Connect with us

State

ಉಚಿತ ಬಸ್ ಪಾಸ್ ಸೇರಿದಂತೆ ಪತ್ರಕರ್ತರ ಹಕ್ಕೊತ್ತಾಯಗಳ ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸಿದ ಕೆಯುಡಬ್ಲೂಜೆ

Published

on

ಬೆಂಗಳೂರು: ಗ್ರಾಮಾಂತರ ಪ್ರದೇಶದ ಪತ್ರಕರ್ತರು ಸೇರಿದಂತೆ ಎಲ್ಲಾ ಕಾರ್ಯನಿರತ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯವನ್ನು ಕಲ್ಪಿಸಿ ಇದೇ ವರ್ಷದಿಂದಲೇ ಜಾರಿಗೆ ತರುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸಿದ್ದಾರೆ.

ದಾವಣಗೆರೆಯಲ್ಲಿ ಜರುಗಿದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕರಿಸಿದ ಹಕ್ಕೋತ್ತಾಯಗಳ ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಅವುಗಳನ್ನು ಈಡೇರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಪತ್ರಕರ್ತರಿಗಾಗಿಯೇ ಪ್ರತ್ಯೇಕ ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಬೇಕು. ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಬೇಕು. ಟೋಲ್‌ಗಳಲ್ಲಿ ಪತ್ರಕರ್ತರ ವಾಹನಗಳಿಗೆ ಉಚಿತ ಪ್ರವೇಶ ನೀಡಬೇಕು. ಪಿಯುಸಿ ಮತ್ತು ಪದವಿ ಓದುತ್ತಿರುವ ಪತ್ರಕರ್ತರ ಮಕ್ಕಳಿಗೆ ಲ್ಯಾಪ್ ಟ್ಯಾಪ್ ನೀಡಬೇಕು. ತಾಲ್ಲೂಕು, ಜಿಲ್ಲೆ ಹಾಗೂ ನಗರ ಮತ್ತು ಮಹಾನಗರಗಳಲ್ಲಿ ಪತ್ರಕರ್ತರಿಗಾಗಿ ರಿಯಾಯಿತಿ ದರದಲ್ಲಿ ನಿವೇಶನ/ಮನೆ ಕೊಡಬೇಕು. ಪತ್ರಕರ್ತರ ಸಮ್ಮೇಳನ ಆಯೋಜನೆಗೆ (ಸಾಹಿತ್ಯ ಸಮ್ಮೇಳನಕ್ಕೆ ನೆರವು ನೀಡುವಂತೆ) ಸರ್ಕಾರದಿಂದ ಕನಿಷ್ಠ 50 ಲಕ್ಷ ರೂ. ನೆರವು ನೀಡಬೇಕು. ಪತ್ರಕರ್ತರ ಭವನಗಳನ್ನು ಕಾರ್ಯ ನಿರತ ಪತ್ರಕರ್ತರ ಸಂಘಟನೆಯಾದ ಕೆಯುಡಬ್ಲೂೃಜೆ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳೇ ನಿರ್ವಹಣೆ ಮಾಡುವಂತೆ ಸರ್ಕಾರಿ ಆದೇಶ ಹೊರಡಿಸಬೇಕು ಎಂಬ ಹಕ್ಕೋತ್ತಾಯಗಳನ್ನು ಸರ್ಕಾರಕ್ಕೆ ಕೆಯುಡಬ್ಲ್ಯೂಜೆ ಸಲ್ಲಿಸಿದೆ

Continue Reading
Click to comment

Leave a Reply

Your email address will not be published. Required fields are marked *

State

ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 4 ಸಾವಿರ ರೂ. ಹಣ ಈ ದಿನ ಜಮವಾಗಲಿದೆ : ಸ್ಟೇಟಸ್ ಚೆಕ್ ಮಾಡುವುದು ಹೇಗೆ?

Published

on

Gruhalakshmi Scheme Pending Amount Credit Date – ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಜಮವಾಗುವ 2000ರೂ. ಹಣವು ಕಳೆದ ಎರಡು ತಿಂಗಳಿನಿಂದ ಪಲಾನುಭವಿಗಳ ಖಾತೆಗೆ ವಿವಿಧ ಕಾರಣಕ್ಕಾಗಿ ಜಮವಾಗಿಲ್ಲ.

ಇದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮದ ಮುಕಾಂತರ ಪಲಾನುಭವಿಗಳಿಗೆ ಬಾಕಿ ಇರುವ ಎರಡು ಕಂತುಗಳ 4 ಸಾವಿರ ರೂಪಾಯಿ ಹಣವನ್ನು ಶೀಘ್ರದಲ್ಲಿಯೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯಾವಾಗ ಜಮಾವಾಗಲಿದೆ? ಜಮಾವಾದ ಹಣವನ್ನು ಪರಿಶೀಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ..

ಯಾವ ದಿನಾಂಕದಂದು ಜಮವಾಗಲಿದೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ ಪ್ರಕಾರ ಬಾಕಿ ಇರುವ ಎರಡು ಕಂತುಗಳ 4,000ರೂ. ಹಣವನ್ನು ಶೀಘ್ರದಲ್ಲಿಯೆ ಅಂದರೆ ಮಾರ್ಚ್ 31 ರನಂತರ ಖಚಿತವಾಗಿ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಮವಾದ ಹಣದ ಸ್ಟೇಟಸ್ ಪರಿಶೀಲಿಸುವುದು ಹೇಗೆ?

ಗೃಹಲಕ್ಷ್ಮಿ ಯೋಜನೆಯ ಬಾಕಿ ಮೊತ್ತ ಜಮವಾದ ಹಣದ ಸ್ಟೇಟಸ್ ನೀವು ನಿಮ್ಮ ಮೊಬೈಲ್ ಮುಕಾಂತರ ಸುಲಭವಾಗಿ DBT ಅಪ್ ಮುಕಾಂತರ ಪರಿಶೀಲಿಕೊಳ್ಳಬಹುದು. ಗೂಗಲ್ ಪ್ಲೇ ಸ್ಟೋರ್ ನಲ್ಲಿ DBT ಆಪ್ ಡೌನ್ಲೋಡ್ ಮಾಡಿ, ನೋಂದಣಿಯಾಗಿ ನಿಮ್ಮ ಆಧಾರ್ ಕಾರ್ಡ್ ಮುಕಾಂತರ ನಿಮ್ಮ ಖಾತೆಗೆ ಜಮವಾಗುವುದರ ಕುರಿತು ಪರಿಶೀಲಿಕೊಳ್ಳಿ. DBT ಆಪ್ ನ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಕೆಳಗಡೆ ನೀಡಲಾಗಿದೆ.

DBT ಆಪ್ ಲಿಂಕ್ – https://play.google.com/store/apps/details?id=com.dbtkarnataka

Continue Reading

State

ಮುನಿರತ್ನನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು: ಕೆ.ಎನ್‌ ರಾಜಣ್ಣ

Published

on

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.

ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್‌ ಕಾರಣವೇ ಹೊರತು ಬೇರೆ ಯಾರೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಆರೋಪದ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಮುನಿರತ್ನನನ್ನೇ ಮೊದಲು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಯಾಕೆಂದರೆ ಮುನಿರತ್ನ ಮೊದಲೆಲ್ಲಾ ಡಿಕೆಶಿ ಜೊತೆಯಲ್ಲೇ ಇದ್ದರು. ಆದ್ದರಿಂದ ಅವರನ್ನು ಮಂಪರು ಪರೀಕ್ಷೆ ಮಾಡಿಸಿ ಎಂದರು.

Continue Reading

State

ಫೋನ್‌ ಕದ್ದಾಲಿಕೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಿಷ್ಟು?

Published

on

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಫೋನ್ ಕದ್ದಾಲಿಕೆಯಾಗಿದೆ. ಇದೇ ರೀತಿ ಹಲವು ಶಾಸಕರ ಫೋನ್ ಕದ್ದಾಲಿಕೆಯಾಗಿದೆ. ರಾಜಣ್ಣ ಮತ್ತು ರಾಜೇಂದ್ರ ಅವರನ್ನು ಟ್ರ್ಯಾಪ್ ಮಾಡಲು ಕದ್ದಾಲಿಕೆ ಮಾಡಿಸಿದ್ದಾರೆ. ಈ ಬಗ್ಗೆ ನಾನು ಮತ್ತು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಿದ್ದೇವೆ. ಸುಮಾರು 2 ವರ್ಷಗಳಿಂದಲೂ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿಸಿದರು.

ಇನ್ನು ನಾವು ಧರ್ಮಾಧಾರಿತ ಮೀಸಲಾತಿ ವಿಚಾರಕ್ಕೆ ಹೋರಾಟ ಮಾಡುತ್ತಿದ್ದೇವೆ. ಮೀಸಲಾತಿ ಭೂತವನ್ನು ರಾಜ್ಯದ ಹಿಂದೂಗಳ ಮೇಲೆ ಹೇರುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶೇ.5ರಷ್ಟು ಮುಸ್ಲಿಮರು ಗುತ್ತಿಗೆದಾರರಾಗಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ಬೇಡ ಎಂದಿದ್ದಾರೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.

Continue Reading

Trending

error: Content is protected !!