ನು ಸಾಮಾಜಿಕ ಹೂಡಿಕೆ ( Social Investment ) ಆಗಿ ವಿನಿಯೋಗಿಸಿದರೆ ಮಾತ್ರ ಪರಿಶಿಷ್ಟರ ಏಳಿಗೆ ಸಾಧ್ಯ ಎಂಬುದಾಗಿ ತಿಳಿದರು.
ನಿಗದಿತ ಅವಧಿಯಲ್ಲಿ ಹಣ ಖರ್ಚು ಮಾಡದೇ SCSP/TSP ಕಾಯ್ದೆಯ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ ಮತ್ತು ಅನುದಾವನ್ನು ಬಳಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಮಾಜ ಕಲ್ಯಾಣ ಇಲಾಖೆಯು ಸಿಂಗಲ್ ವಿಂಡೋ ಏಜೆನ್ಸಿ ಮೂಲಕ ಖರ್ಚಾಗದ ಹಣವನ್ನು ಹಿಂಪಡೆದು, ಪರಿಶಿಷ್ಟ ಸಮುದಾಯಗಳಿಗೆ ಪೂರಕ ಯೋಜನೆಗಳನ್ನು ನೀಡಲಿದೆ ಎಂಬ ಸಂಗತಿಯನ್ನು ಪ್ರಮುಖವಾಗಿ ತಿಳಿಸಿದರು.
-
Mysore21 hours ago
ಮೈಸೂರು ಮಹಾರಾಜರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ
-
Sports20 hours ago
ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಸುರೇಶ್ ರೈನಾ
-
Sports19 hours ago
Kho Kho world cup 2025: ಭಾರತ ಮಹಿಳಾ ಹಾಗೂ ಪುರುಷ ತಂಡಗಳೇ ಚಾಂಪಿಯನ್
-
National - International19 hours ago
ಮಹಾ ಕುಂಭಮೇಳ ದರ್ಶನಕ್ಕಾಗಿ ಹುಬ್ಬಳ್ಳಿಯಿಂದ ವಿಶೇಷ ರೈಲು ವ್ಯವಸ್ಥೆ : ಈ ದಿನ ಮಾತ್ರ!
-
Mysore22 hours ago
ತಾಲೂಕು ಕಚೇರಿಗಳು ಪ್ರಾರಂಭವಾಗಲು ಒತ್ತಾಯ: ಹೊಸೂರು ಕುಮಾರ್
-
Mysore24 hours ago
ವಿಜಯೇಂದ್ರ ಮೊದಲು ಕುರ್ಚಿ ಭದ್ರಪಡಿಸಿಕೊಳ್ಳಲಿ: ಬಿ.ಸುಬ್ರಹ್ಮಣ್ಯ
-
Kodagu23 hours ago
ಎರಡು ಗಬ್ಬದ ಹಸುಗಳ ಮೇಲೆ ಹುಲಿ ದಾಳಿ
-
Hassan6 hours ago
ಅನುಮತಿ ಪಡೆಯೇ ಚಿತ್ರೀಕರಣ ಉಪಕರಣ ತಂದಿಟ್ಟಿದ್ದಕ್ಕೆ ದಂಡ ವಿಧಿಸಿಧ್ದ ಅರಣ್ಯ ಇಲಾಖೆ