Mandya
ಪ್ರತಿಯೊಬ್ಬರೂ ಸೊಳ್ಳೆಗಳ ಜೀವನ ಚಕ್ರ ಅರಿತು ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ ರೋಗಗಳಿಂದ ದೂರವಿರಿ
ಶ್ರೀರಂಗಪಟ್ಟಣ: ಪ್ರತಿಯೊಬ್ಬರೂ ಸೊಳ್ಳೆಗಳ ಜೀವನ ಚಕ್ರ ಅರಿತು ಮಲೇರಿಯಾ, ಡೆಂಗ್ಯೂ, ಚಿಕ್ಕುಂ ಗುನ್ಯಾ ರೋಗಗಳಿಂದ ದೂರವಿರಿ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಹೇಳಿದರು.
ಅವರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಶ್ರೀರಂಗಪಟ್ಟಣ ವತಿಯಿಂದ ಗಂಜಾಂ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ “ಮಲೇರಿಯಾ ವಿರೋಧಿ ಮಾಸಾಚರಣೆ,” ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಪ್ರತಿ ವರ್ಷ ಜೂನ್ ತಿಂಗಳಾದ್ಯಂತ ಮಲೇರಿಯಾ ರೋಗ ಹರಡುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದ್ದು ಈ ವರ್ಷ” ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವೃಗೊಳಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ಜನಸಾಮಾನ್ಯರಲ್ಲಿ ಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಸೊಳ್ಳೆಗಳ ಬೆಳವಣಿಗೆ ಹಂತಗಳ ಹಾಗೂ ಜೀವನ ಚಕ್ರಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡುತ್ತ
ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ನೀರಿನ ಸಂಗ್ರಹಗಳ ಪರಿಕರಗಳನ್ನು ವಾರಕ್ಕೆರಡು ಬಾರಿ ಸ್ವಚ್ಚವಾಗಿ ತೊಳೆಯಬೇಕು. ಮಲಗುವಾಗ ತಪ್ಪದೆ ಸೊಳ್ಳೆ ಪರದೆ ಬಳಸಿ,ಘನ ತ್ಯಾಜ್ಯ ವಸ್ತುಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಜ್ವರ ಬಂದಾಗ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಂತರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ ಮಲೇರಿಯಾ, ಡೆಂಗ್ಯೂ, ಚಿಕ್ಕುo ಗುನ್ಯಾ ರೋಗದ ಲಕ್ಷಣಗಳು, ಚಿಕಿತ್ಸೆ, ಪತ್ತೆ ಹಚ್ಚುವಿಕೆ ಕುರಿತಂತೆ ಹಾಗೂ ಸ್ವಯಂ ರಕ್ಷಣಾ ವಿಧಾನಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಬಸವರಾಜ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಹಾದೇವಮ್ಮ, ಸಹ ಶಿಕ್ಷಕರಾದ ಕೆ.ಎನ್.ಚಂದ್ರಮ್ಮ, ಪಿ.ಕೆ.ಕುಮದ್ವತಿ, ಹೆಚ್.ಎನ್.ಪುಷ್ಪಲತಾ, ಆರ್.ವಿಜಯ, ಹೆಚ್.ಆರ್.ರವಿಕುಮಾರ್, ಜೆ ಎಸ್ ರಾಜಮ್ಮ,ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ ಚಂದನ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore18 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Mysore16 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu19 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Kodagu17 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Kodagu19 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu15 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ
-
Hassan13 hours ago
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
-
Mysore15 hours ago
ಸುತ್ತೂರು ಜಾತ್ರಾ ಮಹೋತ್ಸದಂದು ಹಸೆಮಣೆ ಏರಲಿದ್ದಾರೆ 155 ಜೋಡಿಗಳು