Connect with us

National - International

Budget Highlights: ಬಜೆಟ್ ನಲ್ಲಿ ಮಹತ್ವದ ಘೋಷಣೆ, ಏನೆಲ್ಲ ಇದೆ? ಇಲ್ಲಿದೆ ಹೈಲೈಟ್ಸ್‌!!!

Published

on

Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಫೆಬ್ರವರಿ 1) ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಇದು ಹಣಕಾಸು ಸಚಿವರ ಆರನೇ ಬಜೆಟ್ ಮತ್ತು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಮತ್ತು ಮಧ್ಯಂತರ ಬಜೆಟ್ ಆಗಿದೆ. ಬಜೆಟ್‌ ಮಂಡನೆ ಸಂದರ್ಭ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಡವರ ಕಲ್ಯಾಣ, ದೇಶದ ಕಲ್ಯಾಣ ಎಂಬ ಮಂತ್ರದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂಬ ಮಾತನ್ನು ಹೇಳಿದರು.

ಜೊತೆಗೆ ಈ ಬಾರಿಯ ಮಧ್ಯಂತರ ಬಜೆಟ್‌ನಲ್ಲಿ ನಮ್ಮ ಸರಕಾರ ರೈತರು, ಮಹಿಳೆಯರು, ಯುವಕರು ಮತ್ತು ಬಡವರನ್ನು ಗಮನದಲ್ಲಿಟ್ಟುಕೊಂಡು 2024 ರ ಮಧ್ಯಂತರ ಬಜೆಟ್‌ನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ರೈತರು ನಮ್ಮ ಆಹಾರ ಪೂರೈಕೆದಾರರು. 11.8 ಕೋಟಿ ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭ ಪಡೆದಿದ್ದಾರೆ. ಫಸಲ್ ಬಿಮಾ ಯೋಜನೆಯಿಂದ 4 ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆದಿದ್ದಾರೆ.

ಕಳೆದ 10 ವರ್ಷಗಳಲ್ಲಿ ‘ಸಬ್ಕಾ ಸಾಥ್’ ಗುರಿಯೊಂದಿಗೆ ನಾವು 25 ಕೋಟಿ ಜನರನ್ನು ವಿವಿಧ ರೀತಿಯ ಬಡತನದಿಂದ ಮೇಲೆತ್ತಿದ್ದೇವೆ.

ಕೇಂದ್ರ ಸರ್ಕಾರ ನೇರ ಲಾಭ ವರ್ಗಾವಣೆಯಿಂದ 2.34 ಲಕ್ಷ ಕೋಟಿ ರೂಪಾಯಿ ಉಳಿಸಿದೆ. ಪಿಎಂ ಸ್ವಾನಿಧಿಯಿಂದ 78 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ಸಾಲದ ನೆರವು ನೀಡಲಾಗಿದೆ.

ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ವಾಯು ಸಂಪರ್ಕ ಹೆಚ್ಚುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಣ್ಣ ನಗರಗಳನ್ನು ಸಂಪರ್ಕಿಸಲು 517 ಹೊಸ ಮಾರ್ಗಗಳಲ್ಲಿ ವಿಮಾನಗಳನ್ನು ಪ್ರಾರಂಭಿಸುವ ಯೋಜನೆ ಇದೆ. ದೇಶದ ವಿಮಾನ ನಿಲ್ದಾಣಗಳ ಸಂಖ್ಯೆ 149 ಕ್ಕೆ ದ್ವಿಗುಣಗೊಂಡಿದೆ.

ಸರಕಾರ ಹೈನುಗಾರರಿಗೆ ನೆರವಾಗುವ ಯೋಜನೆ ತರಲಿದೆ ಎಂದರು. ಪ್ರಧಾನ ಮಂತ್ರಿ ಸಂಪದ ಯೋಜನೆಯಿಂದ 38 ಲಕ್ಷ ರೈತರು ಪ್ರಯೋಜನ ಪಡೆದಿದ್ದಾರೆ. ಮೋದಿ ಸರ್ಕಾರ ಮೀನುಗಾರಿಕೆಗೆ ಪ್ರತ್ಯೇಕ ಇಲಾಖೆ ರಚಿಸಿದೆ ಎಂದರು ಹಣಕಾಸು ಸಚಿವರು ರೈತರಿಗಾಗಿ ಹಲವು ದೊಡ್ಡ ಘೋಷಣೆಗಳನ್ನೂ ಮಾಡಿದ್ದಾರೆ.

ಪ್ರಧಾನ ಮಂತ್ರಿ ಮತ್ಸ್ಯ ಯೋಜನೆಯು 55 ಲಕ್ಷ ಹೊಸ ಉದ್ಯೋಗಗಳನ್ನು ಒದಗಿಸುತ್ತದೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಬಡವರಿಗೆ ಮನೆ ನೀಡಲಾಗುತ್ತಿದೆ ಎಂದರು. ನಾವು 3 ಕೋಟಿ ಮನೆಗಳ ಗುರಿ ತಲುಪುವ ಸನಿಹದಲ್ಲಿದ್ದೇವೆ ಎಂದು ಹಣಕಾಸು ಸಚಿವರು ಹೇಳಿದರು. ಮುಂದಿನ 5 ವರ್ಷಗಳಲ್ಲಿ 2 ಕೋಟಿ ಜನರಿಗೆ ಹೆಚ್ಚಿನ ಮನೆ ಸಿಗಲಿದೆ. ಸೌರ ಫಲಕಗಳ ಮೂಲಕ 1 ಕೋಟಿ ಬಡವರ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು.

ಯಾವುದೇ ಹೊಸ ತೆರಿಗೆ ಅಥವಾ ತೆರಿಗೆ ಸ್ಲ್ಯಾಬ್‌ನಲ್ಲಿ ಬದಲಾವಣೆಯನ್ನು ಘೋಷಿಸಿಲ್ಲ. ಹೊಸ ತೆರಿಗೆ ಪದ್ಧತಿಯ ತೆರಿಗೆ ವಿನಾಯಿತಿ ಮಿತಿಯನ್ನು ಸರ್ಕಾರವು 7 ಲಕ್ಷಕ್ಕೆ ಹೆಚ್ಚಿಸಿದೆ. ಆದಾಯ ತೆರಿಗೆ ಪಾವತಿದಾರರಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಸಿಕ್ಕಿಲ್ಲ.

ಒಂದು ಕೋಟಿ ಲಕ್ಷಪತಿ ದೀದಿಗಳನ್ನು ರಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. 9 ಕೋಟಿ ಮಹಿಳೆಯರು 83 ಲಕ್ಷ ಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದಾರೆ. ಲಖ್ಪತಿ ದೀದಿಯ ಗುರಿಯನ್ನು 2 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

National - International

ಲಷ್ಕರ್-ಎ-ತೊಯ್ಬಾ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹತ್ಯೆಗೈದ ಭಾರತೀಯ ಸೇನೆ

Published

on

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಉಗ್ರರ ವಿರುದ್ದ ಕಾರ್ಯಾಚರಣೆ ತೀವ್ರಗೊಳಿಸಿರುವ ಭಾರತೀಯ ಸೇನೆ ಬಂಡಿಪೋರಾದಲ್ಲಿ ಲಷ್ಕರ್​-ಎ-ತೊಯ್ಬಾ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹತ್ಯೆಗೈದಿದೆ.

ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಮೃತಪಟ್ಟಿದ್ದಾನೆ.

ಏಪ್ರಿಲ್. 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಈ ಹಿನ್ನೆಲೆ ಭಾರತೀಯ ಸೇನೆ ಲಷ್ಕರ್​-ಎ-ತೊಯ್ಬಾದ ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿದೆ.

ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​ಗೆ ಏಪ್ರಿಲ್.22 ರಂದು ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಈ ದುರಂತದಲ್ಲಿ 26 ಮಂದಿ ಸಾವನ್ನಪ್ಪಿದ್ದರು.

Continue Reading

National - International

ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಯೋಧನ ವಶಕ್ಕೆ ಪಡೆದ ಪಾಕ್‌

Published

on

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇತ್ತ ಎರಡು ದೇಶಗಳ ನಡುವೆ ಎನ್‌ಕೌಂಟರ್‌ ಕೂಡಾ ನಡೆಯುತ್ತಿದ್ದು, ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.

ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ.

ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

National - International

ಪಹಲ್ಗಾಮ್‌ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ

Published

on

ಜಮ್ಮು ಕಾಶ್ಮೀರ: ಪಹಲ್ಗಾಮ್‌ನ ನರಮೇಧಕ್ಕೆ ಪ್ರತಿಯಾಗಿ ಜಮ್ಮು ಮತ್ತು ಕಾಶ್ಮೀರದ ಉದ್ಧಮ್‌ಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ.

https://x.com/Whiteknight_IA/status/1915290204535210424

ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಇದಾಗಿದೆ.

ಶಂಕಿತರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾಯಿಸುತ್ತಿದ್ದಂತೆಯೇ, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು, ಎನ್ ಕೌಂಟರ್ ಆರಂಭವಾಗಿದೆ ಎಂದು ಅವರು ಮಾಹಿತಿ ಲಭ್ಯವಾಗಿದೆ.

Continue Reading

Trending

error: Content is protected !!