Mandya
ಆಲೆಮನೆಯಲ್ಲಿ ಪಟಾಕಿ ಸ್ಫೋಟ: ಒರ್ವ ಸಾವು, ಮತ್ತೊರ್ವನಿಗೆ ಗಂಭೀರ ಗಾಯ

ಮಂಡ್ಯ: ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಆಲೆಮನೆಯಲ್ಲಿ ಪಟಾಕಿ ಸ್ಫೋಟಗೊಂಡು ತಮಿಳುನಾಡು ಮೂಲದ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ತಮಿಳುನಾಡು ಮೂಲದ ರಮೇಶ್(45) ಮೃತ ಕಾರ್ಮಿಕ. ನಾಗಲಿಂಗ(55) ತೀವ್ರವಾಗಿ ಗಾಯಗೊಂಡಿದ್ದು, ಮತ್ತೊಬ್ಬ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿತ್ತು. ಹಬ್ಬ ಆಚರಣೆ ವೇಳೆ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ನಾಲ್ವರು ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು
ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು ಎನ್ನಲಾಗಿದೆ.
ಗ್ರಾಮದ ಹಬ್ಬವು ಭಾನುವಾರ ರಾತ್ರಿಯೇ ಮುಕ್ತಾಯವಾಗಿತ್ತು. ಸೋಮವಾರ ಬೆಳಿಗ್ಗೆ ಅಲೆಮನೆಯಲ್ಲಿ ಮೂವರು ಕಾರ್ಮಿಕರು ನಿದ್ರೆಗೆ ಜಾರಿದ್ದು, ಈ ವೇಳೆ ಮತ್ತೊಬ್ಬ ಮದ್ದು ತುಂಬುವ ಕಾರ್ಯದಲ್ಲಿ ತೊಡಗಿದ್ದನು. ಈ ಸಮಯದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಸ್ಪೋಟದ ರಭಸಕ್ಕೆ ಅಲೆಮನೆಯ ಹೆಂಚುಗಳು ಹಾರಿ ಹೋಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಮೇಶ್ ಸ್ಥಳದಲ್ಲಿಯೇ ಮೃತಪಟ್ಟರೆ, ನಾಗಲಿಂಗ ಎಂಬಾತನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಬೆಂಕಿ ನಂದಿಸಿದರು ಎಂದು ಸ್ಥಳೀಕರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State11 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu8 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan7 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ