Mandya
ಭ್ರೂಣ ಹತ್ಯೆ ತಡೆಗಟ್ಟುವ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ.

ಶ್ರೀರಂಗಪಟ್ಟಣ : ಗಂಡು ಹೆಣ್ಣು ಎಂಬ ಬೇಧ ಭಾವ ಬಿಡಬೇಕು. ಮಗು ಯಾವುದಾದರೂ ಸ್ವೀಕರಿಸುವದನ್ನು ಪ್ರತಿ ದಂಪತಿ ಮೈಗೂಡಿಸಿಕೊಳ್ಳಬೇಕೆಂದು
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಹೇಳಿದರು.
ಅವರು ಶ್ರೀರಂಗಪಟ್ಟಣ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಹತ್ತಿರ
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಟಿ ಎಂ ಹೊಸೂರು ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವತಿಯಿಂದ ಆಯೋಜಿಸಿದ್ದ “ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆಗಟ್ಟುವ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು”ಅರಿವು ಮೂಡಿಸುವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಹಾಗೂ ಶಿಕ್ಷಾರ್ಹ ಅಪರಾಧವಾಗಿದ್ದು ಹೆಣ್ಣು ಭಗವಂತನ ಸೃಷ್ಟಿಯ ಹೂ ಅದನ್ನು ಮೊಗ್ಗಲ್ಲೆ ಚಿವುಟದಿರಿ ಎಂದರು.
ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ,ಎಲ್ಲಾ ರಂಗದಲ್ಲಿ ಮುಂದೆ ಇದ್ದು, ಹೆಣ್ಣು ಭ್ರೂಣ ಹತ್ಯೆ ಮಹಾಪಾಪ. ಭ್ರೂಣ ಹತ್ಯೆಯಿಂದ ಸ್ತ್ರೀ ಪುರುಷರ ಸಂಖ್ಯೆಯಲ್ಲಿ ವ್ಯತ್ಯಾಸವಾಗುತ್ತದೆ. ಇದು ಸಮಾಜಕ್ಕೆ ಮಾರಕ ಎಂದು ಕಳವಳ ವ್ಯಕ್ತಪಡಿಸಿದ ಅವರು, ಅದೆ ರೀತಿ ಬಾಲ್ಯ ವಿವಾಹ ಪದ್ಧತಿ ಎನ್ನುವುದು ಸಮಾಜಕ್ಕೆ ಪಿಡುಗಾಗಿದ್ದು ನಾವೆಷ್ಟೇ ವಿದ್ಯಾವಂತರಾಗಿ ವೈಜ್ಞಾನಿಕವಾಗಿ ಮುನ್ನುಗ್ಗಿದರು ಸಹ ಇನ್ನು ಬಾಲ್ಯ ವಿವಾಹಗಳು ಹಾಗೂ ಭ್ರೂಣ ಹತ್ಯೆಗಳು ಆಗುತ್ತಿವೆ ಇದನ್ನು ಸಂಪೂರ್ಣ ತೊಡೆದು ಹಾಕುವದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಬಾಲ್ಯ ವಿವಾಹದಿಂದ ವಯಸ್ಸಿಗೆ ಮೀರಿದ ಜವಾಬ್ದಾರಿ,ಮದುವೆ ಆಗಿ ಕುಟುಂಬ ನಡೆಸಲು ಸಿದ್ದರಾಗಿರುವದಿಲ್ಲ ಹಾಗೂ ಅಪ್ರಾಪ್ತ ವಯಸ್ಸಿನಲ್ಲಿ ಗರ್ಬಿಣಿಯಾಗುವದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಹೆರಿಗೆ ಸಮಯದಲ್ಲಿ ಅಕಾಲಿಕ ತಾಯಿ ಮರಣ ಸಂಬವಿಸಬಹುದಾಗಿದೆ. ಆದ್ದರಿಂದ ಹೆಣ್ಣು ಮಕ್ಕಳಿಗೆ ಮೊದಲು ಶಿಕ್ಷಣ ಕೊಡಿಸಿ, ನಂತರ ಮದುವೆ ವಿಚಾರ ಮಾಡಿ. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹ ಮಾಡಬೇಡಿ ಎಂದು ತಾಯಂದಿರಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಗೀತಾ,ಸಮುದಾಯ ಆರೋಗ್ಯ ಆಧಿಕಾರಿ ಮಲ್ಲಮ್ಮ,ಅಶಾ ಕಾರ್ಯಕರ್ತೆಯರಾದ ಶಶಿಕಲಾ, ಸುಧಾಮಣಿ ಹಾಗೂ ಮಕ್ಕಳ ತಾಯಂದಿರು, ಇತರರು ಹಾಜರಿದ್ದರು.
Mandya
Mandya|ಹಣ ಮಾಡುವ ಉದ್ದೇಶದಿಮದ ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ : ಚಂದ್ರಶೇಖರ್

ಮಂಡ್ಯ: ಕನ್ನಂಬಾಡಿ ಕಟ್ಟೆ ಮುಖ್ಯದ್ವಾರದ ಬಳಿ ಹಣ ಮಾಡುವ ಉದ್ದೇಶದಿಮದ ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ಮಾಡಲು ಮುಂದಾಗಿದ್ದು, ಸದರಿ ಕ್ರಿಯಾಯೋಜನೆ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐತಿಹಾಸಿಕ ಕಾವೇರಿಗೆ ಆರತಿ ಎಂಬ ಹೆಸರು ಸೇರಿಸಿ ಕನ್ನಂಬಾಡಿ ಅಣೆಕಟ್ಟೆಯ ಪರಿಸರ, ನೈರ್ಮಲ್ಯಕ್ಕೆ ದಕ್ಕೆ ತರುವಂತಹ ಕೆಲಸ ಮಾಡಲಾಗುತ್ತಿದೆ. ಕಾವೇರಿ ಆರತಿಯ ಯೋಜನೆಯಲ್ಲಿ ಭ್ರಷ್ಟಾಚಾರದ ವಾಸನೆ ಮೂಡುತ್ತಿದೆ ಎಂದರು.
ಸರ್ಕಾರ ಲಾಭ ಮಾಡಿ ಹಣ ಲೂಟಿ ಹೊಡೆಯುವ ಉದ್ದೇಶದಿಂದ ಇಂತಹ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಅಚ್ಚುಕಟ್ಟು ವ್ಯಾಪ್ತಿಯ ಮುಖ್ಯನಾಲೆ, ಉಪನಾಲೆ, ಸೀಳುನಾಲೆ, ನಾಲಾ ಬದಿಯ ರಸ್ತೆಗಳು ತೀರ ಹದಗೆಟ್ಟಿದೆ. ನಾಲೆಯ ಕೊನೆಯ ಭಾಗಕ್ಕೆ ನೀರು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಅಭಿವೃದ್ಧಿ ಕೆಲಸಕ್ಕೆ ಒತ್ತು ಕೊಡದೆ ಅನಾವಶ್ಯಕ ಯೋಜನೆಗೆ ಕೋಟಿಗಟ್ಟಲೆ ಹಣ ವ್ಯಯ ಮಾಡುತ್ತಿರುವುದು ಖಂಡನೀಯವಾಗಿದ್ದು, ಈ ಹಿನ್ನಲೆ ಏಪ್ರಿಲ್ ೧೭ರಂದು ರೈತ ಸಂಘ ಸಭೆ ನಡೆಸಿದ್ದು, ಮೇ.೦೬ರಂದು ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.
ತಾಲೂಕು ಅಧ್ಯಕ್ಷ ಶಿವಳ್ಳಿ ಚಂದ್ರು ಮಾತನಾಡಿ, ಮೈಷುಗರ್ನಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ೧೩ ಮರಗಳನ್ನು ಕಡಿಸಿ, ತಮ್ಮ ಮನೆಗೆ ಸಾಗಿಸಿಕೊಂಡಿದ ಅಧ್ಯಕ್ಷ ಸಿ.ಡಿ.ಗಂಗಾಧರ್, ಮೈಷುಗರ್ ಲಾಭದಾಯಕವಾಗಿ ನಡೆಯುತ್ತಿದೆ ಎಂದು ಘೋಷಿಸಿಕೊಂಡು ೩೩ ಕೋಟಿ ರೂ ನಷ್ಟದಲ್ಲಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ, ಮಾಧ್ಯಮ ಕಾರ್ಯದರ್ಶಿ ಸೋ.ಸಿ.ಪ್ರಕಾಶ್, ಮಲ್ಲೇಶ್, ಲಿಂಗರಾಜು, ಎಂ.ಕುಮಾರ್ ಇದ್ದರು.
Mandya
Mandya: ಮೇ.1ಕ್ಕೆ ಕುಂದೂರು ಬೆಟ್ಟ ಗ್ರಾಮದ ಶ್ರೀ ರಸ ಸಿದ್ದೇಶ್ವರ ಮಠದ ಪಟ್ಸ್ ದಲ ಬ್ರಹ್ಮೋಪದೇಶ ಪೂರ್ವಕ ಗುರುಪಟ್ಟಾಧಿಕಾರಿ ಮಹೋತ್ಸವ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟ ಗ್ರಾಮದ ಶ್ರೀ ರಸ ಸಿದ್ದೇಶ್ವರ ಮಠದ ಪಟ್ಸ್ ದಲ ಬ್ರಹ್ಮೋಪದೇಶ ಪೂರ್ವಕ ಗುರುಪಟ್ಟಾಧಿಕಾರಿ ಮಹೋತ್ಸವ ಹಾಗೂ ಸುಕ್ಷೇತ್ರದ ಶ್ರೀ ಮಹಾದ್ವಾರ ಉದ್ಘಾಟನೆ ಕಾರ್ಯಕ್ರಮವನ್ನು ಮೇ.01ರಂದು ಆಯೋಜಿಸಲಾಗಿದೆ ಎಂದು ಮಠದ ಮಠಾಧ್ಯಕ್ಷ ನಂಜುಂಡಸ್ವಾಮೀಜಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಇಂದು(ಏಪ್ರಿಲ್.26) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸುತ್ತೂರು ವೀರಸಿಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ, ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ ಎಂದರು.
ಸೂರ್ಯಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯಸ್ವಾಮೀಜಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಲಾಗುವುದು. ರಸ ಸಿದ್ದೇಶ್ವರ ಮಠಾಧ್ಯಕ್ಷ ನಂಜುಂಡಸ್ವಾಮೀಜಿ ಪ್ರಾಸ್ತವಿಕ ನುಡಿಗಳನ್ನಾಡುವರು, ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ರುದ್ರಮುನಿ ಸ್ವಾಮಿಗಳ ಭಾವಚಿತ್ರ ಅನಾವರಣ ಮಾಡುವರು ಎಂದು ಹೇಳಿದರು.
ಕಾರ್ಯಕ್ರಮವನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸುವರು, ಬಿಜೆಪಿ ರಾಜ್ಯಾಧ್ಯಕ್ಷ ಮಹಾಧ್ವರದ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ವಿಧಾನಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕ ಗಣೇಶ್ಪ್ರಸಾದ್, ಚಾಂಷುಗರ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮೂರ್ತಿ, ಜಿಲ್ಲಾ ಶರಣ ಸಂಘಟನೆ ವೇದಿಕೆಯ ಗೌರವ ಅಧ್ಯಕ್ಷ ಬಬ್ರುವಾಹನ, ಮುಖಂಡ ಪುಟ್ಟಬುದ್ದಿ ಇದ್ದರು.
Mandya
ಗವಿಮಠದ ಬೆಟ್ಟದಲ್ಲಿ ಹಾಡಾಗಲೇ ಚಿರತೆ ಪ್ರತ್ಯಕ್ಷ

ಕೆ.ಆರ್.ಪೇಟೆ : ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಬೆಟ್ಟದಲ್ಲಿ ಹಾಡಾಗಲೇ ಚಿರತೆಯೊಂದು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಬೆಟ್ಟದ ಮೇಲೆ ಕುಳಿತಿರುವ ಚಿರತೆಯ ಚಲನವಲನ ಪ್ರವಾಸಿಗರ ಮೊಬೈಲಿನಲ್ಲಿ ಸೆರೆಯಾಗಿದ್ದು, ಬೆಟ್ಟದ ತಪ್ಪಲಿನಲ್ಲಿದೆ ಮಾಜಿ ಸಿ.ಎಂ.ಬಿ.ಎಸ್.ವೈ ಮನೆದೇವರ ಶ್ರೀ ಸ್ವತಂತ್ರ ಸಿದ್ದಲಿಂಗೇಶ್ವರ ದೇವಾಲಯವಿದೆ.
ಬೆಟ್ಟಕ್ಕೆ ದಿನನಿತ್ಯ ಹೆಚ್ಚಿನ ಪ್ರವಾಸಿಗರು ಬಂದು ಹೋಗಲಿದ್ದು, ಇದೀಗ ಬೆಟ್ಟದ ತಪ್ಪಲಿನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
ಚಿರತೆ ಧಾಳಿಯಿಂದ ಅವಘಢ ಸಂಭವಿಸುವ ಮುನ್ನ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
-
State10 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized7 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Hassan3 hours ago
ಜಮೀನು ವಿಚಾಕ್ಕೆ ಕೊಲೆ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu6 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ