Mandya
ಶ್ರೀರಂಗಪಟ್ಟಣದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ದಳಪತಿಗಳು

ಶ್ರೀರಂಗಪಟ್ಟಣ: ಭಾನುವಾದ ಶ್ರೀರಂಗಪಟ್ಟಣದಲ್ಲಿ ನಡೆದ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ದಳಪತಿಗಳು ಹಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಸಮಾವೇಶದಲ್ಲಿ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಕಾಂಗ್ರೆಸ್ ಒಬ್ಬ ಕಂಟ್ರಾಕ್ಟರ್ಗೆ ಅನುಕೂಲ ಮಾಡಿಕೊಡಲು ನಮ್ಮ ಕರೆ ಕಟ್ಟೆ ಒಣಗಿಸಿದರು. ರೈತರಾ ಉಳಿಯು ಕರ್ನಟಕಕ್ಕೆ ಕುಮಾರಣ್ಣ ಅನಿವಾರ್ಯ. ಕುಮಾರಣ್ಣರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ನಿಮ್ಮ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು. ಎಲ್ಲರೂ ಮನೆ ಮನೆಗೆ ಹೋಗಿ ಮತ್ತ ಕೇಳಿ. ಕಾಂಗ್ರೆಸ್ ನವರು ಹಲಾಲ್ ಟೋಪಿಗಳನ್ನ ಕರೆತಂದು ರಾಜಕೀಯ ಮಾಡ್ತಿದ್ದಾರೆ. ಯಾರೋ ಅಯೋಗ್ಯನ ಮೂಲಕ ಮಾತನಾಡಿಸುತ್ತಾರೆ. ಅವರ ಮನೆಯಲ್ಲಿಹೆಣ್ಣು ಮಕ್ಕಳಿಲ್ವ?. ದರೋಡೆಕೋರರು, ಜೂಜುಕೋರರನ್ನು ಕರತಂದು ರಾಜಕೀಯಕ್ಕೆ ನಿಲ್ಲಿಸುತ್ತಾರೆ. ಮರ್ಯಾದಸ್ಥರನ್ನು ಕರೆದುಕೊಂಡು ಬನ್ನಿ ಎಂದು ಪರೋಕ್ಷವಾಗಿ ಶಾಸಕ ಕದಲೂರು ಉದಯ್ ವಿರುದ್ದ ವಾಗ್ದಾಳಿ ನಡೆಸಿದರು.
ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ನೀವು ಕೊಟ್ಟ ಶಕ್ತಿಯಿಂದ ಸಾಲವನ್ನಾ ಮಾಡಲು ನನಗೆ ಸಾಧ್ಯವಾಯ್ತು. ಕಾಂಗ್ರೆಸ್ನ್ ಆಸಹಾಕಾರದ ನಡುವೆಯೂ ರೈತರ ಸಾಲವನ್ನಾ ಮಾಡಿದೆ. ಮೈತ್ರಿಯಲ್ಲಿದ್ದಷ್ಟು ದಿನ ಕಾಂಗ್ರೆಸ್ ನವರು ನನ್ನನ್ನು ಕೀಳಾಗಿ ಕಂಡರು.
ರೈತರು ಇವತ್ತು ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ನನು ಸಿಎಂ ಆಗಿದ್ದಾಗ ವಿಸಿ ನಾಲೆ ಆಧುನೀಕರಣಕ್ಕೆ ಹಣ ಬಿಡುಗಡೆ ಮಾಡಿದ್ದೆ. ಇಂದು ನಾಲೆಗಳಿಗೆ ನೀರು ಹರಿಸದೆ ಗುತ್ತಿಗೆದಾರನ ಜೇಬು ತುಂಬಿಸಲು ಕಾಮಗಾರಿ ಕೊಟ್ಟಿದ್ದೀರಿ. ಆ ಗುತ್ತಿಗೆದಾರರನನ್ನೇ ಈಗ ಅಭ್ಯರ್ಥಿ ಮಾಡಿದ್ದೀರಿ. ಈಗ ಕಾಂಗ್ರೆಸ್ ನವರು ಖಾಲಿ ಚೊಂಬು ಹಿಡಿದು ಭರ್ತಿಗೆ ಅಲೆಯುತ್ತಿದ್ದಾರೆ. ಈ ರೀತಿ ಡ್ಯೂಪ್ ಭರವಸೆಗಳಿಗೆ ಮರುಳಾಗಬೇಡಿ.
ರಾಜ್ಯದ ಅಭಿವೃದ್ಧಿಗೆ ಹೆಚ್ಚಿಕೆ ಸಹಕಾರ ಕೊಡ್ತೀನಿ ಅಂತಾ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ನವರು ಯಾವುದೇ ಆಸೆ ಆವಿಷವೊಡಲಿ. ಹಣಕ್ಕೆ ಮರುಳಾಗದ ಜನ ಮಂಡ್ಯದವರು. ನಾನು ಆರಂಭದಿಂದ ನೋಡಿದ ರೀತಿಯಲ್ಲೇ ಮಂಡ್ಯ ಇದೆ. ನನ್ನ ಮೇಲೆ ಯಾವುದೇ ರೀತಿಯ ಸಂತಯ ಇಟೊಳ್ಳಬೇಡಿ. ಈ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನ ಜೀವ ಮುಡಿಪಾಗಿಡುತ್ತೇನೆ’ ಎಂದರು
ಸಮಾವೇಶದಲ್ಲಿ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು, ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ, ಬಿಜೆಪಿ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ, ಡಾ.ರವೀಂದ್ರ ಮಾತನಾಡಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡ ಪಾಲಹಳ್ಳಿ ಚಂದ್ರಶೇಖರ್ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜೆಡಿಎಸ್ ಮತ್ತು ಬಿಜೆಪಿ ಮುಖಂಡರುಗಳು ಉಪಸ್ಥತರಿದ್ದರು.
Mandya
ವಿರೋಧ ಪಕ್ಷಗಳು ಸಾವಿನಲ್ಲಿ ರಾಜಕೀಯ ಮಾಡೋದನ್ನು ಬಿಡಬೇಕು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ವಿರೋಧ ಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡೋದನ್ನೂ ಬಿಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಗೆ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಳೆ(ಜೂ.17) ಪ್ರತಿಭಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಘಟನೆಯ ಬಗ್ಗೆ ದುಃಖ ಇದೆ. ಈ ಪ್ರಕರಣದಿಂದ ರಾಜ್ಯ ಸರ್ಕಾರಕ್ಕೆ ನೋವು ತಂದಿದೆ. ಎಲ್ಲಿ ತಪ್ಪಾಗಿದೆ ಎಂದು ಕ್ರಮ ಆಗಿದೆ. ಅಲ್ಲದೇ ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದಲ್ಲಿ ಎಲ್ಲಿ ಏನೇ ತೊಂದರೆಯಾದರೂ ಅದು ಸರ್ಕಾರದ ಜವಾಬ್ದಾರಿ ಆಗಿರುತ್ತದೆ. ಅಹಮದಾಬಾದ್ ವಿಮಾನ ಅಪಘಾತದ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ. ಉತ್ತರಪ್ರದೇಶದ ಕುಂಭಮೇಳದಲ್ಲಿ ಕಾಲ್ತುಳಿತವಾಗಿ ಸಾವಾಗಿರುವುದಕ್ಕೆ ಯಾರು ಜವಾಬ್ದಾರಿ ತೆಗೆದುಕೊಂಡಿದ್ದರು. ನಾವೂ ಈ ರಾಜ್ಯದಲ್ಲಿ ಅಭಿವೃದ್ಧಿ ಕೆಲಸವನ್ನು ಮಾಡುತ್ತಿದ್ದೇವೆ. ಅದನ್ನು ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಹೀಗೆಲ್ಲಾ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪಾಡಿಗೆ ಅವರು ಮಾಡಿಕೊಳ್ಳಲಿ ನಾವು ಅಡ್ಡಿಪಡಿಸುವುದಿಲ್ಲ ಎಂದಿದ್ದಾರೆ.
ನಾವೂ ಕಾಲ್ತುಳಿತ ಘಟನೆಯನ್ನು ಒಪ್ಪುವುದಿಲ್ಲ. ಮುಂದೆ ಹೀಗೆ ಆಗದಂತೆ ಏನು ಮಾಡಬೇಕೋ ಅದನ್ನು ಸರ್ಕಾರ ಮಾಡುತ್ತದೆ. ಹಲವು ಕಡೆ ಇಂತಹ ಘಟನೆ ನಡೆದಿದೆ. ನಟ ಡಾ.ರಾಜ್ ಕುಮಾರ್ ಸಾವಿನ ಸಮಯದಲ್ಲಿ ಕಾಲ್ತುಳಿತ ಆಗಿದ್ದಾಗ ಕುಮಾರಸ್ವಾಮಿ ಹೊಣೆ ಹೊತ್ತರಾ? ವಿಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡುತ್ತಾರೆಂದು ನನಗೆ ತಿಳಿದಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Mandya
ಆರೋಗ್ಯ ಧಾಮವನ್ನು ಸಮರ್ಪಕವಾಗಿ ನಿರ್ವಹಿಸಿ: ಡಾ.ಕುಮಾರ

ಮಂಡ್ಯ : ರೋಗಿಗಳ ಆರೈಕೆಗಾಗಿ ಬರುವ ಆರೈಕೆದಾರರು ತಂಗಲು ಸಿ.ಎಸ್.ಆರ್ ಅನುದಾನ ಬಳಸಿ ಮಿಮ್ಸ್ ಆವರಣದಲ್ಲಿ ನಿರ್ಮಿಸಲಾಗಿರುವ ಆರೋಗ್ಯ ಧಾಮವನ್ನು ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.
ಇಂದು ಮಿಮ್ಸ್ ವೈದ್ಯಕೀಯ ಕಾಲೇಜಿನ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಧಾಮದ ಹೊಣೆಗಾರಿಕೆಯನ್ನು ನಿಭಾಯಿಸಲು ನೋಡೆಲ್ ಅಧಿಕಾರಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಪಿ. ಕೃಷ್ಣಕುಮಾರ್, ಉಸ್ತುವಾರಿ ಹಾಗೂ ಮೇಲ್ವಿಚರಣೆಗೆ ಮಿಮ್ಸ್ ಆಸ್ಪತ್ರೆಯ ಸ್ಥಾನಿಯ ವೈದ್ಯಾಧಿಕಾರಿ ಡಾ.ದರ್ಶನ್ ಕುಮಾರ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಧಾಮಕ್ಕೆ ರೂ 30 ಶುಲ್ಕ
ಆರೋಗ್ಯ ಧಾಮದ ಸೌಲಭ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ದಾಖಲಾತಿ ವಿಭಾಗಗಳಲ್ಲಿ ಫಲಕಗಳನ್ನು ಅಳವಡಿಸಿ. ಆಸ್ಪತ್ರೆಗೆ ದಾಖಲಾದ ರೋಗಿಗಳ ಪರವಾಗಿ ಬರುವ ಆರೈಕೆದಾರರು “ಆರೋಗ್ಯ ಧಾಮದಲ್ಲಿ ತಂಗಲು ಇಚ್ಚೆಪಟ್ಟಲ್ಲಿ ದಿನಕ್ಕೆ (24 ಗಂಟೆಗಳು) ರೂ.30 ಶುಲ್ಕವನ್ನು ಪಾವತಿಸಿಕೊಂಡು ರಶೀದಿ ನೀಡಬೇಕು ಎಂದು ತಿಳಿಸಿದರು.
ವಿಧಿಸಲಾಗುವ ರೂ.30 ಶುಲ್ಕವನ್ನು ಬಳಕೆದಾರರ ನಿಧಿಗೆ ಜಮೆ ಮಾಡಬೇಕು ಮತ್ತು ಈ ಮೊತ್ತದಿಂದಲೇ ಆರೋಗ್ಯಧಾಮದ ನಿರ್ವಹಣೆ ಆರೋಗ್ಯಧಾಮಕ್ಕೆ ನೇಮಿಸಿಕೊಳ್ಳಲಾಗಿರುವ ಸಿಬ್ಬಂದಿಗಳು ವೇತನ ಪಾವತಿಗೆ ವೆಚ್ಚ ಮಾಡಬೇಕು. ರೋಗಿಯು ಆಸ್ಪತ್ರೆಯಲ್ಲಿ ದಾಖಲಾದ ನಂತರ ನೀಡಲಾಗುವ ದಾಖಲಾತಿ ಸಂಖ್ಯೆಯ ಆಧಾರದ ಮೇಲೆ ಅವರ ಆರೈಕೆದಾರರಿಗೆ ಕಂಪ್ಯೂಟರ್ ಆಧಾರಿತ ಪಾವತಿ ಚೀಟಿಯನ್ನು ನೀಡಬೇಕು ಎಂದು ತಾಕೀತು ಮಾಡಿದರು.
ಆರೈಕೆದಾರರು ರೋಗಿಯ ದಾಖಲಾತಿ ವಿವರ, ಆರೋಗ್ಯಧಾಮಕ್ಕೆ ದಾಖಲಾದ ಆರೈಕೆದಾರರ ದಾಖಲಾತಿ ಚೀಟಿ, ಆರೈಕೆದಾರರ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ನೀಡಿ ಆರೋಗ್ಯಧಾಮದಲ್ಲಿ ದಾಖಲಾಗಬೇಕು. ಆರೋಗ್ಯಧಾಮದಲ್ಲಿ ಸ್ವಚ್ಛತೆ ಕಾಪಾಡಬೇಕು, ಅಧಿಕಾರಿಗಳು ಆರೈಕೆದಾರರು ಆರೋಗ್ಯಧಾಮದಲ್ಲಿ ಅನುಸರಿಸಬೇಕಾದ ನಿಯಮಗಳ ಫಲಕವನ್ನು ಅಳವಡಿಸಿ, ನಿಯಮ ಉಲ್ಲಂಘಿಸಿದವರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದರು.
ಆರೋಗ್ಯಧಾಮದ ವಿವರಗಳು ಮತ್ತು ದಾಖಲಾದವರ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಆರೋಗ್ಯಧಾಮದಲ್ಲಿ ಸಿಸಿಟಿವಿ ಕಣ್ಗಾವಲನ್ನು ಏರ್ಪಡಿಸಲಾಗಿದೆ. ಪ್ರತಿನಿತ್ಯವೂ ಆರೋಗ್ಯ ಧಾಮವನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡುವುದು ಅಧಿಕಾರಿಗಳ ಜವಾಬ್ದಾರಿ, ಸಾಧ್ಯವಾದಷ್ಟು ಶೀಘ್ರವಾಗಿ ಆರೋಗ್ಯ ಧಾಮದ ದಾಖಲಾತಿ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುವು ಮಾಡಿ ಎಂದು ತಿಳಿಸಿದರು.
ಉಪಲೋಕಾಯುಕ್ತರು ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ನ್ಯೂನತೆಗಳನ್ನು ತಿಳಿಸಿದ್ದು, ಅವುಗಳನ್ನು ಸರಿಪಡಿಸಿಕೊಂಡು ವರದಿ ನೀಡುವಂತೆ ಈಗಾಗಲೇ ತಿಳಿಸಲಾಗಿತ್ತು. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಪರಿಶೀಲಿಸಲು ಆಗಿಂದಾಗ ಭೇಟಿ ನೀಡಿ ಪರಿಶೀಲಿಸುವಂತೆ ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್ ಅವರಿಗೆ ತಿಳಿಸಿದರು.
ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ ಮಾತನಾಡಿ, ಹೊರ ರೋಗಿ ವಿಭಾಗದಲ್ಲಿ ವಿಕಲಚೇತನರಿಗೆ, ಪುರುಷರಿಗೆ, ಮಹಿಳೆಯರಿಗೆ, ಹಿರಿಯ ನಾಗರೀಕರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಸ್ವಚ್ಛತಾ ಕೆಲಸಗಳನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತಿದೆ. ಶುದ್ಧ ಕುಡಿಯುವ ನೀರಿನ ಆರ್.ಓ ಅಳವಡಿಕೆಯ ಕೆಲಸ ಪ್ರಗತಿಯಲ್ಲಿದೆ ಎಂದರು.
ಸಭೆಯ ನಂತರ ಜಿಲ್ಲಾಧಿಕಾರಿಗಳು ಓ.ಪಿ.ಡಿ ಹಾಗೂ ಔಷಧಿ ವಿತರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ವಾಹನ ನಿಲುಗಡೆ ಸ್ಥಳಕ್ಕೆ ಭೇಟಿ ನೀಡಿ ಶುಲ್ಕ ಪಡೆಯುತ್ತಿರುವ ಬಗ್ಗೆ ವಿಚಾರಣೆ ನಡೆಸಿದರು. ಎಂಟು ಗಂಟೆಯ ಅವಧಿಗೆ ರೂ 7/- ನಿಗದಿಯಾಗಿದ್ದು, ರೂ 10/- ಚೀಟಿಗಳು ಲಭ್ಯವಿದ್ದು, ಕಂಪ್ಯೂಟರ್ ಆಧಾರಿತ ಬಿಲ್ ನೀಡಿ ಸರಿಯಾಗಿ ನಿರ್ವಹಿಸದಿದ್ದಲ್ಲಿ ಟೆಂಡರ್ ರದ್ದು ಪಡಿಸುವುದಾಗಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಯಪ್ರಕಾಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು

ವರದಿ : ಅಲ್ಲಾಪಟ್ಟಣ ಸತೀಶ್
ಮಂಡ್ಯ : ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಂಗಾರ ಬಣ್ಣದ ಗೌರಿ ಮೀನೊಂದು ಬಲೆಗೆ ಬಿದ್ದಿದ್ದು, ಬರೋಬ್ಬರಿ ಒಂದು ಸಾವಿರ ರೂಪಾಯಿಗೆ ಮಾರಾಟವಾಗಿದೆ.
ತೀರಾ ಅಪರೂಪವೆಂಬ 04 ಕೆಜಿ ತೂಕವುಳ್ಳ ಬಂಗಾರದ ಬಣ್ಣದ ಮೀನನ್ನು ನೋಡಲು ಜನತೆ ಮುಗಿ ಬೀಳುತ್ತಿದ್ದು, ವಳಗೆರೆ ಮೆಣಸದ ರಾಜು ಎಂಬುವವರು ಒಂದು ಸಾವಿರ ರೂಪಾಯಿಗೆ ಕೊಂಡುಕೊಂಡಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಮೀನು ಹಿಡಿಯಲು ಇಂದು ಮುಂಜಾನೆ ರಾಮಚಂದ್ರನಾಯಕ ಎಂಬುವವರು ಬಲೆ ಬೀಸಿದ್ದಾಗ ಬಲೆಗೆ ಬಂಗಾರ ಬಣ್ಣದ ಗೌರಿ ಮೀನು ಬಿದ್ದಿರುವುದನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಬಂಗಾರ ಬಣ್ಣದ ಗೌರಿ ಮೀನು ಅಪರೂಪದ ತಳಿಯಾಗಿದ್ದು, ಮುಳ್ಳುಗಳಿಲ್ಲದ ತಿನ್ನಲು ರುಚಿಕರವಾದ ಈ ಮೀನಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ ಎಂದು ಮೀನು ಮಾರಾಟಗಾರ ಬಲೆರಾಮು ತಿಳಿಸಿದ್ದಾರೆ.
-
Uncategorized24 hours ago
ಸೆಕ್ಯುರಿಟಿ ಸಿಬ್ಬಂದಿಗಳಿಂದ ಯುವಕನ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ವಿರುದ್ದ ಎಫ್ಐಆರ್ ದಾಖಲು
-
Hassan11 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
State24 hours ago
SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?
-
Kodagu9 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya5 hours ago
ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು
-
Chikmagalur12 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu12 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ
-
Chikmagalur10 hours ago
ಮರ ಬಿದ್ದು ಬೈಕ್ ಸವಾರ ದು*ರ್ಮರಣ