Connect with us

Chamarajanagar

ಫಲಾನುಭವಿಗಳ ಸಮಾವೇಶ ಹಾಗೂ ಸಚಿವ ಸಂಪುಟ ಸಭೆ ಮುಂದೂಡಿಕೆ

Published

on

ಚಾಮರಾಜನಗರ. ಫೆ11:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 16 ರಂದು ಚಾಮರಾಜನಗರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಕಾರ್ಯಕ್ರಮ ಹಾಗೂ ಫೆಬ್ರವರಿ 17 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಸುವರ್ಣಾವತಿ ಜಲಾಶಯದಲ್ಲಿ ಜಲಸಾಹಸ ಕ್ರೀಡೋತ್ಸವಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ

Published

on

ಚಾಮರಾಜನಗರ: ಯುವಕರು ಹಾಗೂ ಸಾರ್ವಜನಿಕರನ್ನು ಕ್ರೀಡೆಗೆ ಉತ್ತೇಜಿಸುವ ಸಲುವಾಗಿ ಸುವರ್ಣಾವತಿ ಜಲಾಶಯದಲ್ಲಿ ಆರಂಭವಾದ ಜಲ ಸಾಹಸ ಕ್ರೀಡೋತ್ಸವಕ್ಕೆ ಎಂ.ಎಸ್.ಐ.ಎಲ್. ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ತಾಲೂಕಿನ ಅಟ್ಟುಗೂಳಿಪುರ ಗ್ರಾಮದಲ್ಲಿರುವ ಸುವರ್ಣಾವತಿ ಜಲಾಶಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ 2 ದಿನಗಳ ಜಲ ಸಾಹಸ ಕ್ರೀಡೋತ್ಸವವನ್ನು ಜಲಾಶಯಕ್ಕೆ ದೀಪಾರತಿ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ಜಾನಪದ ಕಲೆಗಳ ತವರೂರು ಚಾಮರಾಜನಗರ ಜಿಲ್ಲೆ ಪ್ರವಾಸಿ ತಾಣವಾಗಿಯೂ ಹೆಸರುವಾಸಿಯಾಗಿದೆ. ವಿಶೇಷ ಅನುದಾನ ಬಳಸಿ ಸುವರ್ಣಾವತಿ ಜಲಾಶಯವನ್ನು ಅಭಿವೃದ್ಧಿಪಡಿಸಲು 2008ರಿಂದಲೂ ಬೇಡಿಕೆ ಇಡುತ್ತಿದ್ದೇನೆ. ಜಲಾಶಯವನ್ನು ಉತ್ತಮ ಪ್ರವಾಸಿ ತಾಣವಾಗಿ ಮಾರ್ಪಡಿಸಲು 43 ಕೋಟಿ ರೂ.ಗಳ ಅಂದಾಜು ಪಟ್ಟಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದರು.

 

ಜಲ ಸಾಹಸ ಕ್ರೀಡೆಗೆ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದೆ. ಸುವರ್ಣಾವತಿ ಜಲಾಶಯ ಸೇರಿದಂತೆ ಸುತ್ತಮುತ್ತಲಿನ ಕೆರೆಗಳು ತುಂಬಿದರೆ ಜಲ ಸಾಹಸ ಕ್ರೀಡೆಗೆ ಅನುಕೂಲವಾಗಲಿದೆ. ಕ್ರೀಡೋತ್ಸವದಲ್ಲಿ ಸಾರ್ವಜನಿಕರು, ಯುವಜನರು ಹೆಚ್ಚಾಗಿ ಪಾಲ್ಗೊಂಡು ಮುಂದಿನ ದಿನಗಳಲ್ಲಿ ಜಲಸಾಹಸ ಕ್ರೀಡೆ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈಜುಕೊಳ (ಸ್ವಿಮ್ಮಿಂಗ್ ಫೂಲ್) ನಿರ್ಮಾಣಕ್ಕಾಗಿ 15 ಕೋಟಿ ರೂ. ಅಂದಾಜುಪಟ್ಟಿ ತಯಾರಿಸಲಾಗಿದೆ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಕ್ರೀಡಾಪಟುಗಳಿದ್ದು, ಕ್ರೀಡೆಗೆ ಪ್ರೇರೇಪಿಸಲು ಜಲಸಾಹಸ ಕ್ರೀಡೆ ಸಹಕಾರಿಯಾಗಿದೆ. ರಾಜ್ಯಮಟ್ಟದಲ್ಲಿ ಜಲಸಾಹಸ ಕ್ರೀಡೆ ಪ್ರಚಲಿತವಾಗಬೇಕು. ಜಲ ಸಾಹಸ ಕ್ರೀಡೆಯನ್ನು ಜಿಲ್ಲೆಯಲ್ಲಿ ಹೆಚ್ಚಾಗಿ ಆಯೋಜಿಸಬೇಕು. ಜಿಲ್ಲೆಯ ಯುವಕರು ಹಾಗೂ ಸಾರ್ವಜನಿಕರು ಜಲಸಾಹಸ ಕ್ರೀಡೆಯ ಸದುಪಯೋಗ ಪಡೆಯುವಂತೆ ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ ಎರಡು ದಿನಗಳ ಕಾಲ ಆಯೋಜನೆಯಾಗಿರುವ ಜಲಸಾಹಸ ಕ್ರೀಡೋತ್ಸವದಲ್ಲಿ ಮೊದಲ ದಿನ ಯುವಕರು, ವಿವಿಧ ಕಾಲೇಜು ವಿದ್ಯಾರ್ಥಿಗಳು ಮತ್ತು ಎರಡನೇ ದಿನ ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ. ಜಲಸಾಹಸ ಕ್ರೀಡೆ ಆಯೋಜನೆ ಕ್ರೀಡಾಪಟುಗಳು ಹೊರಹೊಮ್ಮಲು ಉತ್ತಮ ವೇದಿಕೆಯಾಗಲಿದೆ. ಕ್ರೀಡೆಯಲ್ಲಿ ಭಾಗವಹಿಸಲು ತರಬೇತಿಯೂ ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿಯ ಪ್ರಶಿಕ್ಷಕರಾದ ಶಬ್ಬೀರ್, ದಿನೇಶ್ ಎಸ್. ಸುವರ್ಣಾ, ಅಟ್ಟುಗೂಳಿಪುರ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮರಾಜ್, ಇತರರು ಉಪಸ್ಥಿತರಿದ್ದರು.

Continue Reading

Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ತ್ಯಜಿಸಲು ಜಿಲ್ಲಾಧಿಕಾರಿ ಶ್ರೀರೂಪ ಮನವಿ

Published

on

ಚಾಮರಾಜನಗರ:- ಚಾಮರಾಜನಗರ ಜಿಲ್ಲಾಡಳಿತದಿಂದ ಮಲೆ ಮಹದೇಶ್ವರ ಬೆಟ್ಟ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ವಲಯವಾಗಿ ಘೋಷಿಸಲಾಗಿದೆ.

ದೇವಾಲಯಕ್ಕೆ ಆಗಮಿಸುವ ಭಕ್ತರು, ಪ್ರವಾಸಿಗರು ಹಾಗೂ ಸ್ಥಳೀಯರು ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಮಲೆ ಮಹದೇಶ್ವರ ಬೆಟ್ಟವು ಅರಣ್ಯ ಪ್ರದೇಶದಲ್ಲಿ ಇರುವ ಪವಿತ್ರ ಕ್ಷೇತ್ರವಾಗಿರುವುದರಿಂದ, ಪ್ಲಾಸ್ಟಿಕ್‍ನ ಅನಿಯಂತ್ರಿತ ಬಳಕೆ ಪರಿಸರಕ್ಕೆ ಗಂಭೀರ ಹಾನಿಯನ್ನುಂಟು ಮಾಡಲಿದೆ. ಅರಣ್ಯ ಪ್ರಾಣಿ-ಪಕ್ಷಿಗಳ ಸುರಕ್ಷತೆ, ಪ್ರಕೃತಿ ಸಂರಕ್ಷಣೆ ಮತ್ತು ಕ್ಷೇತ್ರದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ನಿಷೇಧ ಅತ್ಯಂತ ಅಗತ್ಯವಾಗಿದೆ.

ಭಕ್ತರು ಮತ್ತು ಸಾರ್ವಜನಿಕರು ನೀರು, ಪ್ರಸಾದ ಮತ್ತು ಇತರೆ ವಸ್ತುಗಳನ್ನು ಪ್ಲಾಸ್ಟಿಕ್ ಬ್ಯಾಗ್‍ಗಳಲ್ಲಿ ತರಬಾರದು. ಇದರ ಬದಲಾಗಿ ಸೆಣಬಿನ ಚೀಲ (ಜ್ಯೂಟ್ ಬ್ಯಾಗ್), ಕಾಗದದ ಚೀಲ, ಸ್ಟೀಲ್, ತಾಮ್ರದಂತಹ ಪಾತ್ರೆಗಳು ಮುಂತಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಪ್ಲಾಸ್ಟಿಕ್ ವಸ್ತುಗಳನ್ನು ಕ್ಷೇತ್ರದೊಳಗೆ ತರುತ್ತಿರುವುದು ಕಂಡುಬಂದಲ್ಲಿ ಜಪ್ತಿ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ಸ್ವಚ್ಛತೆಗೆ ಸಹಕರಿಸಿ, ಕಸಗಳನ್ನು ಕಸದ ತೊಟ್ಟಿಗಳಲ್ಲಿ ಮಾತ್ರ ಹಾಕಬೇಕು.

ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಜಂಟಿಯಾಗಿ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲಿವೆ.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಭಕ್ತಾಧಿಗಳು, ಸಾರ್ವಜನಿಕರು ಮತ್ತು ವ್ಯಾಪಾರಿಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಮನವಿ ಮಾಡಿದ್ದಾರೆ.

Continue Reading

Chamarajanagar

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ : 27 ದಿನಗಳ ಅವಧಿಯಲ್ಲಿ 2.14 ಕೋಟಿ ರೂಗಳ ಸಂಗ್ರಹ

Published

on

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 27 ದಿನಗಳ ಅವಧಿಯಲ್ಲಿ 2.14 ಕೋಟಿ ರೂಗಳ ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಗೆ ಮುಕ್ತಾಯವಾಯಿತು.

ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 27 ದಿನಗಳ ಅವಧಿಯಲ್ಲಿ 2,14,40,939 ರೂ ನಗದು ಹಣ, 45 ಗ್ರಾಂ ಚಿನ್ನ ಹಾಗೂ 2 ಕೆಜಿ 320 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.
ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು ಹಾಗೂ ವಿದೇಶಿಯ 9 ನೋಟುಗಳು ಕಂಡುಬಂದಿವೆ.

ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಮಹಾದೇವಪ್ಪ, ವಿಜಯ್, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಭಾರತಿ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

Continue Reading

Trending

error: Content is protected !!