Connect with us

State

ಮೋದಿಯ ‘ಭಾರತ್ ಅಕ್ಕಿ’ ಇಂದಿನಿಂದ 29 ರೂ. ಗೆ ದೊರೆಯಲಿದೆ.

Published

on

New Delhi: ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ‘ಭಾರತ್’ ಬ್ರ್ಯಾಂಡ್ ಅಡಿಯಲ್ಲಿ ಅಮೆಜಾನ್, ಫ್ಲಿಪ್ಕಾರ್ಟ್ ಮುಂತಾದ ಇ – ಕಾಮರ್ಸ್ (E-Commerce) ತಾಣಗಳಲ್ಲಿ ಕಡಿಮೆ ದರದಲ್ಲಿ ಅಕ್ಕಿ ಮಾರಾಟಕ್ಕೆ ಮುಂದಾಗಿದೆ. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳ ಬೆನ್ನಲ್ಲೇ, ಮೋದಿ ಸರ್ಕಾರ ಗ್ಯಾರಂಟಿಗಳಿಗೆ ಪರ್ಯಾಯವಾಗಿ ‘ಭಾರತ್’ ಅಕ್ಕಿಯನ್ನು 5 ಕೆ.ಜಿ, 10 ಕೆ.ಜಿ ಪ್ಯಾಕೆಟ್ಗಳಲ್ಲಿ ಪ್ರತಿ ಕಿ.ಲೋಗೆ 29 ರೂ.ಯಂತೆ ಮಾರಾಟ ಮಾಡಲು ಮುಂದಾಗಿದೆ.

ಕೇಂದ್ರ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ, ಕೇವಲ ಆನ್ಲೈನ್ ವೇದಿಕೆಗಳು ಮಾತ್ರವಲ್ಲದೇ, NAFED (ನಾಫೆಡ್), NCCF, ಕೇಂದ್ರೀಯ ಭಂಡಾರಗಳಲ್ಲಿ ಕೂಡಾ ಭಾರತ್ ಅಕ್ಕಿ ದೊರೆಯಲಿದೆ. ಇದೇ ವೇಳೆ ಅಕ್ಕಿ ದರ ನಿಯಂತ್ರಣಕ್ಕೆ ಬರುವವರೆಗೂ ಅಕ್ಕಿ ರಫ್ತಿಗೆ ಹೇರಲಾಗಿರುವ ನಿರ್ಬಂಧವನ್ನು ಸಡಿಲಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಇನ್ನು ಕೇಂದ್ರೀಯ ಆಹಾರ ಸಚಿವಾಲಯವು 5 ಲಕ್ಷ ಟನ್ ಅಕ್ಕಿಯನ್ನು ‘ಭಾರತ್ ಅಕ್ಕಿ’ (Bharath Akki) ಯೋಜನೆಯ ಸಲುವಾಗಿ ಆಹಾರ ನಿಗಮಕ್ಕೆ ನೀಡಿದೆ. 29 ರೂ. ಪ್ರತಿ ಕಿ.ಲೋಗೆ ಅಕ್ಕಿ ಲಭ್ಯವಿದೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ (B Y Vijayendra), ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಪೂರೈಸುತ್ತಿದ್ದ ಪ್ರಧಾನಿ ಶ್ರೀ ಮೋದಿ ಅವರ ಸರ್ಕಾರ, ಈಗ ಸರ್ವ ವರ್ಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದೇಶವನ್ನು ಹಸಿವು ಮುಕ್ತವಾಗಿಸುವ ಸಂಕಲ್ಪ ತೊಟ್ಟು ‘ಭಾರತ್ ಅಕ್ಕಿ ಯೋಜನೆ’ ಅಡಿಯಲ್ಲಿ ಇಂದಿನಿಂದ 1 ಕೆ.ಜಿ ಅಕ್ಕಿಗೆ ಕೇವಲ 29 ರೂಗಳಿಗೆ ಸಾಮಾನ್ಯರಿಗೂ ಕೈಗೆಟುಕುವ ದರದಲ್ಲಿ ವಿತರಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಮೋದಿ ಜೀ ಅವರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ (Garibh Kalyan Anna Scheme) ಬಡವರಿಗೆ ನೀಡುತ್ತಿರುವ ಅಕ್ಕಿಯನ್ನು ಅನ್ನಭಾಗ್ಯದ ಹೆಸರಲ್ಲಿ ತಮ್ಮದೇ ಯೋಜನೆಯೆಂದು ಬಿಂಬಿಸಿಕೊಳ್ಳುತ್ತಿರುವ ಮಾನ್ಯ ಸಿದ್ದರಾಮಯ್ಯ (Siddaramaiah) ಅವರು, ಈ ಯೋಜನೆಯೂ ತಮ್ಮದೇ ಎಂದು ಪ್ರಚಾರದ ಹೈಜಾಕ್ ಲೇಬಲ್ ಹಚ್ಚಿಕೊಳ್ಳದಿರಲಿ ಎಂದು ಲೇವಡಿ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

State

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

Published

on

ಬೆಂಗಳೂರು :ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ.

ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ (ಹೃದಯ ದೀಪ)ಕೃತಿ ಅಂತಿಮ ಸುತ್ತಿಗೆ ಆಯ್ಕೆಯಾದ ಸಂದರ್ಭದಲ್ಲಿಯೇ
ಹಾಸನದಲ್ಲಿ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಶುಭ ಕೋರಿದ್ದನ್ನು ನೆನಪಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಲಂಡನ್ ನಲ್ಲಿ ಬುಕರ್ ಪ್ರಶಸ್ತಿ ಘೋಷಣೆ ಮಾಡಿದ ಕ್ಷಣ, ಕನ್ನಡಿಗರ ಪಾಲಿಗೆ ಹೆಮ್ಮೆಯ ಅಮೃತ ಘಳಿಗೆಯಾಗಿದೆ ಎಂದು ಶ್ಲಾಘಿಸಿದ್ದಾರೆ.

ಹಾಸನದಿಂದ ಪಿ.ಲಂಕೇಶ್ ಪತ್ರಿಕೆಗೆ ವರದಿಗಾರರಾಗಿದ್ದ ಭಾನುಮುಷ್ತಾಕ್ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು. ವಕೀಲರಾಗಿ, ನಗರಸಭೆ ಸದಸ್ಯರಾಗಿ ಹಾಗೂ ಪ್ರಗತಿಪರ ಸಾಹಿತಿಯಾಗಿ ಗುರುತಿಸಿಕೊಂಡವರು. ಅನ್ಯಾಯದ ವಿರುದ್ದ ಧ್ವನಿ ಎತ್ತಿದವರು. ಸಂಘ ಸಂಸ್ಥೆಗಳಲ್ಲಿ ಸಂಘಟಕಿಯಾಗಿಯೂ ಕೆಲಸ ಮಾಡಿದವರು. ಅವರ ಹೃದಯ ದೀಪ ಕೃತಿ ಬುಕರ್ ಪ್ರಶಸ್ತಿಯನ್ನು ಗೆದ್ದಿರುವುದು ಕನ್ನಡಿಗರ ಹೃದಯ ಗೆದ್ದಂತಾಗಿದೆ. ಹೃದಯ ದೀಪ, ಕನ್ನಡದ ದೀಪವಾಗಿ ಜಗದೆಲ್ಲೆಡೆ ಪ್ರಜ್ವಲಿಸಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದ ಹಸೀನಾ ಚಲನಚಿತ್ರ ಕಥೆ ಕೂಡ ಬಾನುಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳಿಂದಲೇ ಆಯ್ಕೆ ಮಾಡಿದ್ದು. ಹಸೀನಾ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿದ ಸಂದರ್ಭದಲ್ಲಿ ಇಡೀ ತಂಡವನ್ನು ಹಾಸನಕ್ಕೆ ಆಹ್ವಾನಿಸಿದ್ದ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕಲಾಭವನದಲ್ಲಿ ಏರ್ಪಡಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸನ್ಮಾನಿಸಿತ್ತು. ಕೆಲ ಘಟನೆಗಳ ಸಂಕಷ್ಟದ ಸಂದರ್ಭದಲ್ಲಿಯೂ ಬಾನುಮುಷ್ತಾಕ್ ಅವರ ಜೊತೆಗೆ ಬೆಂಬಲವಾಗಿ ನಿಂತಿದ್ದು
ಮರೆಯಲಾಗದ ಕ್ಷಣ ಎನ್ನುವುದನ್ನು ಶಿವಾನಂದ ತಗಡೂರು ಅವರು ಸ್ಮರಿಸಿದ್ದಾರೆ.

Continue Reading

State

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಆರೋಪಿ ರನ್ಯಾರಾವ್‌ಗೆ ಜಾಮೀನು ಮಂಜೂರು

Published

on

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ ಆದೇಶಿಸಿದೆ.

ಈ ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿದೆ. ಡಿಆರ್‌ಐ ಅಧಿಕಾರಿಗಳು 60 ದಿನ ಕಳೆದರೂ ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಈ ಇಬ್ಬರು ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದೆ.

ಷರತ್ತುಗಳೇನು?

ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ.

ಈ ಪ್ರಕರಣದಲ್ಲಿ ರನ್ಯಾರಾವ್ ಪರವಾಗಿ ವಕೀಲ ಗಿರೀಶ್ ವಾದ ಮಂಡಿಸಿದರು. ಆದರೆ ರನ್ಯಾರಾವ್ ಜಾಮೀನು ಪಡೆದುಕೊಂಡ್ರು ಕೂಡ ಬಿಡುಗಡೆಯ ಭಾಗ್ಯ ಇಲ್ಲ. ಕಾಫೆಪೋಸಾ ಹಾಕಿರೋ ಹಿನ್ನೆಲೆಯಲ್ಲಿ ರನ್ಯಾ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.

12 ಕೋಟಿ ರೂ. ಮೌಲ್ಯದ 14 ಕೆ.ಜಿ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ನಟಿ ರನ್ಯಾ ರಾವ್‌ ಬಂಧನಕ್ಕೆ ಒಳಗಾಗಿದ್ದರು. ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು.

 

Continue Reading

State

PSI Free ಕೋಚಿಂಗ್ ಗಾಗಿ ಅರ್ಜಿ ಅಹ್ವಾನ : ಅರ್ಜಿ ಹೇಗೆ ಸಲ್ಲಿಸಬೇಕು?

Published

on

 PSI Free Coachng 2025 – ಪದವಿ ಪಾಸಾಗಿ ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗಾಗಿ ತಯಾರಿ ನಡೆಸುತ್ತಿರುವಂತಹ ಅಭ್ಯರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೂರು ತಿಂಗಳ ಉಚಿತ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.

ಈ ಒಂದು ಉಚಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸಲು ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಸೇರಿದಂತೆ ಇತರೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಉಚಿತ ತರಬೇತಿ ಕುರಿತು :

Department of Minority Karnataka – ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ರಾಜ್ಯದ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಶೀಘ್ರದಲ್ಲಿಯೆ ನೇಮಕಾತಿ ಅಧಿಸೂಚನೆ ಬರಲಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ 90 ದಿನಗಳ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಧಿಸೂಚನೆ ಹೊರಡಿಸಿದೆ.

ಯಾರು ಅರ್ಹರು?

ಈ ಉಚಿತ ವಸತಿ ಸಹಿತ ಪರೀಕ್ಷೆ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ & ಪಾರ್ಸಿ ಸಮುದಾಯದವರಾಗಿರಬೇಕು ಹಾಗೂ ಯಾವುದಾದರು ಪದವಿ ಮುಗಿಸಿರಬೇಕು.

ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?

ಇದಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆಪರೀಕ್ಷೆ ನಡೆಸಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 23 ಮೇ 2025

ಅರ್ಜಿ ಸಲ್ಲಿಸೋದು ಹೇಗೆ?

ರಾಜ್ಯದ ಎಲ್ಲಾ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಅಧಿಕೃತ ಲಿಂಕ್ ಮುಕಾಂತರ ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಲಿಂಕ್ – https://dom.karnataka.gov.in/

Continue Reading

Trending

error: Content is protected !!