Connect with us

Hassan

ವಿದ್ಯಾರ್ಥಿಗಳಲ್ಲಿ ಶಿಸ್ತಿನ ಮನೋಭಾವ ಬೆಳೆಸುತ್ತದೆ ಸಿ.ಎಂ. ಮಹಾಲಿಂಗಯ್ಯ

Published

on

ಹಾಸನ: ಮಕ್ಕಳಲ್ಲಿ ಶಿಸ್ತಿನ ಮನೋಭಾವ ಬೆಳೆಸಲು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜದ ಮಹತ್ವವನ್ನು ತಿಳಿಸುವ ಮೂಲಕ ಭಾರತ್ ಸೇವಾದಳ ಉತ್ತಮವಾದ ಕೆಲಸ ನಿರ್ವಹಿಸುತ್ತಾ ಬರುತ್ತಿದೆ ಎಂದು ಪದವಿ ಪೂರ್ವ ಕಾಲೇಜು ಉಪನಿರ್ದೇಶಕರಾದ ಸಿ.ಎಂ. ಮಹಾಲಿಂಗಯ್ಯ ತಿಳಿಸಿದರು.

ನಗರದ ಎನ್.ಆರ್. ವೃತ್ತದ ಬಳಿ ಇರುವ ಸಂತ ಫಿಲೋಮಿನಾ ಕಾಲೇಜು ಸಭಾಂಗಣದಲ್ಲಿ ಭಾರತ ಸೇವಾದಳ ಮತ್ತು ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ಸೇವಾದಳ ಮಾಹಿತಿ ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಭಾರತ ಸೇವಾದಳದ ಚಟುವಟಿಕೆಗಳು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು, ಕಾಲೇಜುಗಳಲ್ಲಿ ತಮ್ಮದೇ ಆದ ಸೇವೆ ಸಲ್ಲಿಸುತ್ತಾ ಕಾನೂನು ಜಾಗೃತಿ ಆರೋಗ್ಯ ಅರಿವು ಕಾರ್ಯಕ್ರಮಗಳು ಮತ್ತು ಸಸಿ ನೆಡುವ ಕಾರ್ಯಕ್ರಮಗಳು ರಾಷ್ಟ್ರಗೀತೆ ರಾಷ್ಟ್ರಧ್ವಜ ಮಾಹಿತಿ ಕಾರ್ಯಗಾರವನ್ನು ಅತ್ಯುತ್ತಮವಾಗಿ ನಡೆಸುತ್ತಾ ಬರುತ್ತಿದೆ ಹಾಗೂ ಇಲಾಖೆಯೊಂದಿಗೆ ಉತ್ತಮವಾದ ಸಹಕಾರ ನೀಡುತ್ತಿದ್ದಾರೆ ಎಂದು ಸೇವಾದಳದ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಭಾರತ ಸೇವಾದಳದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧ್ಯಕ್ಷರು ಎಮ್.ಕೆ. ಕಮಲ್ ಕುಮಾರ್ ರವರು ಮಾತನಾಡಿ, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶಾಲಾ-ಕಾಲೇಜುಗಳಲ್ಲಿ ಘಟಕಗಳನ್ನು ನಡೆಸುತ್ತಿದ್ದು, ಮಕ್ಕಳಲ್ಲಿ ಉತ್ತಮವಾದ ಸಂಸ್ಕೃತಿ, ಸಂಸ್ಕಾರ ಕಲಿಸುವ ನಿಟ್ಟಿನಲ್ಲಿ ರಾಷ್ಟ್ರ ಅಭಿಮಾನವನ್ನ ಮೂಡಿಸುವ ಸಲುವಾಗಿ ಶಾಲಾ ಮಕ್ಕಳಲ್ಲಿ ಶಿಸ್ತು ಸಂಯಮ ಸಮಯ ಪ್ರಜ್ಞೆಯನ್ನು ಬೆಳೆಸಲು ಮಕ್ಕಳಿಗೆ ಸೇವಾದಳದ ತತ್ವಗಳನ್ನು ನೀಡಲಾಗುತ್ತಿದೆ ಎಂದರು. ವಿಶೇಷವಾಗಿ ಉಪನಿರ್ದೇಶಕರಾದ ಸಿ.ಎಂ. ಮಹಾಲಿಂಗಯ್ಯ ರವರು ಭಾರತ ಸೇವಾದಳದ ಚಟುವಟಿಕೆಗಳಿಗೆ ಅತ್ಯುತ್ತಮವಾದ ಸಹಕಾರವನ್ನು ನೀಡುತ್ತಿದ್ದಾರೆ ಎಂದು ವಿಶೇಷ ಅಭಿನಂದನೆಯನ್ನು ಸಲ್ಲಿಸುವುದಾಗಿ ಹೇಳಿದರು.

. ವಲಯ ಸಂಘಟಕರಾದ ವಿ.ಎಸ್. ರಾಣಿ ಕಾರ್ಯಕ್ರಮದ ಉದ್ದೇಶ ಕಾಲೇಜುಗಳಲ್ಲಿ ಸೇವಾದಳದ ಘಟಕಗಳ ನಿರ್ವಹಣೆ ಮತ್ತಿತರ ಮಾಹಿತಿಯನ್ನು ನೀಡಿದರು. ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ್ ಬಿ. ಎನ್. ರವರು ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಮಾಹಿತಿಯನ್ನು ನೀಡಿದರು. ಮತ್ತು ಎಲ್ಲರಿಗೂ ಸ್ವಾಗತವನ್ನು ಹೆಚ್. ಮಹೇಶ್ ರವರು ಗಾಂಧಿ ಟೋಪಿಯನ್ನು ಮತ್ತು ಗುಲಾಬಿ ಹೂ ನೀಡುವ ಮೂಲಕ ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಸುರೇಂದ್ರ ಕುಮಾರ್ ರವರು ಮತ್ತು ಕಾರ್ಯದರ್ಶಿಗಳಾದ ಟಿ.ಎಸ್. ಕುಮಾರಸ್ವಾಮಿ ರವರು ಹಾಗೂ ಖಜಾಂಚಿಗಳಾದ ಡಿ.ಕೆ. ಕುಮಾರಯ್ಯ, ನಿರ್ದೇಶಕರಾದ ಬಿ.ಆರ್. ದೇವರಾಜ್ ಮತ್ತು ಹಿರಿಯ ಸದಸ್ಯರಾದ ಗಣಪತಿ ಮತ್ತು ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾದ ಶೋಭ ಹಾಗೂ

ಸಂತ ಫಿಲೋಮಿನಾ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಜಸಿಂತಾ ಕೊರಿಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾರತ ಸೇವಾ ದಳದ ಕಾಲೇಜು ಶಾಖಾ ನಾಯಕರಾದ ಐಚನಹಳ್ಳಿ ಕೃಷ್ಣಪ್ಪ ಕಾರ್ಯಕ್ರಮ ನೆರವೇರಿಸಿದರು. ಮತ್ತು ಜಿಲ್ಲೆಯ ಸುಮಾರು ೧೭೦ ಕ್ಕೂ ಹೆಚ್ಚು ಕಾಲೇಜಿನ ಪ್ರಾಂಶುಪಾಲರುಗಳು ಹಾಗೂ ಉಪ ನಿರ್ದೇಶಕರ ಕಚೇರಿಯ ಅಧಿಕಾರಿ ವೃಂದದವರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಇದೇ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಜ್ವರದ ಕಾಯಿಲೆ ಮತ್ತು ಆರೋಗ್ಯ ಮಾಹಿತಿಯನ್ನು ಸಹ ಆರೋಗ್ಯ ಇಲಾಖೆಯಿಂದ ನೀಡಲಾಯಿತು. ಮತ್ತು ಭಾರತ ಸೇವಾದಳದ ಗ್ರಂಥಾಲಯಕ್ಕೆ ಭಾರತ ಸೇವಾ ದಳದ ಸಾಹಿತ್ಯದ ಪುಸ್ತಕಗಳನ್ನು ಪ್ರತಿ ಕಾಲೇಜು ನೀಡಲಾಯಿತು. ನಂತರ ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಮುಗಿಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Hassan

ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ

Published

on

ಹಾಸನ: ನಗರದ ಪ್ರತಿಷ್ಠಿತ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿರುವ ಡಾ.ಎಸ್.ಎ.ನಿತಿನ್ ಅವರು ಈ ಬಾರಿಯ ಜಿಲ್ಲಾಡಳಿತದ ಗಣರಾಜ್ಯೋತ್ಸವದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾಡಳಿತ ಅಭಿನಂದಿಸುತ್ತಿದ್ದು, ಈ ಸಲ ವೈದ್ಯಕೀಯ ಕ್ಷೇತ್ರದಿಂದ ಡಾ.ನಿತಿನ್ ಅವರನ್ನು ಆಯ್ಮೆ ಮಾಡಲಾಗಿದೆ. 2001 ರಿಂದ ಆಯುರ್ವೇದ ವೈದ್ಯರಾಗಿ ಜಿಲ್ಲೆಯಲ್ಲಿ ವೃತ್ತಿ ಆರಂಭಿಸಿದ ಇವರು, 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
ಹಾಸನದ ಪ್ರತಿಷ್ಠಿತ ರಾಜೀವ್ ಶಿಕ್ಷಣ ವಿದ್ಯಾಸಂಸ್ಥೆಯಲ್ಲಿ ವೈದ್ಯರಾಗಿ, ಶೈಕ್ಷಣಿಕ ಸಲಹೆಗಾರರಾಗಿ, ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2018 ರಿಂದ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2024 ರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸದಸ್ಯರಾಗಿದ್ದಾರೆ.
2017 ರಲ್ಲಿ ರಾಷ್ಟ್ರೀಯ ಜೈನ್ ಯುವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜರಾಗಿದ್ದಾರೆ,
ವೈದ್ಯ ಸೇವೆ ಜೊತೆಗೆ ಜನಪರ ಕೆಲಸ ಕಾರ್ಯವನ್ನೂ ಮಾಡುತ್ತಿದ್ದಾರೆ. ವಿಶೇಷವಾಗಿ ರೋಗಿಗಳ ಔಷಧ ಚೀಟಿಯನ್ನೂ ಕನ್ನಡದಲ್ಲೇ ಬರೆಯುತ್ತಿರುವುದು ಇವರ ಕನ್ನಡ ಪ್ರೀತಿಗೆ ಹಿಡಿದ ಕನ್ನಡಿ.
ಜಿಲ್ಲೆ ಹಾಗೂ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ, ವಿವಿಧ ರೋಗ-ರುಜಿನಗಳ ಬಗ್ಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಲೇಖನ ಬರೆದು ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಈ ರೀತಿಯ 250ಕ್ಕೂ ಹೆಚ್ಚು ಲೇಖನ ಬರೆದಿದ್ದಾರೆ. ಅಲ್ಲದೆ ಈಗಿನ ಸಂದರ್ಭಕ್ಕೆ ಆಯುರ್ವೇದ ಮಹತ್ವದ ಬಗ್ಗೆಯೂ ಹತ್ತಾರು ಲೇಖನ ಬರೆದು ವೈದ್ಯಕೀಯ ಸೇವೆ ಜೊತೆಗೆ ಸಾಮಾಜಿಕ ಅರಿವು, ಜಾಗೃತಿ ಕೆಲಸವನ್ನೂ ಮಾಡುತ್ತಿರುವ ಅಪರೂಪದ ವೈದ್ಯರು. ಜೊತೆಗೆ 200ಕ್ಕೂ ಹೆಚ್ಚು ಹನಿಗವನ, 100ಕ್ಕೂ ಹೆಚ್ಚು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, 100ಕ್ಕೂ ಹೆಚ್ಚು ಆರೋಗ್ಯ ಮಾಹಿತಿ ಕುರಿತು ಉಪನ್ಯಾಸ, 70ಕ್ಕೂ ಹೆಚ್ಚು ಆರೋಗ್ಯ ಶಿಬಿರ ಮಾಡಿದ್ದಾರೆ. ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನರಾಗಿರುವುದಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಹಿರಿಯ ಪತ್ರಕರ್ತ ಶ್ರವಣಬೆಳಗೊಳದ ಎಸ್.ಎನ್.ಅಶೋಕ್ ಕುಮಾರ್-ಜಿ.ಪಿ.ಶ್ಯಾಮಲಾದೇವಿ ಅವರ ಸುಪುತ್ರರಾದ ನಿತಿನ್ ಅವರು, ಪ್ರಾಥಮಿಕ ಶಿಕ್ಷಣವನ್ನೇ ಶ್ರವಣಬೆಳಗೊಳದಲ್ಲೇ ಮುಗಿಸಿ ಪ್ರೌಢಶಿಕ್ಷಣವನ್ನು ಮಾವಿನಕೆರೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಡೆದರು. ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬಿಎಎಂಎಸ್, ಎಂಡಿ ಪಡೆದರು. ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಪಿಹೆಚ್ಡಿ ಪಡೆದರು.

Continue Reading

Hassan

ಅರೇಳ್ಳಿ: ಜ.26 ರಂದು 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಣೆ

Published

on

ಹಾಸನ: ಸಂವಿಧಾನ ದಿನಾಚರಣೆ ಅಂಗವಾಗಿ ಜನವರಿ 26ರ ರಂದು ಬೇಲೂರು ತಾಲೂಕಿನ ಅರೇಳ್ಳಿಯಲ್ಲಿ 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡರಾದ ಅರೆಹಳ್ಳಿ ನಿಂಗರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಭೀಮ ಕೋರೆಂಗಾವ್ ಯುದ್ಧ ದಲಿತರ ಸ್ವಾಭಿಮಾನದ ಪ್ರತೀಕವಾಗಿದೆ ಕೇವಲ ೫೦೦ ಜನ ಮಹರ್ ಸೈನಿಕರು ೨೮,೦೦೦ ಪೇಶ್ವೆ ಸೈನಿಕರನ್ನು ಬಗ್ಗುಬಡಿದ ವಿಜಯದ ದಿನವೇ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಪ್ರತಿ ವರ್ಷವೂ ಹರೇಹಳ್ಳಿಯಲ್ಲಿ ಆಚರಿಸಲಾಗುತ್ತಿದ್ದು ಅದೇ ರೀತಿ ಈ ವರ್ಷವೂ ವಿಜೃಂಭಣೆಯ ಉತ್ಸವ ನಡೆಯಲಿದೆ ಎಂದರು. ಜನವರಿ ೨೬ ರಂದು ಬೆಳಗ್ಗೆ ೧೧ ಗಂಟೆಗೆ ಅಂಬೇಡ್ಕರ್ ವೃತ್ತದ ಬಳಿ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೊರಡಲಿರುವ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಅನುಯಾಯಿಗಳು ಭಾಗವಹಿಸಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದ್ದು, ಅಂಬೇಡ್ಕರ್ ಭಾವಚಿತ್ರ ಹಾಗೂ ವಿಜಯ ಸ್ತಂಭದ ಮೆರವಣಿಗೆ ನಡೆಯಲಿದೆ ಎಂದರು.

ಅದೇ ದಿನ ಸಂಜೆ ೬ ಸುಮಾರಿಗೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮಕ್ಕೆ, ಬಾಬಾಸಾಹೇಬ್ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್, ಅಂಬೇಡ್ಕರ್ ಅನುಯಾಯಿ ಹಾಗೂ ನಟ ಚೇತನ್ ಅಹಿಂಸಾ, ಹಾಸ್ಯನಟ ಸಾಧುಕೋಕಿಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ಭೀಮ ಕೋರೆಗಾಂವ್ ವಿಜಯೋತ್ಸವ ವಿಚಾರಗಳನ್ನು ಹಂಚಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಊಟ ಹಾಗೂ ಉಪಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು, ಸಾರ್ವಜನಿಕರು, ಅರೆಹಳ್ಳಿ ಗ್ರಾಮಸ್ಥರು ಹಾಗೂ ಆ ಭಾಗದ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯೋತ್ಸವ ಸಮಿತಿಯ ಅಧ್ಯಕ್ಷ ಎಸ್. ವಿರೂಪಾಕ್ಷ, ಲಿಂಗರಾಜು, ವಿಜಯೋತ್ಸವ ಸಮಿತಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ್, ರಮೇಶ್, ಸಿದರಾಜು, ದಿನೇಶ್, ಸೋಮಶೇಖರ್ ಕುಮಾರ್ ಇತರರು ಉಪಸ್ಥಿತರಿದ್ದರು.

Continue Reading

Hassan

ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ

Published

on

ಹಾಸನ: ನಗರದ ಡೈರಿ ವೃತ್ತ, ಅರಸೀಕೆರೆ ರಸ್ತೆ ಬಳಿ ಕೈಗಾರಿಕ ಪ್ರದೇಶದಲ್ಲಿ ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ ಸಮಾರಂಭಕ್ಕೆ ಶುಕ್ರವಾರದಂದು ಗುದ್ದಲಿ ಪೂಜೆ ಸಲ್ಲಿಸಿ ಕಟ್ಟಡ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡರು ಚಾಲನೆ ನೀಡಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿ, ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡ ಮಾತನಾಡಿ, ಎರಡನೇ ಅಂತಸ್ಥಿತನ ನೂತನ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿದೆ. ಈ ಕಟ್ಟಡ ಸಂಘಕ್ಕೆ ಉಪಯೋಗವಾಗಲಿ ಎಂದು ಶುಭ ಹಾರೈಸುವುದಾಗಿ ಹೇಳಿದರು.

ಎಫ್.ಕೆ.ಸಿ.ಸಿ.ಐ. ಐಟಿ-ಬಿಟಿ ಸಮಿತಿ ಅಧ್ಯಕ್ಷ ಹೆಚ್.ಎ. ಕಿರಣ್ ಮಾತನಾಡಿ, ಸಂಘದ ಎರಡನೇ ಹಂತದ ಶಿಲನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಕಳೆದ ಎರಡು ದಶಕಗಳಿಂದ ನಮ್ಮ ಸಂಘದ ಕಾರ್ಯಕ್ರಮಗಳು ಹಾಗೂ ಕಾರ್ಯವ್ಯಾಪ್ತಿ ಜಿಲ್ಲಾಧ್ಯಂತ ಹರಡಿದೆ. ಎರಡು ಸಾವಿರ ಜನ ಇದ್ದಂತಹ ಉದ್ಯಮಿಗಳು ಜಿಲ್ಲಾಧ್ಯಂತ ಈಗ ೨೦ ಸಾವಿರಕ್ಕೂ ಹೆಚ್ಚುಜನ ಉದ್ಯಮಿಗಳು ಇದ್ದಾರೆ. ಈ ಭಾಗವು ಕೂಡ ನಗರಸಭೆ ವ್ಯಾಪ್ತಿಗೆ ಸೇರಿದ್ದು, ಇ-ಖಾತೆ ವಿಚಾರವಾಗಿಯೂ ಕೂಡ ನಗರಸಭೆ ಅಧ್ಯಕ್ಷರು ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದರು.

ನಿರ್ಮಾಣವಾಗುತ್ತಿರುವ ಎರಡನೇ ಅಂತಸ್ಥಿನ ಕಟ್ಟಡವು ಕೈಗಾರಿಕ ಉದ್ಯಮಿಗಳ ಕಾರ್ಯಕ್ರಮಕ್ಕೆ ಮತ್ತು ಇಂಡಸ್ಟ್ರಿಯಲ್ ಕಾರ್ಯಕ್ರಮ ನಡೆಸುವುದಕ್ಕೆ ಒಂದು ಹಾಲ್ ನಿರ್ಮಾಣ ಮಾಡಲಾಗುತ್ತಿದೆ. ಮೊದಲನೇ ಅಂತಸ್ಥನ್ನು ಸ್ಕಿಲ್ ಡೆವಲಪ್ ಮೆಂಟ್ ಗೆ ಈಗಾಗಲೇ ಉದ್ಘಾಟನೆಗೊಂಡಿದೆ. ಉದ್ಯಮಿಗಳ ಹಲವಾರು ಜನರಿಗೆ ಕಾರ್ಯಕ್ರಮವನ್ನು ಸದ್ಯದಲ್ಲೆ ಮಾಡಲಾಗುವುದು ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಹೆಚ್.ಎ.ಡಿ.ಎಸ್.ಎಸ್.ಐ.ಎ. ಅಧ್ಯಕ್ಷ ಆರ್. ಶಿವರಾಮ್, ಉಪಾಧ್ಯಕ್ಷ ಪ್ರಕಾಶ್ ಎಸ್. ಯಾಜಿ, ಪ್ರಧಾನ ಕಾರ್ಯದರ್ಶಿ ಎನ್. ಸುದರ್ಶನ್, ಲಘು ಒದ್ಯೋಗ ಭಾರತೀ ಪ್ರಸನ್ನ ಕುಮಾರ್ ಮತ್ತು ಶಿವಾನಂದ್ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!