Connect with us

Mandya

ಮಳವಳ್ಳಿಯಲ್ಲಿ ಬಿಜೆಪಿ, ಜೆಡಿಎಸ್ ಬೃಹತ್ ಸಭೆ – ಕಾಂಗ್ರೆಸ್ ವಿರುದ್ದ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಕಿಡಿ

Published

on

ಮಂಡ್ಯ: ಕುಮಾರಸ್ವಾಮಿ ಗೆಲುವು ತಡೆಯುವ ಶಕ್ತಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.

ಮಳವಳ್ಳಿಯಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಎನ್ ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಮತಯಾಚಿಸಿದ ಅವರು,
ಕುಮಾರಸ್ವಾಮಿ ಅವರು ಗೆದ್ದರೆ ಕೇಂದ್ರ ಸಚಿವರಾಗಿ ಮೋದಿ ಕೈ ಬಲ ಪಡಿಸುತ್ತಾರೆ.

ಕಾಂಗ್ರೆಸ್ ಸರ್ಕಾರ ಬಂದು 10ತಿಂಗಳು ಕಳೆದರೂ ರೈತರ ಸಂಕಷ್ಟ ಕೇಳಿಲ್ಲ.
ಸುಪ್ರೀಂ ಕೋರ್ಟ್ ನೆಪ ಹೇಳಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ರಲ್ಲ ಅವಾಗ ಎಲ್ಲೋಗಿತ್ತು ನಿಮ್ಮ ತಾಕತ್ತು?. ನೀರು ಬಿಟ್ಟು ರೈತರಿಗೆ ಅನ್ಯಾಯ ಮಾಡಿದ್ರಲ್ಲ ಅವಾಗ ಎಲ್ಲೋಗಿತ್ತು ನಿಮ್ಮ ಗಂಡಸ್ತನ? ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು.

ಈ ಬರಗಾಲದಲ್ಲಿ ರೈತ
ವಿದ್ಯುತ್ ಸಂಪರ್ಕ ಪಡೆಯಲು 3ಲಕ್ಷ ಕಟ್ಟಬೇಕು.
ಇದು ರೈತರಿಗೆ ನ್ಯಾಯ ಕೊಡುವ ಕೆಲಸಾನಾ?
ರೈತರಿಗೆ ಅನ್ಯಾಯ ಮಾಡುವ ಸರ್ಕಾರ ಯಾವದಾದರೂ ಇದ್ರೆ ಅದು ರಾಜ್ಯ ಕಾಂಗ್ರೆಸ್ ಸರ್ಕಾರ.
ಬಡವರಿಗೆ ಅಕ್ಕಿ ಕೊಡ್ತಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ನರೇಂದ್ರ ಮೋದಿ.
ಮದ್ಯದ ಬೆಲೆ ಏರಿಸಿ ಗ್ಯಾರಂಟಿ ಕೊಡ್ತಿದ್ದಾರೆ.
ಗಂಡಸರ ಜೇಬಿಗೆ ಕತ್ತರಿ ಹಾಕಿ ಹೆಂಗಸರ ಅಕೌಂಟಿಗೆ ಹಾಕ್ತಿದ್ದಾರೆ.
ಬಸ್ ದರ ಏರಿಸಿ ಮಹಿಳೆಯರಿಗೆ ಫ್ರೀ ಮಾಡಿದ್ದಾರೆ.
ವಿದ್ಯುತ್ ದರ ಏರಿಸಿ ಕರೆಂಟ್ ಫ್ರೀ ಅಂತಾರೆ.
ಒಂದು ಕೈಲಿ ಕಿತ್ತುಕೊಂಡು ಇನ್ನೊಂದು ಕೈಲಿ ಕೊಡುವ ಕೆಲಸ ಮಾಡ್ತಿದ್ದಾರೆ.
ರಾಜ್ಯದ ಮುಗ್ದ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಆಗ್ತಿದೆ.

ಗ್ಯಾರಂಟಿ ಗ್ಯಾರಂಟಿ ಎಂದು ರಾಜ್ಯದ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ.
ಈ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು.
ಜನರಿಂದ ಜನರಿಗಾಗಿ ಜನರಿಗೋಸ್ಕರ ಪ್ರಾಣ ಕೊಡುವ ಸಂಸದ ಗೆಲ್ಲಬೇಕು.
ಕುಮಾರಸ್ವಾಮಿ ಮಾತ್ರ ಮಂಡ್ಯ ಜಿಲ್ಲೆಗೆ ನ್ಯಾಯ ಕೊಡುವ ಕೆಲಸ ಮಾಡಲು ಸಾಧ್ಯ.
ಶ್ರೀಮಂತರು, ಹೊಟ್ಟೆ ತುಂಬಿದವರು ಗೆದ್ದರೆ ಮಂಡ್ಯಕ್ಕೆ ಪ್ರಯೋಜನವಿಲ್ಲ.

3 ಲಕ್ಷ ಮತಗಳ ಅಂತರದಿಂದ ಕುಮಾರಸ್ವಾಮಿ ಗೆಲ್ಲಬೇಕು.
ಬಡವರು, ಬಾಬಾಸಾಹೇಬರ ಬಗ್ಗೆ ಕಾಳಜಿ‌ ಇಲ್ಲದ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಅಮಾಯಕರನ್ನು ವಂಚಿಸುತ್ತಿರುವವರ ವಿರುದ್ದ ಕ್ರಮಕ್ಕೆ ಮ.ರ.ವೇ ಒತ್ತಾಯ

Published

on

ಶ್ರೀರಂಗಪಟ್ಟಣ :ಅನಕ್ಷರಸ್ಥ ವ್ಯಕ್ತಿಯೊಬ್ಬರ ಖಾತೆಯಿಂದ ಹಣ ಪಡೆದು ವಂಚಿಸಿದ್ದ ಬ್ಯಾಂಕ್ ಆಫ್ ಬರೋಡ ಬ್ಯಾಂಕ್‌ನ ಬಿಸಿನೆಸ್ ಕರೆಸ್‌ಪಾಂಡೆAಟ್ (ಬಿಸಿ) ಯೋಗಾನಂದ ನನ್ನು ಅಮಾನತು ಗೊಳಿಸುವಂತೆ ಒತ್ತಾಯಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಮಾಡಿದರು.

ವೇದಿಕೆ ಅಧ್ಯಕ್ಷ ಶಂಕರ್‌ಬಾಬು ನೇತೃತ್ವದಲ್ಲಿ ಪದಾಧಿಕಾರಿಗಳು ಬಾಬುರಾಯನಕೊಪ್ಪಲಿನ ಬ್ಯಾಂಕ್ ಆಫ್ ಬರೋಡ ಶಾಖೆಗೆ ತೆರಳಿ ಶಾಖಾ ವ್ಯವಸ್ಥಾಪಕ ವೆಂಕಟೇಶ್‌ಬಾಬು ಅವರನ್ನ ಭೇಟಿ ಮಾಡಿ, ಸರ್ಕಾರ ವೃದ್ಧರು, ವಿಕಲಚೇತನರು ಹಾಗೂ ವಿಧವಾವೇತನ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡುತ್ತಿದೆ. ಆದರೆ ಬ್ಯಾಂಕಿನ ಏಜೆಂಟರುಗಳು ಅನಕ್ಷರಸ್ಥರನ್ನು ಗುರಿಯಾಗಿಸಿಕೊಂಡು ತಾಲೂಕಿನಾಂದ್ಯಂತ ವಂಚಸುತ್ತಿದ್ದಾರೆ. ತಾಲೂಕಿನ ಚಂದಗಾಲು ಗ್ರಾಮದ ೭೬ವರ್ಷ ವಯಸ್ಸಿನ ವೃದ್ಧ ಅನಕ್ಷರಸ್ಥ ರಂಗಣ್ಣ ಅವರಿಗೆ ಮೇಳಾಪುರ ಗ್ರಾಮದ ಬ್ಯಾಂಕ್ ಬರೋಡ ಬ್ಯಾಂಕ್‌ನ ಬಿಸಿನೆಸ್ ಕರೆಸ್‌ಪಾಂಡೆಂಟ್ ಯೋಗಾನಂದ ಎಂಬ ವ್ಯಕ್ತಿ ೨೪೦೦-೦೦ ಹಣ ಡ್ರಾ ಮಾಡಿ, ಕೇವಲ ೧೨೦೦-೦೦ ರು. ಹಣ ನೀಡಿ ವಂಚಿಸಿರುವುದು ಸಾಕ್ಷ್ತ ಸಮೇತ ಸಾಬೀತಾಗಿದೆ ಕೂಡಲೇ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ವೇಳ ವ್ಯವಸ್ಥಾಪಕ ವೆಂಕಟೇಶ್‌ಬಾಬು ನೋಡೋಣ, ಕಾಲಾವಕಾಶ ಕೊಡಿ, ಕ್ರಮ ವಹಿಸೋಣ ಎಂಬ ಹಾರಿಕೆ ಉತ್ತರ ನೀಡಲು ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಸಂಘಟನೆ ಮುಖಂಡರು, ನೆಲದ ಮೇಲೆ ಕುಳಿತು ವ್ಯವಸ್ಥಾಪಕರ ವಿರುದ್ದ ಅಸಮಧಾನ ಹೊರಹಾಕಿದರು. ವಂಚಿಸಿರುವ ವ್ಯಕ್ತಿಯೇ ತಪ್ಪಾಗಿರುವುದಾಗಿ ಒಪ್ಪಿಕೊಂಡಿದ್ದರೂ ಸಹ ವ್ಯವಸ್ಥಾಪಕರಿಂದ ಈ ರೀತಿಯ ಉಡಾಫೆ ಉತ್ತರ ಕೇಳಿಬರುತ್ತಿದೆ ಹೊರತಾಗಿ, ನ್ಯಾಯಯುತವಾಗಿ ಬಡವರ ಪರವಾದ ಒಂದೇ ಒಂದು ಮಾತು ಹೇಳದಿರುವುದು ಮಂಡ್ಯ ರಕ್ಷಣಾ ವೇದಿಕೆ ಖಂಡಿಸುತ್ತದೆ.
ಗ್ರಾಮದಲ್ಲಿನ ಬ್ಯಾಂಕ್ ರೈತರು, ಬಡವರು ಹಾಗೂ ವಿದ್ಯಾರ್ಥಿಗಳ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಸಾಲ ಸೌಲಭ್ಯಗಳನ್ನ ನೀಡಿಲ್ಲ. ಈ ವರೆವಿಗೆ ಮುದ್ರ ಲೋನ್, ರೈತರಿಗೆ ನೀಡಿರುವ ಸಾಲದ ಬಗ್ಗೆ ಮಾಹಿತಿ ಕೇಳಿದರೆ ಇವರ ಬಳಿ ಯಾವುದೇ ಉತ್ತರಿವಿಲ್ಲ. ಈ ಬ್ಯಾಂಕ್ ಉಳ್ಳವರ ಪರವಾಗಿದೇ ವಿನಃ ಬಡವರ ಪರವಾಗಿಲ್ಲ. ಹಾಗಾಗಿ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಮುಂದೆ ಇದೇ ರೀತಿ ಏಜಂಟರ್‌ಗಳಿಂದ ವಂಚನೆಗಳಂತಹ ಪ್ರಕರಣಗಳು ಮರುಕಳಿಸಿದ್ದಲ್ಲಿ, ಬ್ಯಾಂಕ್‌ನ ಸಿಬ್ಬಂದಿಗಳನ್ನೇ ನೇರ ಹೊಣೆ ಮಾಡಿ, ಬ್ಯಾಂಕ್‌ಗೆ ಮುತ್ತಿಗೆ ಹಾಕಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

Continue Reading

Mandya

ಎಂ.ಕೆ.ಸೋಮಶೇಖರ್‌ಗೆ ರಾಜ್ಯಮಟ್ಟದ ಛಾಯಗ್ರಾಹಕ ಹಾಗೂ ಕಲಾವಿದ ಪ್ರಶಸ್ತಿ ಪ್ರಧಾನ

Published

on

ಬೆಂಗಳೂರು ಕನ್ನಡ ಫಿಲಂ ಚೇಂಬರ್ ಸಂಸ್ಥೆ ವತಿಯಂದ ದಿಪುನಿತ್ ರಾಜಕುಮಾರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಸಮಾರಂಭವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜನೆ ಮಾಡಲಾಗಿತ್ತು . ಈ ಸಮಾರಂಭದಲ್ಲಿ ನಮ್ಮ ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿ ಮಾಕವಳ್ಳಿ ಗ್ರಾಮದ ಯುವ ಛಾಯಗ್ರಾಹಕ ಹಾಗೂ ಕಲಾವಿದರು ಆಗಿರುವಂತಹ ಸೋಮಶೇಖರ್ ಎಂ.ಕೆ. ರವರಿಗೆ ಯವರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಾದ ಸಿ.ಕೆ. ಸಂಧ್ಯಾ ಜಿಲ್ಲಾ ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕ ದಳ ಇಲಾಖೆ ಚಿತ್ರದುರ್ಗ, ಶಶಿಕುಮಾರ್ ಬಿ.ಹೆಚ್. ಸಹಾಯಕ ನಿರ್ಧೇಶಕರು ಪ್ರವಾಸೋದ್ಯಮ ಎಲಾಖೆ. ಜಿ.ರೇಖಾ ಅಲ್ಪಸಂಖ್ಯಾತರ ಸಮಾಜ ಕಲ್ಯಣ ಎಲಾಖೆ, ಹಾಗೂ ನಟರು ಮೈಕೋ ನಾಗರಾಜ್, ಶಂಖನಾದ ಅಂಜನಪ್ಪ, ಮಹಾಲಕ್ಷ್ಮೀ ಟಿ. ಆರ್. ಚಲನ ಚಿತ್ರ ನಟಿ ಭಾವನಾ ನಾಗೇಂದ್ರಸ್ವಾಮಿ ನಟಿ ಇನ್ನು ಅನೇಕ ಗಣ್ಯರುಗಳು ಇದ್ದರು..

ವರದಿ ಶಂಭು‌ ಕಿಕ್ಕೇರಿ, ಕೃಷ್ಣರಾಜಪೇಟೆ

Continue Reading

Mandya

ಜಿಲ್ಲಾಧಿಕಾರಿಗಳಿಂದ ಮೇಲುಕೋಟೆ ವೈರಮುಡಿ ಉತ್ಸವದ ಸಿದ್ದತೆ ಪರಿಶೀಲನೆ

Published

on

ಮಂಡ್ಯ : ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮೇಲುಕೋಟೆಯಲ್ಲಿ ನಡೆಯಲಿರುವ ವೈರಮುಡಿ ಉತ್ಸವದ ಸಿದ್ಧತೆ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದರು.

ಸಂಚಾರ ವ್ಯವಸ್ಥೆ ಪಾರ್ಕಿಂಗ್, ಭಕ್ತಾಧಿಗಳಿಗೆ ಮಾಡಿಕೊಂಡಿರುವ ಸಿದ್ಧತೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

Continue Reading

Trending

error: Content is protected !!