Connect with us

State

ಭಾರತದ ಮೂಲನಿವಾಸಿಗಳು ಆತಂಕದಲ್ಲಿದ್ದಾರೆ: ಡಾ.ಹೆಚ್.ಸಿ.ಮಹದೇವಪ್ಪ*

Published

on

*ಭಾರತದ ಮೂಲನಿವಾಸಿಗಳು ಆತಂಕದಲ್ಲಿದ್ದಾರೆ: ಡಾ.ಹೆಚ್.ಸಿ.ಮಹದೇವಪ್ಪ*

ಮೈಸೂರು,ಮಾ.2: ಪ್ರಪಂಚಕ್ಕೆ ಶಾಂತಿ, ಅಹಿಂಸೆ, ಸಹಿಷ್ಣುತೆಯನ್ನು ಭೋದನೆ ಮಾಡಿದ ರಾಷ್ಟ್ರ ಭಾರತ. ಅಹಿಂಸೆ ಹಾಗೂ ಅಸಹಕಾರದಿಂದ ಸ್ವಾತಂತ್ರ್ಯ ಪಡೆದ ಈ ದೇಶದ ಇಂದಿನ ಆಡಳಿತ ವ್ಯವಸ್ಥೆಯು ಎಲ್ಲರನ್ನೂ ತಳಮಳಗೊಳಿಸುತ್ತಿದೆ. ಸ್ವಾತಂತ್ರ್ಯದ ಉದ್ದೇಶ ಬುಡಮೇಲು ಮಾಡಲಾಗುತ್ತಿದ್ದು, ಭಾತರದ ಮೂಲನಿವಾಸಿಗಳು ಆತಂಕದಲ್ಲಿದ್ದಾರೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಹೇಳಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ.ಮಲ್ಲೇಶ್- 90ರ ಅಂಗವಾಗಿ ಶನಿವಾರ ಕಲಾಮಂದಿರದಲ್ಲಿ ನಡೆದ ‘ಭಾರತ ಜನತಂತ್ರದ ಸಮಕಾಲೀನ ತಲ್ಲಣಗಳು’ ಕುರಿತ ಎರಡು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ದೇಶದ ಉಜ್ವಲ ಭವಿಷ್ಯಕ್ಕೆ ಮಾರ್ಗ ತೊರಿಸುವ ಸಂವಿಧಾನ ಇಂದು ಅಪಾಯದಲ್ಲಿದೆ. ಜನರ ಜೀವನ ನಿಜಕ್ಕೂ ಕಷ್ಟದಲ್ಲಿದೆ. ಅಸ್ಪೃಶ್ಯತೆ ನಿವಾರಣೆ ಆಗಿಲ್ಲ. ಕೋಮ ಸೌಹರ್ದತೆ ಸಂಪೂರ್ಣ ಸಾಧಿಸಿಲ್ಲ. ನಮ್ಮ ದೇಶದ ಮೂಲ ಕಸುಬಾದ ಕೃಷಿ ಆಧಾರಿತ ಬದುಕು ಸಂಕಷ್ಟಕ್ಕೆ ಸಿಲುಕಿದ. ರೈತರು ಕೃಷಿ ನಿಲ್ಲಿಸಿ ಬೀದಿಗಿಳಿದು ಹೋರಾಟ ಮಾಡಬೇಕಾದ ಹೀನಾಯ ಪರಿಸ್ಥಿತಿ ಬಂದೊದಗಿರುವುದು ಅತ್ಯಂತ ನಾಚಿಗೇಡಿನ ಸಂಗತಿ ಎಂದರು.

ಜವಾಹರಲಾಲ್ ನೆಹರು ಅವರು ಪ್ರಧಾನಿಯಾಗಿದ್ದಾಗ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯ ಈಡೇರಿಸಲು ಪಂಚವಾರ್ಷಿಕ ಯೋಜನೆ ಮುಖಾಂತರ ದೇಶವನ್ನು ಹಂತಹಂತವಾಗಿ ಅಭಿವೃದ್ಧಿ ಮಾಡುವಂಥ ಪ್ರಯತ್ನ ನಡೆದು ದೇಶದಲ್ಲಿ ಕೃಷಿಯ ಉತ್ಪಾದನೆಗೆ ಪ್ರೇರಕ ಶಕ್ತಿಯಾದ ಬಾಕ್ರಾನಂಗಲ್ ಅಣೆಕಟ್ಟೆ ‌ನಿರ್ಮಾಣ ಮಾಡಲಾಯಿತು ಎಂದು ವಿವರಿಸಿದರು.

ಭೂಮಿ ಸಾಮಾನ್ಯ ಜನರಿಗೆ, ಕೃಷಿಕರಿಗೆ ಸಾಮಾಜಿಕ ಭದ್ರತೆ ಒದಗಿಸುತ್ತದೆ. ಆದರೆ ಇಂದು ಭೂಮಿಯು ಬಂಡವಾಳಶಾಹಿಗಳ ಕೈಸೇರುತ್ತಿದೆ. ಒಬ್ಬ ವ್ಯಕ್ತಿ ನೂರಾರು ಎಕ್ಕರೆ ಹೊಂದುವಂಥ ಕರಾಳ ಶಾಸನವನ್ನು ಇಂದಿನ ಬಿಜೆಪಿ ಸರ್ಕಾರ ಜಾರಿ ಮಾಡಿದೆ. ಇದರಿಂದ ಸಾಮಾಜಿಕ ನ್ಯಾಯ ಮರೀಚಿಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿಂಧೂ ನಾಗರಿಕತೆ, ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ, ಪುರಾತನ ಚರಿತ್ರೆ, ನಮ್ಮ ಸಾಂಸ್ಕೃತಿಕ ಬದುಕು, ಧಾರ್ಮಿಕ ಆಚಾರ, ವಿಚಾರ, ವಿಭಿನ್ನವಾದ ಪ್ರಾಂತ್ಯಗಳ ಜನಜೀವನ ಹಾಗೂ ಸ್ವತಃ ನೋವನ್ನು ಅನುಭವಿಸಿ, 15 ಕ್ಕೂ ಹೆಚ್ವು ರಾಷ್ಟ್ರಗಳ ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಬಾಬಾಸಾಹೇಬರು ಭಾರತದ ಸಂವಿಧಾನ ರಚಿಸಿದ್ದಾರೆ. ಸಮಾನತೆ, ಸಮಾನ ಅವಕಾಶ, ಸಂಪತ್ತಿನ ಹಂಚಿಕೆ, ಸಾಮಾಜಿಕವಾಗಿ, ಆರ್ಥಿಕವಾಗಿ ಶೈಕ್ಷಣಿಕವಾಗಿ ಹಂಚುವುದು ಸೇರಿದಂತೆ ಸಂವಿಧಾನದ ನೀತಿ, ನಿರ್ದೇಶನಗಳು ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಹೇಳಿದರು.

ಪ್ರಪಂಚದ ಇತಿಹಾಸದಲ್ಲಿ ಚಳುವಳಿಗಳು ಜನಜೀವನದಲ್ಲಿ ಅಮೂಲಾಗ್ರವಾದ ಬದಲಾವಣೆ ತಂದಿವೆ. ಆದರೆ ಇಂದು ಪ್ರಜಾಸತ್ಯಾತ್ಮಕ ನಿರ್ಧಾರಗಳನ್ನು ಬಲಪಡಿಸುವಂಥ ಚಳುವಳಿಗಳು ಕ್ಷೀಣಿಸುತ್ತಿದೆ. ಅಧ್ಯಯನ ಶೀಲತೆ ಕಡಿಮೆಯಾಗುತ್ತಿದೆ. ಎಂಬತ್ತನೇ ದಶಕದ ಹೋರಾಟ, ಜೆಪಿ ಅವರ ಸಮಗ್ರ ಕ್ರಾಂತಿ, ನಂಜುಂಡಸ್ವಾಮಿಯವರ ಭಾರತ ಚಳಿವಳಿ, ದಲಿತ ಸಂಘಟನೆಗಳ ಶಾಂತಿಯುವಾದ ಹೋರಾಟಗಳು, ಅನ್ಯಾಯದ ವಿರುದ್ಧದ ಧ್ವನಿ ಕವಲಾಗಿ ಹೊಡೆದುಹೋಗುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

*ಸರ್ವಾಧಿಕಾರ ಎಂದಿಗೂ ಉಳಿಯುವುದಿಲ್ಲ*

ಪ್ರಸ್ತುತ ನಮ್ಮೆಲ್ಲರ ವಾಕ್‌ ಸ್ವಾತಂತ್ರ್ಯಕ್ಕೆ ದಕ್ಕೆ ಒದಗಿದೆ. ಇದರ ಕತ್ತು ಹಿಚುಕಿದರೆ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಲಿದೆ. ವ್ಯಕ್ತಿಪೂಜೆ ಸರ್ವಾಧಿಕಾರಕ್ಕೆ ಪ್ರೇರಣವಾಗಲಿದೆ. ಸರ್ವಾಧಿಕಾರಿಯು ಪ್ರಜಾಪ್ರಭುತ್ವ ನಾಶಮಾಡುತ್ತಾನೆ. ಇದರಿಂದ ದೇಶ ಅವನತಿ ಕಾಣಲಿದೆ. ಅಂತಹ ಕಾಲಗಟ್ಟದಲ್ಲಿ ನಾವು ನಿಂತಿದ್ದೇವೆ. ಈ ದೇಶವು ಅನೇಕ ಹೋರಾಟ ಕಂಡು, ಜೀರ್ಣಿಸಿಕೊಂಡಿದೆ. ಹೀಗಾಗಿ ಬಹಳಷ್ಟು ಕಾಲ ಸರ್ವಾಧಿಕಾರ ಉಳಿಯುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ, ಪ್ರೊ.ಕಾಂಚಾಲಯ್ಯ, ಸುಕನ್ಯ ಕಮರಳ್ಳಿ, ಚಿಂತಕ ಬಸವರಾಜು, ಸವಿತಾ ಮಲ್ಲೇಶ್, ರಂಗಕರ್ಮಿ ಜನ್ನಿ, ಉಗ್ರನರಸಿಂಹಗೌಡ, ಸಾಹಿತಿ ನಾ.ದಿವಾಕರ, ಪ್ರೊ.ಕಾಳಚನ್ನೇಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Special

ಕರ್ನಾಟಕದಲ್ಲಿ 2.93 ಲಕ್ಷ ಹೊಸ BPL ಕಾರ್ಡ್ ಬಿಡುಗಡೆ : ನಿಮ್ಮ ಹೆಸರು ಹೊಸ ಪಟ್ಟಿಯಲ್ಲಿ ಇದೆಯೇ?

Published

on

ಕರ್ನಾಟಕ ಸರ್ಕಾರದಿಂದ ಬಡ ಕುಟುಂಬಗಳ ಸಹಾಯಕ್ಕಾಗಿ ಹೊಸ BPL (Below Poverty Line) ಕಾರ್ಡ್ ವಿತರಣೆ ಕಾರ್ಯ ನಡೆದಿದೆ. ರಾಜ್ಯದಾದ್ಯಂತ ಸುಮಾರು 2.93 ಲಕ್ಷ ಹೊಸ BPL ಕಾರ್ಡ್‌ಗಳು ಮಂಜೂರಾಗಿದ್ದು, ಅರ್ಜಿ ಸಲ್ಲಿಸಿದ ಕುಟುಂಬಗಳು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಈಗಲೇ ಪರಿಶೀಲಿಸಬಹುದು.

ಹೊಸ BPL ಕಾರ್ಡ್ ಪಡೆಯಲು ಅರ್ಹರು:
•ಆರ್ಥಿಕವಾಗಿ ದುರ್ಬಲ ಮತ್ತು ಬಡ ಕುಟುಂಬಗಳು
•ಆದಾಯ ಮಿತಿ ಸರ್ಕಾರ ನಿಗದಿಪಡಿಸಿರುವ ಮಾನದಂಡಕ್ಕೆ ಒಳಪಡುವವರು
•ಹಿಂದಿನಿಂದಲೂ BPL ಕಾರ್ಡ್ ಸಲ್ಲಿಸಿದರೂ ಮಂಜೂರಾಗದ ಕುಟುಂಬಗಳು
•ಪರಿಶೀಲನಾ ಹಂತದಲ್ಲಿ ತಪ್ಪಾಗಿ APL ಪಟ್ಟಿಗೆ ಸೇರಿಸಲ್ಪಟ್ಟ ಕುಟುಂಬಗಳು

ಪಟ್ಟಿ ಪರಿಶೀಲನೆ ಮಾಡುವುದು ಹೇಗೆ?
•ಅಧಿಕೃತ ಸಾರ್ವಜನಿಕ ಪೋರ್ಟಲ್‌ಗೆ ಭೇಟಿ ನೀಡಿ ನಿಮ್ಮ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಆಯ್ಕೆ ಮಾಡಿ
•ಕುಟುಂಬದ ಮುಖ್ಯಸ್ಥರ ಹೆಸರು ಅಥವಾ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ
•‘Search’ ಒತ್ತಿದರೆ ಪಟ್ಟಿಯಲ್ಲಿ ನಿಮ್ಮ ವಿವರಗಳು ಕಾಣಿಸುತ್ತವೆ

ಈ ಹೊಸ ಹಂತದ ಮಹತ್ವ:
ಮುನ್ನಡೆಯ ವರ್ಷಗಳಲ್ಲಿ BPL ಕಾರ್ಡ್‌ಗಳ ಸಂಖ್ಯೆಯಲ್ಲಿ ಗೊಂದಲ, ಅನರ್ಹರ ಸೇರ್ಪಡೆ, ಅರ್ಹರು ಹೊರಬೀಳುವ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಸಂಪೂರ್ಣ ವಿಮರ್ಶೆ ನಡೆಸಿ ಹೊಸ ವ್ಯವಸ್ಥೆ ತರಲಾಗಿದೆ.

BPL ಕಾರ್ಡ್ ಪಡೆಯುವ ಪ್ರಯೋಜನಗಳು:
•ಅನ್ನಭಾಗ್ಯ ಯೋಜನೆಯಡಿ ಉಚಿತ/ಕಡಿಮೆ ದರದ ಧಾನ್ಯ
•ಸಿಲಿಂಡರ್, ಆರೋಗ್ಯ, ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅನೇಕ ಸರ್ಕಾರಿ ಯೋಜನೆಗಳ ಸೌಲಭ್ಯ
•ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳಿಗೆ ಅರ್ಹತೆ

ಅರ್ಹ ಕುಟುಂಬಗಳು ಯಾವುದೇ ವಿಳಂಬವಿಲ್ಲದೆ ಪಡಿತರ ಮತ್ತು ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಬಹುದು.ಕರ್ನಾಟಕದ 2.93 ಲಕ್ಷ ಹೊಸ BPL ಕಾರ್ಡ್ ವಿತರಣೆಯು ಹಲವು ಬಡ ಕುಟುಂಬಗಳಿಗೆ ನಿಜವಾದ ಆಶಾಕಿರಣ.

Continue Reading

State

ನಾಳೆ KSCA ಚುನಾವಣಾ ಮತದಾನ: ವೆಂಕಟೇಶ್‌ ಪ್ರಸಾದ್ v/s ಬ್ರಿಜೇಶ್ ಪಟೇಲ್ ಬಣಗಳ ಮಧ್ಯೆ ಜಿದ್ದಾಜಿದ್ದಿ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್  ಚುನಾವಣಾ ಮತದಾನ ನಾಳೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬಣ ಮ ಬ್ರಿಜೇಶ್ ಪಟೇಲ್  ಬಣಗಳ ಮಧ್ಯೆ  ಭಾರೀ ಹಣಾಹಣಿ ನಡೆದಿದೆ.
ಚುನಾವಣೆಯನ್ನು ಸುತ್ತುವರಿದ ವಿವಾದಗಳ ನಡುವೆ ಇಂದು ಪ್ರಸಾದ್ ಬಣವೂ ಕೆಎಸ್‌ಸಿಎ ಸದಸ್ಯರೊಂದಿಗೆ ಸಂವಾದ ನಡೆಸಿತು.

ಪ್ಯಾಲೇಸ್ ಮೈದಾನದಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಪಾಲ್ಗೊಂಡಿದ್ದರು. ಟೀಂ ಗೇಮ್ ಚೇಂಜರ್ಸ್ ಪರವಾಗಿ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬ್ರಿಜೇಶ್ ಬಣದ ಆಡಳಿತದ ವೈಫಲ್ಯಗಳನ್ನು ಪ್ರಸಾದ್ ಬಣವು ಪಿಪಿಟಿ ಮೂಲಕ ಸದಸ್ಯರಿಗೆ ವಿವರಣೆ ನೀಡಿತ್ತು.

ಸಂವಾದದ ನಂತರ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರಸ್ತುತ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೆಂಕಟೇಶ್ ಪ್ರಸಾದ್ ತಂಡ ಗೆಲ್ಲಲೇಬೇಕು. ರಾಜ್ಯದಲ್ಲಿ ಕ್ರಿಕೆಟ್ ಉದ್ಧಾರ ಆಗಬೇಕಾದರೆ ಬದಲಾವಣೆ ಅನಿವಾರ್ಯ. ನಾವು ಅಧಿಕಾರದಲ್ಲಿದ್ದಾಗ ಎರಡು ಹೆಜ್ಜೆ ಮುಂದೆ ಇಟ್ಟಿದ್ದೇವೆ. ಈಗ 10 ಹೆಜ್ಜೆ ಹಿಂದೆ ಹೋಗಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಫ್ರಾಸ್ಟ್ರಕ್ಚರ್ ಬದಲಾಗಬೇಕು. ಪ್ರಸಾದ್ ತಂಡ ಇದನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ. ಕೆಎಸ್‌ಸಿಎನಲ್ಲಿ ದುಡ್ಡಿಗೆ ಕೊರತೆಯಿಲ್ಲ. ಆದರೆ ಕ್ರಿಕೆಟ್ ಬೆಳವಣಿಗೆ ಆಗಬೇಕು. ಮತ ಕೇವಲ ಕ್ಲಬ್‌ಗೆ ಅಲ್ಲ. ಕ್ರಿಕೆಟ್ ಕನಸು ಕಟ್ಟಿಕೊಂಡಿರುವ ಮಕ್ಕಳಿಗಾಗಿ ಎಂದು ಹೇಳಿದರು.

ಇನ್ನೂ ನಾಳೆ ನಿರ್ಣಾಯಕ ದಿನವಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ಆರಂಭವಾಗಲಿದೆ. ಅಲ್ಲದೇ ನಾಳೆಯೇ ಕೆಎಸ್‌ಸಿಎ ಹೊಸ ಆಡಳಿತ ನಿರ್ಧಾರವಾಗಲಿದ್ದು, ಪ್ರಸಾದ್-ಬ್ರಿಜೇಶ್ ಬಣಗಳ ನಡುವೆ ಕಠಿಣ ಪೈಪೋಟಿ ಎದುರಾಗಲಿದೆ.

Continue Reading

State

ಡಿವೈಡರ್‌ಗೆ ಕಾರ್‌ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Published

on

ಧಾರವಾಡ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹೊತ್ತಿ ಉರಿದ ಕಾರಿನಿಂದ ಹೊರಬರಲು ಸಾಧ್ಯವಾಗದೇ ಇನ್ಸ್‌ಪೆಕ್ಟರ್ ಕೂಡ ಅದರ ಒಳಗೆ ಸಜೀವವಾಗಿ ದಹನವಾಗಿದ್ದಾರೆ.

ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ.

ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

Trending

error: Content is protected !!