Mandya
ಕೆ.ಆರ್.ಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಹರಳಹಳ್ಳಿವಿಶ್ವನಾಥ್

ಕೃಷ್ಣರಾಜಪೇಟೆ : ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಹರಳಹಳ್ಳಿ ವಿಶ್ವನಾಥ್ ಅವರನ್ನು ಉದ್ಯಮಿ ಹಾಗೂ ಸಮಾಜ ಸೇವಕರಾದ ಬಿ ರಾಜಶೇಖರ್ ಸನ್ಮಾನಿಸಿ ಗೌರವಿಸಿದರು..
ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರ ಬಡಾವಣೆಯಲ್ಲಿರುವ ಉದ್ಯಮಿ ಬಿ.ರಾಜಶೇಖರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್ ಅವರನ್ನು ಬಿ.ರಾಜಶೇಖರ್, ಹೊಸಹೊಳಲು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶಂಕರೇಗೌಡ ಹಾಗೂ ಬಳ್ಳೇಕೆರೆ ಗ್ರಾಮ ಪಂಚಾಯಿತಿ ಮಾಜಿಸದಸ್ಯ ಚೌಡೇನಹಳ್ಳಿ ಹರೀಶ್ ಮೈಸೂರು ತೊಡಿಸಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೃಷ್ಣರಾಜಪೇಟೆ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ದುಡಿಯಲು ನನಗೆ ಜವಾಬ್ದಾರಿಯನ್ನು ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆ ಮಾಡುತ್ತೇನೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸಾಧನೆಯನ್ನು ಮಾಡುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಕೃಷ್ಣರಾಜಪೇಟೆ ತಾಲೂಕಿನಾದ್ಯಂತ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನನ್ನ ಮೇಲೆ ತೋರಿಸುತ್ತಿರುವ ಅಭಿಮಾನ ಹಾಗೂ ವಿಶ್ವಾಸಕ್ಕೆ ಹೃದಯ ತುಂಬಿ ಬಂದಿದೆಯಲ್ಲದೆ ಪಕ್ಷದ ಸಂಘಟನೆಗಾಗಿ ಮತ್ತಷ್ಟು ದುಡಿಯುವ ಹುಮ್ಮಸ್ಸು ಹಾಗೂ ಚೈತನ್ಯವನ್ನು ನೀಡಿದೆ ಎಂದು ವಿಶ್ವನಾಥ್ ಹೇಳಿದರು.
ವರದಿ ಶಂಭು ಕಿಕ್ಕೇರಿ,
Mandya
ಅಪರಿಚಿತ ವಾಹನ ಡಿಕ್ಕಿ: ಫಿಲ್ಡ್ ಆಫೀಸರ್ ಸ್ಥಳದಲ್ಲೇ ಸಾವು

ಮದ್ದೂರು: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಫೀಲ್ಡ್ಮನ್ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದೊಡ್ಡಹೊಸಗಾವಿ ಗ್ರಾಮದ ಬಳಿ ಗುರುವಾರ ನಡೆದಿದೆ.
ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ಫೀಲ್ಡ್ಮನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್(40) ಎಂಬುವರೇ ಅಪಘಾತದಲ್ಲಿ ಮೃತರಾದ ವ್ಯಕ್ತಿಯಾಗಿದ್ದಾರೆ.
ಮಂಡ್ಯ ನಗರದ ಚಾಮುಂಡೇಶ್ವರಿನಗರ ಬಡಾವಣೆಯಲ್ಲಿ ವಾಸವಾಗಿದ್ದ ಮಂಜುನಾಥ್ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ವಾಪಸ್ಸು ಬರುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಹೇಳಲಾಗುತ್ತಿದೆ.
ಈ ಅಪಘಾತದಲ್ಲಿ ಮಂಜುನಾಥ್ ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya
ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಂಡ್ಯ ನಗರದ ಆನೆಕೆರೆ ಬೀದಿಯ ಕಾಳಿಕಾಂಬ ವೃತ್ತದ ಬಳಿಯಿರುವ ಐತಿಹಾಸಿಕ ಕೊಳವಾದ ಗಂಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಚೀವರ್ಸ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸಾತನೂರು ಮತ್ತು ರೋಟರಿ ಸಂಸ್ಥೆ ,ಒನ್ ಇಂಡಿಯ ಟಿವಿ ಚಾನೆಲ್ ಹಾಗೂ ಜೈ ಕರ್ನಾಟಕ ಪರಿಷತ್ ಇವರ ಸಹಯೋಗದಲ್ಲಿ ರೋಟರಿ ಅಧ್ಯಕ್ಷೆ ಅನುಪಮ ರವರು,1 ಇಂಡಿಯ ಟಿವಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ಇಂಡಿಯಾ ಟಿವಿ ಸಂಸ್ಥಾಪಕರಾದ ಜೈಕುಮಾರ್ ಹಾಗೂ ಜೈ ಕರ್ನಾಟಕ ಪರಿಷತ್ ರಾಜ್ಯಧ್ಯಕ್ಷರಾದ ಬೋರ್ ವೆಲ್ ನಾರಾಯಣ್ ರವರ ನೇತೃತ್ವದಲ್ಲಿ ಕರ್ನಾಟಕವೆಂಬ ನಾಮಕರಣದ 50ನೇ ಸುವರ್ಣ ಸಂಭ್ರಮದ ಸವಿ ನೆನಪಿಗಾಗಿ ಅಚೀವರ್ಸ್ ಶಾಲಾ ಮಕ್ಕಳಿಂದ ಕನ್ನಡ ಜಾಥಾ ಮತ್ತು ಐತಿಹಾಸಿಕ ಇತಿಹಾಸವುಳ್ಳ ಗಜೇಂದ್ರ ಮೋಕ್ಷ ಕೊಳವನ್ನು ಉಳಿಸುವ ಸಲುವಾಗಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು.
ಜಾಥ ಉದ್ಘಾಟಿಸಿ ಮಾತಾನಾಡಿದ ಶಾಸಕ ಪಿ.ರವಿಕುಮಾರ್ ಗೌಡ, ಗಜೇಂದ್ರ ಮೋಕ್ಷ ಕೊಳವನ್ನು ಉಳಿಸುವ ಜವಾಬ್ದಾರಿಯನ್ನು ತೆಗೆದುಕೊಂಡು ಮುಂದಿನ ದಿನಗಳಲ್ಲಿ ಕೊಳದ ಅಭಿವೃದ್ಧಿ ಮಾಡಿ ಆಕರ್ಷಣೀಯ ಸ್ಥಳವನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಪೇಟೆಬೀದಿ ಯಿಂದ ಪ್ರಾರಂಭ ಆದ ಜಾಥಾ ಸಂಜಯ ವೃತ್ತದಿಂದ ಆರ್.ಪಿ ರಸ್ತೆಯ ಮೂಲಕ ಹಾದುಹೋಗಿ,ನೂರಡಿ ರಸ್ತೆಯ ಮೂಲಕ ವಿವಿ ರಸ್ತೆಯನ್ನ ಆದುಹೋಗಿ ಮಹಾವೀರ ಸರ್ಕಲ್ ಬಳಿ ಕನ್ನಡ ಸರಪಳಿಯನ್ನು ರೂಪಿಸಿ,ಸಿಲ್ವರ್ ಜ್ಯುಬಿಲಿ ಪಾರ್ಕ್ ಬಳಿ ನಾಡಗೀತೆ ಯೊಟ್ಟಿಗೆ ಕಾರ್ಯವನ್ನು ಮುಕ್ತಾಯಗೊಳಿಸಲಾಯಿತು.
ಈ ವೇಳೆ ನೇಗಿಲಯೋಗಿ ಟ್ರಸ್ಟ್ ಅಧ್ಯಕ್ಷರಾದ ರಮೇಶ್, ಅನುಪಮ, ನಾರಾಯಣ್ ಸ್ವಾಮಿ,ಲಕ್ಕಪ್ಪ ಅಚೀವರ್ಸ್ ಶಾಲೆಯ ಪ್ರಾಂಶುಪಾಲರಾದ ವಿದ್ಯ ಹಾಗೂ ಅಡ್ಮಿನ್ ಆದ ರಾಮ್ ಸಿಂಗ್ ಜಗದೀಶ್ ಹಾಗೂ ಶಿಕ್ಷಕರು ಮತ್ತು ಇನ್ನಿತರರು ಉಪಸ್ಥಿತರಿದ್ದರು
ವರದಿ- ಮೋಹನ್ ರಾಗಿಮುದ್ದನಹಳ್ಳಿ
Mandya
ತುಂಬಕೆರೆ ಗ್ರಾಮದ ಪ್ರಾಚೀನ ಶಾಂತೇಶ್ವರ ದೇವಾಲಯದ ಬಳಿ ಸಂರಕ್ಷಣಾ ಅಭಿಯಾನ

ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಇಂದು ಇಂದು ಮಂಡ್ಯ ತಾಲೂಕಿನ ತುಂಬಕೆರೆ ಗ್ರಾಮದ ಪ್ರಾಚೀನ ಶಾಂತೇಶ್ವರ ದೇವಾಲಯದ ಬಳಿ ಸಂರಕ್ಷಣಾ ಅಭಿಯಾನದ ಅಂಗವಾಗಿ ಸ್ವಚ್ಛಗೊಳಿಸಲಾಯಿತು.
ನಮ್ಮ ಇತಿಹಾಸ ಗತವೈಭವವನ್ನು ಸಾರುವ ಇಂತಹ ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಬೇಕು* ಎಂದು ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳಾದ ಎಂ.ಎಸ್ ವೀಣಾ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಾದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮುಂದೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನಮ್ಮ ನಡಿಗೆ ಪರಂಪರೆ ಎಡೆಗೆ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ನಡೆಸಲಾಯಿತು.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ