Chamarajanagar
ಸಮಯಕ್ಕೆ ಬಾರದ ಬಸ್ ವಿದ್ಯಾರ್ಥಿಗಳ ಪರದಾಟ

ಮೂಡಿಗೆರೆ : ಸಕಲೇಶಪುರ ಹಾಗೂ ಮೂಡಿಗೆರೆ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ಸರಿಯಾದ ಸಮಯಕ್ಕೆ ಬಾರದೆ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರದಾಟ ಉಂಟಾಗುತ್ತಿದೆ ಎಂದು ಜಗತ್ ಜೆಸಿಐ ಕಾರ್ಯದರ್ಶಿ ಹೊಯ್ಸಳ ಗೋಣಿಬೀಡು ಇವರು ಪತ್ರಿಕೆಗೆ ತಿಳಿಸಿದ್ದಾರೆ.
ಬಸ್ ಗಳು ಸರಿಯಾದ ಸಮಯಕ್ಕೆ ಸಂಚರಿಸದ ಕಾರಣ ಶಾಲೆ ಮತ್ತು ಕಾಲೇಜು ತಲುಪಲು ಸಾಧ್ಯವಾಗುತ್ತಿಲ್ಲ, ಹಾಗೂ ಇಗಾಗಲೆ ಪರೀಕ್ಷೆಗಳು ನೆಡೆಯುತ್ತಿದ್ದೂ ಪರೀಕ್ಷೆ ಸಮಯ 10.30 ಕ್ಕೆ ಆದ್ದರಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಜಗತ್ ಜೆಸಿಐ ಕಾರ್ಯದರ್ಶಿ ಇಂದು ಚಿಕ್ಕಮಗಳೂರು ವಿಭಾಗಿಯ ಅಧಿಕಾರಿಗಳಿಗೆ ಕರೆ ಮಾಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.ಕೂಡಲೆ ಸಮಯಕ್ಕೆ ಸರಿಯಾಗಿ ಬಸ್ ಗಳು ಸಂಚರಿಸಲು ಸಂಬಂಧಪಟ್ಟ ಕೆ. ಎಸ್. ಆರ್. ಟಿ.ಸಿ ಸಂಸ್ಥೆಯ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೆ ಬಸ್ ಸಂಚಾರದಲ್ಲಿ ವ್ಯಥೆಯಾಗದಂತೆ ಸೂಚನೆ ನೀಡ ಈಗಾಗಲೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಗತ್ ಜೆಸಿಐ ರವರು ಒತ್ತಾಯಿಸಿದ್ದಾರೆ.
ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ
Chamarajanagar
ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಕ್ರಮವಹಿಸಲಾಗುವುದು: ಕೃಷ್ಣನಾಯಕ

ಯಳಂದೂರು: ಗುಂಬಳ್ಳಿ ಗ್ರಾಮ ಪಂಚಾಯಿತಿಯನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಕ್ರಮವಹಿಸಲಾಗುವುದು ಎಂದು ಬಿಲ್ ಕಲೆಕ್ಟರ್ ಕೃಷ್ಣನಾಯಕ ತಿಳಿಸಿದರು.
ಗುಂಬಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಕಳೆದ ಎರಡು ವರ್ಷಗಳಿಂದ ಗುಂಬಳ್ಳಿ ಗ್ರಾಮ ಪಂಚಾಯಿತಿಯು ಕ್ಷಯಮುಕ್ತ ಗ್ರಾಮ ಪಂಚಾಯಿತಿಯಾಗಿ ಪ್ರಶಸ್ತಿಯನ್ನು ಪಡೆದಿತ್ತು. ಆದರೆ ಈ ಬಾರಿ ಕ್ಷಯ ರೋಗದ ಲಕ್ಷಣ ಕ್ಷಣ ಕಂಡು ಬಂದು ರೋಗಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದ್ದಾರೆ. ಅವರಿಗೆ ಸರಿಯಾದ ಚಿಕಿತ್ಸೆಯನ್ನು ಕೊಡಿಸಿ ಗುಂಬಳ್ಳಿ ಗ್ರಾಮ ಪಂಚಾಯಿತಿಯನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಗುಂಬಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಪುಟ್ಟ ಮಾಧವಿ ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ವೈದ್ಯರು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರು ಹಾಜರಿದ್ದರು.
Chamarajanagar
ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘಟನೆಯಿಂದ ಪ್ರತಿಭಟನೆ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ ರೈತರಿಗೆ ಸಾಲ ವಸೂಲಿಗೆ ಬಗ್ಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಮುಂಭಾಗ ರೈತ ಸಂಘ ಗಳಿಂದ ಪ್ರತಿಭಟನೆ
ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಸಾಲ ಪಡೆದ ರೈತರಿಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿ ಗಳು ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಿದರು. ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂದೆ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ರೈತರಿಗೆ ಹಣ ಕಟ್ಟುವಂತೆ ನೋಟಿಸ್ ನೀಡಿ ಕಿರುಕುಳ
ಈ ಪ್ರತಿಭಟನೆ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ವೀರನಪುರ ನಾಗಪ್ಪ, ಬೇಗೂರು ಸಮೀಪದ ಬೆಳಚಲವಾಡಿ ಗ್ರಾಮದ ನಂಜುಂಡಸ್ವಾಮಿ ಎಂಬ ರೈತ ಬೇಗೂರು ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ಬೆಳೆ ಸಾಲ ಪಡೆದಿದ್ದಾರೆ. ಇವರಿಗೆ ಹೆಚ್ಚು ಪ್ರಮಾಣದಲ್ಲಿ ಬಡ್ಡಿ ವಿಧಿಸಿ ಹಣ ಕಟ್ಟುವಂತೆ ನೋಟಿಸ್ ನೀಡಿದ್ದಾರೆ. ಸಕಾಲಕ್ಕೆ ಮಳೆ ಬೀಳದೆ ರೈತರು ಬೆಳೆದ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ ಇದೆ ಸಮಯಕ್ಕೆ ಈ ಬ್ಯಾಂಕಿನವರು ಸಾಲ ವಸೂಲಿಗೆ ನೋಟಿಸ್ ನೀಡಿ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಬೆಳೆದ ಬೆಳೆಗೆ ಬೆಲೆ ಸಿಗದೆ ರೈತ ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ನವರು ನೋಟಿಸ್ ನೀಡುವ ಮೂಲಕ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.
ನಂತರ ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್.ವ್ಯವಸ್ಥಾಪಕರು ಈ ವಿಚಾರವಾಗಿ ಮುಖ್ಯ ಕಚೇರಿಯ ಗಮನಕ್ಕೆ ತಂದು ಬಡ್ಡಿ ಕಡಿಮೆ ಮಾಡಿಸಲು ಪ್ರಯತ್ನ ಪಡಲಾಗುವುದು ಎಂದು ಭರವಸೆ ನೀಡಿದರು.
ರೈತರ ನೆರವಿಗೆ ನಿಲ್ಲದ ಸರ್ಕಾರಗಳು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈ ಕಟ್ಟಿ ಕುಳಿತು ಅಧಿಕಾರಿಗಳ ಮೂಲಕ ಸಾಲ ವಸೂಲಿಗೆ ಕುಮ್ಮಕ್ಕು ನೀಡುತ್ತಿವೆ. ಆದ್ದರಿಂದ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ನೊಂದ ರೈತರ ನೆರವಿಗೆ ನಿಲ್ಲಬೇಕು ಹಾಗೂ ಸಾಲದ ಬಡ್ಡಿ ಮನ್ನಾ ಮಾಡಿ ಕೇವಲ ಸಾಲದ ಹಣವನ್ನು ಮಾತ್ರ ಕಟ್ಟಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರ ಮನ ವಲಿಸಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖಾ
ಈ ಸಮಸ್ಯೆ ಬಗ್ಗೆ ಮುಖ್ಯ ಕಚೇರಿಗೆ ಗಮನಕ್ಕೆ ತಂದು ಬಡ್ಡಿಕಡಿಮೆ ಮಾಡಲುಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನ ಮಾಡುತಿದ್ದ ರೈತರು ಪ್ರತಿಭಟನೆ ಯನ್ನು ಕೈಬಿಟ್ಟರು.
ಈ ಸಂದರ್ಭದಲ್ಲಿ ,ಸಂಘದ ಜಿಲ್ಲಾ ಉಪಾಧ್ಯಕ್ಷ ಮಲಯ್ಯನಪುರ ಪುಟ್ಟೇಗೌಡ, ಹಸಿರು ಸೇನೆ ಅಧ್ಯಕ್ಷ ಕಮರಹಳ್ಳಿ ಪ್ರಸಾದ್, ಕಾರ್ಯದರ್ಶಿ ಯತವನ ಹಳ್ಳಿ ಸಿದ್ದರಾಜು, ಸೋಮಹಳ್ಳಿ ನವೀನ್, ಶಿವಕುಮಾರ್, ಹಕ್ಕಲಪುರ ಸ್ವಾಮಿ, ಪಡಗೂರು ಮಹದೇವ ಸ್ವಾಮಿ ಸೇರಿದಂತೆ ಹಲವು ಮಂದಿ ರೈತರು ಹಾಜರಿದ್ದರು
Chamarajanagar
ಎಸ್ಎಸ್ಎಲ್ ಸಿ ಪತ್ರಿಕೆ-2 ಫಲಿತಾಂಶದಲ್ಲಿ ಕಬ್ಬಹಳ್ಳಿ ಸರ್ಕಾರಿ ಬಾಲಕರ ಪ್ರೌಢಶಾಲೆ ತಾಲೂಕಿಗೆ ಪ್ರಥಮ ಸ್ಥಾನ

ಗುಂಡ್ಲುಪೇಟೆ: ಎಸ್ಎಸ್ಎಲ್ ಸಿ ಪತ್ರಿಕೆ-2 ಫಲಿತಾಂಶದಲ್ಲಿ ಸರ್ಕಾರಿ ಪ್ರೌಢಶಾಲೆಗಳ ಪೈಕಿ ಕಬ್ಬಹಳ್ಳಿ ಸರ್ಕಾರಿ ಬಾಲಕರ ಪ್ರೌಢಶಾಲೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದೆ.
ಕಬ್ಬಹಳ್ಳಿ ಶಾಲೆಯಲ್ಲಿ ಒಟ್ಟು 40 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.6 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾಗಿದ್ದು,
ರಜತ್ 587 ಅಂಕಗಳನ್ನು ಗಳಿಸಿ ಶಾಲೆಗೆ ಮೊದಲ ಸ್ಥಾನ ಗಳಿಸಿದ್ದಾನೆ
ಒಟ್ಟು 87%ಫಲಿತಾಂಶ ಈ ಶಾಲೆಗೆ ಬಂದಿದ್ದು, ಈ ಫಲಿತಾಂಶ ಉತ್ತಮವಾಗಿ ಮೂಡಿ ಬರಲು ಶಿಕ್ಷಕರ ಕಾರ್ಯ ಹೆಚ್ಚಿನದ್ದಾಗಿದೆ. ಪ್ರತಿ ದಿನ ಸಂಜೆ ತರಗತಿಗಳನ್ನು ತೆಗೆದುಕೊಂಡು ಉತ್ತಮ ರೀತಿಯ ಬೋಧನೆ ಮಾಡಿ ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಶ್ರಮ ಬಹುಮುಖ್ಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕರಾದ ಉಮೇಶ್ ಸಹ ಶಿಕ್ಷಕರಾದ ಪ್ರಶಾಂತ್, ವಿಜಯ್ ಕುಮಾರ್, ನಾಗೇಶ್, ಚೈತನ್ಯ, ಕವಿತಾ, ಶೃತಿ ಈ ಎಲ್ಲಾ ಶಿಕ್ಷಕರ ಶ್ರಮ ಸಾರ್ಥಕವಾಗಿದೆ. ಗ್ರಾಮಸ್ಥರು ಮತ್ತು ಪೋಷಕರ ಸಹಕಾರವೂ ಕಾರಣವಾಗಿದೆ.
ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಕಬ್ಬಹಳ್ಳಿಯಲ್ಲಿನ ವಿಧ್ಯಾರ್ಥಿಗಳ ಫಲಿತಾಂಶದಲ್ಲಿ 87%. ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ 87% ಲಭಿಸಿದೆ.15 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು .3 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರನ್ನು ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ಕುಮಾರ್, ಮೇಲ್ವಿಚಾರಕರಾದ ಪೃಥ್ವಿರಾಜ್ ಎಚ್ ಎಮ್.ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State20 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan21 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State21 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ
-
Kodagu23 hours ago
ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ