Connect with us

National

ಉಪ ರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಿಸಿದ ಬಿಜೆಪಿ

Published

on

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್​​ ಅವರನ್ನು ಎನ್​ಡಿಎ ಅಭ್ಯರ್ಥಿಯಾಗಿ ಬಿಜೆಪಿ ಅಧಿಕೃತವಾಗಿ ಘೋಷಿಸಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನಾಗಿ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಿದರು.

ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್​ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಇದೇ ಸೆಪ್ಟೆಂಬರ್​ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿಂದೆ ಉಪರಾಷ್ಟ್ರಪತಿಯಾಗಿದ್ದ ಜಗದೀಪ್​ ಧನ್ಕರ್​ ಅವರು ಜುಲೈ 21 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜಗದೀಪ್​ ಧನ್ಕರ್​ ಅವರು ಅನಾರೋಗ್ಯದ ಕಾರಣ ಹೇಳಿ, ಜು. 21 ರಂದು ಪದತ್ಯಾಗ ಮಾಡಿದ್ದರು.

 ಸಿ.ಪಿ.ರಾಧಾಕೃಷ್ಣನ್ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು

ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ (ಸಿ.ಪಿ.ರಾಧಾಕೃಷ್ಣನ್) ಅವರು ತಮಿಳುನಾಡಿನ ತಿರುಪ್ಪೂರಿನಲ್ಲಿ ಅಕ್ಟೋಬರ್​ 20, 1957 ರಂದು ಜನಿಸಿದರು. ಸಿಪಿ ರಾಧಾಕೃಷ್ಣನ್ ಅವರು 16ನೇ ವಯಸ್ಸಿನಿಂದಲೇ ಆರ್‌ಎಸ್‌ಎಸ್ ಮತ್ತು ಜನಸಂಘದಂತಹ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಅಲ್ಲದೇ ರಾಧಾಕೃಷ್ಣನ್​ ಅವರು ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದರು.

1998 ಮತ್ತು 1999 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಬಿಜೆಪಿಯಿಂದ ಕಣಕ್ಕೆ ಇಳಿದರು. 1998 ರ ಚುನಾವಣೆಯಲ್ಲಿ 150,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮತ್ತು 1999 ರ ಚುನಾವಣೆಯಲ್ಲಿ 55,000 ಮತಗಳ ಅಂತರದಿಂದ ಗೆದ್ದರು.  ಸಿಪಿ ರಾಧಾಕೃಷ್ಣನ್​ ಅವರು 2024ರಿಂದ ಮಹಾರಾಷ್ಟ್ರದ 24ನೇ ರಾಜ್ಯಪಾಲರಾಗಿದ್ದಾರೆ. 2003 ರಿಂದ 2006ರವರೆಗೆ ತಮಿಳುನಾಡಿನ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರು ಸಹ ಆಗಿದ್ದರು.

Continue Reading

National

ಸಂಸತ್‌ನಲ್ಲಿ ವಂದೇ ಮಾತರಂ ಚರ್ಚೆ: ಪಿಎಂ ಮೋದಿಗೆ ತಿರುಗೇಟು ನೀಡಿದ ಪ್ರಿಯಾಂಕಾ ಗಾಂಧಿ

Published

on

ನವದೆಹಲಿ: ದೇಶವು ಇಂದು ನಿರುದ್ಯೋಗ, ಬಡತನ, ಹಣದುಬ್ಬರ, ಮಾಲಿನ್ಯ, ರೈತರ ಬಿಕ್ಕಟ್ಟು ಸೇರಿ ನೂರಾರು ಸಮಸ್ಯೆಗಳಿಂದ ಬಳಲುತ್ತಿದೆ. ಈ ವೇಳೆ  ವಂದೇ ಮಾತರಂ ಗೀತೆಯ ಬಗ್ಗೆ ಸಂಸತ್ತಿನಲ್ಲಿ  ಚರ್ಚಿಸುವ ಅಗತ್ಯವಿತ್ತೇ? ಎಂದು ಪ್ರಶ್ನಿಸಿರುವ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಇಂದು ಚರ್ಚೆ ಆರಂಭಿಸಿದ ಮೋದಿ, ವಂದೇ ಮಾತರಂ ವಿರುದ್ಧ ಜಿನ್ನಾ ನಡೆಸಿದ ಪ್ರತಿಭಟನೆಯನ್ನು ನೆಹರು  ಬೆಂಬಲಿಸಿದರು. ಕೊನೆಗೆ ಕಾಂಗ್ರೆಸ್ ಮುಸ್ಲಿಂ ಲೀಗ್‌ಗೆ ತಲೆಬಾಗಿ ತುಂಡು ಮಾಡಿದರು ಎಂದು ವಾಗ್ದಾಳಿ ನಡೆಸಿದ್ದರು.

ಸಂಸತ್ತಿನಲ್ಲಿ ವಂದೇ ಮಾತರಂ ಚರ್ಚೆ ಅಗತ್ಯವಿತ್ತೇ?

ದೇಶದ ಪ್ರತಿಯೊಂದು ಭಾಗದಲ್ಲೂ ಈ ಗೀತೆ ಜೀವಂತವಾಗಿದೆ. ಬಿಜೆಪಿ ಸರ್ಕಾರ ಯಾವಾಗಲೂ ವರ್ತಮಾನ ಮತ್ತು ಭವಿಷ್ಯವನ್ನ ನೋಡಲು ಬಯಸುವುದಿಲ್ಲ ಹಿಂದಿನದ್ದನ್ನೇ ಕೆದಕುತ್ತದೆ. ಸದ್ಯ ಬಂಗಾಳ ಚುನಾವಣೆ ಸಮೀಪಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ಮಾಡುತ್ತಾ ಭಾವನೆ ಕೆರಳಿಸುತ್ತಿದೆ ಎಂದು ಕಿಡಿಕಾರಿದರು.

ನಮ್ಮ ಸಂಸತ್ತು ರಾಷ್ಟ್ರಗೀತೆಯ ಬಗ್ಗೆ ಚರ್ಚಿಸುತ್ತಿದ್ದು, ಇದು ಭಾವನೆಗಳನ್ನು ಆಧರಿಸಿದೆ. ವಂದೇ ಮಾತರಂ ಉಲ್ಲೇಖಿಸಿದಾಗ ಈ ಭಾವನೆ ಚಿಮ್ಮುತ್ತದೆ. ವಂದೇ ಮಾತರಂ ಗೀತೆಯು ನಮಗೆ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುತ್ತದೆ. ಬ್ರಿಟಿಷ್ ಸಾಮ್ರಾಜ್ಯ ಸಹ ಅದರ ಮುಂದೆ ತಲೆಬಾಗಿತ್ತು. ಏಕೆಂದರೆ 150 ವರ್ಷಗಳಿಂದ ಈ ಗೀತೆ ದೇಶದ ಜನರ ಹೃದಯದಲ್ಲಿ ನೆಲೆಸಿದೆ. ಆದರೆ ಈಗ ಏಕೆ ಇದರ ಬಗ್ಗೆ ಚರ್ಚೆಯಾಗುತ್ತಿದೆ? ಇದರ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.

ಈ ಸರ್ಕಾರ ವರ್ತಮಾನ, ಭವಿಷ್ಯ ನೋಡಲು ಬಯಸುತ್ತಿಲ್ಲ. ಬರೀ ಹಿಂದಿನದ್ದೇ ಕೆದಕಿಕೊಂಡು ಕುಳಿತಿದೆ. ಮೋದಿ ಅವರು ಮೂರು ಬಾರಿ ಪ್ರಧಾನಿ ಆಗಿದ್ದಾಗಲೂ ಅವರ ನೀತಿಗಳು ದೇಶವನ್ನ ದುರ್ಬಲಗೊಳಿಸುತ್ತಲೇ ಇವೆ. ದೇಶವು ಸದ್ಯ ಹಣದುಬ್ಬರ, ನಿರುದ್ಯೋಗ, ರೈತರ ಬಿಕ್ಕಟ್ಟು ಇನ್ನೂ ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ. ಅಧಿಕಾರದಲ್ಲಿ ಇರುವವರೂ ಇದನ್ನ ಒಪ್ಪುತ್ತಿದ್ದಾರೆ. ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ಆಗುತ್ತಲೇ ಇದೆ. ಆದರೆ ಅದ್ಯಾವುದಕ್ಕೂ ಪರಿಹಾರ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

National

ಕಾಂಗ್ರೆಸ್‌ ಮುಸ್ಲಿಮರ ತುಷ್ಟೀಕರಣಕ್ಕಾಗಿ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು: ಪಿಎಂ ಮೋದಿ

Published

on

ನವದೆಹಲಿ:  ಕಾಂಗ್ರೆಸ್‌,  ಮುಸ್ಲಿಮರ ತುಷ್ಟೀಕರಣಕ್ಕಾಗಿ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಇಂದು ಚರ್ಚೆ ಆರಂಭಿಸಿದ ಮೋದಿ, ವಂದೇ ಮಾತರಂ ವಿರುದ್ಧ ಜಿನ್ನಾ ನಡೆಸಿದ ಪ್ರತಿಭಟನೆಯನ್ನು ನೆಹರು ಬೆಂಬಲಿಸಿದರು. ಕೊನೆಗೆ ಕಾಂಗ್ರೆಸ್ ಮುಸ್ಲಿಂ ಲೀಗ್‌ಗೆ ತಲೆಬಾಗಿ ತುಂಡು ಮಾಡಿದರು ಎಂದು ಕಿಡಿಕಾರಿದ್ದಾರೆ.

ಮೋದಿ ಭಾಷಣದಲ್ಲಿ ಹೇಳಿದ್ದೇನು?

ವಂದೇ ಮಾತರಂ ವಿರುದ್ಧ ಮುಸ್ಲಿಂ ಲೀಗ್  ನೆಹರು ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿತು. ಮೊಹಮ್ಮದ್ ಅಲಿ ಜಿನ್ನಾ ಅದರ ವಿರುದ್ಧ ಘೋಷಣೆಗಳನ್ನು ಕೂಗಿದರು. ಆಗಿನ ಕಾಂಗ್ರೆಸ್ ಮುಖ್ಯಸ್ಥ ಜವಾಹರಲಾಲ್ ನೆಹರು ಜಿನ್ನಾ ಹೇಳಿಕೆಗಳನ್ನು ಖಂಡಿಸಲು ಹೋಗಲಿಲ್ಲ. ವಂದೇ ಮಾತರಂ ಬಗ್ಗೆ ತಮ್ಮ ಮತ್ತು ಪಕ್ಷದ ನಿಷ್ಠೆಯನ್ನು ವ್ಯಕ್ತಪಡಿಸುವ ಬದಲು ಜಿನ್ನಾ ವಿರೋಧಿಸಿದ ಕೇವಲ ಐದು ದಿನಗಳ ನಂತರ ವಂದೇ ಮಾತರಂ ಪರಿಶೀಲಿಸಲು ಪ್ರಾರಂಭಿಸಿದರು.

ಜಿನ್ನಾ ವಂದೇ ಮಾತರಂಗೆ ವಿರೋಧ ವ್ಯಕ್ತಪಡಿಸಿದ ನಂತರ ಪಂಡಿತ್ ಜವಾಹರಲಾಲ್ ನೆಹರು ಅವರು ಸುಭಾಷ್ ಚಂದ್ರ ಬೋಸ್ ಅವರಿಗೆ ಪತ್ರ ಬರೆದು, ವಂದೇ ಮಾತರಂನ ಹಿನ್ನೆಲೆಯನ್ನು ತಾವು ಓದಿರುವುದಾಗಿ ಮತ್ತು ಅದು ಮುಸ್ಲಿಮರನ್ನು ಕೆರಳಿಸಬಹುದು ಮತ್ತು ಕಿರಿಕಿರಿಯಾಗಬಹುದು ಎಂದು ಭಾವಿಸಿರುವುದಾಗಿ ಹೇಳಿದರು. ವಂದೇ ಮಾತರಂ ಪರಿಶೀಲನೆಗೆ ಒಳಪಡಿಸಿದ ನಂತರ ದೇಶದ ದುರ್ಭಾಗ್ಯ ಎಂಬಂತೆ ಕಾಂಗ್ರೆಸ್ ಮುಸ್ಲಿಂ ಲೀಗ್‌ ಒತ್ತಡಕ್ಕೆ ತಲೆಬಾಗಿ ಹಾಡನ್ನು ಕತ್ತರಿಸಿತು. ಕಾಂಗ್ರೆಸ್ ತುಷ್ಟೀಕರಣದ ಒತ್ತಡದಲ್ಲಿ ವಂದೇ ಮಾತರಂ ಅನ್ನು ವಿಭಜಿಸಿತು ಎಂದು ವಾಗ್ದಾಳಿ ನಡೆಸಿದರು.

Continue Reading

National

2023ರ ಚುನಾವಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್‌ ನೀಡಿದ ಸುಪ್ರೀಂ

Published

on

ನವದೆಹಲಿ: ಸಿಎಂ ಸಿದ್ದರಾಮಯ್ಯ 2023ರ ಚುನಾವಣೆಯಲ್ಲಿ ವರುಣಾ (a) ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ  ಅವರಿಗೆ ಸುಪ್ರೀಂ ಕೋರ್ಟ್‌  ನೋಟಿಸ್‌ ನೀಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್‌ ನೀಡಿದೆ. ಕೆ. ಶಂಕರ್ ಎಂಬವರು ಮೇಲ್ಮನವಿ ಸಲ್ಲಿಸಿದ್ದರು. ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಿಸಲಾಗಿತ್ತು.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಯ ಅಡಿಯಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಶಂಕರ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

Continue Reading

Trending

error: Content is protected !!