Connect with us

Location

ಬಿಜೆಪಿಯವರು ಕಾವೇರಿ ಪ್ರತಿಭಟನೆ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Published

on

ಮೈಸೂರು: ಕಾವೇರಿ ನೀರು ವಿವಾದದ (Cauvery Water Dispute) ಕುರಿತು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ಮಾಡಲು ನಮ್ಮದೇನು ತಕರಾರಿಲ್ಲ. ಆದರೆ ರಾಜಕೀಯ ಮಾಡಬಾರದು. ಕಾವೇರಿ ವಿವಾದವನ್ನು ರಾಜಕೀಯಕ್ಕೆ ಹೋಲಿಸುವುದು ರಾಜ್ಯದ ಹಿತದೃಷ್ಟಿಯಲ್ಲಿ ಒಳ್ಳೆಯದಲ್ಲ. ಬಿಜೆಪಿಯವರು (BJP) ಕಾವೇರಿ ಪ್ರತಿಭಟನೆ ರಾಜಕೀಯಕ್ಕಾಗಿ (Politics) ಮಾಡುತ್ತಿದ್ದಾರೆ ಹೊರತು ಜನರ ಹಿತದೃಷ್ಟಿಗಾಗಲಿ, ನಾಡಿನ ಹಿತದೃಷ್ಟಿಗಾಗಲಿ ಮಾಡುತ್ತಿಲ್ಲ ಎಂದರು.

 

ಕರ್ನಾಟಕ ಬಂದ್ (Karnataka Bandh) ಕುರಿತು ಮಾತನಾಡಿದ ಅವರು, ಯಾವುದೇ ಬಂದ್‌ಗಳನ್ನು ಮಾಡಬಾರದು, ಮೆರವಣಿಗೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಆದರೆ ಇದಕ್ಕೆ ನಾವೇನೂ ಅಡ್ಡಿಪಡಿಸಲು ಹೋಗುವುದಿಲ್ಲ ಎಂದು ತಿಳಿಸಿದರು.

ಕಾವೇರಿ ವಿವಾದದ ಕುರಿತು ದೇವೇಗೌಡರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ನಾನು ಅದನ್ನು ಸ್ವಾಗತಿಸುತ್ತೇನೆ. ರಾಜ್ಯಸರ್ಕಾರ ರಾಜ್ಯದ ಹಿತ್ತಾಸಕ್ತಿ ಕಾಪಾಡಲು ಬದ್ಧವಾಗಿದೆ. ನಮಗೆ ಅಧಿಕಾರ ಮುಖ್ಯ ಅಲ್ಲಾ. ರಾಜ್ಯದ ಜನರ ಹಿತ ಮುಖ್ಯ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ವಿರುದ್ಧವಾಗಿದ್ದ ಶಕ್ತಿಗಳು ಈ ಬಾರಿ ಒಂದುಗೂಡಿವೆ. ಬಿಜೆಪಿಯವರು ಕಳೆದ 9 ವರ್ಷಗಳಲ್ಲಿ ಭಾವನಾತ್ಮಕವಾದ ವಿಚಾರಗಳನ್ನು ಮುಂದಿಟ್ಟುಕೊಂಡು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಅದಕ್ಕೋಸ್ಕರ ಈ ಸತ್ಯ ತಿಳಿದ ಮೇಲೆ ಅನೇಕ ಶಕ್ತಿಗಳು ಇಂದು ಬಿಜೆಪಿಯೇತರ ಗುಂಪುಗಳಲ್ಲಿ ಗುರುತಿಸಿಕೊಳ್ಳುತ್ತಿವೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Mysore

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

Published

on

ಸಾಲಿಗ್ರಾಮ  ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ  ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ  ಧರಣಪ್ಪಗೌಡ, ಕರ್ಪೂರವಳ್ಳಿ  ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ   

Continue Reading

Hassan

ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ

Published

on

ಹಾಸನ : ಕಾಡಾನೆ ಸೆರೆ, ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಭಾರೀ ದುರಂತ
ಕಾಡಾನೆ ದಾಳಿಗೆ ಪಳಗಿದ ಆನೆ ಅರ್ಜುನ ಬಲಿ
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಯಸಳೂರು ಬಾಳೆಕೆರೆ ಫಾರೆಸ್ಟ್ ನಲ್ಲಿ ಘಟನೆ
ಅರ್ಜುನ‌ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಇಂದೂ ಕಾರ್ಯಾ ಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ
ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಅರ್ಜುನನ ಮೇಲೆ ಅಟ್ಯಾಕ್ ಮಾಡಿದ ಒಂಟಿ ಸಲಗ
ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆಯೇ ಹಿಮ್ಮೆಟ್ಟಿದ ಉಳಿದ ಮೂರು ಸಾಕಾನೆಗಳು
ಒಂಟಿ ಸಲಗದ ಜೊತೆ ಕಾಳಗಕ್ಕಿಳಿದ ಅರ್ಜುನ


ಮದಗಜಗಳ ಕಾಳಗದಲ್ಲಿ ವೀರ ಮರಣ ಹೊಂದಿದ ಅರ್ಜುನ
ಎರಡು ಸಲಗ ಕಾಳಗಕ್ಕೆ ಇಳಿಯುತ್ತಿದ್ದಂತೆಯೇ ಅರ್ಜುನನ ಮೇಲಿನಿಂದ ಇಳಿದು ಓಡಿದ ಮಾವುತರು
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ
ಅರ್ಜುನ ಆನೆ ಸಾವಿನಿಂದ ಪ್ರಾಣಿಪ್ರಿಯರಿಗೆ ಶಾಕ್
ಹೊಟ್ಟೆ ಭಾಗಕ್ಕೆ ತಿವಿತಕ್ಕೆ ಒಳಗಾಗಿ ಕಣ್ಮುಚ್ಚಿದ ಅರ್ಜುನ
ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಜನಮನಗೆದ್ದಿದ್ದ ಅರ್ಜುನ
ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ


2012 ರಿಂದ 19 ರವರೆಗೆ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅರ್ಜುನ.
ಎಲ್ಲಾ ರೀತಿಯಲ್ಲೂ ಜನರ ಪ್ರೀತಿಗೆ ಪಾತ್ರನಾಗಿದ್ದ ಕ್ಯಾಪ್ಟನ್
ಅರ್ಜುನನ ಹಠಾತ್ ಸಾವು ಕಂಡು ಮಾವುತರು ಕಣ್ಣೀರು
ನ. 24 ರಿಂದ ಆರಂಭವಾಗಿದ್ದ ರೇಡಿಯೋ ಕಾಲರ್ ಅಳವಡಿಕೆ ಹಾಗೂ ಕಾಡಾನೆ ಸೆರೆ, ಸ್ಥಳಾಂತರ ಕಾರ್ಯಾಚರಣೆ

Continue Reading

Hassan

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

Published

on

ಹಾಸನ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ

ಬೈಕ್ ಸವಾರ ಸ್ಥಳದಲ್ಲೇ ಸಾವು

ಮತ್ತಿಘಟ್ಟ ಗ್ರಾಮದ ವೇಣುಗೋಪಾಲ್ (38) ಮೃತ ವ್ಯಕ್ತಿ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಳೇಬೀಡು-ಜಾವಗಲ್‌ ರಸ್ತೆಯಲ್ಲಿ ಘಟನೆ

ಸ್ವಗ್ರಾಮ ಮತ್ತಿಘಟ್ಟಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಣುಗೋಪಾಲ್

ಈ ವೇಳೆ ಡಿಕ್ಕಿ ಹೊಡೆದಿರುವ ಅಪರಿಚಿತ ವಾಹನ

ಅಪಘಾತದ ನಂತರ ವಾಹನ ನಿಲ್ಲಿಸದೆ ಎಸ್ಕೇಪ್ ಆಗಿರುವ ಚಾಲಕ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Trending

error: Content is protected !!